nil
ಈ ಕಿರುನಾಟಕಗಳ ವಿಶೇಷತೆ ಏನು ಗೊತ್ತಾ ? ಇದು 3ಡಿ. ಕೇವಲ ಓದಿಯೂ ಖುಷಿ ಪಡಬಹುದು. ರೇಡಿಯೋ ನಾಟಕವಾಗಿಸಿಯೂ ಖುಷಿ ಪಡಬಹುದು ಮತ್ತು ರಂಗದ ಮೇಲೆ ಆಡಿಯೂ ಖುಷಿ ಪಡಬಹುದು. ಕೆಲವೇ ಕೆಲವು ಪಾತ್ರಗಳಿರುವುದರಿಂದ ಆಡುವವರಿಗೂ ಸುಲಭ. ಅದರಲ್ಲೂ ಶಾಲೆ, ಕಾಲೇಜುಗಳಲ್ಲಿ ಆಡುವುದಕ್ಕೆ, ರಾಜ್ಯೋತ್ಸವಾದಿ ಸಮಾರಂಭಗಳಲ್ಲಿ ಪ್ರದರ್ಶಿಸುವುದಕ್ಕೆ ಹೇಳಿ ಮಾಡಿಸಿದ ಹಾಗಿದೆ. ಅಲ್ಲಲ್ಲ, ಹೇಳಿ ಬರೆಸಿದ ಹಾಗಿದೆ. ಡುಂಡಿರಾಜರ ಶೈಲಿಯ ಪರಿಚಯವಿದ್ದವರು ನಾಟಕಗಳಲ್ಲಿ ಅವರ ಪಂಡ್ಗಳನ್ನು ಗುರುತಿಸಬಹುದಾದರೂ, ಇದರಲ್ಲಿ ಒಂದು ಸರ್ಪ್ರೈಸ್ ಎಲಿಮೆಂಟ್ ಕೂಡಾ ಇದೆ. ಏನು ಗೊತ್ತಾ? ಇವರು ದ ಕ ಆದರೂ ಕೆಲವು ಪ್ರಹಸನಗಳಲ್ಲಿ ಉಕ ಆಗಿದ್ದಾರೆ. ಅಂದರೆ ಉತ್ತರ ಕರ್ನಾಟಕದ ಭಾಷೆ ಬಳಸಿರೋದರಿಂದ ಈ ನಾಟಕಗಳು ಅಲ್ಲಿಯೂ ಜನಪ್ರಿಯವಾಗುವುದರಲ್ಲಿ ಸ್ವಲ್ಪವೂ ಸಂಶಯವಿಲ್ಲ. ಇಡೀ ಕರ್ನಾಟಕಕ್ಕೆ ಸಲ್ಲುವ ನಾಟಕಗಳಿವು. "ಡಿವೈಡ್ ৬০মে ರೂಲ್" ಅಂತಾರಲ್ಲ? ಅದರಲ್ಲಿ ಡುಂಡಿರಾಜ್ ಸಿದ್ಧಹಸ್ತರು. "ಡಿವೈಡ್ ಅಂಡ್ ರೂಲ್" ಅಂದರೆ ಒಡೆದಾಳುವ ನೀತಿ. ಇವರದ್ದು "ಪದಗಳನ್ನು" ಒಡೆದು ಆಡುವ ರೀತಿ. ಅಲ್ಲದೆ ಹೊಸ ಹೊಸ ಪದಗಳನ್ನೂ ಕನ್ನಡ ಭಾಷೆಗೆ ಕಾಣಿಕೆಯಿತ್ತಿದ್ದಾರೆ. ಉದಾಹರಣೆಗೆ ಸಿನಿಮಹಾತ್ಮ, ಶೇಗ್ ಬಹದ್ದೂರ್, ಭಯವದನ, ಬರಿಯಪ್ಪ, ಮೋಸಪತ್ರಿಕೆ ಇತ್ಯಾದಿ.
ಡಾ ಎನ್ ಗೋಪಾಲಕೃಷ್ಣ
ಎಚ್ ಡುಂಡಿರಾಜ್
#
ತಾರಕ್ಕನನ್ನು ಮನೆಯ ಹೊರಕಟ್ಟೆಯಿಂದ ಹಿಡಿದು ಹಿತ್ತಲವರೆಗೂ ಹುಡುಕಿದ. ಎದೆಬಡಿತ ಹೆಚ್ಚಾಗುತ್ತಿದ್ದಂತೆ ಕಟ್ಟಕಡೆಯದಾಗಿ ದೇವರಮನೆಯ ಬಾಗಿಲು ದೂಡಿದ. ನಂದಾದೀಪದ ಬೆಳಕಲ್ಲಿ ತಾರಕ್ಕನ ಮುಖ ಕಂಡಿತು. ಸಮಾಧಾನಕ್ಕಿಂತ ಹೆಚ್ಚಾಗಿ ಅಚ್ಚರಿ ಆಯಿತು. ನಿಟ್ಟುಸಿರು ಬಿಟ್ಟ. ಮೊಣಕಾಲುಗಳ ಮೇಲೆ ಗದ್ದವನ್ನಿಟ್ಟುಕೊಂಡು ದೀಪವನ್ನೇ ದಿಟ್ಟಿಸುತ್ತಿದ್ದ ಆಕೆಯ ಕಣ್ಣುಗಳು, ಉನ್ನತ್ತ ಗಂಧರ್ವನೊಬ್ಬನ ಕೈಯಿಂದ ಜಾರಿಬಿದ್ದ ಕಪ್ಪು ದ್ರಾಕ್ಷಿಗಳನ್ನು ಹಿಡಿದಿಟ್ಟುಕೊಂಡು ಮತ್ತೆ ಅವನ ಬರುವಿಕೆಗಾಗಿ ಕಾಯುತ್ತಿವೆಯೇನೋ ಎಂಬಂತಿದ್ದವು. ಆ ನಿಶ್ಚಲ ಕಣ್ಣುಗಳನ್ನೇ ನೋಡುತ್ತ ಗೋಡೆಗಾತು ಕುಳಿತ. ಸ್ವಲ್ಪ ಹೊತ್ತಿನ ನಂತರ ತಾನೂ ಅದೇ ದೀಪ ನೋಡಹತ್ತಿದ. ತಾರಕ್ಕನ ಪ್ರಭೆಯೆದುರು ಅಲ್ಲಿದ್ದ ದೇವ-ದೇವತೆಯರು ತಮ್ಮ ಪ್ರಭಾವಳಿಗಳನ್ನು ಕಳೆದುಕೊಂಡು ಕೇವಲ ಪಟದಲ್ಲಿ ಲೋಹದಲ್ಲಿ ಮೂಡಿಸಿಕೊಂಡ ನಿರ್ಜೀವ ಆಕೃತಿಗಳಂತೆ ಕಂಡರು.
ಬದುಕಿನ ಸುಖ, ದುಃಖ, ಪ್ರೀತಿ, ನಗು, ಸಂಬಂಧ, ವಿಡಂಬನೆ, ಹಾಸ್ಯ, ಚೋದ್ಯಗಳ ಕೋಸುಂಬರಿಯಂತಿದೆ ಈ ವಿಶಿಷ್ಟ ಕೃತಿ.
ಆತ್ಮೀಯರೆ, ನಾನು ನಿಮ್ಮ ತನಾಶಿ. ಟಿ.ಎನ್. ಶಿವಕುಮಾರ್, ಮಂಡ್ಯಕೊಪ್ಪಲು. ಇದೋ ಕನಕದಾಸರ ಹರಿಭಕ್ತಿಸಾರವನ್ನು ಅರ್ಥ ಮತ್ತು ವ್ಯಾಖ್ಯಾನ ಸಹಿತ ಕನ್ನಡಿಗರ ಮಡಿಲಿಗೆ ಇಡುತ್ತಿದ್ದೇನೆ. ಹರಿಯ ವರ್ಣನೆಯನ್ನೂ, ಲೀಲಾವಿಲಾಸಗಳನ್ನೂ, ಹಾಡಿ ತಣಿಯದ ದಾಸರ ಪದ ಸಾಮ್ರಾಜ್ಯವು ನನ್ನ ವ್ಯಾಖ್ಯಾನದ ಜೊತೆಗೆ ನಿಮ್ಮೊಡನಿದೆ. ಇದು ನಿಮ್ಮ ಮೈಮನಗಳನ್ನು ಪುಳಕಗೊಳಿಸಿದರೆ ನನ್ನ ಶ್ರಮ ಸಾರ್ಥಕ. ಹರಿ ನಾಮ ಸಂಕೀರ್ತನೆಯು ಕನ್ನಡನಾಡಿನ ಮನೆಮನಗಳಲ್ಲಿ ಮೊಳಗಲಿ, ತಾವು ಓದಿ ಹಾರೈಸಿ, ಹರಸಿ,
ಖ್ಯಾತ ಕವಿಗಳಾದ ಜಯಂತ ಕಾಯ್ಕಿಣಿಯವರು ಹೇಳಿರುವಂತೆ ಬಿಟ್ಟುಬಿಡದೆ ಓದಿಸಿಕೊಳ್ಳುವ ಕಾಡುವ ಗುಣ ಇಲ್ಲಿನ ಕವಿತೆಗಳಿಗೆ ಇವೆ.
ಚಲನಶೀಲತೆ ಈ ಕಾದಂಬರಿಯ ಮುಖ್ಯವಾದ ಪ್ರತಿಮೆ ಎಂದು ನನ್ನ ಭಾವನೆ. ಚಲನೆ ಎಡೆಬಿಡದೆ ನಿರ್ಮಲಾಳನ್ನು ಭಾವಲೋಕದಿಂದ ಭಾವನೆಗಳ ಲೋಕಕ್ಕೆ, ವಾಸ್ತವ ಲೋಕದಿಂದ ಯಥಾರ್ಥವಾದ ಆತ್ಮ ಶುದ್ಧಿಯ ಮತ್ತು ಮುಂದುವರಿದು ಆತ್ಮ ಬೋಧೆಯ ಪ್ರಪಂಚಕ್ಕೆ ತೆಗೆದುಕೊಂಡು ಹೋಗುತ್ತದೆ. ಹೀಗೆ ಎಲ್ಲೆಲ್ಲಿ ನೋಡಿದರೂ ಬದುಕಿನ ಚಲನಶೀಲತೆಯನ್ನು ಬರವಣಿಗೆಯ ಮೂಲಕ ಸೆರೆ ಹಿಡಿಯಲು ಕಿರಣ್ ಅವರು ಪ್ರಯತ್ನಿಸಿದ್ದಾರೆ. ಡಾ. ಜಿ.ಬಿ. ಹರೀಶ (ಮುನ್ನುಡಿಯಿಂದ)
Showing 4891 to 4920 of 5109 results