• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಪಿಂಕ್ ಮುಜಾಂಡಾ ಇಬುಕ್ | pink mujanda Ebook

ಬದುಕಿಗೆ? ಅಂದು ಅವಳ ಕಾರಣದಿಂದಲೇ ಸಮ್ಯಕ್ ನಿಂದ ಸಂಬಂಧ ಕಡಿದುಕೊಂಡೆ. ಇಂದು ಅವಳು ಕರೆದಿದ್ದಕ್ಕೆ ಮತ್ತದೇ ಹಳೆಯ ಜಾಗಕ್ಕೆ ಹೋಗುತ್ತಿದ್ದೇನೆ. ನಾವು ಭೇಟಿಯಾಗೋ ಪ್ರತಿ ವ್ಯಕ್ತಿಯೂ ಯಾವುದೋ ಉದ್ದೇಶಕ್ಕೆ ನಮಗೆ ಸಿಕ್ಕಿರುತ್ತಾರೆ ಅಂತಾರಲ್ಲ? ನಿಜವೇ? ಇರಲಾರದು. ನಮಗಾಗಿ ಯಾರು ಹೀಗೆಲ್ಲಾ ಪ್ಲಾನ್ ಮಾಡುತ್ತಾರೆ! ಎಲ್ಲವೂ ಕೋ-ಇನಸಿಡೆನ್ಸ್ ಅಷ್ಟೇ. ಲೈಫ್ ಇಸ್ ಅ ಕಲೆಕ್ಷನ್ ಆಫ್ ರಾಂಡಮ್ ಇನ್ಸಿಡೆನ್ಸ್ ಹೆಚ್ಚಿನ ಅರ್ಥಗಳನ್ನು ನಾವೇ ಕಂಡುಕೊಂಡು ಅದರೊಳಗೊಂದು ಸಣ್ಣ ಥ್ರಿಲ್ ಅನುಭವಿಸುತ್ತಿರುತ್ತೇವೆ ಮೇ ಬಿ?...

₹190   ₹95

Buy Now
ಪುಟ್ಕತೆ ಎಂಬ ದೊಡ್ಕತೆಗಳ ಸಂಕಲನ | Putkate emba Dodkategala sankalana

ಇದು ಪುಟ್ಕತೆಯ ಲೋಕ. ಪುಟಪುಟದಲ್ಲೂ ಪುಟ್ಟಪುಟ್ಟ ಕತೆಗಳು, ಬೃಹತ್ತಾದುದನ್ನೇ ಹೇಳುವ ಕತೆಗಳು. ಅವರ ಕತೆ, ಇವರ ಕತೆ, ನಿಜದ ಕತೆ, ಕಟ್ಟುಕತೆ... ಎಷ್ಟೆಲ್ಲಾ ಕತೆಗಳು. ನಿಮಗೆ ಗೊತ್ತೇ, ಇಲ್ಲಿ ನಿಮ್ಮ ಕತೆಯೂ ಇದೆ! ಓದ್ಯೋಡಿ.

₹120   ₹102

Buy Now
ಪ್ಯಾಲೆಟ್ | Pallette

ಇಲ್ಲೊಂದು ಹೊಸ ಲೋಕವಿದೆ.. ಓಹ್! ಒಂದು ಭಾವಸಮುದ್ರದಲ್ಲಿ ಮುಳುಗೇಳುವುದು ಅಂದರೆ ಏನು ಎನ್ನುವುದು ಗೊತ್ತಾಗಬೇಕಾದರೆ ಪಿ ಚಂದ್ರಿಕಾ ಅವರ ಈ 'ಪ್ಯಾಲೆಟ್' ಓದಬೇಕು. 'ನಿಮ್ಮ ಚರಿತ್ರೆಯಲ್ಲಿ ನಮಗೆ ಜಾಗವಿಲ್ಲ' ಎಂದಾದಾಗ ಅವರು ಕಟ್ಟಿಕೊಡಲು ಹೊರಟಿದ್ದು ತನ್ನದೇ ಲೋಕವನ್ನು ಕಟ್ಟಿಕೊಟ್ಟ ಬರಹಗಳೆಲ್ಲವೂ ಅವರೇ ಬಣ್ಣಿಸಿಕೊಳ್ಳುವ ಹಾಗೆ ಅದು ತಾನು 'ಒಬ್ಬಳೆ ಆಡುವ ಆಟ'. ಚಂದ್ರಿಕಾ ಏನನ್ನೇ ಆದರೂ ತೀವ್ರವಾಗಿ ಅನುಭವಿಸುತ್ತಾರೆ. ಹಾಗಾಗಿಯೇ ಅವರ ಒಂದೊಂದು ಅನುಭವವೂ ಜೋಡಿ ರೆಕ್ಕೆ ಪಡೆದ ಬರಹಗಳಾಗಿಬಿಡುತ್ತದೆ. ಅವರ ಇನ್ನೊಂದು ಶಕ್ತಿ ಎಂದರೆ ಅವರು ತನ್ನ ಅನುಭವಕ್ಕೆ, ತನ್ನದೇ ಎನ್ನುವ ಅನುಭವಕ್ಕೆ ಅಕ್ಷರ ಮೂಡಿಸಲು ಇನ್ನೊಬ್ಬರ ಶಬ್ದಗಳ ಹಂಗಿಗೆ ಬೀಳುವುದೇ ಇಲ್ಲ, ತನ್ನದೇ ರೂಪಕಗಳನ್ನು ಕಟ್ಟಿಕೊಳ್ಳುತ್ತಾರೆ. ಅವರ ರೂಪಕಗಳು ಒಂದು ಸುಳಿಯಲ್ಲಿ ನಮ್ಮನ್ನು ಸಾಕಷ್ಟು ಕಾಲ ಸಿಕ್ಕಿಸಿ ತಿರುಗಿಸುತ್ತದೆ. ಈ 'ಪ್ಯಾಲೆಟ್' ನನ್ನನ್ನು ಹಲವು ಕಾಲ ತನ್ನ ತಿರುಗಣಿಯಲ್ಲಿ ಸಿಕ್ಕಿಸಿಕೊಂಡಿದೆ. ಶಾಶ್ವತ ಭಾವವೊಂದು ಎದೆಯಲ್ಲಿ ಮೊಳೆಯುವುದು ಅದೃಷ್ಟ ಎನ್ನುತ್ತಾರೆ ಚಂದ್ರಿಕಾ. 'ಪ್ಯಾಲೆಟ್' ಓದಿದಮೇಲೆ ಅಂತಹ 'ಅದೃಷ್ಟ' ನನ್ನದಾಗಿದೆ. ಇದನ್ನು ಓದಿದ ನಂತರ ನಿಮಗೂ ಆ ಅದೃಷ್ಟ ಒಲಿಯಲಿದೆ.

₹230   ₹184

Buy Now
ಪ್ಯಾಲೆಟ್ ಇಬುಕ್ | Pallette Ebook

ಇಲ್ಲೊಂದು ಹೊಸ ಲೋಕವಿದೆ.. ಓಹ್! ಒಂದು ಭಾವಸಮುದ್ರದಲ್ಲಿ ಮುಳುಗೇಳುವುದು ಅಂದರೆ ಏನು ಎನ್ನುವುದು ಗೊತ್ತಾಗಬೇಕಾದರೆ ಪಿ ಚಂದ್ರಿಕಾ ಅವರ ಈ 'ಪ್ಯಾಲೆಟ್' ಓದಬೇಕು. 'ನಿಮ್ಮ ಚರಿತ್ರೆಯಲ್ಲಿ ನಮಗೆ ಜಾಗವಿಲ್ಲ' ಎಂದಾದಾಗ ಅವರು ಕಟ್ಟಿಕೊಡಲು ಹೊರಟಿದ್ದು ತನ್ನದೇ ಲೋಕವನ್ನು ಕಟ್ಟಿಕೊಟ್ಟ ಬರಹಗಳೆಲ್ಲವೂ ಅವರೇ ಬಣ್ಣಿಸಿಕೊಳ್ಳುವ ಹಾಗೆ ಅದು ತಾನು 'ಒಬ್ಬಳೆ ಆಡುವ ಆಟ'. ಚಂದ್ರಿಕಾ ಏನನ್ನೇ ಆದರೂ ತೀವ್ರವಾಗಿ ಅನುಭವಿಸುತ್ತಾರೆ. ಹಾಗಾಗಿಯೇ ಅವರ ಒಂದೊಂದು ಅನುಭವವೂ ಜೋಡಿ ರೆಕ್ಕೆ ಪಡೆದ ಬರಹಗಳಾಗಿಬಿಡುತ್ತದೆ. ಅವರ ಇನ್ನೊಂದು ಶಕ್ತಿ ಎಂದರೆ ಅವರು ತನ್ನ ಅನುಭವಕ್ಕೆ, ತನ್ನದೇ ಎನ್ನುವ ಅನುಭವಕ್ಕೆ ಅಕ್ಷರ ಮೂಡಿಸಲು ಇನ್ನೊಬ್ಬರ ಶಬ್ದಗಳ ಹಂಗಿಗೆ ಬೀಳುವುದೇ ಇಲ್ಲ, ತನ್ನದೇ ರೂಪಕಗಳನ್ನು ಕಟ್ಟಿಕೊಳ್ಳುತ್ತಾರೆ. ಅವರ ರೂಪಕಗಳು ಒಂದು ಸುಳಿಯಲ್ಲಿ ನಮ್ಮನ್ನು ಸಾಕಷ್ಟು ಕಾಲ ಸಿಕ್ಕಿಸಿ ತಿರುಗಿಸುತ್ತದೆ. ಈ 'ಪ್ಯಾಲೆಟ್' ನನ್ನನ್ನು ಹಲವು ಕಾಲ ತನ್ನ ತಿರುಗಣಿಯಲ್ಲಿ ಸಿಕ್ಕಿಸಿಕೊಂಡಿದೆ. ಶಾಶ್ವತ ಭಾವವೊಂದು ಎದೆಯಲ್ಲಿ ಮೊಳೆಯುವುದು ಅದೃಷ್ಟ ಎನ್ನುತ್ತಾರೆ ಚಂದ್ರಿಕಾ. 'ಪ್ಯಾಲೆಟ್' ಓದಿದಮೇಲೆ ಅಂತಹ 'ಅದೃಷ್ಟ' ನನ್ನದಾಗಿದೆ. ಇದನ್ನು ಓದಿದ ನಂತರ ನಿಮಗೂ ಆ ಅದೃಷ್ಟ ಒಲಿಯಲಿದೆ.

₹230   ₹115

Buy Now
ಪ್ರಿಯ ಮೀರಾ | PRIYA MEERA

"ನಮ್ಮ ಪ್ರೀತಿಪಾತ್ರರು ಸಾಧ್ಯವಾದಷ್ಟು ಕಾಲ ರಕ್ತಮಾಂಸದ ನಡುವೆ ಇರಲಿ ಎಂದು ಬಯಸುವುದೇ ನಿಜಕ್ಕೂ ಸ್ವಾರ್ಥ ಬಯಕೆ. ಇದು ನಮ್ಮ ದೌರ್ಬಲ್ಯದಿಂದ ಹುಟ್ಟಿಕೊಂಡಿದ್ದು ಅಥವಾ ಕಾಯವನ್ನು ತೊರೆದ ಬಳಿಕ ಅತ್ಯದ ಉಳಿವಿನ ಬಗ್ಗೆ ಇರುವ ನಂಬಿಕೆಯ ಫಲ. ಅಕಾರವು ಬದಲಾಗುತ್ತ ಬದಲಾಗುತ್ತ ಅಳಿದು ಹೋಗುತ್ತದೆ. ಆದರೆ ಮಾರ್ಗದರ್ಶಿಯಾದ ಚೈತನ್ಯವು ಬದಲಾಗುವುದೂ ಇಲ್ಲ, ಅಳಿದು ಹೋಗುವುದೂ ಇಲ್ಲ. ಪರಿಶುದ್ಧವಾದ ಪ್ರೀತಿಯು ಭೌತಿಕವಾದ ಕಾಯವನ್ನು ಮೀರಿ ಅಂತರಾತ್ಮವನ್ನು ಸೇರಿಕೊಂಡಾಗ ಅಗಣಿತ ಕಾಯಗಳಲ್ಲಿ ಇರುವ ಎಲ್ಲ ಜೀವಗಳಲ್ಲಿ ಏಕೀಭವಿಸುತ್ತದೆ..."

₹425   ₹362

Buy Now
ಪ್ರಿಯ ಮೀರಾ ಇಬುಕ್ | PRIYA MEERA Ebook

"ನಮ್ಮ ಪ್ರೀತಿಪಾತ್ರರು ಸಾಧ್ಯವಾದಷ್ಟು ಕಾಲ ರಕ್ತಮಾಂಸದ ನಡುವೆ ಇರಲಿ ಎಂದು ಬಯಸುವುದೇ ನಿಜಕ್ಕೂ ಸ್ವಾರ್ಥ ಬಯಕೆ. ಇದು ನಮ್ಮ ದೌರ್ಬಲ್ಯದಿಂದ ಹುಟ್ಟಿಕೊಂಡಿದ್ದು ಅಥವಾ ಕಾಯವನ್ನು ತೊರೆದ ಬಳಿಕ ಅತ್ಯದ ಉಳಿವಿನ ಬಗ್ಗೆ ಇರುವ ನಂಬಿಕೆಯ ಫಲ. ಅಕಾರವು ಬದಲಾಗುತ್ತ ಬದಲಾಗುತ್ತ ಅಳಿದು ಹೋಗುತ್ತದೆ. ಆದರೆ ಮಾರ್ಗದರ್ಶಿಯಾದ ಚೈತನ್ಯವು ಬದಲಾಗುವುದೂ ಇಲ್ಲ, ಅಳಿದು ಹೋಗುವುದೂ ಇಲ್ಲ. ಪರಿಶುದ್ಧವಾದ ಪ್ರೀತಿಯು ಭೌತಿಕವಾದ ಕಾಯವನ್ನು ಮೀರಿ ಅಂತರಾತ್ಮವನ್ನು ಸೇರಿಕೊಂಡಾಗ ಅಗಣಿತ ಕಾಯಗಳಲ್ಲಿ ಇರುವ ಎಲ್ಲ ಜೀವಗಳಲ್ಲಿ ಏಕೀಭವಿಸುತ್ತದೆ..."

₹425   ₹213

Buy Now
ಪ್ರೀತಿಯೆನುವ ಮಾಯೆ | Preetiyenuva Maaye

ಕಾವ್ಯದಂತೆ, ಸಣ್ಣಕಥೆಯಲ್ಲೂ ಲಕ್ಷಣರಾವ್ ಸದ್ಯ ಬಂಡಾಯಗಳ ಹಣೆಪಟ್ಟಿಗೆ ದಕ್ಕುವವರಲ್ಲ, ನವ್ಯದ ಅಂತರ್ಮುಖಿಕೆ, ಅಂತಃಪ್ರಶ್ನೆ, ಪ್ರಜ್ಞಾಪ್ರವಾಹತಂತ್ರ ಇದೇ ಮೊದಲಾದವು ಇವರ ಕಥೆಗಳಲ್ಲಿ ಕಾಣುವುದಿಲ್ಲ ಸಾಮಾಜಿಕ ಕಳಕಳಿಗಿಂತ ಭಿನ್ನ, ಅಂದರೆ ಸಾಮಾಜಿಕ ಸಮಸ್ಯೆಗಳಿಂದ ವಿಮುಖರು ಎಂದಲ್ಲ, ಸಾಮಾಜಿಕ ಸಮಸ್ಯೆಗಳು, ಕ್ರೂರ ವ್ಯವಸ್ಥೆ ಇವುಗಳ ಒತ್ತಡದಲ್ಲಿ, ದಮನಕಾರಿ ನಿಲುವುಗಳಲ್ಲಿ ಮನುಷ್ಯ ಸಂಬಂಧಗಳು, ಪ್ರೀತಿ ವಿಶ್ವಾಸಗಳು ಹೇಗೆ ನಲುಗಿಹೋಗುತ್ತಿವೆ ಎಂಬುದು ಲಕ್ಷಣರಾವ್ ಅವರ ಸೃಜನಶೀಲ ಮನಸ್ಸಿನ ಮುಖ್ಯ ಕಾಳಜಿಯಾಗಿದೆ. ಪ್ರೀತಿ, ಗಂಡು-ಹೆಣ್ಣಿನ ಪ್ರೀತಿ, ಜೀವನಪ್ರೀತಿ - ಇವು ವ್ಯವಸ್ಥೆಯ ಕ್ರೂರ ಹಿಡಿತದಲ್ಲಿ ನಲುಗಬಾರದು. ನಿಷೇಧ ಮೊದಲಾದ ನಕಾರಾತ್ಮಕ ಪ್ರವೃತ್ತಿಗಳಲ್ಲಿ ಪ್ರೀತಿ ಮುರುಟಿಹೋಗಬಾರದು ಎಂಬ ಆರೋಗ್ಯಕರ ಜೀವನದೃಷ್ಟಿ ಲಕ್ಷಣರಾವ್ ಅವರ ಕಥೆಗಳ ಹಿಂದಿನ ಮುಖ್ಯ ಮಾನವೀಯ ದನಿಯಾಗಿದೆ. ಲಕ್ಷಣರೊಳಗಿನ ಕವಿಯ ಆರೋಗ್ಯಕರ ಜೀವನದೃಷ್ಟಿ, ಸ್ಪಷ್ಟ ವಿಚಾರಗಳ ಜೊತೆಗೆ ಅವರ ಗದ್ಯವು ವಾಚ್ಯವಾಗದೆ ಧ್ವನಿಪೂರ್ಣವಾಗಿ ಕಾವ್ಯಕ್ಕೆ ಹತ್ತಿರವಾಗುತ್ತದೆ. ಜಿ.ಎಸ್.ಆಮೂರರು ಹೇಳಿರುವಂತೆ ಪ್ರಾಮಾಣಿಕತೆ, ತೀವ್ರತೆ ಮತ್ತು ಹೊಸದೃಷ್ಟಿ ಲಕ್ಷಣರಾವ್ ಅವರ ಕಾವ್ಯದ ಮುಖ್ಯ ಗುಣಗಳಾಗಿರುವಂತೆ ಕಥೆಗಳ ಮುಖ್ಯ ಗುಣವೂ ಆಗಿದೆ: ಶಕ್ತಿಯೂ ಆಗಿದೆ.

₹320   ₹272

Buy Now
ಪ್ರೀತ್ಸು | Preethsu

ಇದು ಕಡಲ ತೀರದ ಹುಡುಗ ಮತ್ತು ಬಯಲು ಸೀಮೆಯ ಹುಡುಗಿಯರ ನಡುವಿನ ಒಂದು ನವಿರಾದ ಪ್ರೇಮ ಕಥೆ. ಹದಿಹರೆಯವನ್ನು ಆಗಷ್ಟೇ ದಾಟಿರುವ ಆದರೆ ಬದುಕಿನ ಬಗ್ಗೆ ಇನ್ನೂ ಪ್ರೌಢರಾಗಬೇಕಾದ ಯುವ ಮನಸುಗಳ ಪ್ರೇಮಕಥೆ.

₹170   ₹145

Buy Now
ಪ್ರೀತ್ಸು ಇಬುಕ್ | Preetsu Ebook

ಇದು ಕಡಲ ತೀರದ ಹುಡುಗ ಮತ್ತು ಬಯಲು ಸೀಮೆಯ ಹುಡುಗಿಯರ ನಡುವಿನ ಒಂದು ನವಿರಾದ ಪ್ರೇಮ ಕಥೆ. ಹದಿಹರೆಯವನ್ನು ಆಗಷ್ಟೇ ದಾಟಿರುವ ಆದರೆ ಬದುಕಿನ ಬಗ್ಗೆ ಇನ್ನೂ ಪ್ರೌಢರಾಗಬೇಕಾದ ಯುವ ಮನಸುಗಳ ಪ್ರೇಮಕಥೆ.

₹170   ₹85

Buy Now
ಫಾರೆಸ್ಟರ್ ಪೊನ್ನಪ್ಪ | Forester Ponnappa

ಕೊಡಗಿನ ಆಂತರ್ಯದಲ್ಲಿ ಹುದುಗಿದ್ದ ಅರಣ್ಯಾಧಿಕಾರಿಯೊಬ್ಬರ ಜೀವನಗಾಥೆ. ಮಲೆನಾಡಿನ ಬದಲಾದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕೈಗನ್ನಡಿ.

₹300   ₹255

Buy Now
ಫಾರೆಸ್ಟರ್ ಪೊನ್ನಪ್ಪ ಇಬುಕ್ |Forester Ponnappa Ebook

ಕೊಡಗಿನ ಆಂತರ್ಯದಲ್ಲಿ ಹುದುಗಿದ್ದ ಅರಣ್ಯಾಧಿಕಾರಿಯೊಬ್ಬರ ಜೀವನಗಾಥೆ. ಮಲೆನಾಡಿನ ಬದಲಾದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕೈಗನ್ನಡಿ. ಹೆಣ್ಣು, ಹಣದ ಹಿಂದೆ ಹೋಗಿ ಕೊನೆಗೆ ಭಿಕ್ಷೆ ಬೇಡುವಂತಾದವನ ದುರಂತ! ದಾರಿ ತಪ್ಪಿದ ಮಗನಿಗಾಗಿ ಚಡಪಡಿಸುವ ಹಿರಿಜೀವಗಳ ದಾರುಣ ಪರಿಸ್ಥಿತಿ! ಗುಡ್ಡಗಾಡಿನ ವಾಸ್ತವತೆ ಮತ್ತು ಅಂತರಾತ್ಮ. ಮರಗಳ್ಳರಿಗೆ ಸಿಂಹಸ್ವಪ್ನವಾಗಿದ್ದ ಕೊಡಗಿನ ಅರಣ್ಯಾಧಿಕಾರಿಯೊಬ್ಬರ ರೋಚಕ ಕಥೆ (ಜೀವನಚರಿತ್ರೆ)

₹300   ₹150

Buy Now
ಫೀನಿಕ್ಸ್ | Phoenix

ಫೀನಿಕ್ಸ್ ಎಂದಾಕ್ಷಣ ಮನಸ್ಸಿನಲ್ಲಿ ಮೂಡುವ ಕಾಲ್ಡನಿಕವೂ ಪೌರಾಣಿಕವೂ ಆದ ಪಕ್ಷಿಯಿದೆಯಲ್ಲಾ ಅದರ ನಿಜ ಸ್ವರೂಪದ ಭಾವವನ್ನು ಜಂಚಿಸುವ ಸಾಮರ್ಥ್ಯವಿರುವ ಪುಸ್ತಕವಿದು. ಬೆಂಕಿಯಲ್ಲಿ ಸುಟ್ಟು ಕರಕಲಾಗುತ್ತಿದ್ದರೂ ತನ್ನ ಬೂದಿಯಿಂದಲೇ ಮರಳಿ ಚೈತನ್ಯವನ್ನು ಪಡೆದು ಉಲ್ಲಾಸದಿಂದ ಬದುಕುವ ಪಕ್ಷಿಯು ಇಲ್ಲಿನ ಅನೇಕ ಪಾತ್ರಗಳನ್ನು, ಅವರ ಬದುಕನ್ನೂ ಪ್ರತಿಜಂಚಿಸುತ್ತದೆ.

₹120   ₹96

Buy Now
ಫೀನಿಕ್ಸ್ ಇಬುಕ್ | Phoenix Ebook

ಫೀನಿಕ್ಸ್ ಎಂದಾಕ್ಷಣ ಮನಸ್ಸಿನಲ್ಲಿ ಮೂಡುವ ಕಾಲ್ಡನಿಕವೂ ಪೌರಾಣಿಕವೂ ಆದ ಪಕ್ಷಿಯಿದೆಯಲ್ಲಾ ಅದರ ನಿಜ ಸ್ವರೂಪದ ಭಾವವನ್ನು ಜಂಚಿಸುವ ಸಾಮರ್ಥ್ಯವಿರುವ ಪುಸ್ತಕವಿದು. ಬೆಂಕಿಯಲ್ಲಿ ಸುಟ್ಟು ಕರಕಲಾಗುತ್ತಿದ್ದರೂ ತನ್ನ ಬೂದಿಯಿಂದಲೇ ಮರಳಿ ಚೈತನ್ಯವನ್ನು ಪಡೆದು ಉಲ್ಲಾಸದಿಂದ ಬದುಕುವ ಪಕ್ಷಿಯು ಇಲ್ಲಿನ ಅನೇಕ ಪಾತ್ರಗಳನ್ನು, ಅವರ ಬದುಕನ್ನೂ ಪ್ರತಿಜಂಚಿಸುತ್ತದೆ.

₹120   ₹60

Buy Now
ಬಟರ್ಫ್ಲೈ ಬಾಕ್ಸ್ | Butterfly Box

Gift Box Details: * Box type: Butterfly Box. Height 9 x 6 Width * Dimensions: Height x Width-x depth- (Space: 1,000+ pages) Customised sticker's available. (charges apply) * 10% off on 10+ box orders. postal free on Book box for purchase of minimum 2,000/-Rps worth books. We send our best wishes to your loved ones on your behalf. * You can additionally add chocolate, dry fruits, pen, badge, etc.

₹325   ₹299

Buy Now
ಬದುಕು ಬದಲಾಯಿತು | Baduku Badalaayitu

ಬಡತನವನ್ನು ಎದುರಿಸಿ ಗೆದ್ದ ಸಾಧಕರಿಗೆ ನನ್ನ ನಲ್ಮೆಯ ಮಾತು. ಸಾಧಕರ ಜೀವನ ಚರಿತ್ರೆಯನ್ನು ಓದಿದ ಹಲವರಿಗೆ, ಈ ಸಾಧಕರು ಸ್ಫೂರ್ತಿಯಾಗುತ್ತಾರೆ. ಆದರ್ಶದ ಜ್ಯೋತಿ ಆಗುತ್ತಾರೆ, ಜ್ಯೋತಿಯ ಬೆಳಕಿನಲ್ಲಿ ಕಾಣುವ ಮಾರ್ಗದಲ್ಲಿ ತಾವೂ ನಡೆಯಲು ಪ್ರಯತ್ನಿಸುತ್ತಾರೆ. ಬಡತನ ಸಂಕಷ್ಟಗಳು ಭಗವಂತನ ಶಾಲೆಯಲ್ಲಿ ಅವನಿಟ್ಟ ಒಂದು ಪರೀಕ್ಷೆ ಅದರಲ್ಲಿ ಪೂರ್ತಿ ಅಂಕಗಳೊಂದಿಗೆ ತೇರ್ಗಡೆಯಾದ ಸಾಧಕರ ಹೆಸರು ಅಜರಾಮರವಾಗಿ ನಿಲ್ಲುತ್ತದೆ. 84 ಲಕ್ಷ ಜನ್ಮಗಳನ್ನು ದಾಟಿ ಶ್ರೇಷ್ಠವಾದ ಮಾನವ ಜನ್ಮಕ್ಕೆ ಕಾಲಿರಿಸಿದ ನಮಗೆ ಬಡತನ, ಕಷ್ಟಗಳನ್ನು ಒಂದು ವರವಾಗಿ ಕೊಟ್ಟಿದ್ದಾನೆ ಭಗವಂತ. ಬಡತನ, ಸಂಕಷ್ಟಗಳನ್ನು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಂಡ ನಮಗೆ ಪ್ರಪಂಚದ ನಾನಾ ವಿಚಾರಗಳು ಅರ್ಥವಾಗುತ್ತವೆ ನಾನಾ ಮನುಷ್ಯರ ಪರಿಚಯ ಆಗುತ್ತದೆ. ತಾಯಿ-ತಂದೆ ಬಂಧು ಬಳಗ, ಯಾರನ್ನು ನಂಬಬೇಕು ಬಿಡಬೇಕು, ಸ್ನೇಹಿತರು, ಮಕ್ಕಳು, ಗಂಡ ಹೆಂಡತಿ, ಎನ್ನುವ ಪಾತ್ರಗಳ ಪರಿಚಯವಾಗುತ್ತದೆ. ಇವೆಲ್ಲದರ ಮಧ್ಯೆ ನಮ್ಮ ಸಾಧನೆಯ ಬದುಕು ಸ್ವಾಭಿಮಾನದಿಂದ ನಿಸ್ವಾರ್ಥತೆಯಿಂದ ಪುಟಕ್ಕಿಟ್ಟ ಚಿನ್ನವಾಗುತ್ತದೆ. ನಾವು ಬಡವರು, ಕಷ್ಟಜೀವಿಗಳು ಎಂಬ ಭಾವನೆ ಸಲ್ಲದು. ಭಗವಂತನ ಪರೀಕ್ಷೆಗೆ ಒಳಪಟ್ಟಿರುವ ನಾವು ನಿಜಕ್ಕೂ ಧನ್ಯರು, ಮಾನ್ಯರು. ಈ ದಿಸೆಯಲ್ಲಿ ಇಂತಹ ಹಲವು ಸಾಧಕರನ್ನು ಪರಿಚಯಿಸುವ ಸ್ತುತ್ಯ ಕಾರ್ಯ ಮಾಡಿರುವ ಲೇಖಕರಾದ ಡಾ.ಶ್ರೀನಿವಾಸ ಪ್ರಸಾದ್ ಅವರಿಗೂ, ಈ ಕೃತಿಯನ್ನು ಪ್ರಕಟಿಸುತ್ತಿರುವ ವೀರಲೋಕ ಪ್ರಕಾಶನ ಸಂಸ್ಥೆಯ ವೀರಕಪುತ್ರ ಶ್ರೀನಿವಾಸ್ ಅವರಿಗೂ ಶುಭಾಶಯ.

₹300   ₹255

Buy Now
ಬದುಕೇ ಭಗವಂತ | Baduke Bhagavanta

ಬದುಕೇ ಭಗವಂತಡಾ. ಶ್ರೀನಿವಾಸ ಪ್ರಸಾದ್ ಅವರು ಈ ವಿಶಿಷ್ಟ ಪುಸ್ತಕದಲ್ಲಿ ಜೀವನದ ಒಳ್ಳೆಯತನಗಳನ್ನು ಪರಿಚಯಿಸುವಾಗ ಅನೇಕ ಲೇಖಕರ ಮತ್ತು ಕವಿಗಳ ಕೃತಿಗಳನ್ನು ಕೂಡ ಪರಿಚಯಿಸುತ್ತಾರೆ.

₹170   ₹145

Buy Now
ಬದುಕೇ ಭಗವಂತ ಇಬುಕ್ | Baduke Bhagavanta Ebook

ಬದುಕೇ ಭಗವಂತಡಾ. ಶ್ರೀನಿವಾಸ ಪ್ರಸಾದ್ ಅವರು ಈ ವಿಶಿಷ್ಟ ಪುಸ್ತಕದಲ್ಲಿ ಜೀವನದ ಒಳ್ಳೆಯತನಗಳನ್ನು ಪರಿಚಯಿಸುವಾಗ ಅನೇಕ ಲೇಖಕರ ಮತ್ತು ಕವಿಗಳ ಕೃತಿಗಳನ್ನು ಕೂಡ ಪರಿಚಯಿಸುತ್ತಾರೆ. ಶ್ರೀಯುತರಾದ ತರಾಸು ಅನಕೃ ಎಸ್ ಕೆ ಕರೀಂಖಾನ್ ಮುಂತಾದವರ ಜೀವನದ ಮೇಲೆ ಒಂದಿಷ್ಟು ಬೆಳಕು ಚೆಲ್ಲುತ್ತಾರೆ. ಅವರು ಸಂದರ್ಭಕ್ಕೆ ತಕ್ಕಂತೆ ಉದಾಹರಣೆ ನೀಡಿರುವ ಖ್ಯಾತ ಕವಿಗಳ ಕವನಗಳ ಸಾಲು ನಮ್ಮಲ್ಲಿ ಚಿಂತನೆ ಉಂಟುಮಾಡುತ್ತದೆ. ಈ ಲೇಖನಮಾಲೆ ಪದೇ ಪದೇ ಓದುತ್ತಲೇ ಇರುವಂತಹದ್ದು.

₹170   ₹85

Buy Now
ಬಹುತ್ವ ಭಾರತ ಕಟ್ಟಿದವರು | Bahutva Bharata Kattidavaru

ಕೊರತೆ ನೀಗಿಸಿದ ಕೃತಿ.. ಭಾರತವು ವಿಶ್ವಗುರುವಾಗಿ ಬಿಂಬಿತಗೊಳ್ಳುತ್ತಿರುವ ಇಂದಿನ ಜಾಗತಿಕ ಬೆಳವಣಿಗೆಯ ಹಿನ್ನೆಲೆಯಲ್ಲಿ, ನನ್ನನ್ನು ಒಂದು ಸಂಶಯ ಕಾಡತೊಡಗಿತ್ತು. ಇಪ್ಪತ್ತೊಂದನೇ ಶತಮಾನ ಪ್ರಾರಂಭವಾದ ಮೇಲೆ ಜನಿಸಿದ ಮಕ್ಕಳನ್ನು ಮತ್ತು ಎಳೆವಯಸ್ಕರನ್ನು ಈ ಬೆಳವಣಿಗೆಯ ಔಚಿತ್ಯ ಹಾಗೂ ಸೂಚ್ಯಾರ್ಥ ಮತ್ತು, ಆ ಅರ್ಹತೆ ಗಳಿಸಲು ಅಳತೆಗೋಲು ಏನಿರಬಹುದು ಎಂಬ ಬಗ್ಗೆ ಪ್ರಶ್ನಿಸಿದರೆ ಅವರಲ್ಲಿ ಸೂಕ್ತ ಉತ್ತರ ಇದ್ದೀತೆ ಎಂಬ ಸಂಶಯ. ಆ ಸಂಶಯದ ಬೆನ್ನಲ್ಲಿಯೇ ಕಂಡ ಒಂದು ಕೊರತೆ ಎಂದರೆ ನಮ್ಮ ಮಕ್ಕಳಲ್ಲಿ ಈ ವಿಚಾರಗಳ ಬಗ್ಗೆ ತಿಳಿಹೇಳುವ, ನಮ್ಮ ದೇಶದ ಹಲವು ಬೋಧಕರ, ಧಾರ್ಮಿಕ ಮತ್ತು ಆಧ್ಯಾತ್ಮ ಪ್ರವರ್ತಕರ ಮುಖ್ಯ ಬೋಧನೆಗಳನ್ನು, ಅವರ ವೈಚಾರಿಕತೆಯ ವ್ಯಾಪ್ತಿಯನ್ನು, ಸರಳಭಾಷೆಯಲ್ಲಿ ಒಂದೆಡೆ ಕಟ್ಟಿಕೊಡುವ ಪ್ರಕಟಣೆಗಳ ಅಭಾವ. ಈ ಹಿನ್ನೆಲೆಯಲ್ಲಿ ರಾಘವೇಂದ್ರ ಪ್ರಭು ಅವರು 'ಬಹುತ್ವ ಭಾರತ ಕಟ್ಟಿದವರು' ಪುಸ್ತಕದ ಕರಡು ಪ್ರತಿಯನ್ನು ಕಳುಹಿಸಿಕೊಟ್ಟಾಗ, ಅಲ್ಲಿನ ಹನ್ನೊಂದೂ ಜೀವನ್ಮುಕ್ತರ ಬಗ್ಗೆ ಓದುತ್ತಿದ್ದಂತೆ, ಒಂದು ತೃಪ್ತಬಾವ ಮೂಡತೊಡಗಿತ್ತು. ನನ್ನಲ್ಲಿ ಮೂಡಿದ್ದ ಕೊರತೆಯ ಭಾವವನ್ನು ನೀಗಿಸಿದ್ದಾರೆ ಎನಿಸಿತ್ತು. ವಾಲ್ಮೀಕಿ, ಬುದ್ದ ಮೊದಲಾಗಿ, ಬಸವಣ್ಣ, ಅಲ್ಲಮ, ಅಕ್ಕಮ್ಮನವರ ಮೂಲಕ ಹಾದು, ಸರ್ವಜ್ಞ, ಶಾರಾದಾದೇವಿ, ವಿವೇಕಾನಂದ.. ಕೊನೆಗೆ ಜಿಡ್ಡು, ನಾರಾಯಣ ಗುರು ಮತ್ತು ದಲೈ ಲಾಮವರೆಗೆ, ಭಾರತದ ಹನ್ನೊಂದು ಮಹಾನ್ ವ್ಯಕ್ತಿಗಳ ಪರಿಚಯ ಮತ್ತು ಜೀವನವನ್ನು ಸಂಕ್ಷಿಪ್ತವಾಗಿಯೂ, ಸರಳವಾಗಿಯೂ, ಕಥಾನಕದಂತೆ ರಚಿಸಿರುವುದು ವಿಶೇಷವಾದ ನೆಮ್ಮದಿ ತಂದಿದೆ. ಎಲ್ಲರ ಮನೆಯ ಗ್ರಂಥಭಂಡಾರದಲ್ಲೂ ಎಲ್ಲರ ಕೈಗೂ ಸದಾ ಎಟುಕುವಂತೆ ಇರಬೇಕಾದ ಕೃತಿ ಇದು. - ಕೆ ಎನ್ ಗಣೇಶಯ್ಯ

₹350   ₹298

Buy Now
ಬಿಂಬ ಬಿಂಬನ | Bimba Bimbana

ಸಿನಿಮಾ ಮತ್ತು ಸಾಹಿತ್ಯ ಎರಡರಲ್ಲೂ ಪ್ರತಿಮಾ ವಿಧಾನ ಭಿನ್ನ, ಸಂಜ್ಞಾ ಕ್ರಮವೂ ಭಿನ್ನ. ಸಾಹಿತ್ಯದ ಮೂಲಧಾತುವಾದ ಶಬ್ದವು ಅಮೂರ್ತವಾಗಿರುತ್ತದೆ. ಈ ಅಮೂರ್ತ ಧಾತುವನ್ನು ಇಟ್ಟುಕೊಂಡು ಸಾಹಿತಿ ಮೂರ್ತ ಬಿಂಬವನ್ನು ಕಟ್ಟುತ್ತಿರುತ್ತಾನೆ. ಸಿನಿಮಾದಲ್ಲಿ ಮೂಲಧಾತುವಾದ ಬಿಂಬವೇ ಮೂರ್ತ. ನಿರ್ದೇಶಕ ಅದರ ನೆರವಿನಿಂದ ಕೃತಿ ಕಟ್ಟುತ್ತಿರುವಾಗ ಮೂರ್ತವನ್ನು ಮೀರಿ ಅಮೂರ್ತವನ್ನು ತರಬಲ್ಲ ಬಿಂಬದ ಹುಡುಕಾಟದಲ್ಲಿರುತ್ತಾನೆ. ಅಂದರೆ ಅಮೂರ್ತದಿಂದ ಮೂರ್ತ ಬಿಂಬ ಕಟ್ಟುವ ಸಾಹಿತಿಯ ನುಡಿಗಟ್ಟು ಮೂರ್ತದಿಂದ ಅಮೂರ್ತಕ್ಕೆ ಜಿಗಿಯಬಲ್ಲ ಬಿಂಬಕ್ಕೆ ಹುಡುಕುವ ಸಿನಿಮಾ ನಿರ್ದೇಶಕನಿಗೆ ಊರುಗೋಲಾಗಲಾರದು. 2000ದ ಸುಮಾರಿಗೆ ಸಿನಿಮಾ ವ್ಯಾಖ್ಯಾನದಲ್ಲಿ ಬಹಳ ಬದಲಾವಣೆ ಆಗಿತ್ತು. ಸಿನಿಮಾ ವಿಶ್ಲೇಷಣೆಯಲ್ಲಿ 'ಬಿಂಬ'ದ ಜೊತೆಗೆ 'ಬಿಂಬನ'ವನ್ನೂ ಒಂದು ಮೌಲ್ಯವಾಗಿ ಪರಿಗಣಿಸತೊಡಗಿದರು. ತೆರೆಯ ಮೇಲೆ ಕಾಣುವುದು ಬಿಂಬಗಳಾದರೆ ಅವನ್ನು ಸೃಷ್ಟಿ ಮಾಡಲು ಆಯ್ದುಕೊಳ್ಳುವ ತಾಂತ್ರಿಕ ಅಂಶಗಳು ಬಿಂಬನವನ್ನು ಸೂಚಿಸುತ್ತವೆ. ಸಿನಿಮಾದ ಬಿಂಬಗಳು ಅಲಿಪ್ತವಲ್ಲ, ಅವು ಯಂತ್ರಜನ್ಯವಾದರೂ ಅವನ್ನು ಸೃಷ್ಟಿ ಮಾಡುತ್ತಿರುವವರ ಇಷ್ಟಾನಿಷ್ಟಗಳು ಬಿಂಬಗಳಲ್ಲಿ ಹಾಗೂ ಬಿಂಬನ ಕ್ರಮದಲ್ಲಿ ವ್ಯಕ್ತವಾಗುತ್ತಾ ಇರುತ್ತವೆ. ಟೆಕ್ನಾಲಜಿಯ ಬಗ್ಗೆ ಮನುಷ್ಯನಿಗೆ ಯಾವಾಗಲೂ ಸೆಳೆತ, ಕುತೂಹಲ ಮತ್ತು ಭಯ ಇದ್ದೇ ಇರುತ್ತದೆ. ಸೆಳೆತಕ್ಕೆ ಕಾರಣ ಅದು ತನ್ನ ಬದುಕನ್ನು ಇನ್ನಷ್ಟು ಸುಂದರಮಾಡುತ್ತದೆ ಎನ್ನುವ ಭ್ರಮೆ, ತನಗೆ ಅಸಾಧ್ಯ, ನಿಗೂಢ ಎನಿಸಿದ್ದನ್ನು ಅದು ಸಾಧ್ಯ ಮಾಡಿಕೊಡುತ್ತಾದ್ದರಿಂದ ಕುತೂಹಲ, ಅದರ ಸ್ವರೂಪ ಸಂಪೂರ್ಣವಾಗಿ ಅರ್ಥವಾಗುತ್ತಿಲ್ಲವಾದ್ದರಿಂದ ಭಯ-ಈ ಮೂರು ಭಾವನೆಗಳು ಬೇರೆ ಬೇರೆಯಾಗಿ ಅಥವಾ ಒಟ್ಟಾಗಿಯೇ ಕೂಡಿ ಅನಿರ್ವಚನೀಯ ಅನುಭವವೊಂದನ್ನು ನೀಡುತ್ತಿರುತ್ತದೆ.

₹385   ₹327

Buy Now
ಬಿಂಬ ಬಿಂಬನ ಇಬುಕ್ | Bimba Bimbana Ebook

ಸಿನಿಮಾ ಮತ್ತು ಸಾಹಿತ್ಯ ಎರಡರಲ್ಲೂ ಪ್ರತಿಮಾ ವಿಧಾನ ಭಿನ್ನ, ಸಂಜ್ಞಾ ಕ್ರಮವೂ ಭಿನ್ನ. ಸಾಹಿತ್ಯದ ಮೂಲಧಾತುವಾದ ಶಬ್ದವು ಅಮೂರ್ತವಾಗಿರುತ್ತದೆ. ಈ ಅಮೂರ್ತ ಧಾತುವನ್ನು ಇಟ್ಟುಕೊಂಡು ಸಾಹಿತಿ ಮೂರ್ತ ಬಿಂಬವನ್ನು ಕಟ್ಟುತ್ತಿರುತ್ತಾನೆ. ಸಿನಿಮಾದಲ್ಲಿ ಮೂಲಧಾತುವಾದ ಬಿಂಬವೇ ಮೂರ್ತ. ನಿರ್ದೇಶಕ ಅದರ ನೆರವಿನಿಂದ ಕೃತಿ ಕಟ್ಟುತ್ತಿರುವಾಗ ಮೂರ್ತವನ್ನು ಮೀರಿ ಅಮೂರ್ತವನ್ನು ತರಬಲ್ಲ ಬಿಂಬದ ಹುಡುಕಾಟದಲ್ಲಿರುತ್ತಾನೆ. ಅಂದರೆ ಅಮೂರ್ತದಿಂದ ಮೂರ್ತ ಬಿಂಬ ಕಟ್ಟುವ ಸಾಹಿತಿಯ ನುಡಿಗಟ್ಟು ಮೂರ್ತದಿಂದ ಅಮೂರ್ತಕ್ಕೆ ಜಿಗಿಯಬಲ್ಲ ಬಿಂಬಕ್ಕೆ ಹುಡುಕುವ ಸಿನಿಮಾ ನಿರ್ದೇಶಕನಿಗೆ ಊರುಗೋಲಾಗಲಾರದು.

₹385   ₹193

Buy Now
ಬೂಸ್ಟರ್ ಡೋಸ್ ಮುನಿಯಮ್ಮ ಇಬುಕ್ | BOOSTER DOSE MUNIYAMMA Ebook

ಇಪ್ಪತ್ತನೆಯ ಶತಮಾನದ ನಲ್ವತ್ತರ ದಶಕದಲ್ಲಿ ಅಲ್ಬೆ ಕಮೂ ಬರೆದ ಆಧುನಿಕ ಕ್ಲಾಸಿಕ್ ಎಂದು ಪರಿಗಣಿಸಲಾಗುವ ದಿ ಪ್ಲೇಗ್ ಕೃತಿಯೂ ಮನುಷ್ಯರ ಅಸಹಾಯಕತೆ, ದಾರುಣತೆ, ದುಷ್ಟತನ ಮತ್ತು ಕರುಣೆಯನ್ನು ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಪರಿಶೀಲಿಸುತ್ತದೆ. ಕಾಯಿಲೆಯೊಂದು ರೂಪಕವಾಗಿ ಕೊಳೆತ ಸಮಾಜದ ಅಸ್ವಾಸ್ಥ್ಯವನ್ನು ಬೆಳಕಿಗೆ ತರುವುದೇ ಈ ಕೃತಿಯ ಮುಖ್ಯ ಆಶಯ. ಅದಾಗಿ ಏಳು ದಶಕದ ಬಳಿಕ ನಾವು ಬದುಕುತ್ತಿರುವ ವಿಶ್ವವು ಒಂದು ಜಾಗತಿಕ ಸಾಂಕ್ರಾಮಿಕವನ್ನು ಎದುರಿಸಿತು. ಇಂದು ಬದುಕುಳಿದಿರುವ ನಾವೆಲ್ಲ ಅದಕ್ಕೆ ಸಾಕ್ಷಿಯಾದೆವು. ಪತ್ರಕರ್ತರಾದ ಸಂತೆಕಸಲಗೆರೆ ಪ್ರಕಾಶ್ ಅವರು ಕೂಡ ಆ ಕಾಲಘಟ್ಟದ ಅನುಭವವನ್ನು ಕಥೆಗಳ ರೂಪದಲ್ಲಿ 'ಬೂಸ್ಟರ್ ಡೋಸ್ ಮುನಿಯಮ್ಮ' ಎಂಬ ಸಂಕಲನದ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಹನ್ನೆರಡು ಕಥೆಗಳ ಈ ಸಂಕಲನವು ಜಾಗತಿಕ ಮಹಾಮಾರಿಯ ರುದ್ರಭಯಾನಕತೆಯ ವಿವಿಧ ರೂಪವನ್ನು ಕಥೆಗಳಲ್ಲಿ ಹಿಡಿದಿರಲು ಯತ್ನಿಸುತ್ತದೆ. ಜಾಗತಿಕ ಕಾಯಿಲೆಯ ಸ್ವರೂಪ ಮನೆ-ಕುಟುಂಬ-ಗ್ರಾಮ-ನಗರದ ಬೀದಿಗಳಲ್ಲಿ ಹೇಗೆ ಕಾಣಿಸಿಕೊಂಡಿತು. ಯಾವ ಪರಿಣಾಮವನ್ನುಂಟು ಮಾಡಿತು ಎಂದು ಇಲ್ಲಿನ ಕಥೆಗಳು ಅರಿಯಲು ಪ್ರಯತ್ನಿಸುತ್ತವೆ.

₹180   ₹90

Buy Now
ಬೆಳವಡಿ ಮಲ್ಲಮ್ಮ | Belavadi Mallamma

ಭಾರತ ಸ್ವಾತಂತ್ರ್ಯ ಹೋರಾಟವು ಕೇವಲ ರಾಜಕೀಯ ಹೋರಾಟವಾಗಿರಲಿಲ್ಲ. ಅದು ರಕ್ತಸಿಕ್ತ ಅಧ್ಯಾಯವೂ ಆಗಿತ್ತು. ತ್ಯಾಗ ಬಲಿದಾನಗಳ ಚಳವಳಿಯೂ ಆಗಿತ್ತು. ಅದು ಪುರುಷ, ಮಹಿಳೆ ಎಂಬ ತಾರತಮ್ಯಗಳಿಲ್ಲದ ಒಂದು ಸಮಗ್ರ ಹೋರಾಟವಾಗಿತ್ತು. ಆದರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪುರುಷರಿಗೆ ಹೋಲಿಸದರೆ, ಮಹಿಳೆಯರು ವಹಿಸಿದ ಪಾತ್ರವು ಇತಿಹಾಸದ ಪುಟಗಳಲ್ಲಿ ಮಬ್ಬು ಮಬ್ಬಾಗಿ ದಾಖಲಾಗಿದೆ. ಆ ಹಿನ್ನಲೆಯಲ್ಲಿ ನೋಡಿದಾಗ ಬೆಳವಡಿ ಮಲ್ಲಮ್ಮ ಕೃತಿಯ ಮಹತ್ವ ನಮಗೆ ಅರಿವಾಗುತ್ತದೆ. ಬೆಳವಡಿ ಮಲ್ಲಮ್ಮ ಯುದ್ಧವ್ಯೂಹಗಳಿಗೆ, ಗಾಳಿವೇಗದ ಪ್ರಹಾರಗಳಿಗೆ, ಸ್ವಾಭಿಮಾನ, ಧೈರ್ಯ ಸಾಹಸಗಳಿಗೆ ಹೆಸರಾದವರು.

₹200   ₹170

Buy Now
ಬೆಳವಡಿ ಮಲ್ಲಮ್ಮ ಇಬುಕ್ | Belavadi Mallamma Ebook

ಭಾರತ ಸ್ವಾತಂತ್ರ್ಯ ಹೋರಾಟವು ಕೇವಲ ರಾಜಕೀಯ ಹೋರಾಟವಾಗಿರಲಿಲ್ಲ. ಅದು ರಕ್ತಸಿಕ್ತ ಅಧ್ಯಾಯವೂ ಆಗಿತ್ತು. ತ್ಯಾಗ ಬಲಿದಾನಗಳ ಚಳವಳಿಯೂ ಆಗಿತ್ತು. ಅದು ಪುರುಷ, ಮಹಿಳೆ ಎಂಬ ತಾರತಮ್ಯಗಳಿಲ್ಲದ ಒಂದು ಸಮಗ್ರ ಹೋರಾಟವಾಗಿತ್ತು

₹200   ₹100

Buy Now