NA
nil
#
ತನ್ನ ಕಾಲದ ಹಲವು ಬಗೆಯ ಒತ್ತಡಗಳನ್ನು ಒಳಗೊಂಡು, ಅರಗಿಸಿಕೊಂಡ ನಂತರವೂ ಸೃಜನಶೀಲತೆಯ ಹೊಸ ಹಾದಿಗಳನ್ನು ಹುಡುಕುವ, 'ಸಯರ ಸಮ್ಮತ ಸಂತೆಯ ದಾರಿ'ಯನ್ನು ಅನುಸರಿಸದ ಲೇಖಕರು ಮಾತ್ರವೇ ಒಂದು ಭಾಷೆಯ ಸಾಹಿತ್ಯವನ್ನು ಕಟ್ಟಬಲ್ಲರು. ರಂಗಭೂಮಿ, ಚಲನಚಿತ್ರ, 'ಜೀವಂತ' ಜೀವನ ಮುಂತಾದ ಹತ್ತು ಹಲವು ಸಂಗತಿಗಳಲ್ಲಿ ತೀವ್ರವಾದ ಆಸಕ್ತಿಗಳನ್ನು ಹೊಂದಿರುವ ಗೆಳೆಯ ಮೌನೇಶ ಬಡಿಗೇರ್ ಅವರು ಅಂತಹ ಕೆಲವು ತರುಣ-ತರುಣಿಯರಲ್ಲಿ ಒಬ್ಬರು. ಕಥೆ, ಕವಿತೆ, ಕಾದಂಬರಿ ಮುಂತಾದ ಪುಕಾರಗಳ ಸಾಧ್ಯತೆಗಳನ್ನು ಅರಸುವ ಕೆಲಸವು 'ಸೃಜನಶೀಲ ಕಲ್ಪನೆ' ಮತ್ತು 'ಮಾಧ್ಯಮ ಶೋಧನೆ'ಗಳನ್ನು ಅವಲಂಬಿಸಿರುತ್ತದೆ. ಇವುಗಳ ಜೊತೆಗೆ, ಜಡವಲ್ಲದ ಕೇವಲ ಬೌದ್ಧಿಕವಲ್ಲದ ತಾತ್ವಿಕ ಕುತೂಹಲ/ಚಿಂತನೆಯೂ ಅದಕ್ಕೆ ಅಗತ್ಯವಾದ ಇನ್ನೊಂದು ಗುಣ. ಇದೆಲ್ಲದರ ಸಂಗಡ ಕತೆಸಾರನಿಗೆ ಲೋಕವನ್ನು ಅದರ ಸ್ಕೂಲನೆಲೆಯಲ್ಲಿ ಮಾತ್ರವಲ್ಲ, ವಿವರಗಳಲ್ಲಿ ಕಾಣುವ ಸುಣವೂ ಬೇಕು. ಮೂರ' ಮತ್ತು 'ಅಮೂರ' ಒಟ್ಟಿಸೆ ಗ್ರಹಿಸುವ, ಒಟ್ಟಾಗಿ ಹೆಣೆಯುವ ಕೆಲಸ ಬಹಳ ಜಟಲವಾದುದು. ಮೌನೇಶ್ ಈ ಎಲ್ಲ ಶಕ್ತಿಗಳನ್ನೂ ಬೇರೆ ಬೇರೆ ಪ್ರಮಾಣದಲ್ಲಿ ಪಡೆದಿದ್ದಾರೆ. ಆದ್ದರಿಂದ ಅವರ ಈ ಕಾದಂಬರಿ ನನಗೆ ಇಷ್ಟವಾಯಿತು. ನನ್ನನ್ನು ಬೆಳೆಸಿತು. ನಾನು ಅವರ ಕಥೆ, ಕವಿತೆಗಳನ್ನೂ ಪ್ರೀತಿಯಿಂದ ಓದಿದ್ದೇನೆ. -ಎಚ್. ಎಸ್. ರಾಘವೇಂದ್ರ ರಾವ್
ಕಾಡುತ್ತದೆ. ಸೃಜನಶೀಲ ಲೇಖಕ ಜೀವನದ ವಿಶ್ವವಿದ್ಯಾನಿಲಯದಲ್ಲಿ ಗಾಢವಾದ ಆಲೋಚನೆ ಮಾಡಿ ತನ್ನ ದಾರಿಯನ್ನು ತಾನೇ ಹುಡುಕಿಕೊಳ್ಳುವಲ್ಲಿ ಯಶಸ್ವಿಯಾಗುತ್ತಾನೆ ('ನನ್ನ ವಿಶ್ವವಿದ್ಯಾನಿಲಯ'); ಕೊನೆ ಎಲೆ', ಕಲಾವಿದನೊಬ್ಬ ಮಹಾನ್ ಕಲಾಕೃತಿಯನ್ನು ಸೃಷ್ಟಿಸಿ ಅದರ ಮೂಲಕ ಸಾಯುವಂತಹ ಜೀವ ಒಂದಕ್ಕೆ ಬದುಕಬೇಕು ಆತ್ಮವಿಶ್ವಾಸವನ್ನು ತುಂಬಿದ ಸಾರ್ಥಕ ಕಥೆಯಾಗಿದೆ; 'ಖುಷಿ ರಾಜಕುಮಾರ' ಕಥೆಯಲ್ಲಿ ಚಿಕ್ಕ ಪಕ್ಷಿ ಮತ್ತು ರಾಜಕುಮಾರ ತಮ್ಮ ಚಟುವಟಿಕೆಗಳ ಮೂಲಕ ದೇವರಿಗೆ ಪ್ರಿಯರಾಗುತ್ತಾರೆ. ಒಳ್ಳೆಯತನ ಮತ್ತು ಕೆಡಕುತನ ಇವುಗಳ ನಿರಂತರ ಸಂಘರ್ಷದಲ್ಲಿ ಕೊನೆಗೆ ಒಳ್ಳೆಯದ್ದು ಗೆಲ್ಲುತ್ತದೆ ಎಂಬ ಆಶಾಭಾವ 'ಕನಸು' ಕಥೆಯಲ್ಲಿ ಧ್ವನಿಸುತ್ತದೆ. ಮನುಷ್ಯ ಸ್ವಭಾವದಲ್ಲಿರುವ ಒಳ್ಳೆಯತನಕ್ಕೆ ದಸ್ತಾಯೇವ್ಸ್ಕಿ ಒತ್ತುಕೊಟ್ಟು ಸಕಾರಾತ್ಮಕವಾಗಿ ಸ್ಪಂದಿಸಿದ್ದಾನೆ. ಪ್ರೀತಿ, ಪ್ರೇಮ, ಆದರ್ಶ, ತ್ಯಾಗ, ಇಂತಹ ಸೂಕ್ಷ್ಮಭಾವನೆಗಳೂ ಕಥೆಗಳಲ್ಲಿ ಕಲಾತ್ಮಕವಾಗಿ ಅನಾವರಣಗೊಂಡಿವೆ.
nil.
Showing 91 to 120 of 270 results