#
ಡಾ| ಗಜಾನನ ಶರ್ಮ
nil
28.9.2024 ರಂದು ಪುಸ್ತಕ ಬಿಡುಗಡೆ ಬಂಗಾಳದ ಚತುರೆಯೊಬ್ಬಳು ಮೈಸೂರಿನ ಅರಮನೆಯ ಆಶ್ರಯ ಪಡೆದ ಪರಿಣಾಮದಿಂದಾಗಿಯೇ ನಮ್ಮ ರಾಷ್ಟ್ರಗೀತೆ ಆ ರಾಗರೂಪ ಪಡೆದದ್ದು! ತಿರುವಾಂಕೂರಿನ ಆಡಳಿತ ನೆಲೆ ನೀಡದ ದಲಿತವೈದ್ಯನಿಗೆ ಮೈಸೂರು ಆಶ್ರಯ ಕೊಟ್ಟ ಪರಿಣಾಮವೇ ಸ್ವಾಮಿ ವಿವೇಕಾನಂದರು ಸಿಡುಬುರೋಗ ದಿಂದ ಬಿಡುಗಡೆ ಪಡೆದು ಚಿಕಾಗೋಗೆ ಹೋಗಲು ಸಾಧ್ಯವಾದದ್ದು! ಕೋಲಾರದ ಚಿನ್ನದಗಣಿಗೆ ವಿದ್ಯುತ್ ಸರಬರಾಜು ಮಾಡಿ ಮುಂದೆ ಬೆಂಗಳೂರು ಸೇರಿದಂತೆ ನಮ್ಮ ನೆಲವನ್ನು ಬೆಳಗಿಸಿದ್ದು ಮೈಸೂರಿನ ರಾಣಿಯ ಪ್ರೋತ್ಸಾಹದಲ್ಲಿ ಸ್ಥಾಪಿತಗೊಂಡ ಕಾವೇರಿ ವಿದ್ಯುತ್ ಸ್ಥಾವರ! ಆ ರಾಣಿಯ ಮುಂದಾಲೋಚನೆಯಿಂದಾಗಿಯೇ ಸಿಡುಬು, ಪ್ಲೇಗ್ ಮುಂತಾದುವಕ್ಕೆ ಲಸಿಕೆಗಳು ಮೈಸೂರು ಪ್ರಾಂತ್ಯದಲ್ಲಿ ತಯಾರಾದದ್ದು. ಮಾರಿಕಣಿವೆಯಲ್ಲಿ ಕೃಷಿನೀರಾವರಿ ಅಣೆಕಟ್ಟು ನಿರ್ಮಾಣಗೊಂಡದ್ದು, ಬೆಂಗಳೂರಿನಲ್ಲಿ ಮಲ್ಲೇಶ್ವರಂ, ಬಸವನಗುಡಿಗಳು ಪ್ರಾರಂಭವಾದದ್ದು: ಟಾಟಾ ಅವರ ಆಶಯದ ವಿಜ್ಞಾನ ಸಂಸ್ಥೆ ನೆಲೆಗೊಂಡದ್ದು... ಇಂತಹ ಅದೆಷ್ಟೋ ಅಪರೂಪದ ಅಮೂಲ್ಯವಾದ ಕೈಂಕರ್ಯಗಳನ್ನು ಕೊಡುಗೆಯಾಗಿಸಿದ, ಜನಮನದಲ್ಲಿ ಹೊಸಚಿಂತನೆಗಳ ಬೀಜ ಬಿತ್ತಿದ, ಮೈಸೂರು ಪ್ರಾಂತ್ಯದ ಬೆಳವಣಿಗೆಯ ರೂವಾರಿಯಾಗಿದ್ದ ಅಪರೂಪದ ರಾಣಿ ಕೆಂಪನಂಜಮ್ಮಣ್ಣಿ ಯವರ ಹೃದಯಸ್ಪರ್ತಿ ಜೀವನಗಾಥೆ ಈ ಕೃತಿ. *-ಡಾ| ಕೆ.ಎನ್. ಗಣೇಶಯ್ಯ
NA
ಇದು, ಹಿಂದಿಯ ಧೀಮಂತ ಲೇಖಕ ಶ್ರೀ ಉದಯ ಪ್ರಕಾಶ್ರ 'ವಾರೆನ್ ಹೇಸ್ಟಿಂಗ್ಸ್ ಕಾ ಸಾಂಡ್" ಎಂಬ ಕಿರು ಕಾದಂಬರಿಯ ಭಾವಾನುವಾದ. ಈ ಸಮಾಜೋ- ಆರ್ಥಿಕ ರಾಜಕೀಯ ಕಟಕಿಯಲ್ಲಿ ವಾರೆನ್ ಹೇಸ್ಟಿಂಗ್ಸ್ ಮತ್ತು ಅವನ ಹೋರಿ ರೂಪಕಗಳಾಗಿ ಬಳಸಲ್ಪಟ್ಟಿವೆ. ಉದಯ ಪ್ರಕಾಶರು ಒಂದು ವಿಲಕ್ಷಣ ಭ್ರಮೆ (Fantasy) ಯನ್ನು ಈ ಕಿರು ಕಾದಂಬರಿಯಲ್ಲಿ ಸೃಷ್ಟಿಸಿದ್ದಾರೆ. ಅದ್ಭುತಗಳ ನಾಡಾದ ಭಾರತವೆಂಬ ಕೂಟ ಪ್ರಶ್ನೆಯೊಂದಿಗೆ ವಾರೆನ್ ಹೇಸ್ಟಿಂಗ್ಸ್ನ ಒಡನಾಟ ಹಾಸ್ಯಾಸ್ಪದವೂ ಅಸಮಂಜಸವೂ ಆಗಿದೆ. ತನ್ನ ಸುತ್ತಲಿನ ಎಲ್ಲದರೊಂದಿಗೆ ಅವನ ನಡವಳಿಕೆ ಸಂವೇದನಾರಹಿತವಾಗಿದೆ; ಇದರಲ್ಲಿ ಆಳ ತಿಳುವಳಿಕೆ ಯಾಗಲೀ, ಒಳನಾಡಿ ಅರಿವಾಗಲೀ ಇಲ್ಲ, ಹಾಗಾಗಿ ಸತ್ವವೂ ಇಲ್ಲ. 'ವಾರೆನ್ ಹೇಸ್ಟಿಂಗ್ಸ್ನ ಹೋರಿ' ಇಂದು ನಮ್ಮ ಸುತ್ತ ನಡೆಯುತ್ತಿರುವ ಜಾಗತಿಕ ವಿದ್ಯಮಾನಗಳತ್ತ ನಮ್ಮನ್ನ ಕೊಂಡೊಯ್ಯುತ್ತದೆ. ಇಂದು ಭೋಗಲೋಲುಪತೆ ಮತ್ತು ಅಧಿಕಾರದಾಹ ವಿಕೃತಿಯ ರೂಪತಳೆದಿವೆ. ನಿಲ್ಲಪ್ತತೆ- ಸಂವೇದನಾರಾಹಿತ್ಯಗಳ ನಡುವೆಯೂ ಕೆಲವು ಜೀವಿಗಳು. ಕೆಲವು ಚಳುವಳಿಗಳು ಹೋರಿಯ ಕೋಡು ಹಿಡಿದು ಮಣಿಸುವ, ಜಗತ್ತಿನ ಗಡ್ಡಹಿಡಿದು ಜಗ್ಗುವ ಧೈರ್ಯ ಹೊಂದಿವೆ. ವಿನಾಶದ ಅಂಚಿನಲ್ಲಿರುವ ತಳಿಯೊಂದಕ್ಕೆ ಕೊಟ್ಟ ಪ್ರಶಸ್ತಿಯಂತಿದೆ ಈ ಕಾದಂಬರಿ, ಡಾ. ಪ್ರಕಾಶ್ ಗರುಡರ ಭಾವಾನುವಾದ ಮೂಲದೊಂದಿಗೆ ಅನುಸಂಧಾನ ಮಾಡುತ್ತಲೇ ತಿಳಿಗನ್ನಡದಲ್ಲಿ ಚೊಕ್ಕವಾಗಿ ಹರಿದು ಬಂದಿದೆ. ಪ್ರೊ. ಎಚ್.ಆರ್. ಅಮರನಾಥ
ವಿಮಲಾ ರಾಮಾಜೋಯಿಸ್
ಭಾರತದ ಅರಸುಗಳಲ್ಲಿ ಶ್ರೀಕೃಷ್ಣದೇವರಾಯನಿಗೆ ವಿಶಿಷ್ಟವಾದ ಸ್ಥಾನವಿದೆ. ಸಮರ್ಥ ಆಡಳಿತಗಾರ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ; ಕಲೆ,ಸಾಹಿತ್ಯ ರಂಗಗಳ ಪೋಷಕ; ತಾನು ವೈಷ್ಣವ ಧರ್ಮವನ್ನು ಅನುಸರಿಸಿದರೂ ಇತರ ಧರ್ಮಗಳ ಬಗ್ಗೆ ಒಬ್ಬ ರಾಜ ನಡೆದುಕೊಳ್ಳುವ ರೀತಿಯಲ್ಲಿ ನಡೆದುಕೊಂಡ ಸಂಯಮಿ. ತನ್ನನ್ನು ಕನ್ನಡ ರಾಯನೆಂದು ಕರೆಸಿಕೊಂಡ ಭಾಷಾಪ್ರೇಮಿ. ಯವನ ರಾಜ್ಯ ಸ್ಥಾಪಕನೆಂಬ ಬಿರುದನ್ನು ಪಡೆದ ರಣಧೀರ. ಬಹುಶಃ ಈತನ ಬಗ್ಗೆ ಪ್ರಚಲಿತದಲ್ಲಿರುವಷ್ಟು ದಂತಕಥೆಗಳು ಬೇರಾವ ರಾಜನ ಬಗ್ಗೆಯೂ ಇಲ್ಲ. ಹೀಗೆ ಇಂದಿಗೂ ಜನಮಾನಸದಲ್ಲಿ ನೆಲಸಿರುವ ವರ್ಣರಂಜಿತ ಐತಿಹಾಸಿಕ ವ್ಯಕ್ತಿ ಶ್ರೀಕೃಷ್ಣದೇವರಾಯ. ಈ ಕಾದಂಬರಿಯಲ್ಲಿ ಮಿತ್ರ ಶ್ರೀ ಸು.ರುದ್ರಮೂರ್ತಿಶಾಸ್ತ್ರಿ ಶ್ರೀಕೃಷ್ಣದೇವರಾಯನ ಚರಿತ್ರೆಯನ್ನು ನಿರೂಪಿಸುವುದಕ್ಕಿಂತಲೂ ಆತನ ಚಾರಿತ್ರ್ಯವನ್ನು ನಿರೂಪಿಸುವುದರತ್ತ ಹೆಚ್ಚು ಗಮನಹರಿಸಿದ್ದಾರೆ. ಶ್ರೀಕೃಷ್ಣದೇವರಾಯ ಈ ಕಾದಂಬರಿಯ ಪ್ರಧಾನ ಪಾತ್ರ. ಆದರೆ ಎಲ್ಲ ಪಾತ್ರಗಳ ಒಳಹೊರ ಚಾರಿತ್ರ್ಯಗಳನ್ನು ಗಮನಿಸಿ ಎಲ್ಲ ಪಾತ್ರಗಳನ್ನೂ ನಮ್ಮ ಮುಂದಿರಿಸಿದ್ದಾರೆ. ಬಹುಶಃ ಈ ಕಾರಣದಿಂದ ಶ್ರೀಕೃಷ್ಣದೇವರಾಯನ ಬದುಕಿನ ಸುತ್ತ ಹೆಣೆದುಕೊಂಡಿರುವ ಹಲವಾರು ಅಸಂಗತಗಳು ತಮ್ಮಷ್ಟಕ್ಕೆ ತಾವೇ ಕಳಚಿಕೊಂಡಿವೆ. ಆ ಕಾಲದ ಆಂತರಂಗಿಕ ಗೂಢಚರ್ಯೆ, ಅಧಿಕಾರ ದಾಹದ ಪಿತೂರಿಗಳು, ಉಪಾಯಗಳಿಗೆ ಪ್ರತ್ಯುಪಾಯಗಳು ಮುಂತಾದ ಕುತೂಹಲ ಮೂಡಿಸುವ ಪ್ರಸಂಗಗಳೂ ಹಿತವಾಗಿ ಮೂಡಿಬಂದಿವೆ. ಇವೆಲ್ಲವೂ ಆ ಪಾತ್ರಗಳ ವ್ಯಕ್ತಿತ್ವವನ್ನು ಆವಿಷ್ಕರಿಸುವಲ್ಲಿ ಸಹಕಾರಿಯಾಗಿವೆ.
Showing 211 to 240 of 270 results