ರವೀಂದ್ರ ವೆಂಶಿಯವರ ಲೈಫ್ ಸಖತಾಗಿತ್ತು ಕಣ್ರೀ ಪುಸ್ತಕದಲ್ಲಿನ ಬರಹಗಳನ್ನು ಓದಿದ ಮೇಲೆ ನನ್ನ ಬಾಲ್ಯದ ಹಲವಾರು ಘಟನೆಗಳು ನೆನಪಾದದ್ದು ಸತ್ಯ. ಓದುವಾಗ ನನಗೆ ಇದು ಕಥೆಯಾ..? ಆತ್ಮಚರಿತ್ರೆಯಾ..? ಸುಲಲಿತ ಪ್ರಬಂಧವಾ..? ಎನ್ನುವ ಪ್ರಶ್ನೆ ಕಾಡುತ್ತಲೇ ಓದಿಸಿಕೊಂಡಿತು. ಓದಿಯಾದ ಮೇಲೆ ನನಗನ್ನಿಸಿದ್ದು ಇದು ಎಲ್ಲವೂ ಹೌದು ಎಂದು. ಭಾಗ-1ರಲ್ಲಿನ ಬರಹಗಳಲ್ಲಿ ತಿಳಿ ಹಾಸ್ಯದ ಮೂಲಕ ಘಟನೆಗಳನ್ನು ಕಟ್ಟಿಕೊಡುತ್ತಾ ನಿಧಾನಕ್ಕೆ ನಮ್ಮನ್ನು ಬರಹದೊಳಕ್ಕೆ ಸೆಳೆದುಕೊಂಡು ಬಿಡುತ್ತಾರೆ ಲೇಖಕರು. ಇಸ್ತ್ರೀಪೆಟ್ಟಿಗೆಯ ಪ್ರಸಂಗ, ಹೇರ್ ಕಟ್ ಸುತ್ತಲಿನ ವೃತ್ತಾಂತಗಳು, ಸಿನಿಮಾಗಳನ್ನು ಟೆಂಟ್ ನಲ್ಲಿ ನೋಡುವ ಸೊಬಗು - ಇವುಗಳನ್ನು ಲಘುಹಾಸ್ಯಮಯವಾಗಿ ಬರೆಯುತ್ತಾ, ಕಲಿಸಿದ್ದು ಕಲಿತದ್ದು ಲೇಖನದ ಮೂಲಕ ಚಿಂತನೆಗೆ ದೂಡುತ್ತಾರೆ. ಭಾಗ-2 ರಲ್ಲಿ ಕತೆಗಳ ಸ್ವರೂಪದಲ್ಲಿ ಬದುಕನ್ನು ತೆರೆದಿಡುತ್ತಾರೆ. ಒಂದೊಂದು ಕತೆಯೂ ಬೇರೆ ಬೇರೆಯದೇ ಆದ ದ್ರವ್ಯ, ನಿರೂಪಣೆ ಮತ್ತು ಭಾಷೆಯನ್ನು ಹೊಂದಿರುವುದು ರವೀಂದ್ರ ವೆಂಶಿಯವರ ವಿಶೇಷವೆನಿಸುವ ವಸ್ತುಗ್ರಹಿಕೆ ಮತ್ತು ಕತೆಯ ಕಟ್ಟುವಿಕೆಗೆ ಹಿಡಿದ ಕೈಗನ್ನಡಿ ಎನ್ನಬಹುದು. ಸರಳವಾದ, ಅರ್ಥಪೂರ್ಣವಾದ, ನಮ್ಮದೇ ಬದುಕಿನ ಸನ್ನಿವೇಶಗಳು ಎನ್ನುವ ಆತ್ಮೀಯತೆ ಬೆಳೆಸುವ ಬರವಣಿಗೆಯ ಈ ಹೊತ್ತಗೆ ಪ್ರತಿಯೊಬ್ಬರೂ ಓದಲೇಬೇಕಾದದ್ದಾಗಿದೆ.
'ಲೋಕ ರಾವಣ' ಲಂಕಾಧಿಪತಿಯಾದ ದಶಕಂಠ ರಾವಣನನ್ನು ಕುರಿತ ಕಾದಂಬರಿ. ಲೋಕ ಲೋಕಗಳನ್ನು ನಡುಗಿಸಿದ. ಪರಸ್ತ್ರೀ ಅಪಹಾರಕನಾದ ದುಷ್ಟನೆಂದು ರಾಮಾಯಣದಲ್ಲಿ ಚಿತ್ರಣಗೊಂಡಿರುವ ಪಾತ್ರ ಅದು. ಹುಟ್ಟಿನಿಂದ ಮಹಾ ತಪಸ್ವಿಯಾದ ವಿಶ್ರವಸ್ಸಿನ ಮಗ, ವೇದಾದಿಗಳನ್ನು ಓದಿದವನು. ಬ್ರಹ್ಮ, ಪರಮೇಶ್ವರರ ಅನುಗ್ರಹಕ್ಕೆ ಪಾತ್ರನಾದವನು. ಶಿವಭಕ್ತ. ಇಷ್ಟಿದ್ದೂ ರಾವಣನಂತಹ ಮೇಧಾವಿ ಯಾಕೆ ದುಷ್ಟನಾದ? ಲೋಕಪೀಡಕನಾದ ಅದಕ್ಕೆ ಕಾರಣವಾದುದು ಅವನ ಹುಟ್ಟಿ? ಸಂಸ್ಕಾರವೆ? ಅವನಿಗಾದ ಕಹಿ ಅನುಭವಗಳೆ? ಅಥವಾ ಅವನ ವ್ಯಕ್ತಿತ್ವವೇ ಆ ರೀತಿಯೆ? ಅವನ ಅಂತರಂಗವನ್ನು ಪ್ರವೇಶಿಸದೆ ಉತ್ತರ ದೊರೆಯಲಾರದು. ರಾವಣನ ಅಂತರಂಗವನ್ನು ಬಗೆಯುವ ಅಂತಹ ಒಂದು ಪ್ರಯತ್ನವೇ ಈ ಕಾದಂಬರಿ.. 'ಲೋಕ ರಾವಣ'
ವರದಾ ತೀರದ ಕಥೆಗಳನ್ನು ಓದುತ್ತಾ ಮನಸಾರೆ ನಕ್ಕಿದ್ದೇನೆ. ಅರಿವಿಲ್ಲದೇ ಕಣ್ಣಂಚಿನಲ್ಲಿ ಬಂದ ನೀರನ್ನು ಒರೆಸಿಕೊಂಡಿದ್ದೇನೆ. ಹೀಗಾಗಬಾರದಿತ್ತು ಎಂದು ನೊಂದುಕೊಂಡಿದ್ದೇನೆ. ಬರಹಗಾರನ ಕಥೆಯ ಭಾವಕ್ಕೆ ಓದುಗನ ಭಾವನೆಗಳು ಹೊಂದಿದ್ದೇ ಆದರೆ ಕಥಾಪ್ರಸವ ಅನುಭವಿಸಿದ ಕಥೆಗಾರನಿಗೂ ನೆಮ್ಮದಿಯ ನಿಟ್ಟುಸಿರು. ರವೀಂದ್ರ ಮುದ್ದಿಯವರ ಸಿನಿಮಾ, ಟಿವಿಗಳಲ್ಲಿ ಇನ್ನೂ ಬಳಕೆಯಾಗದ ಜವಾರಿ ಭಾಷೆಯ ಪದ ಪ್ರಯೋಗ ಮಾತ್ರ ಅದ್ಭುತ. ವರದಾ ತೀರದ ಕತೆಗಳನ್ನು ಓದುತ್ತಿದ್ದರೆ ನಮಗೆ ಗೊತ್ತಿಲ್ಲದಂತೆ ನಾವು ಆಡಿ ಬೆಳೆದ ನಮ್ಮೂರು ಚಿತ್ರಣ ಕಣ್ಮುಂದೆ ಮುಂದೆ ಬರುವುದು ಗ್ಯಾರಂಟಿ.
ವರದಾ ತೀರದ ಕಥೆಗಳನ್ನು ಓದುತ್ತಾ ಮನಸಾರೆ ನಕ್ಕಿದ್ದೇನೆ. ಅರಿವಿಲ್ಲದೇ ಕಣ್ಣಂಚಿನಲ್ಲಿ ಬಂದ ನೀರನ್ನು ಒರೆಸಿಕೊಂಡಿದ್ದೇನೆ. ಹೀಗಾಗಬಾರದಿತ್ತು ಎಂದು ನೊಂದುಕೊಂಡಿದ್ದೇನೆ.
ವಿಮರ್ಶಾ ವಿವೇಕ ಇಲ್ಲದ ಬರಹಗಾರ ಅತ್ಯುತ್ತಮ ಸಾಹಿತ್ಯ ಸೃಚಿಸಲಾರ. ಕನ್ನಡದ ಯಾವುದೇ ಅತ್ಯುತ್ತಮ ಕವಿ ಅಥವಾ ಕಥೆಗಾರನ ಉದಾಹರಣೆ ತೆಗೆದುಕೊಂಡರೂ, ಅದರೊಳಗೊಬ್ಬ ಸಹೃದಯಿ ವಿಮರ್ಶಕ ಇಣುಕುತ್ತಿರುತ್ತಾನೆ. ಅತ್ಯುತ್ತಮ ಲೇಖಕ ಒಳ್ಳೆಯ ವಿಮರ್ಶಕನೂ ಮೀಮಾಂಸಕನೂ ಆಗಿರುವ ವಿರಳ ಉದಾಹರಣೆಗಳ ಸಾಲಿಗೆ ಸೇರುವಂತಿದೆ 'ವಾಸ್ತವ ಪ್ರತಿವಾಸ್ತವ' ಕೃತಿ ಕಥೆ, ಕವಿತೆ, ಪ್ರಬಂಧಗಳಿಂದ ಕನ್ನಡ ಸಾಹಿತ್ಯದ ದಿಗಂತಗಳನ್ನು ವಿಸ್ತರಿಸುತ್ತಲೇ ಇರುವ ಎಸ್. ದಿವಾಕರ್ ಅವರ ಈ ಕೃತಿ, ಓದಿನ ಹೊಳಯಗಳನ್ನು ಸಹೃದಯರೊಂದಿಗೆ ಹಂಚಿಕೊಳ್ಳುವ ಸೃಜನಶೀಲ ಬರಹಗಾರನೊಬ್ಬನ ಮಹತ್ವಾಕಾಂಕ್ಷೆಯ ಅಭಿವ್ಯಕ್ತಿಯಂತಿದೆ. ಒಂದು ಒಳ್ಳೆಯ ಸಾಹಿತ್ಯ ಕೃತಿ ಅಥವಾ ಕಲಾಕೃತಿಯನ್ನು ಹೇಗೆ ನೋಡಬೇಕು ಎನ್ನುವ ಅರಿವನ್ನು ಸಹೃದಯರಲ್ಲಿ ಉದ್ದೀಪಿಸುವ ಬರಹಗಳಿವು, ದಿವಾಕರ್ ಅವರು ತಮ್ಮ ಬರಹಗಳಿಗೆ ಸಂಬಂಧಿಸಿದಂತೆ ಸಾಹಿತ್ಯ, ವಿಮರ್ಶೆ ಮತ್ತು ಸಂಸ್ಕೃತಿ ಎನ್ನುವ ವಿಶೇಷಣಗಳನ್ನು ಬಳಸಿದ್ದಾರಾದರೂ, 'ವಿಮರ್ಶೆ' ಅಥವಾ ಸಂಸ್ಕೃತಿ ಚಿಂತನೆ' ಎನ್ನುವಂಥ ಹಣೆಪಟ್ಟಿಗಳ ಚೌಕಟ್ಟಿಗೆ ನಿಲುಕದಿರುವುದು ದಿವಾಕರ್ ಬರಹಗಳ ಅನನ್ಯತೆ, ವಿಮರ್ಶೆಯ ಪಾರಿಭಾಷಿಕ ಚೌಕಟ್ಟು ಹಾಗೂ ಚಿಂತನೆಯ ಸೋಗಿನ ಗಾಂಭೀರ್ಯದಿಂದ ಮುಕ್ತವಾದ ಈ ಬರಹಗಳು ಸಾಹಿತ್ಯದ ಮೂಲಕ ಜೀವನಸೌಂದರ್ಯ ಕಾಣಬಯಸುವವರಿಗೆ ರಸದ ಒರತೆಗಳಂತಿದೆ; ಕನ್ನಡ ಹಾಗೂ ವಿಶ್ವಸಾಹಿತ್ಯದ ಅತ್ಯುತ್ತಮ ಕೃತಿ ಹಾಗೂ ಮನಸ್ಸುಗಳನ್ನು ಪರಿಚಯಿಸುತ್ತಿವೆ. ದಿವಾಕರ್ ಬರವಣಿಗೆಯ ವಿಶಿಷ್ಟ ಲಕ್ಷಣವಾದ ಹಾಗೂ ಅವರಿಗಷ್ಟೇ ಸಾಧ್ಯವಾದ ಪ್ರಯೋಗಶೀಲತೆ ಈ ಸಂಕಲನದ ಬರಹಗಳಲ್ಲೂ ಇದೆ. ಓದುಗರನ್ನು 'ಪುಸ್ತಕದ ಓಣಿ'ಗಳಲ್ಲಿ ಕೈ ಹಿಡಿದು ನಡೆಸುವಂತಿರುವ ಈ ಬರಹಗಳು. ಸಾಹಿತ್ಯಪ್ರವೇಶದ ಕಿಂಡಿಗಳನ್ನೂ ಕಂಡಿಗಳನ್ನೂ ಸಹೃದಯರಿಗೆ ಕರುಣಿಸುವಂತಿವೆ. ವಿಮರ್ಶೆ ಹಾಗೂ ಚಿಂತನೆ ವಿರಳವಾಗಿರುವ ದಿನಗಳಲ್ಲಿ ಎರಡಕ್ಕೂ ಘನತೆ ತಂದುಕೊಡುವ ಪ್ರಯತ್ನದ ರೂಪದಲ್ಲಿ ದಿವಾಕರ್ ಅವರ 'ವಾಸ್ತದ ಪ್ರತಿವಾಸ್ತವ' ಕೃತಿಗೆ ವಿಶೇಷ ಮಹತ್ವವಿದೆ. ರಘುನಾಥ ಚ.ಹ.
ಒಂದು… ಎರಡು… ಮೂರು… ಈ ಎಣಿಕೆಗೆ ಕೊನೆ ಎಲ್ಲಿದೆ? ಅಥವಾ ಕೊನೆಯೇ ಇಲ್ಲವೇ? ಈ ಪ್ರಶ್ನೆಗಳಿಗೆ ಉತ್ತರ ತಿಳಿಯಿರಿ.
ಒಂದು… ಎರಡು… ಮೂರು… ಈ ಎಣಿಕೆಗೆ ಕೊನೆ ಎಲ್ಲಿದೆ? ಅಥವಾ ಕೊನೆಯೇ ಇಲ್ಲವೇ? ಈ ಪ್ರಶ್ನೆಗಳಿಗೆ ಉತ್ತರ ತಿಳಿಯಿರಿ. ಗಣಿತಲೋಕಕ್ಕೂ ಭೌತಶಾಸ್ತ್ರಕ್ಕೂ ಇರುವ ಅವಿನಾಭಾವ ಸಂಬಂಧ ಎಂಥದ್ದು? ನಮಗೆ ಒಬ್ಬ ಚಂದಮಾಮ ಇದ್ದಾನೆ. ಬೇರೆ ಗ್ರಹಗಳಲ್ಲಿ ಮನುಷ್ಯರಿದ್ದರೆ, ಅಲ್ಲಿನ ತಾಯಂದಿರು ಮಕ್ಕಳಿಗೆ ತೋರಿಸಲು ಎಷ್ಟೊಂದು ಚಂದಮಾಮಗಳು! ಈ ಪ್ರಶ್ನೆಗಳಿಗೆಲ್ಲ ಉತ್ತರ ಕಂಡುಕೊಳ್ಳಲು ‘ವಿಶ್ವಯಾನಕ್ಕೆ ಗಣಿತವಾಹನ’ ಪುಸ್ತಕ ಓದಿ…
ಕನ್ನಡದ ಪ್ರಸಿದ್ಧ ಲೇಖಕರಾದ ಕುಂ. ವೀರಭದ್ರಪ್ಪ ಅವರು ಬರೆದಿರುವ ವಿನೂತನ ಕಾದಂಬರಿ ಇದಾಗಿದೆ. ಕುತೂಹಲ ಕಥಾವಸ್ತು ಹೊಂದಿರುವ ಕಾದಂಬರಿ ರೋಚಕವಾಗಿದೆ.
ಕನ್ನಡದ ಪ್ರಸಿದ್ಧ ಲೇಖಕರಾದ ಕುಂ. ವೀರಭದ್ರಪ್ಪ ಅವರು ಬರೆದಿರುವ ವಿನೂತನ ಕಾದಂಬರಿ ಇದಾಗಿದೆ. ಕುತೂಹಲ ಕಥಾವಸ್ತು ಹೊಂದಿರುವ ಕಾದಂಬರಿ ರೋಚಕವಾಗಿದೆ. ಹಲವು ಫ್ಯಾಂಟಸಿ ಕಥೆಗಳ ಮೂಲಕ ಶತಮಾನದ ‘ವಿಶ್ವಸುಂದರಿ’ ಪಾತ್ರಧಾರಿಯಾಗಿರುವ ಅಜ್ಜಿ ನಿಮ್ಮನ್ನು ಆವರಿಸಲಿದ್ದಾಳೆ. ನಿಮಗೆ ಸುಲಭವಾಗಿ ಓದಿಸುವ ನಿಟ್ಟಿನಲ್ಲಿ ಲೇಖಕರು ಭಾಷೆ, ಶೈಲಿಯನ್ನು ಸರಳೀಕರಿಸಿ ಬರೆದಿದ್ದಾರೆ. ಒಮ್ಮೆ ನೀವು ಕಾದಂಬರಿಯ ಪುಟಗಳನ್ನು ಓದಲು ಶುರು ಮಾಡಿದರೆ ಸಾಕು ಕೊನೆತನಕ ಓದಿಸಿಕೊಳ್ಳುವ ಗುಣವಿದೆ. ಕನ್ನಡಿಗರಾದ ನೀವು ಈ ಕಾದಂಬರಿಯನ್ನು ಓದಲೇಬೇಕು, ಇದರಿಂದ ನಿಮಗೆ ಎಷ್ಟೊಂದು ಮನರಂಜನೆ ಸಿಗುತ್ತದೆ ಎಂಬುದು ಗೊತ್ತಾಗುತ್ತದೆ. ಅಷ್ಟೊಂದು ಚೆಂದವಿದೆ ಕಾದಂಬರಿ.
ಹೊಯ್ಸಳ ದೊರೆಗಳಲ್ಲಿ ರಾಜ್ಯವನ್ನು ವಿಸ್ತರಿಸಿ ಸಾಮ್ರಾಜ್ಯವನ್ನಾಗಿ ಮಾರ್ಪಡಿಸುವ ಮನಸ್ಸು ವಿಷ್ಣುವರ್ಧನನಿಗಿತ್ತು. ಅದಕ್ಕಾಗಿ ಅವನು ನಿರಂತರ ಪ್ರಯತ್ನವನ್ನೂ ಮಾಡಿದ್ದ ಆದರೆ ಕಲ್ಯಾಣದ ಚಾಲುಕ್ಯ ಚಕ್ರವರ್ತಿ ಆರನಯ ವಿಕ್ರಮಾದಿತ್ಯ ಅವನ ಮಹದಾನೆಯ ಮೇಲೆ ತಣ್ಣೀರೆರಚಿದ. ಅವನು ಕೊನೆಯವರೆಗೂ ಕಲ್ಯಾಣ ಚಾಲುಕ್ಯರ ಸಾಮಂತನಾಗಿ ಉಳಿಯಬೇಕಾಯಿತು. ವಿಷ್ಣುವರ್ಧನನ ಮರಣದ ನಂತರ ಹೊಯ್ಸಳ ಸಿಂಹಾಸನವನ್ನೇರಿದ ಇಮ್ಮಡಿ ನರಸಿಂಹ ತಂದೆಗೆ ತಕ್ಕ ಮಗನಾಗಿರಲಿಲ್ಲ. ಅವನು ಸಿಂಹಾಸನ ದೊರಕಿಸಿದ ಅಧಿಕಾರವನ್ನು ತನ್ನ ಸುಖ ಲೋಲುಪತೆಗಾಗಿ ಕಳೆದ.
`ವೀರ ಸಿಂಧೂರ ಲಕ್ಷ್ಮಣ’ ಕೌಂಡಿನ್ಯ ಅವರು ದಾಖಲೆಗಳೊಂದಿಗೆ ಸಂಶೋಧನೆ ಮಾಡಿ ರಚಿಸಿರುವ ಮಹೋನ್ನತ ಕೃತಿಯಾಗಿದೆ. ಬ್ರಿಟಿಷರ ವಿರುದ್ಧ ಮತ್ತು ಶೋಷಿತ ಬಡವರ ಪರವಾಗಿ ಹೋರಾಡಿದ, ‘ಕರ್ನಾಟಕ ರಾಬಿನ ಹುಡ್’ ಎಂದು ಪ್ರಖ್ಯಾತನಾಗಿರುವ ಈ ಮಹಾನ್ ದೇಶ ಭಕ್ತ ಮತ್ತು ಅಪ್ರತಿಮ ಹೋರಾಟಗಾರನ ಕಥೆಯನ್ನು ತಿಳಿಸುವ ಕಾದಂಬರಿಯಾಗಿದೆ.
Nil
‘ವ್ಯಗ್ರ’ ‘ಅಳಿವು’ ‘ಅವಸಾನ’ ಈ ಮೂರೂ ಕಾದಂಬರಿಗಳು ಏನೋ ಒಂದು ಸಮಸ್ಯೆ, ಸವಾಲು, ಎದುರಿಸಲೇ ಬೇಕಾದ ಸಂದಿಗ್ಧ ಸ್ಥಿತಿಗೆ ಸಿಲುಕಿದ ಅಮಾಯಕ ಜೀವಗಳ ಒಡಲ ಸತ್ಯವನ್ನು ಅಂತಃಕರಣದಿಂದ ಕಂಡು ಹೇಳಲು ಹೊರಟ ಕಥನಗಳಿವು.
ಡಾ. ಟಿಸ್ವಿ ಪರಿಸರವನ್ನು ಕುರಿತು ತಮ್ಮ ಅಧ್ಯಯನಗಳಿಂದಾಗಿ ಕನ್ನಡ ಸಂವೇದನಾಶೀಲ ಮನಸ್ಸುಗಳಿಗೆ ಪರಿಚಿತರು. ಬಹುತೇಕರ ಹಾಗೆ ಪರಿಸರ ಅಧ್ಯಯನವೆಂದರೆ ಜೀವವೈವಿಧ್ಯ ಕುರಿತ ವಿಸ್ಮಯಕಾರಿಯಾದ ಶುಪ್ಕ ಮಾಹಿತಿಗಳನ್ನು ಒದಗಿಸುವುದು ಎನ್ನುವ ಕ್ರಮ ಇವರದ್ದಲ್ಲ, ಬದಲಾಗಿ ಇದು ಸಾಮಾಜಿಕ, ಧಾರ್ಮಿಕ, ಆರ್ಥಿಕ, ನೈತಿಕತೆಗಳ ಸಂಕಥನವೆಂದು ಇವರು ಪರಿಭಾವಿಸುವುದರಿಂದಾಗಿ ಇವರ ಪರಿಸರ ಅಧ್ಯಯನ ಜೀವಪರ ನೆಲೆಗಳ ಹುಡುಕಾಟದ ವೇದಿಕೆಯಾಗಿ ರೂಪಗೊಂಡಿದೆ.
'ಶತಮಾನಂಭವತಿ' ಅನ್ನೋದು ನೂರು ವರ್ಷ ಚೆನ್ನಾಗಿ ಬಾಳಲಿ ಎಂದು ಆಶೀರ್ವದಿಸುವ ಮಂತ್ರ. ಈ ಮಂತ್ರದ ಆಶಯವೇ ಕಾದಂಬರಿಯ ತಲೆಬರಹ, ಈ ಆಶಯದಂತೆ ರಘು ಅನ್ನುವ ಪ್ರಮುಖ ಪಾತ್ರದಾರಿ ಪರಿಶುದ್ಧ ಪ್ರೀತಿಗಾಗಿ ಹಪಾಹಪಿಸುತ್ತಾನೆ ಜೊತೆಗೆ ಆ ಪ್ರೀತಿಯನ್ನ ಗಳಿಸಿ ಜೀವನ ಪೂರ್ತಿ ಕಾಪಿಟ್ಟುಕೊಳ್ಳುವ ಉದ್ದೇಶವನ್ನು ಸಹ ಇಟ್ಟುಕೊಂಡಿರುತ್ತಾನೆ. ಅಷ್ಟೇ ಅಲ್ಲ ಅಂತಹ ಪ್ರೀತಿ ಪಡೆಯಲು ಪರಿಶುದ್ಧನಾಗೇ ಈತನು ಇರುತ್ತಾನೆ. ಮ್ಯಾಟ್ರಿಮೊನಿಯಲ್ ಅನ್ನೋದು ಮದುವೆ ಮಾಡಸಲಿಕ್ಕೆ ಇರುವ ಆನ್ ಲೈನ್ ವೆಬ್ ಸೈಟ್, ಈ ಆನ್ ಲೈನ್ ಪೇಜ್ ಗೆ ಮದುವೆಯಾಗುವ ಹುಡುಗಿಯ ತಲಾತ್ ಮಾಡಲು ನೋಂದಾಯಿಸಿಕೊಳ್ಳುವ ಕಥಾನಾಯಕ ರಘು ಪ್ರೊಫೈಲ್ ಮೂಲಕ ಪರಿಚಯ ಆಗುವ ಹುಡುಗಿ ಜೊತೆಯಲ್ಲಿ ಚಾಟ್ ಆರಂಭಿಸಿದ ನಂತರ ಅವಳೆಡೆಗೆ ಅನುರಾಗ ತೋರಿ ಆ ನಂತರ ಅವಳು ಸಿಗದೆ ಮೋಸಕ್ಕೆ ಒಳಗಾಗುತ್ತಾನಾ? ಅಥವಾ ಅವನಿಗೆ ಅವಳ ಪ್ರೀತಿ ಧಕ್ಕುತ್ತಾ? ಅನ್ನುವ ಹುಡುಕಾಟದಲ್ಲಿರುವ ನಮಗೆ, ಅದೇ ವಂಚನೆ ಮೋಸದ ಕಾರಣಗಳಿಂದ ಮತ್ತೆ ಹೇಗೆ ಅತ ಪ್ರೀತಿಯನ್ನ ಗಳಿಸುತ್ತಾನೆ ಅನ್ನುವ ಕಥಾ ಹೂರಣ ಇರುವ ಕಾದಂಬರಿ ಶತಮಾನಂಭವತಿ, ಕಾದಂಬರಿಯ ಅಂತ್ಯದಲ್ಲಿ ಹೇಳುವ ವಿಷಯವನ್ನ ನಮಗೆ ಗೊತ್ತಿಲ್ಲದಂತೆ ಮೊದಲಿಂದಲೂ ಬೆಸೆದುಕೊಂಡೆ ಬಂದಿರುತ್ತಾರೆ. ಅದೇ ಈ ಕಾದಂಬರಿಯ ಹೆಗ್ಗುರುತು. ಕಾದಂಬರಿಕಾರ ರಾಜಶೇಖರ್ ಮೂಲತಃ ಸಿನೆಮಾ ನಿರ್ದೇಶನ ಮಾಡಲು ಬಂದಾತ. ಆ ರಂಗದಲ್ಲಿ ಒಂದು ದಶಕಕ್ಕೂ ಹೆಚ್ಚು ಅವಧಿಯಲ್ಲಿ ಕೆಲಸ ಮಾಡಿ ಸದಭಿರುಚಿಯ ಹಾಗೂ ಹೊಸತನ ಇರುವ ಸಿನೆಮಾ ಕೊಡಬೇಕೆಂಬ ಸದಾ ಇಚ್ಚೆಯುಳ್ಳ ವ್ಯಕ್ತಿ, ವರ್ತಮಾನದ ಹದಿಹರೆಯದ ಪ್ರೀತಿ, ಪ್ರೇಮ ತಲ್ಲಣಗಳನ್ನ ಹೊಸತನದ ಹಚ್ಚಿಗೆ ಹಾಕಿ ಚೆಂದದ ರೂಪಗಳನ್ನ ಕೊಟ್ಟಿದ್ದಾರೆ. ಇದನ್ನ ಓದುತ್ತಿರುವಾಗಲೇ ಒಂದು ಸಿನೆಮಾ ನೋಡಿದ ಅನುಭವವಾಗುತ್ತದೆ, ಅಂದರೆ ಆ ರೀತಿಯಲ್ಲಿ ಕಾದಂಬರಿಕಾರರು ಸಾಹಿತ್ಯ ಕಟ್ಟಿಕೊಟ್ಟಿದ್ದಾರೆ. ಇದು ಅವರ ಚೊಚ್ಚಲ ಕೃತಿ, ಮುಂದೆ ಏನಾಗಬಹುದು ಅನ್ನುವ ಕುತೂಹಲಗಳ ನಡುವೆ ಕಾದಂಬರಿ ಓದಿಸಿಕೊಂಡು ಹೋಗುತ್ತದೆ. ಒಳ್ಳೆಯ ಬರಹಗಾರರಾಗುವ ಕುರುಹುಗಳನ್ನ ಈ ಪುಸ್ತಕದ ಮೂಲಕ ಮಿತ್ರರು ನೀಡಿದ್ದಾರೆ. ಓದುಗರು ಅರೆಕೊರೆಗಳನ್ನ ಮನ್ನಿಸಿ ಸ್ವೀಕರಿಸಿ ಪ್ರೋತ್ಸಾಹಿಸಲಿ ಅನ್ನುವ ಸದಾಶಯ. ರಾಜು ಸೂನಗಹಳ್ಳಿ ಬರಹಗಾರ, ಚಲನಚಿತ್ರ ನಿರ್ದೇಶಕ
ಪುಸ್ತಕದ ಈ ಹತ್ತೂ ಕಥೆಗಳು ನನ್ನದೇ ಬಾಲ್ಯದಿಂದ ರೂಪು ತಳೆದಂತಹವು. ಒಂದಲ್ಲಾ ಒಂದು ರೀತಿಯಲ್ಲಿ ನನ್ನನ್ನು ತೀವ್ರವಾಗಿ ಕಾಡಿದ ಕಥೆಗಳಿವು. ಬಾಲ್ಯಕಾಲದ ನನ್ನೂರಿನ, ನನ್ನ ಬೀದಿಯ, ಕೇರಿಯ ಆತ್ಮಪ್ರಜ್ಞೆ ಈ ಕಥೆಗಳು, ಇವು ನಿಜಕ್ಕೆ ನಿಜ, ಕಲ್ಪನೆಗೆ ಕಲ್ಪನೆಯಂತಹದ್ದೇ ರೂಪಕಗಳು. ಇವು ಕೇವಲ ನನ್ನ ಬಾಲ್ಯದ ಕಥೆಗಳಾಗಿರದೆ, ಪುಟ್ಟ-ಪಟ್ಟಣಗಳಲ್ಲಿ ಬೆಳೆದ ನನ್ನಂಥ ಅನೇಕರು ತಮ್ಮ ಬಾಲ್ಯವನ್ನು ಸಮೀಕರಿಸಿಕೊಳ್ಳಬಹುದಾದ ಕಥೆಗಳು. ಇವು ಮಕ್ಕಳ ಕಥೆಗಳೂ ಹೌದು, ದೊಡ್ಡವರ ಕಥೆಗಳೂ ಹೌದು! ಎಲ್ಲಾ ವಯಸ್ಸಿನವರಿಗೂ ದಕ್ಕುವ ಹಾಗೆ, ನನಗೆ ಒಲಿದಿರುವ ಸರಳ ಭಾಷೆಯಲ್ಲಿ ಕಥೆಗಳನ್ನು ನಿರೂಪಿಸುವ ಪ್ರಯತ್ನ ಮಾಡಿದ್ದೇನೆ. ಕಥೆಯು, ಸರಳವಾದ ಭಾಷೆ ಮತ್ತು ನಿರೂಪಣೆಯಲ್ಲಿದ್ದರೆ ಮಕ್ಕಳೂ ಕೂಡ ಸಲೀಸಾಗಿ ಓದಬಹುದೆಂಬ ಸಣ್ಣ ಉದ್ದೇಶವೂ ಇದರ ಹಿಂದಿದೆ. -ಮಂಜುನಾಥ್ ಕುಣಿಗಲ್
ಪುಸ್ತಕದ ಈ ಹತ್ತೂ ಕಥೆಗಳು ನನ್ನದೇ ಬಾಲ್ಯದಿಂದ ರೂಪು ತಳೆದಂತಹವು. ಒಂದಲ್ಲಾ ಒಂದು ರೀತಿಯಲ್ಲಿ ನನ್ನನ್ನು ತೀವ್ರವಾಗಿ ಕಾಡಿದ ಕಥೆಗಳಿವು. ಬಾಲ್ಯಕಾಲದ ನನ್ನೂರಿನ, ನನ್ನ ಬೀದಿಯ, ಕೇರಿಯ ಆತ್ಮಪ್ರಜ್ಞೆ ಈ ಕಥೆಗಳು, ಇವು ನಿಜಕ್ಕೆ ನಿಜ, ಕಲ್ಪನೆಗೆ ಕಲ್ಪನೆಯಂತಹದ್ದೇ ರೂಪಕಗಳು. ಇವು ಕೇವಲ ನನ್ನ ಬಾಲ್ಯದ ಕಥೆಗಳಾಗಿರದೆ, ಪುಟ್ಟ-ಪಟ್ಟಣಗಳಲ್ಲಿ ಬೆಳೆದ ನನ್ನಂಥ ಅನೇಕರು ತಮ್ಮ ಬಾಲ್ಯವನ್ನು ಸಮೀಕರಿಸಿಕೊಳ್ಳಬಹುದಾದ ಕಥೆಗಳು. ಇವು ಮಕ್ಕಳ ಕಥೆಗಳೂ ಹೌದು, ದೊಡ್ಡವರ ಕಥೆಗಳೂ ಹೌದು! ಎಲ್ಲಾ ವಯಸ್ಸಿನವರಿಗೂ ದಕ್ಕುವ ಹಾಗೆ, ನನಗೆ ಒಲಿದಿರುವ ಸರಳ ಭಾಷೆಯಲ್ಲಿ ಕಥೆಗಳನ್ನು ನಿರೂಪಿಸುವ ಪ್ರಯತ್ನ ಮಾಡಿದ್ದೇನೆ. ಕಥೆಯು, ಸರಳವಾದ ಭಾಷೆ ಮತ್ತು ನಿರೂಪಣೆಯಲ್ಲಿದ್ದರೆ ಮಕ್ಕಳೂ ಕೂಡ ಸಲೀಸಾಗಿ ಓದಬಹುದೆಂಬ ಸಣ್ಣ ಉದ್ದೇಶವೂ ಇದರ ಹಿಂದಿದೆ.
ಸ್ಟಾಕ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಲು ಬಯಸುತ್ತೀರಾ ಆದರೆ ಎಲ್ಲಿಂದ ಪ್ರಾರಂಭಿಸಬೇಕೆಂದು ತಿಳಿದಿಲ್ಲವೇ? "ಶ್ರೀಮಂತರಾಗೋಣ ಬನ್ನಿ" ಅರುಣ್ ಕಿಲ್ಲೂರು ಅವರು ಯಶಸ್ವಿ ಹೂಡಿಕೆಗಾಗಿ ಪ್ರಾಯೋಗಿಕ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡುತ್ತಾರೆ. ನಿಮ್ಮ ಪ್ರತಿಯನ್ನು ಇಂದು ಪಡೆದುಕೊಳ್ಳಿ ಮತ್ತು ನಿಮ್ಮ ಆರ್ಥಿಕ ಭವಿಷ್ಯವನ್ನು ನಿರ್ಮಿಸಲು ಪ್ರಾರಂಭಿಸಿ!
ಹೆಣ್ಣೂಬ್ಬಳು ಬಾಡಿಗೆ ತಾಯಿಯಾಗಲು ಸಮ್ಮತಿಸಿದ್ದು ಯಾಕೆ ಎಂಬುದೇ ಈ ಕೃತಿಯ ಕಥಾವಸ್ತು.
1951 ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಡಿ.ವಿ. ಗುರುಪ್ರಸಾದ್, ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವಿಜ್ಞಾನ ಪದವಿ ಪಡೆದರು ಮತ್ತು ನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅವರು 1976 ರಲ್ಲಿ ಭಾರತೀಯ ಪೊಲೀಸ್ ಸೇವೆಗೆ (ಐಪಿಎಸ್) ಸೇರಿದರು ಮತ್ತು ಕರ್ನಾಟಕ ಕೇಡರ್ ಅನ್ನು ನೀಡಲಾಯಿತು. ಬೀದರ್, ಗುಲ್ಬರ್ಗ ಮತ್ತು ಕೊಡಗು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಗುಲ್ಬರ್ಗ ರೇಂಜ್ನ ಡಿಐಜಿ ಮತ್ತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅವರು ರಾಜ್ಯ ಗುಪ್ತಚರ ಇಲಾಖೆ ಮತ್ತು ರಾಜ್ಯ ಮಾಹಿತಿ ಇಲಾಖೆಯ ಮುಖ್ಯಸ್ಥರಾಗಿದ್ದರು. ಅವರು ರಾಜ್ಯ ಪೊಲೀಸ್ನಲ್ಲಿ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು ಮತ್ತು ಅತ್ಯಂತ ಪಾರದರ್ಶಕ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸುವ ಜವಾಬ್ದಾರಿಯನ್ನು ಹೊಂದಿದ್ದರು ಮತ್ತು ಅದು ಅವರಿಗೆ ಹೆಚ್ಚು ಪ್ರಶಸ್ತಿಗಳನ್ನು ತಂದಿತು. ಅವರು ಹೊಸದಿಲ್ಲಿಯ ಸಿಐಎಸ್ಎಫ್ನಲ್ಲಿಯೂ ತಮ್ಮ ಸೇವೆಯನ್ನು ಹೊಂದಿದ್ದರು. ಅವರು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದರು ಮತ್ತು ಬೃಹತ್ ಘಟಕವನ್ನು ನಾಲ್ಕು ಸ್ವತಂತ್ರ ಘಟಕಗಳಾಗಿ ವಿಭಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರು ಯು.ಕೆ.ಯಲ್ಲಿ ಪೊಲೀಸ್ ತರಬೇತಿಯ ಸಣ್ಣ ಅವಧಿಯನ್ನು ಹೊಂದಿದ್ದಾರೆ. ಅವರು ಕರ್ನಾಟಕ ಅಪರಾಧ ತನಿಖಾ ಇಲಾಖೆಯ ಮಹಾನಿರ್ದೇಶಕರಾಗಿ ಕೆಲಸ ಮಾಡಿದರು ಮತ್ತು 2011 ರಲ್ಲಿ ಡಿಜಿಪಿ ಹೋಮ್ ಗಾರ್ಡ್ಸ್, ಅಗ್ನಿಶಾಮಕ ಮತ್ತು ಸಿವಿಲ್ ಡಿಫೆನ್ಸ್ ಆಗಿ ನಿವೃತ್ತರಾದರು. ಅವರು ಭಾರತೀಯ ಪೊಲೀಸ್ ವ್ಯವಸ್ಥೆ ಮತ್ತು ಕುರಿತು ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ಸಂಬಂಧಿತ ವಿಷಯಗಳು, ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಪ್ರವಾಸ ಕಥನಗಳು. ಅವರು ಇಂಗ್ಲಿಷ್ ದಿನಪತ್ರಿಕೆ ಡೆಕ್ಕನ್ ಹೆರಾಲ್ಡ್ನ ಅಂಕಣಕಾರರೂ ಆಗಿದ್ದಾರೆ. ಅವರು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಹಲವಾರು ಪುಸ್ತಕಗಳ ಲೇಖಕರಾಗಿದ್ದಾರೆ.
ಆರೋಗ್ಯಪೂರ್ಣ ದೀರ್ಘಾಯುಷ್ಯದ ಬಯಕೆ ನಿಮಗಿದೆಯೇ? ಪ್ರಾಣಾಯಾಮ, ಯೋಗಾಸನಗಳನ್ನು ಮನೆಯಲ್ಲಿಯೇ ಮಾಡುವುದು ಹೇಗೆ ಎಂದು ತಿಳಿಯಬೇಕೆ? ಯಾವುದೇ ತರಗತಿಗಳಿಗೆ ಅಥವಾ ಶಿಬಿರಗಳಿಗೆ ಹೋಗದೆ ಧ್ಯಾನವನ್ನು ಮನೆಯಲ್ಲಿಯೇ ಅಭ್ಯಾಸ ಮಾಡಲು ಸರಳಸೂತ್ರಗಳು ಬೇಕೆ? ಯಾವ ರೀತಿಯ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿಸುತ್ತದೆ ಎಂದು ತಿಳಿದುಕೊಳ್ಳಬೇಕೆ? ಉತ್ತಮ ಆರೋಗ್ಯಕ್ಕಾಗಿ ನೆಮ್ಮದಿ ಮತ್ತು ಮನಃಶಾಂತಿ ಎಷ್ಟು ಮುಖ್ಯ ಮತ್ತು ಅದಕ್ಕಾಗಿ ಯಾವೆಲ್ಲಾ ಜೀವನ ಸಿದ್ಧಾಂತಗಳನ್ನು ಮತ್ತು ಜೀವನಶೈಲಿಯನ್ನು ರೂಡಿಸಿಕೊಳ್ಳಬೇಕು ಎನ್ನುವ ಪ್ರಶ್ನೆಗಳಿಗೆ ಉತ್ತರ ಬೇಕಿದೆಯೇ? ಹಾಗಿದ್ದಲ್ಲಿ, ನಿಮ್ಮ ಈ ಎಲ್ಲಾ ಪ್ರಶ್ನೆಗಳಿಗೆ ಮತ್ತು ಬಯಕೆಗಳಿಗೆ "ಸಹಜ ಜೀವನ"ದಲ್ಲಿ ಉತ್ತರಗಳಿವೆ, ಸುಲಭ ಮಾರ್ಗೋಪಾಯಗಳಿವೆ. ತಮ್ಮ ಹಲವಾರು ವರ್ಷಗಳ ಪ್ರಯೋಗ, ಅಭ್ಯಾಸ, ಓದು, ಅಧ್ಯಯನಗಳ ಸ್ವಾನುಭವದಿಂದ, ವೈಚಾರಿಕ ಚಿಂತನೆಗಳನ್ನಾಧರಿಸಿ ಮತ್ತು ಇತ್ತೀಚಿನ ವೈಜ್ಞಾನಿಕ ಸಂಶೋಧನೆಗಳ ಅರಿವಿನ ಬೆಳಕಿನಲ್ಲಿ ಲೇಖಕ ಮತ್ತು ರಾಜಕಾರಣಿ ರವಿ ಕೃಷ್ಣಾರೆಡ್ಡಿ ಸರಳಗನ್ನಡದಲ್ಲಿ ಬರೆದಿರುವ ಕೈಪಿಡಿ - "ಸಹಜ ಜೀವನ".
ಸಕಲ ಭಾಷಾಮಯೀ ಸರಸ್ವತಿ ಸರ್ವಭಾಷಾಮಯೀ ಸರಸ್ವತೀ ಎನ್ನುವ ಮಾತಿದೆ. ಇದೇ ಸಂದರ್ಭದಲ್ಲಿ ಕನ್ನಡ ಸಾರಸ್ವತ ಲೋಕಕ್ಕೆ ನಾಡು ನುಡಿಗಳ ಜಗತ್ತಿಗೆ ತಮ್ಮ ಮನೆಯ, ಕುಟುಂಬದ ಭಾಷೆ ಬೇರೆ ಆಗಿದ್ದರೂ ಕನ್ನಡಕ್ಕೆ ಅನೇಕರು ದಣಿವರಿಯದೆ ಜೀವ ತೇಯ್ದಿದ್ದಾರೆ. ಅಂಥ ೧೦೧ ಮಹಾನುಭಾವರ ಬಗ್ಗೆ ರಚಿಸಿರುವ ಕೃತಿಯೇ ಸಹಭಾಷಿಕರ ಕನ್ನಡ ಪ್ರೇಮ. ಇಲ್ಲಿ ಯಾವುದೂ, ಯಾರೂ ಅನ್ಯರಲ್ಲ, ಎಲ್ಲವೂ ಸಹಭಾಷೆಗಳೇ, ಎಲ್ಲರೂ ಸಹಭಾಷಿಕರೇ…
ಸಕಲ ಭಾಷಾಮಯೀ ಸರಸ್ವತಿ ಸರ್ವಭಾಷಾಮಯೀ ಸರಸ್ವತೀ ಎನ್ನುವ ಮಾತಿದೆ.
Showing 211 to 240 of 266 results