• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಬೆಳ್ಳಿತೆರೆಯ ಬಂಗಾರದ ಗೆರೆ | Bellitereya Bangarada Gere

ಕನ್ನಡದ ಪ್ರಸಿದ್ಧ ಲೇಖಕರು, ಪತ್ರಕರ್ತರು ಆದ ಗಣೇಶ್ ಕಾಸರಗೋಡು ಅವರು ‘ವಿಜಯವಾಣಿ’ ಪತ್ರಿಕೆಯಲ್ಲಿ ಪ್ರತಿವಾರ ಕಲಾವಿದರ ಕುರಿತು ಬರೆದ ‘ಬೆಳ್ಳಿತೆರೆಯ ಬಂಗಾರದ ಗೆರೆ’ ಅಂಕಣ ಬರಹ ಈಗ ಪುಸ್ತಕವಾಗಿದೆ.

₹150   ₹128

Buy Now
ಬೇವಾಚ್ | Bevach

“ಬೇವಾಚ್” ಕತ್ತಲಾಗುತ್ತಿದ್ದಂತೆ ಎಚ್ಚರವಾಗುವ ಲೈವ್ ಬ್ಯಾಂಡಿನ ಝಗಮಗಿಸುವ ಬೆಳಕಿನಡಿಯಲ್ಲಿ, ಕಿವಿಗಡಚಿಕ್ಕುವ ಅಬ್ಬರದ ಹಾಡಿಗೆ ಅರೆಬರೆ ಬಟ್ಟೆತೊಟ್ಟು ಮೈ ಬಳಕಿಸುತ್ತಾ, ಗ್ರಾಹಕರನ್ನು ಕಣ್ಣಲ್ಲೇ ಸೆಳೆಯುವ ಯುವತಿಯೊಬ್ಬಳ ಸುತ್ತ ಹೆಣೆದ ಕಾದಂಬರಿ ಪರಿಸ್ಥಿತಿ ಮತ್ತು ಜವಾಬ್ದಾರಿ ಒಬ್ಬ ಮುಗ್ಧ ಹೆಣ್ಣನ್ನು ಯಾವ ಮಟ್ಟಕ್ಕೆ ತಂದು ನಿಲ್ಲಿಸುತ್ತದೆ; ಮುಂದೆ, ಬದಲಾಗುವ ಅವಕಾಶ ಇದ್ದರೂ ಹಣದಾಸೆಗೆ ಬಿದ್ದ ಅವಳು ಯಾವ್ಯಾವ ಕುಕೃತ್ಯದಲ್ಲಿ ತೊಡಗಿಕೊಳ್ಳುತ್ತಾಳೆ ಎಂಬುದರ ಜೊತೆಗೆ ಬಡತನ, ಮೋಸ, ವ್ಯಭಿಚಾರ, ಗಂಡು ಮಗುವಿನ ವ್ಯಾಮೋಹ, ಪೊಲೀಸರ ಕ್ರೌರ್ಯ, ಕ್ರೈಂ ಮಿಗಿಲಾಗಿ ಬೆಲೆವೆಣ್ಣುಗಳ ಸಹವಾಸ ಮಾಡುವುದರಿಂದಾಗುವ ಪರಿಣಾಮವನ್ನು ಕಾದಂಬರಿಯಲ್ಲಿ ಕಾಣಬಹುದಾಗಿದೆ.

₹225   ₹191

Buy Now
ಬೇಸೂರ್ ಇಬುಕ್ | Besur Ebook

ಕವಯತ್ರಿ ವಿದ್ಯಾ ಭರತನಹಳ್ಳಿಯವರು ಕಥಾ ಪ್ರಪಂಚಕ್ಕೆ ಕಾಲಿರಿಸಿದ್ದು ಇತ್ತೀಚೆಗೆ. ನೋಡನೋಡುತ್ತ ಮೂಡಿಬಂದ ಹದಿಮೂರು ಕಥೆಗಳ ಸಂಕಲನ 'ಬೇಸೂರ್'. ರೋಚಕತೆಯ ಮೋಹಕ್ಕೆ ಬೀಳದಿದ್ದರೂ ಶೈಲಿ ಚುರುಕಾಗಿದೆ. ವಸ್ತು ಮತ್ತು ಪಾತ್ರಗಳ ಆಯ್ಕೆ ತುಂಬಾ ಅಥೆಂಟಿಕ್ ಆಗಿದೆ. ಕಥೆಗಾರನಿಗೆ ಅಗತ್ಯವಾದ ನಿರ್ಲಿಪ್ತತೆ ವಿದ್ಯಾರಿಗೆ ಸಿದ್ದಿಸಿದೆ. ಕೆಲವು ಕತೆಗಳಂತೂ ಹೃದಯದಾಳವ ಹೊಕ್ಕು ಬಗೆಯುವಂತಿವೆ. ಗಂಡನೆಂಬ ಪ್ರಾಣಿಯ ಕ್ರೌರ್ಯಕ್ಕೆ ಸಿಕ್ಕು. ಹಿಚುಕಲ್ಪಟ್ಟು ಮಸಣ ಸೇರುವ 'ಆಯಿ'ಯ ಕಮಲಾಕ್ಷಿ, ಅಂಥದೇ ಇನ್ನೊಬ್ಬ ಗಂಡನನ್ನು ಧಿಕ್ಕರಿಸಿ ಹೊರಬಂದು ಸ್ವಂತ ಬದುಕನ್ನು ಕಟ್ಟಿಕೊಳ್ಳಲು ಪ್ರಯತ್ನಿಸುವ 'ಹೇಳೆ ಮೇದಿನಿ'ಯ ಮೇದಿನಿ. ಸ್ತ್ರೀ ಹೃದಯದ ಉದಾತ್ತತೆ ಮೆರೆಯುವ 'ಗಿಂಡಿ ತುಂಬಿದ ಹಾಲಿ'ನ ಶಾಂತಲೆ. ತನ್ನ ಉಕ್ಕುವ ಪ್ರತಿಭೆಯನ್ನು ಸದಾ ಸಿಟ್ಟು, ಸೆಡವು, ಕೊಂಕು ಮಾತುಗಳಿಂದ ಮುರುಟಿಸುವ ಗಂಡನನ್ನು ಕಟ್ಟಿಕೊಂಡು ವಿಲ ವಿಲ ಒದ್ದಾಡುವ ವರ್ಷಾ ದೇಶಪಾಂಡೆ ಮುಂತಾದ ಜೀವಗಳು ಕಥೆ ಓದಿ ಮುಗಿಸಿಯಾದಮೇಲೂ ಬಹುಕಾಲ ನೆನಪಿನಲ್ಲಿ ಸ್ಥಾಯಿಯಾಗುತ್ತವೆ. ಮನ ಕದಡುತ್ತವೆ. ಚಿಂತನೆಗೆ ಹಚ್ಚುತ್ತವೆ. ವಸ್ತುವಿನ ಗಟ್ಟಿತನದಿಂದ, ಶೈಲಿಯ ದಟ್ಟತೆಯಿಂದ, ಜೀವನಾನುಭವದ ಸಮೃದ್ಧತೆಯಿಂದ ವಿದ್ಯಾ ಭರತನಹಳ್ಳಿಯವರ 'ಬೇಸೂರ್' ಕಥಾ ಸಂಕಲನ ಸಾಹಿತ್ಯ ಲೋಕದಲ್ಲಿ ತನ್ನದೇ ಒಂದು ಛಾಪು ಮೂಡಿಸುತ್ತದೆ.

₹125   ₹63

Buy Now
ಭಾನುಮತಿಯ ಪರಿವಾರ | Bhanumatiya Parivara

” ಭಾನುಮತಿಯ ಪರಿವಾರ” ಎಂಬುದು ಹಿಂದಿ ನಾಣ್ಣುಡಿ “ಭಾನುಮತೀ ಕಾ ಕುನ್ ಬಾ”ದ ಕನ್ನಡ ಅನುವಾದ.

₹140   ₹119

Buy Now
ಮಂಡ್ಯ ರಮೇಶ್ ನಟನ ಕಥೆ | Mandya Ramesh Natana Kathe

ನಟನ ಕಥೆ. ಮಂಡ್ಯ ರಮೇಶ್ ಕಟ್ಟಿದ ನಾಟಕ ಕೂಟದ ಸಾಹಸಗಾಥೆ. ಭೂಮಿ ಪಡೆಯುವುದರಿಂದ ಕಟ್ಟಡ ಕಟ್ಟುವವರೆಗಿನ ಬವಣೆಗಳು ಮನಸ್ಸನ್ನು ತಟ್ಟುತ್ತವೆ.

₹250   ₹213

Buy Now
ಮಂಡ್ಯ ರಮೇಶ್ ನಟನ ಕಥೆ ಇಬುಕ್ | Mandya Ramesh natana Kathe Ebook

ನಟನ ಕಥೆ. ಮಂಡ್ಯ ರಮೇಶ್ ಕಟ್ಟಿದ ನಾಟಕ ಕೂಟದ ಸಾಹಸಗಾಥೆ. ಭೂಮಿ ಪಡೆಯುವುದರಿಂದ ಕಟ್ಟಡ ಕಟ್ಟುವವರೆಗಿನ ಬವಣೆಗಳು ಮನಸ್ಸನ್ನು ತಟ್ಟುತ್ತವೆ. ಜೊತೆಗೆ ಮಂಡ್ಯ ರಮೇಶ್ ಅವರ ಅಂಕಿತ ಭಾವ, ಪಾತ್ರಧಾರಿಗಳಿಂದ ಪರಿಪೂರ್ಣ ಅಭಿನಯಕ್ಕೆ ತರಬೇತಿ ಅನನ್ಯ. ಅವರ ವಿದೇಶ ಪ್ರವಾಸ… ಅವರ ವಿನೀತ ಭಾವ… ಅವರ ಪುಸ್ತಕ ಪಠಣ ಮುದ ನೀಡುತ್ತವೆ. ಕನ್ನಡ ಸ್ಪಷ್ಟವಾಗಿ ಮಾತಾಡಲು ಬರದ ಮಕ್ಕಳು ರಜಾಮಜಾ ಕೂಟ ಸೇರಿ ವೇದಿಕೆ ಹತ್ತುವ ಭಯ ಕಳೆದು ನಟಿಸುವುದು… ಹ್ಯಾಟ್ಸ್ ಆಫ್ ಟು ಮಂಡ್ಯ ರಮೇಶ್.

₹250   ₹125

Buy Now
ಮನಿ ಮನಿ ಎಕಾನಮಿ | Money Money Economy

ವಿತ್ತ ಜಗತ್ತಿನ ಬರಹಗಾರರಾಗಿ ಖ್ಯಾತರಾಗಿರುವ ರಂಗಸ್ವಾಮಿ ಮೂಕನಹಳ್ಳಿ ಅವರು ಬರೆದಿರುವ ಪುಸ್ತಕವೇ ‘ಮನಿ ಮನಿ ಎಕಾನಮಿ. ’ ಇದು ಬ್ಯಾಂಕಿಂಗ್, ಹಣಕಾಸು ಕ್ಷೇತ್ರ ಕುರಿತ ಮಾಹಿತಿಪೂರ್ಣ ಪುಸ್ತಕವಾಗಿದೆ. ವಿತ್ತ ಜತ್ತಿನ ಆಗುಹೋಗುಗಳನ್ನು ಪ್ರತಿಯೊಬ್ಬ ಸಾಮಾನ್ಯ ಪ್ರಜೆಯೂ ತಿಳಿದುಕೊಳ್ಳುವ ಅಗತ್ಯವಿದೆ. ಸಾಮಾನ್ಯ ಪ್ರಜೆಗೂ ಅರ್ಥವಾಗುವ ಸರಳ ಭಾಷೆಯಲ್ಲಿ ಲೇಖಕರು ಹಲವು ಉಪಯುಕ್ತ ಮಾಹಿತಿಯ ಲೇಖನಗಳನ್ನು ಬರೆದಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಅಧ್ಯಾಪಕರು, ಸಾಮಾನ್ಯ ಪ್ರಜೆಗಳಿಗೂ ಉಪಯುಕ್ತ ಪುಸ್ತಕ ಇದಾಗಿದೆ.

₹175   ₹149

Buy Now
ಮನಿ ಮನಿ ಎಕಾನಮಿ ಇಬುಕ್ | Money Money Economy Ebook

ವಿತ್ತ ಜಗತ್ತಿನ ಬರಹಗಾರರಾಗಿ ಖ್ಯಾತರಾಗಿರುವ ರಂಗಸ್ವಾಮಿ ಮೂಕನಹಳ್ಳಿ ಅವರು ಬರೆದಿರುವ ಪುಸ್ತಕವೇ ‘ಮನಿ ಮನಿ ಎಕಾನಮಿ.’ ಇದು ಬ್ಯಾಂಕಿಂಗ್, ಹಣಕಾಸು ಕ್ಷೇತ್ರ ಕುರಿತ ಮಾಹಿತಿಪೂರ್ಣ ಪುಸ್ತಕವಾಗಿದೆ. ವಿತ್ತ ಜತ್ತಿನ ಆಗುಹೋಗುಗಳನ್ನು ಪ್ರತಿಯೊಬ್ಬ ಸಾಮಾನ್ಯ ಪ್ರಜೆಯೂ ತಿಳಿದುಕೊಳ್ಳುವ ಅಗತ್ಯವಿದೆ. ಸಾಮಾನ್ಯ ಪ್ರಜೆಗೂ ಅರ್ಥವಾಗುವ ಸರಳ ಭಾಷೆಯಲ್ಲಿ ಲೇಖಕರು ಹಲವು ಉಪಯುಕ್ತ ಮಾಹಿತಿಯ ಲೇಖನಗಳನ್ನು ಬರೆದಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಅಧ್ಯಾಪಕರು, ಸಾಮಾನ್ಯ ಪ್ರಜೆಗಳಿಗೂ ಉಪಯುಕ್ತ ಪುಸ್ತಕ ಇದಾಗಿದೆ.

₹160   ₹80

Buy Now
ಮನೆ ಇ೦ಜಿನಿಯರ್ | mane Engineer

ಮನೆ ಇಂಜಿನಿಯರ್" ಶೀರ್ಷಿಕೆ ಹೊತ್ತ ಈ ಪುಸ್ತಕದಲ್ಲಿ ನಿವೇಶನದಿಂದ ಮೊದಲಾಗಿ ಮನೆಯನ್ನು ಕಟ್ಟಲು ಅಗತ್ಯವಿರುವ ಎಲ್ಲ ತರಹದ ಉಪಯುಕ್ತ ಮಾಹಿತಿಗಳನ್ನು ಅಚ್ಚುಕಟ್ಟಾಗಿ, ಸಾಮಾನ್ಯ ಜನರಿಗೂ ಅರ್ಥವಾಗುವಂತಹ ಸರಳವಾದ ಕನ್ನಡ ಭಾಷೆಯಲ್ಲಿ ರಾಮ್‌ಕದಮ್‌ರವರು ಬರೆದಿದ್ದಾರೆ. ನನ್ನ ಬಹುಕಾಲದ ಪರಿಚಿತರಾದ ಇವರು ಕನ್ನಡ ಸಾರಸ್ವತ ಲೋಕಕ್ಕೆ ಒಂದು ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಕೆಲವು ವಿಷಯಗಳು ಸಂಕ್ಷಿಪ್ತವಾಗಿವೆಯಾದರೂ ಅಗತ್ಯವಿರುವಷ್ಟು ವಿವರಣೆಯನ್ನು ಒಳಗೊಳ್ಳುವ ಮೂಲಕ 'ಮನೆ ಇಂಜಿನಿಯರ್' ಪರಿಪೂರ್ಣತೆಯನ್ನು ಪಡೆದು ಕೊಳ್ಳುವುದರಲ್ಲಿ ಸಫಲವಾಗಿದೆ. ವಿಶ್ವದ ಕೆಲವು ದೇಶಗಳಲ್ಲಿ ಬಳಕೆಯಲ್ಲಿರುವ ಆಯ್ದ ಮನೆಗಳ ಮಾದರಿ ನಕಾಶೆಗಳೂ ಇದರಲ್ಲಿವೆ. ವಾಸ್ತುಶಾಸ್ತ್ರದ ಗೊಂದಲಗಳಿಗೆ ಆಧಾರಸಹಿತವಾದ ಸ್ಪಷ್ಟ ವಿವರಣೆಯಿದೆ. ವಿದ್ಯುತ್, ಪ್ಲಂಬಿಂಗ್, ಒಳಾಂಗಣ ವಿನ್ಯಾಸ, ತಾಂತ್ರಿಕ ಸಲಹೆ ಹೀಗೆ ಅನೇಕ ಅಂಶಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಒಟ್ಟಿನಲ್ಲಿ ಮನೆಯನ್ನು ಕಟ್ಟುವವರಿಗೆ ಅಗತ್ಯವಾಗಬಹುದಾದ ಎಲ್ಲ ಮಾಹಿತಿಗಳು ಇಲ್ಲಿ ಸಮಗ್ರವಾಗಿ ಒಂದೇ ಪುಸ್ತಕದಲ್ಲಿ ಲಭ್ಯವಿದೆ. 'ಮನೆ ಕಟ್ಟಿನೋಡು, ಮದುವೆ ಮಾಡಿನೋಡು' ಎಂಬ ಕನ್ನಡದ ಗಾದೆ ಮಾತೊಂದಿದೆ. ಮದುವೆಯೇನೋ ಹಾಗೂ ಹೀಗೂ ಕೆಲವು ಚಿಕ್ಕಪುಟ್ಟ ಕೊರತೆಗಳ ನಡುವೆಯೂ ಮಾಡಿ ಮುಗಿಸಿಬಿಡಬಹುದು. ಆದರೆ ಮನೆಯನ್ನು ಕಟ್ಟುವುದು ಹಾಗಾಗುವುದಿಲ್ಲ. ಅದು ಕಷ್ಟದ ಕೆಲಸ. ಎಲ್ಲವನ್ನೂ ತರ್ಕಬದ್ಧವಾಗಿ ಹೊಂದಿಸಬೇಕಾದ ಅನಿವಾರ್ಯತೆಯಿರುತ್ತದೆ. ಈ ನಿಟ್ಟಿನಲ್ಲ. ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ವೃತ್ತಿಪರರಾದ ವಾಸ್ತುಶಿಲ್ಪಿಗಳು, ಇಂಜಿನಿಯರ್ಗಳು, ಗುತ್ತಿಗೆದಾರರು ಹಾಗೂ ಮನೆಯನ್ನು ಕಟ್ಟುವ ಮಾಲೀಕರು ಹೀಗೆ ಪ್ರತಿಯೊಬ್ಬರಿಗೂ ಈ ಪುಸ್ತಕವು ಅತ್ಯಂತ ಉಪಯುಕ್ತವಾಗಿದೆ. ಇವರಿಗೆ ಶುಭವಾಗಲಿ. -ಎಸ್. ಶ್ಯಾಮಸುಂದರ್ ಆರ್ಕಿಟೆಕ್ಟ್, ಶಿವಮೊಗ್ಗ

₹495   ₹421

Buy Now
ಮನೆ ಇ೦ಜಿನಿಯರ್ ಇಬುಕ್ | mane Engineer Ebook

ಮನೆ ಇಂಜಿನಿಯರ್" ಶೀರ್ಷಿಕೆ ಹೊತ್ತ ಈ ಪುಸ್ತಕದಲ್ಲಿ ನಿವೇಶನದಿಂದ ಮೊದಲಾಗಿ ಮನೆಯನ್ನು ಕಟ್ಟಲು ಅಗತ್ಯವಿರುವ ಎಲ್ಲ ತರಹದ ಉಪಯುಕ್ತ ಮಾಹಿತಿಗಳನ್ನು ಅಚ್ಚುಕಟ್ಟಾಗಿ, ಸಾಮಾನ್ಯ ಜನರಿಗೂ ಅರ್ಥವಾಗುವಂತಹ ಸರಳವಾದ ಕನ್ನಡ ಭಾಷೆಯಲ್ಲಿ ರಾಮ್‌ಕದಮ್‌ರವರು ಬರೆದಿದ್ದಾರೆ. ನನ್ನ ಬಹುಕಾಲದ ಪರಿಚಿತರಾದ ಇವರು ಕನ್ನಡ ಸಾರಸ್ವತ ಲೋಕಕ್ಕೆ ಒಂದು ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಕೆಲವು ವಿಷಯಗಳು ಸಂಕ್ಷಿಪ್ತವಾಗಿವೆಯಾದರೂ ಅಗತ್ಯವಿರುವಷ್ಟು ವಿವರಣೆಯನ್ನು ಒಳಗೊಳ್ಳುವ ಮೂಲಕ 'ಮನೆ ಇಂಜಿನಿಯರ್' ಪರಿಪೂರ್ಣತೆಯನ್ನು ಪಡೆದು ಕೊಳ್ಳುವುದರಲ್ಲಿ ಸಫಲವಾಗಿದೆ. ವಿಶ್ವದ ಕೆಲವು ದೇಶಗಳಲ್ಲಿ ಬಳಕೆಯಲ್ಲಿರುವ ಆಯ್ದ ಮನೆಗಳ ಮಾದರಿ ನಕಾಶೆಗಳೂ ಇದರಲ್ಲಿವೆ. ವಾಸ್ತುಶಾಸ್ತ್ರದ ಗೊಂದಲಗಳಿಗೆ ಆಧಾರಸಹಿತವಾದ ಸ್ಪಷ್ಟ ವಿವರಣೆಯಿದೆ. ವಿದ್ಯುತ್, ಪ್ಲಂಬಿಂಗ್, ಒಳಾಂಗಣ ವಿನ್ಯಾಸ, ತಾಂತ್ರಿಕ ಸಲಹೆ ಹೀಗೆ ಅನೇಕ ಅಂಶಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಒಟ್ಟಿನಲ್ಲಿ ಮನೆಯನ್ನು ಕಟ್ಟುವವರಿಗೆ ಅಗತ್ಯವಾಗಬಹುದಾದ ಎಲ್ಲ ಮಾಹಿತಿಗಳು ಇಲ್ಲಿ ಸಮಗ್ರವಾಗಿ ಒಂದೇ ಪುಸ್ತಕದಲ್ಲಿ ಲಭ್ಯವಿದೆ. 'ಮನೆ ಕಟ್ಟಿನೋಡು, ಮದುವೆ ಮಾಡಿನೋಡು' ಎಂಬ ಕನ್ನಡದ ಗಾದೆ ಮಾತೊಂದಿದೆ. ಮದುವೆಯೇನೋ ಹಾಗೂ ಹೀಗೂ ಕೆಲವು ಚಿಕ್ಕಪುಟ್ಟ ಕೊರತೆಗಳ ನಡುವೆಯೂ ಮಾಡಿ ಮುಗಿಸಿಬಿಡಬಹುದು. ಆದರೆ ಮನೆಯನ್ನು ಕಟ್ಟುವುದು ಹಾಗಾಗುವುದಿಲ್ಲ. ಅದು ಕಷ್ಟದ ಕೆಲಸ. ಎಲ್ಲವನ್ನೂ ತರ್ಕಬದ್ಧವಾಗಿ ಹೊಂದಿಸಬೇಕಾದ ಅನಿವಾರ್ಯತೆಯಿರುತ್ತದೆ. ಈ ನಿಟ್ಟಿನಲ್ಲ. ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ವೃತ್ತಿಪರರಾದ ವಾಸ್ತುಶಿಲ್ಪಿಗಳು, ಇಂಜಿನಿಯರ್ಗಳು, ಗುತ್ತಿಗೆದಾರರು ಹಾಗೂ ಮನೆಯನ್ನು ಕಟ್ಟುವ ಮಾಲೀಕರು ಹೀಗೆ ಪ್ರತಿಯೊಬ್ಬರಿಗೂ ಈ ಪುಸ್ತಕವು ಅತ್ಯಂತ ಉಪಯುಕ್ತವಾಗಿದೆ. ಇವರಿಗೆ ಶುಭವಾಗಲಿ.

₹495   ₹248

Buy Now
ಮಲೆನಾಡ ಅಜ್ಜಿ | Malenada Ajji

ಏನನ್ನೂ ಅಪೇಕ್ಷಿಸಿದ, ಯಾರನ್ನೂ ಉಪೇಕ್ಷಿಸದ ಈಕೆ ಅಪ್ಸರೆ. ಅಮರರಿಗೆ ಕಾಲದ ಹಂಗಿಲ್ಲ. ಹಾಗಾಗಿ ಭೂತ ಭವಿಷ್ಯತ್ತಿನ ಎಲ್ಲೆಗಳಿಲ್ಲ, ನಿರಂತರ ವರ್ತಮಾನ. ಕಾದದ್ದು ಊರ ಚೌಡಿಯಂತೆ, ಮುಟ್ಟಿದ್ದೆಲ್ಲಾ ಅಮೃತ, ಬೇಯಿಸಿದ ಅನ್ನ, ಕಾಯಿಸಿದ ಹಾಲು ಎಲ್ಲಾ ಹದ. ಕುದಿಯುತ್ತೆ; ಉಕ್ಕಲ್ಲ, ಕತ್ತಲ ಅಟ್ಟದ ಜಾಡಿಯ ಮಿಡಿ ಉಪ್ಪಿನಕಾಯಿಯೂ ವರ್ಷಗಳಾದರೂ ಕೆಡೊಲ್ಲ. ಉರಿಗಾರದ ಬಾಣಂತಿ ಲೇಹ್ಯ ಕೇವಲ ಅವಶ್ಯಕ ಕಾವನ್ನಷ್ಟೇ ಕೊಡುತ್ತೆ. ಆಷ್ಟ್ಯಾಕೆ ಸುತ್ತಲಿನ ನಿರ್ಲಿಪ್ತ ಗಾಳಿ ಕೂಡಾ ಅ೦ಟಿಕೊ೦ಡವರಿಗೆ ಉಸಿರಾಗುತ್ತೆ. ಓದಿ ಮುಗಿಸಿದೆ, ಮೈ ಮನ ತು೦ಬಿದೆ. ಭಾವೋದ್ವೇಗದಲ್ಲಿ ಅಲ್ಲಲ್ಲಿ ಉಕ್ಕಿದರೂ ಎಲ್ಲೆ ಮೀರಿ ಎಲ್ಲೂ ಚೆಲ್ಲಿಲ್ಲ. ಹಾಲು ಕುದ್ದು ನೀರು ಆವಿಯಾಗಿ ಅನುಭವದ ಸಾರ ಹೆಪ್ಪುಗಟ್ಟಿದಾಗ ಖಾಲಿತನ ಕಾಡಿದ್ದುಂಟು ಹೌದು ಆದರೆ ಅದನ್ನು ಮೀರಿದ ಪರಿಮಳ ಆವರಿಸಿದ್ದು ಸುಳ್ಳಲ್ಲ. -ಸೇತುರಾಂ

₹175   ₹140

Buy Now
ಮಹಾವಿನಾಶ | Mahavinasha

ಬುದ್ಧನ ಕಾಲಾನಂತರದ ಕಥೆಯುಳ್ಳ, ಹೆಚ್ಚು ಬಳಸಲ್ಪಡದ ಕಥಾವಸ್ತುವನ್ನು ಹೆಣೆದುಕೊಂಡು ಅಧ್ಯಯನದ ಮುಖಾಂತರವೇ ರಚಿಸಲ್ಪಟ್ಟ ಐತಿಹಾಸಿಕ ಕಾದಂಬರಿ ‘ಮಹಾವಿನಾಶ’. ಗೌತಮಬುದ್ಧನ ಪರಿನಿರ್ವಾಣದ ನಂತರದ ಕಾಲದಿಂದ ಮುಂದಿನ ಐದಾರು ನೂರು ವರ್ಷದ ಕಥಾ ಹಂದರವನ್ನು ಹೊಂದಿದೆ.

₹450   ₹383

Buy Now
ಮಹಾವಿನಾಶ ಇಬುಕ್ | Mahavinasha Ebook

ಬುದ್ಧನ ಕಾಲಾನಂತರದ ಕಥೆಯುಳ್ಳ, ಹೆಚ್ಚು ಬಳಸಲ್ಪಡದ ಕಥಾವಸ್ತುವನ್ನು ಹೆಣೆದುಕೊಂಡು ಅಧ್ಯಯನದ ಮುಖಾಂತರವೇ ರಚಿಸಲ್ಪಟ್ಟ ಐತಿಹಾಸಿಕ ಕಾದಂಬರಿ ‘ಮಹಾವಿನಾಶ’. ಗೌತಮಬುದ್ಧನ ಪರಿನಿರ್ವಾಣದ ನಂತರದ ಕಾಲದಿಂದ ಮುಂದಿನ ಐದಾರು ನೂರು ವರ್ಷದ ಕಥಾ ಹಂದರವನ್ನು ಹೊಂದಿದೆ

₹450   ₹225

Buy Now
ಮಹಿಳೆಯರಿಗೆ ಮಾತ್ರವಲ್ಲ! | Mahileyarige Matravalla!

ಮಹಿಳೆಯ ಮನಸ್ಸು ಮತ್ತು ಆ ಮನಸ್ಸನ್ನು ರೂಪಿಸುವ ಸಾಮಾಜಿಕ ಬೆಲೆ ಎರಡನ್ನೂ ಒಂದರೊಡನೊಂದು ಬೆಸೆದು ಬರೆದ ಹೊತ್ತಗೆ ಇದಾಗಿದೆ. ತಮ್ಮ ವೃತ್ತಿಯಲ್ಲಿ ಇದಿರಾದ ಹಲವಾರು ಸವಾಲುಳ್ಳ ಸಮಸ್ಯೆಗಳ ಸಿಕ್ಕುಗಳನ್ನು ಸಾವಧಾನದಿಂದ ಜಡಿಸುತ್ತಲೇ, ಇದೇಕೆ ಹೀಗೆ? ಎಂದು ಚಿಂತಿಸಿದ ಸೂಕ್ಷ್ಮ ಮನಸ್ಸಿನ ಫಲವೂ ಇದಾಗಿದೆ. ಈ ಕೃತಿಯುದ್ದಕ್ಕೂ ಮಹಿಳೆಯನ್ನು ನಿರ್ಬಂಧಿಸಿದ ಸಾಮಾಜಿಕ ರಚನೆಯಿಂದಾಗಿ ಅವಳ ಮನಷ್ಟೂ ಕೂಡಾ ಹೇಗೆ ನಿರ್ಬಂಧಕ್ಕೆ ಒಳಗಾಗಿದೆ ಮತ್ತು ಆಕೆಯೇ ಹೇಗೆ ಅದರಿಂದ ಹೊರಬರುವ ದಾರಿಯಿದ್ದರೂ ಸಂಕೋಲೆಯೊಳಗೇ ಅಡಗಿ ಕುಳಿತುಕೊಳ್ಳುತ್ತಾಳೆ ಎಂಬುದನ್ನು ಅನಾವರಣ ಮಾಡಲಾಗಿದೆ. -ಡಾ. ಸಬಿತಾ ಬನ್ನಾಡಿ

₹180   ₹153

Buy Now
ಮಾದಕ ದೊರೆ | Maadaka Dore

ಕೇವಲ ಮಾದಕ ವಸ್ತುಗಳ ಮಾರಾಟ ಮಾಡಿ ಕೋಟಿಗಟ್ಟಲೆ ಹಣ ಮಾಡಿರುವವರು ಇದ್ದಾರೆ. ಆದರೆ ಪಾಬ್ಲೊ ಕೇವಲ ಮಾದಕ ದೊರೆ ಮಾತ್ರ ಅಲ್ಲ. ಅವನ ಜನರ ಆರಾಧ್ಯ ದೈವ. ಅಮೆರಿಕ ಸರ್ಕಾರಕ್ಕೆ ತಲೆನೋವಾಗಿ… ಕೊನೆಗೆ ತನ್ನ ದೇಶದ ಮಕುಟವಿಲ್ಲದ ಮಹಾರಾಜನಾದ. ಪಾಬ್ಲೊನ ಗೆಳತಿಯರು… ಮಕ್ಕಳು… ಅವನ ದೊಡ್ಡ ವಿಲ್ಲಾ.. ಅವನನ್ನು ಹಿಡಿಯಲು ಪ್ರಯತ್ನಿಸಿದ ಅಧಿಕಾರಿಗಳು. ರೋಚಕ ನಿರೂಪಣೆ.

₹375   ₹319

Buy Now
ಮಾದಕ ದೊರೆ ಇಬುಕ್ | Maadaka Dore Ebook

ಕೇವಲ ಮಾದಕ ವಸ್ತುಗಳ ಮಾರಾಟ ಮಾಡಿ ಕೋಟಿಗಟ್ಟಲೆ ಹಣ ಮಾಡಿರುವವರು ಇದ್ದಾರೆ. ಆದರೆ ಪಾಬ್ಲೊ ಕೇವಲ ಮಾದಕ ದೊರೆ ಮಾತ್ರ ಅಲ್ಲ. ಅವನ ಜನರ ಆರಾಧ್ಯ ದೈವ. ಅಮೆರಿಕ ಸರ್ಕಾರಕ್ಕೆ ತಲೆನೋವಾಗಿ… ಕೊನೆಗೆ ತನ್ನ ದೇಶದ ಮಕುಟವಿಲ್ಲದ ಮಹಾರಾಜನಾದ. ಪಾಬ್ಲೊನ ಗೆಳತಿಯರು… ಮಕ್ಕಳು… ಅವನ ದೊಡ್ಡ ವಿಲ್ಲಾ.. ಅವನನ್ನು ಹಿಡಿಯಲು ಪ್ರಯತ್ನಿಸಿದ ಅಧಿಕಾರಿಗಳು. ರೋಚಕ ನಿರೂಪಣೆ.

₹375   ₹188

Buy Now
ಮಾಯಾಗುಹೆ ಮತ್ತು ಇತರ ಮಕ್ಕಳ ಕತೆಗಳು | Maya Guhe Mattu Itara Makkala Kathegalu

ಮಕ್ಕಳ ಸಾಹಿತ್ಯ ರಚನೆಗೆ ಬೇಕಾದ ಮುಗ್ಧ ಮನಸ್ಥಿತಿ, ಆದರ್ಶಪ್ರಿಯತೆ ಮತ್ತು ಬೆರಗು ನಮ್ಗಳಲ್ಲಿ ಇನ್ನೂ ಕಲುಷಿತಗೊಳ್ಳದೇ ಹಾಗೆಯೇ ಉಳಿದುಕೊಂಡು ໙໐໖໖. ಜನಪದ ಕತೆಗಳ ಹಾಗೂ ಪ್ರಾಣಿ ಪ್ರಪಂಚದ ಕಥನಗಳ ಜಾಡಿನಲ್ಲಿ ನವ್ಯ ಇಲ್ಲಿನ ಕತೆಗಳನ್ನು ಬರೆದಂತೆ ತೋರಿದರೂ ಮನುಷ್ಯನಲ್ಲಿ ನೆಲೆಗೊಂಡಿರುವ ಕ್ರೌರ್ಯ, ದುರಾಸೆ, ಅಪ್ರಮಾಣಿಕತೆ ಮುಂತಾದೆ ಅಪಸವ್ಯಗಳ ಎದುರಿಗೆ ಬಾಲಕರು ಬದುಕನ್ನು ಹೇಗೆ ರೂಪಿಸಿಕೊಳ್ಳಬೇಕು ಎನ್ನುವ ಮಾದರಿಯನ್ನು ಇಲ್ಲಿನ ಕತೆಗಳು ನೀಡುತ್ತವೆ.

₹140   ₹112

Buy Now
ಮಾಯಾಗುಹೆ ಮತ್ತು ಇತರ ಮಕ್ಕಳ ಕತೆಗಳು ಇಬುಕ್| Maya Guhe Mattu Itara Makkala Kathegalu Ebook

ಮಕ್ಕಳ ಸಾಹಿತ್ಯ ರಚನೆಗೆ ಬೇಕಾದ ಮುಗ್ಧ ಮನಸ್ಥಿತಿ, ಆದರ್ಶಪ್ರಿಯತೆ ಮತ್ತು ಬೆರಗು ನಮ್ಗಳಲ್ಲಿ ಇನ್ನೂ ಕಲುಷಿತಗೊಳ್ಳದೇ ಹಾಗೆಯೇ ಉಳಿದುಕೊಂಡು ໙໐໖໖. ಜನಪದ ಕತೆಗಳ ಹಾಗೂ ಪ್ರಾಣಿ ಪ್ರಪಂಚದ ಕಥನಗಳ ಜಾಡಿನಲ್ಲಿ ನವ್ಯ ಇಲ್ಲಿನ ಕತೆಗಳನ್ನು ಬರೆದಂತೆ ತೋರಿದರೂ ಮನುಷ್ಯನಲ್ಲಿ ನೆಲೆಗೊಂಡಿರುವ ಕ್ರೌರ್ಯ, ದುರಾಸೆ, ಅಪ್ರಮಾಣಿಕತೆ ಮುಂತಾದೆ ಅಪಸವ್ಯಗಳ ಎದುರಿಗೆ ಬಾಲಕರು ಬದುಕನ್ನು ಹೇಗೆ ರೂಪಿಸಿಕೊಳ್ಳಬೇಕು ಎನ್ನುವ ಮಾದರಿಯನ್ನು ಇಲ್ಲಿನ ಕತೆಗಳು ನೀಡುತ್ತವೆ.

₹140   ₹70

Buy Now
ಮಿಕ್ಸ್ & ಮ್ಯಾಚ್ | Mix & Match

"ಹೇ ಇದ್ರೇನ್ ಇಲ್ಲಿ..!?” ಆತನನ್ನು ಅಲ್ಲಿ ನೋಡಿದ ಕೂಡಲೇ, ಆ ಸಾವಿನ ಮನೆಯಲೆಲ್ಲ ಸಂಚಲನದ ಜೊತೆಗೆ ಗುಸುಗುಸು ಹಬ್ಬಿತ್ತು. ಅರವತ್ತು ವರ್ಷಗಳ ತುಂಬು ಜೀವನವನ್ನ ನಡೆಸಿದ್ದ ಅನ್ನಪೂರ್ಣ ಅಂದು ಇಹ ಲೋಕ ತ್ಯಜಿಸಿದ್ದರು. ಅವರ ಪಾರ್ಥಿವ ದೇಹವನ್ನ ದರ್ಶನ ಮಾಡಲು ಬರುತ್ತಿದ್ದವರ ಸಾಲಿನಲ್ಲಿ, ಅನ್ನಪೂರ್ಣರವರಷ್ಟೇ ವಯಸ್ಸಾದ, ಆ ಜಿಲ್ಲೆಯ ಪ್ರಸಿದ್ಧ ವ್ಯಕ್ತಿಯೊಬ್ಬ ಕಣ್ಣಲ್ಲಿ ನೀರು ತುಂಬಿಕೊಂಡು ನಿಂತಿದ್ದ ಗುಸು, ಗುಸು ಅನ್ನಪೂರ್ಣರವರ ತಮ್ಮನ ಕಿವಿಗೂ ತಲುಪಿ, ಯಾರೆಂದು ಬಗ್ಗಿ ನೋಡಿದವನ ಕಣ್ಣಲ್ಲಿ ಅರೆಕ್ಷಣ ಅಚ್ಚರಿಯೊಂದು ಹಾದುಹೋಗಿತ್ತು. ಅನ್ನಪೂರ್ಣ ಮನಸಾರೆ ಪ್ರೀತಿಸಿದ ವ್ಯಕ್ತಿಯವನು. ಅವರಿಬ್ಬರೆದು ಅಮರ ಪ್ರೇಮಕತೆ. ಜೀವಕ್ಕೆ ಜೀವವಾಗಿ ಪ್ರೀತಿಸಿ, ಕೊನೆಗೆ ಅಮ್ಮ ಅಪ್ಪನ ಮಾತಿಗೆ, ಬೆದರಿಕೆಗೆ ಹೆದರಿ ಬೇರೆಯವನನ್ನು ಮದುವೆಯಾಗಿದ್ದರು ಅನ್ನಪೂರ್ಣಮ್ಮ, ಆಮೇಲೆ ಎಂದಿಗೂ ಅವರು ಭೇಟಿಯಾಗಿರಲಿಲ್ಲ. ಒಬ್ಬರಿಗೊಬ್ಬರ ಇರುವುಗಳ ಮಾಹಿತಿಯಿದ್ದರೂ ಮುಖತಃ ಎಂದು ಭೇಟಿಯಾಗಲೇ ಇಲ್ಲ. ಅದಾದ ಮೇಲೆ ಬಹುಷಃ ಇದೇ ಅವರ ಮೊದಲ ಭೇಟಿ. ಗುಸುಗುಸು ಮಾತುಗಳ ಪರಿವೆಯೇ ಇಲ್ಲದ ಆತ, ಕಣ್ಣಲ್ಲಿ ಹರಿಯುತ್ತಿದ್ದ ನೀರನ್ನು ಒರೆಸಿಕೊಳ್ಳುವ ಗೋಜಿಗೆ ಬೀಳದೆ "ಹೇಳಿಲ್ಲ ನಿಂಗೆ, 'ಎಲ್ಲೇ ಇರು, ಯಾರಜೊತೆನಾದ್ರು ಇರು, ಖುಷಿಯಾಗಿರು, ಆದ್ರೆ ನಂಗಿಂತ ಮುಂಚೆ ಈ ಭೂಮಿ ಬಿಟ್ಟೋಗ್ಗೇಡ, ನಿನ್ನ ಭೌತಿಕ ಇರುವಿಲ್ಲದೆ ನಾ ಇರಲ್ಲ ಅಂತ'. ಹೇಳು ಯಾಕ್ ಬಿಟ್ಟೋದೇ 17' ಅನ್ನಪೂರ್ಣರ ಜೀವವಿಲ್ಲದ ದೇಹದೊಡನೆ, ಮನಸ್ಸಲ್ಲೇ ಮಾತನಾಡುತ್ತಿದ್ದನಾತ. #ಕೆಲವೊಂದು ಪ್ರೇಮಕತೆಗಳಿಗೆ ಮೊದಲಷ್ಟೇ ಇರುತ್ತದೆ, ಕೊನೆಯಲ್ಲ. ಒಳಗೆ ಇನ್ನಷ್ಟು ನಮ್ಮ-ನಿಮ್ಮ ಕಥೆಗಳಿವೆ. ಓದಿ ನೋಡಿ. ಹ್ಯಾಪಿ ರೀಡಿಂಗ್... - ಅರ್ಜುನ್ ದೇವಾಲದಕೆರೆ.

₹195   ₹166

Buy Now
ಮಿಸ್ಸಿನ ಡೈರಿ | Missina Diary

ಒಂದು ಕಾಲಕ್ಕೆ ಸಾಹಿತ್ಯಲೋಕದಲ್ಲಿ ಶಿಕ್ಷಕರದ್ದೇ ಸಿಂಹಪಾಲು. ಆದರೆ ಈಗ ಕಾಲ ಬದಲಾಗಿದೆ. ನಮ್ಮ ಶಿಕ್ಷಕರಿಗೆ ಬರೆಯುವಷ್ಟು ಸಮಯ ಪಕ್ಕಕ್ಕಿಡಿ, ಓದಲೂ ಸಮಯವಿಲ್ಲದಂತಾಗಿದೆ ಶಿಕ್ಷಕವರ್ಗವೇ ಓದಿನಿಂದ ವಿಮುಖರಾಗಿರುವ ವ್ಯವಸ್ಥೆಯಲ್ಲಿ ನಾವಿದ್ದೇವೆ. ಈ ನಡುವೆ ಓದು ಅಂಕಗಳಿಕೆಗೆ ಮಾತ್ರ ಬಳಕೆಯಾಗುತ್ತಿರುವುದು ಹೊಸ ಸಂಗತಿ ಏನಲ್ಲ. ದೇಶದ ಪಿತಾಮಹರಂತಹ ದೊಡ್ಡ ಪ್ರಶ್ನೆಗಳನ್ನು ಬಿಡಿ, ದೇಶದ ರಾಷ್ಟ್ರಪತಿ, ರಾಜ್ಯಪಾಲರು ಯಾರೆಂಬುದು ಗೊತ್ತಾಗದಂತಹ ಶಿಕ್ಷಣವನ್ನು ನಾವು ಮಕ್ಕಳಿಗೆ ನೀಡುತ್ತಿದ್ದೇವೆ. ಇಂತಹ ಸ್ಥಿತಿಯಲ್ಲಿ ಇಲ್ಲೊಂದು ಶಾಲೆ, ಶಿಕ್ಷಕಿ ಮತ್ತವರ ದಿನಚರಿ ತುಸು ವಿಭಿನ್ನ ಮತ್ತು ಮಾದರಿಯಂತಿದೆ. ಚೂರು ಹೊಸ ಭರವಸೆಯನ್ನು ಮೂಡಿಸುತ್ತಿದೆ.

₹200   ₹160

Buy Now
ಮಿಸ್ಸಿನ ಡೈರಿ ಇಬುಕ್ | Missina Dairy Ebook

ಒಂದು ಕಾಲಕ್ಕೆ ಸಾಹಿತ್ಯಲೋಕದಲ್ಲಿ ಶಿಕ್ಷಕರದ್ದೇ ಸಿಂಹಪಾಲು. ಆದರೆ ಈಗ ಕಾಲ ಬದಲಾಗಿದೆ. ನಮ್ಮ ಶಿಕ್ಷಕರಿಗೆ ಬರೆಯುವಷ್ಟು ಸಮಯ ಪಕ್ಕಕ್ಕಿಡಿ, ಓದಲೂ ಸಮಯವಿಲ್ಲದಂತಾಗಿದೆ

₹200   ₹100

Buy Now