• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ವೀರ ಬಲ್ಲಾಳ | Veera Ballaala

ಹೊಯ್ಸಳ ದೊರೆಗಳಲ್ಲಿ ರಾಜ್ಯವನ್ನು ವಿಸ್ತರಿಸಿ ಸಾಮ್ರಾಜ್ಯವನ್ನಾಗಿ ಮಾರ್ಪಡಿಸುವ ಮನಸ್ಸು ವಿಷ್ಣುವರ್ಧನನಿಗಿತ್ತು. ಅದಕ್ಕಾಗಿ ಅವನು ನಿರಂತರ ಪ್ರಯತ್ನವನ್ನೂ ಮಾಡಿದ್ದ ಆದರೆ ಕಲ್ಯಾಣದ ಚಾಲುಕ್ಯ ಚಕ್ರವರ್ತಿ ಆರನಯ ವಿಕ್ರಮಾದಿತ್ಯ ಅವನ ಮಹದಾನೆಯ ಮೇಲೆ ತಣ್ಣೀರೆರಚಿದ. ಅವನು ಕೊನೆಯವರೆಗೂ ಕಲ್ಯಾಣ ಚಾಲುಕ್ಯರ ಸಾಮಂತನಾಗಿ ಉಳಿಯಬೇಕಾಯಿತು. ವಿಷ್ಣುವರ್ಧನನ ಮರಣದ ನಂತರ ಹೊಯ್ಸಳ ಸಿಂಹಾಸನವನ್ನೇರಿದ ಇಮ್ಮಡಿ ನರಸಿಂಹ ತಂದೆಗೆ ತಕ್ಕ ಮಗನಾಗಿರಲಿಲ್ಲ. ಅವನು ಸಿಂಹಾಸನ ದೊರಕಿಸಿದ ಅಧಿಕಾರವನ್ನು ತನ್ನ ಸುಖ ಲೋಲುಪತೆಗಾಗಿ ಕಳೆದ.

₹450   ₹383

Buy Now
Sold Out
ವೀರ ಸಿಂಧೂರ ಲಕ್ಷ್ಮಣ | Veera Sindhoora Laksmana

`ವೀರ ಸಿಂಧೂರ ಲಕ್ಷ್ಮಣ’ ಕೌಂಡಿನ್ಯ ಅವರು ದಾಖಲೆಗಳೊಂದಿಗೆ ಸಂಶೋಧನೆ ಮಾಡಿ ರಚಿಸಿರುವ ಮಹೋನ್ನತ ಕೃತಿಯಾಗಿದೆ. ಬ್ರಿಟಿಷರ ವಿರುದ್ಧ ಮತ್ತು ಶೋಷಿತ ಬಡವರ ಪರವಾಗಿ ಹೋರಾಡಿದ, ‘ಕರ್ನಾಟಕ ರಾಬಿನ ಹುಡ್’ ಎಂದು ಪ್ರಖ್ಯಾತನಾಗಿರುವ ಈ ಮಹಾನ್ ದೇಶ ಭಕ್ತ ಮತ್ತು ಅಪ್ರತಿಮ ಹೋರಾಟಗಾರನ ಕಥೆಯನ್ನು ತಿಳಿಸುವ ಕಾದಂಬರಿಯಾಗಿದೆ.

₹190   ₹162

Buy Now
ವ್ಯಗ್ರ ಮತ್ತು ಇತರ ಕಾದಂಬರಿಗಳು | Vyagra Mattu Itara Kadambarigalu

‘ವ್ಯಗ್ರ’ ‘ಅಳಿವು’ ‘ಅವಸಾನ’ ಈ ಮೂರೂ ಕಾದಂಬರಿಗಳು ಏನೋ ಒಂದು ಸಮಸ್ಯೆ, ಸವಾಲು, ಎದುರಿಸಲೇ ಬೇಕಾದ ಸಂದಿಗ್ಧ ಸ್ಥಿತಿಗೆ ಸಿಲುಕಿದ ಅಮಾಯಕ ಜೀವಗಳ ಒಡಲ ಸತ್ಯವನ್ನು ಅಂತಃಕರಣದಿಂದ ಕಂಡು ಹೇಳಲು ಹೊರಟ ಕಥನಗಳಿವು.

₹180   ₹144

Buy Now
ವ್ಯಾಘ್ರಹತ್ಯೆಯ ನಿಗೂಢಗಳು | Vyagrahatyeya Nigoodagalu

ಡಾ. ಟಿಸ್ವಿ ಪರಿಸರವನ್ನು ಕುರಿತು ತಮ್ಮ ಅಧ್ಯಯನಗಳಿಂದಾಗಿ ಕನ್ನಡ ಸಂವೇದನಾಶೀಲ ಮನಸ್ಸುಗಳಿಗೆ ಪರಿಚಿತರು. ಬಹುತೇಕರ ಹಾಗೆ ಪರಿಸರ ಅಧ್ಯಯನವೆಂದರೆ ಜೀವವೈವಿಧ್ಯ ಕುರಿತ ವಿಸ್ಮಯಕಾರಿಯಾದ ಶುಪ್ಕ ಮಾಹಿತಿಗಳನ್ನು ಒದಗಿಸುವುದು ಎನ್ನುವ ಕ್ರಮ ಇವರದ್ದಲ್ಲ, ಬದಲಾಗಿ ಇದು ಸಾಮಾಜಿಕ, ಧಾರ್ಮಿಕ, ಆರ್ಥಿಕ, ನೈತಿಕತೆಗಳ ಸಂಕಥನವೆಂದು ಇವರು ಪರಿಭಾವಿಸುವುದರಿಂದಾಗಿ ಇವರ ಪರಿಸರ ಅಧ್ಯಯನ ಜೀವಪರ ನೆಲೆಗಳ ಹುಡುಕಾಟದ ವೇದಿಕೆಯಾಗಿ ರೂಪಗೊಂಡಿದೆ.

₹200   ₹170

Buy Now
ವ್ಯಾಘ್ರಹತ್ಯೆಯ ನಿಗೂಢಗಳು ಇಬುಕ್ | Vyagrahatyeya Nigoodagalu Ebook

ಡಾ. ಟಿಸ್ವಿ ಪರಿಸರವನ್ನು ಕುರಿತು ತಮ್ಮ ಅಧ್ಯಯನಗಳಿಂದಾಗಿ ಕನ್ನಡ ಸಂವೇದನಾಶೀಲ ಮನಸ್ಸುಗಳಿಗೆ ಪರಿಚಿತರು. ಬಹುತೇಕರ ಹಾಗೆ ಪರಿಸರ ಅಧ್ಯಯನವೆಂದರೆ ಜೀವವೈವಿಧ್ಯ ಕುರಿತ ವಿಸ್ಮಯಕಾರಿಯಾದ ಶುಪ್ಕ ಮಾಹಿತಿಗಳನ್ನು ಒದಗಿಸುವುದು ಎನ್ನುವ ಕ್ರಮ ಇವರದ್ದಲ್ಲ, ಬದಲಾಗಿ ಇದು ಸಾಮಾಜಿಕ, ಧಾರ್ಮಿಕ, ಆರ್ಥಿಕ, ನೈತಿಕತೆಗಳ ಸಂಕಥನವೆಂದು ಇವರು ಪರಿಭಾವಿಸುವುದರಿಂದಾಗಿ ಇವರ ಪರಿಸರ ಅಧ್ಯಯನ ಜೀವಪರ ನೆಲೆಗಳ ಹುಡುಕಾಟದ ವೇದಿಕೆಯಾಗಿ ರೂಪಗೊಂಡಿದೆ.

₹200   ₹100

Buy Now
ಶತಮಾನಂ ಭವತಿ | Shatamanam Bhavati

'ಶತಮಾನಂಭವತಿ' ಅನ್ನೋದು ನೂರು ವರ್ಷ ಚೆನ್ನಾಗಿ ಬಾಳಲಿ ಎಂದು ಆಶೀರ್ವದಿಸುವ ಮಂತ್ರ. ಈ ಮಂತ್ರದ ಆಶಯವೇ ಕಾದಂಬರಿಯ ತಲೆಬರಹ, ಈ ಆಶಯದಂತೆ ರಘು ಅನ್ನುವ ಪ್ರಮುಖ ಪಾತ್ರದಾರಿ ಪರಿಶುದ್ಧ ಪ್ರೀತಿಗಾಗಿ ಹಪಾಹಪಿಸುತ್ತಾನೆ ಜೊತೆಗೆ ಆ ಪ್ರೀತಿಯನ್ನ ಗಳಿಸಿ ಜೀವನ ಪೂರ್ತಿ ಕಾಪಿಟ್ಟುಕೊಳ್ಳುವ ಉದ್ದೇಶವನ್ನು ಸಹ ಇಟ್ಟುಕೊಂಡಿರುತ್ತಾನೆ. ಅಷ್ಟೇ ಅಲ್ಲ ಅಂತಹ ಪ್ರೀತಿ ಪಡೆಯಲು ಪರಿಶುದ್ಧನಾಗೇ ಈತನು ಇರುತ್ತಾನೆ. ಮ್ಯಾಟ್ರಿಮೊನಿಯಲ್ ಅನ್ನೋದು ಮದುವೆ ಮಾಡಸಲಿಕ್ಕೆ ಇರುವ ಆನ್ ಲೈನ್ ವೆಬ್ ಸೈಟ್, ಈ ಆನ್ ಲೈನ್ ಪೇಜ್ ಗೆ ಮದುವೆಯಾಗುವ ಹುಡುಗಿಯ ತಲಾತ್ ಮಾಡಲು ನೋಂದಾಯಿಸಿಕೊಳ್ಳುವ ಕಥಾನಾಯಕ ರಘು ಪ್ರೊಫೈಲ್ ಮೂಲಕ ಪರಿಚಯ ಆಗುವ ಹುಡುಗಿ ಜೊತೆಯಲ್ಲಿ ಚಾಟ್ ಆರಂಭಿಸಿದ ನಂತರ ಅವಳೆಡೆಗೆ ಅನುರಾಗ ತೋರಿ ಆ ನಂತರ ಅವಳು ಸಿಗದೆ ಮೋಸಕ್ಕೆ ಒಳಗಾಗುತ್ತಾನಾ? ಅಥವಾ ಅವನಿಗೆ ಅವಳ ಪ್ರೀತಿ ಧಕ್ಕುತ್ತಾ? ಅನ್ನುವ ಹುಡುಕಾಟದಲ್ಲಿರುವ ನಮಗೆ, ಅದೇ ವಂಚನೆ ಮೋಸದ ಕಾರಣಗಳಿಂದ ಮತ್ತೆ ಹೇಗೆ ಅತ ಪ್ರೀತಿಯನ್ನ ಗಳಿಸುತ್ತಾನೆ ಅನ್ನುವ ಕಥಾ ಹೂರಣ ಇರುವ ಕಾದಂಬರಿ ಶತಮಾನಂಭವತಿ, ಕಾದಂಬರಿಯ ಅಂತ್ಯದಲ್ಲಿ ಹೇಳುವ ವಿಷಯವನ್ನ ನಮಗೆ ಗೊತ್ತಿಲ್ಲದಂತೆ ಮೊದಲಿಂದಲೂ ಬೆಸೆದುಕೊಂಡೆ ಬಂದಿರುತ್ತಾರೆ. ಅದೇ ಈ ಕಾದಂಬರಿಯ ಹೆಗ್ಗುರುತು. ಕಾದಂಬರಿಕಾರ ರಾಜಶೇಖರ್ ಮೂಲತಃ ಸಿನೆಮಾ ನಿರ್ದೇಶನ ಮಾಡಲು ಬಂದಾತ. ಆ ರಂಗದಲ್ಲಿ ಒಂದು ದಶಕಕ್ಕೂ ಹೆಚ್ಚು ಅವಧಿಯಲ್ಲಿ ಕೆಲಸ ಮಾಡಿ ಸದಭಿರುಚಿಯ ಹಾಗೂ ಹೊಸತನ ಇರುವ ಸಿನೆಮಾ ಕೊಡಬೇಕೆಂಬ ಸದಾ ಇಚ್ಚೆಯುಳ್ಳ ವ್ಯಕ್ತಿ, ವರ್ತಮಾನದ ಹದಿಹರೆಯದ ಪ್ರೀತಿ, ಪ್ರೇಮ ತಲ್ಲಣಗಳನ್ನ ಹೊಸತನದ ಹಚ್ಚಿಗೆ ಹಾಕಿ ಚೆಂದದ ರೂಪಗಳನ್ನ ಕೊಟ್ಟಿದ್ದಾರೆ. ಇದನ್ನ ಓದುತ್ತಿರುವಾಗಲೇ ಒಂದು ಸಿನೆಮಾ ನೋಡಿದ ಅನುಭವವಾಗುತ್ತದೆ, ಅಂದರೆ ಆ ರೀತಿಯಲ್ಲಿ ಕಾದಂಬರಿಕಾರರು ಸಾಹಿತ್ಯ ಕಟ್ಟಿಕೊಟ್ಟಿದ್ದಾರೆ. ಇದು ಅವರ ಚೊಚ್ಚಲ ಕೃತಿ, ಮುಂದೆ ಏನಾಗಬಹುದು ಅನ್ನುವ ಕುತೂಹಲಗಳ ನಡುವೆ ಕಾದಂಬರಿ ಓದಿಸಿಕೊಂಡು ಹೋಗುತ್ತದೆ. ಒಳ್ಳೆಯ ಬರಹಗಾರರಾಗುವ ಕುರುಹುಗಳನ್ನ ಈ ಪುಸ್ತಕದ ಮೂಲಕ ಮಿತ್ರರು ನೀಡಿದ್ದಾರೆ. ಓದುಗರು ಅರೆಕೊರೆಗಳನ್ನ ಮನ್ನಿಸಿ ಸ್ವೀಕರಿಸಿ ಪ್ರೋತ್ಸಾಹಿಸಲಿ ಅನ್ನುವ ಸದಾಶಯ. ರಾಜು ಸೂನಗಹಳ್ಳಿ ಬರಹಗಾರ, ಚಲನಚಿತ್ರ ನಿರ್ದೇಶಕ

₹130   ₹111

Buy Now
ಶಿವಾಜಿ ಟೆಂಟ್ | SHIVAJI TENT

ಪುಸ್ತಕದ ಈ ಹತ್ತೂ ಕಥೆಗಳು ನನ್ನದೇ ಬಾಲ್ಯದಿಂದ ರೂಪು ತಳೆದಂತಹವು. ಒಂದಲ್ಲಾ ಒಂದು ರೀತಿಯಲ್ಲಿ ನನ್ನನ್ನು ತೀವ್ರವಾಗಿ ಕಾಡಿದ ಕಥೆಗಳಿವು. ಬಾಲ್ಯಕಾಲದ ನನ್ನೂರಿನ, ನನ್ನ ಬೀದಿಯ, ಕೇರಿಯ ಆತ್ಮಪ್ರಜ್ಞೆ ಈ ಕಥೆಗಳು, ಇವು ನಿಜಕ್ಕೆ ನಿಜ, ಕಲ್ಪನೆಗೆ ಕಲ್ಪನೆಯಂತಹದ್ದೇ ರೂಪಕಗಳು. ಇವು ಕೇವಲ ನನ್ನ ಬಾಲ್ಯದ ಕಥೆಗಳಾಗಿರದೆ, ಪುಟ್ಟ-ಪಟ್ಟಣಗಳಲ್ಲಿ ಬೆಳೆದ ನನ್ನಂಥ ಅನೇಕರು ತಮ್ಮ ಬಾಲ್ಯವನ್ನು ಸಮೀಕರಿಸಿಕೊಳ್ಳಬಹುದಾದ ಕಥೆಗಳು. ಇವು ಮಕ್ಕಳ ಕಥೆಗಳೂ ಹೌದು, ದೊಡ್ಡವರ ಕಥೆಗಳೂ ಹೌದು! ಎಲ್ಲಾ ವಯಸ್ಸಿನವರಿಗೂ ದಕ್ಕುವ ಹಾಗೆ, ನನಗೆ ಒಲಿದಿರುವ ಸರಳ ಭಾಷೆಯಲ್ಲಿ ಕಥೆಗಳನ್ನು ನಿರೂಪಿಸುವ ಪ್ರಯತ್ನ ಮಾಡಿದ್ದೇನೆ. ಕಥೆಯು, ಸರಳವಾದ ಭಾಷೆ ಮತ್ತು ನಿರೂಪಣೆಯಲ್ಲಿದ್ದರೆ ಮಕ್ಕಳೂ ಕೂಡ ಸಲೀಸಾಗಿ ಓದಬಹುದೆಂಬ ಸಣ್ಣ ಉದ್ದೇಶವೂ ಇದರ ಹಿಂದಿದೆ. -ಮಂಜುನಾಥ್ ಕುಣಿಗಲ್

₹230   ₹195

Buy Now
ಶಿವಾಜಿ ಟೆಂಟ್ ಇಬುಕ್ | SHIVAJI TENT Ebook

ಪುಸ್ತಕದ ಈ ಹತ್ತೂ ಕಥೆಗಳು ನನ್ನದೇ ಬಾಲ್ಯದಿಂದ ರೂಪು ತಳೆದಂತಹವು. ಒಂದಲ್ಲಾ ಒಂದು ರೀತಿಯಲ್ಲಿ ನನ್ನನ್ನು ತೀವ್ರವಾಗಿ ಕಾಡಿದ ಕಥೆಗಳಿವು. ಬಾಲ್ಯಕಾಲದ ನನ್ನೂರಿನ, ನನ್ನ ಬೀದಿಯ, ಕೇರಿಯ ಆತ್ಮಪ್ರಜ್ಞೆ ಈ ಕಥೆಗಳು, ಇವು ನಿಜಕ್ಕೆ ನಿಜ, ಕಲ್ಪನೆಗೆ ಕಲ್ಪನೆಯಂತಹದ್ದೇ ರೂಪಕಗಳು. ಇವು ಕೇವಲ ನನ್ನ ಬಾಲ್ಯದ ಕಥೆಗಳಾಗಿರದೆ, ಪುಟ್ಟ-ಪಟ್ಟಣಗಳಲ್ಲಿ ಬೆಳೆದ ನನ್ನಂಥ ಅನೇಕರು ತಮ್ಮ ಬಾಲ್ಯವನ್ನು ಸಮೀಕರಿಸಿಕೊಳ್ಳಬಹುದಾದ ಕಥೆಗಳು. ಇವು ಮಕ್ಕಳ ಕಥೆಗಳೂ ಹೌದು, ದೊಡ್ಡವರ ಕಥೆಗಳೂ ಹೌದು! ಎಲ್ಲಾ ವಯಸ್ಸಿನವರಿಗೂ ದಕ್ಕುವ ಹಾಗೆ, ನನಗೆ ಒಲಿದಿರುವ ಸರಳ ಭಾಷೆಯಲ್ಲಿ ಕಥೆಗಳನ್ನು ನಿರೂಪಿಸುವ ಪ್ರಯತ್ನ ಮಾಡಿದ್ದೇನೆ. ಕಥೆಯು, ಸರಳವಾದ ಭಾಷೆ ಮತ್ತು ನಿರೂಪಣೆಯಲ್ಲಿದ್ದರೆ ಮಕ್ಕಳೂ ಕೂಡ ಸಲೀಸಾಗಿ ಓದಬಹುದೆಂಬ ಸಣ್ಣ ಉದ್ದೇಶವೂ ಇದರ ಹಿಂದಿದೆ.

₹230   ₹115

Buy Now
ಶ್ರೀಮಂತರಾಗೋಣ ಬನ್ನಿ | shreemantaragona banni

ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಲು ಬಯಸುತ್ತೀರಾ ಆದರೆ ಎಲ್ಲಿಂದ ಪ್ರಾರಂಭಿಸಬೇಕೆಂದು ತಿಳಿದಿಲ್ಲವೇ? "ಶ್ರೀಮಂತರಾಗೋಣ ಬನ್ನಿ" ಅರುಣ್ ಕಿಲ್ಲೂರು ಅವರು ಯಶಸ್ವಿ ಹೂಡಿಕೆಗಾಗಿ ಪ್ರಾಯೋಗಿಕ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡುತ್ತಾರೆ. ನಿಮ್ಮ ಪ್ರತಿಯನ್ನು ಇಂದು ಪಡೆದುಕೊಳ್ಳಿ ಮತ್ತು ನಿಮ್ಮ ಆರ್ಥಿಕ ಭವಿಷ್ಯವನ್ನು ನಿರ್ಮಿಸಲು ಪ್ರಾರಂಭಿಸಿ!

₹185   ₹157

Buy Now
ಸತ್ಯದ ಅನಾವರಣ | Sathyada Anavarana

ಹೆಣ್ಣೂಬ್ಬಳು ಬಾಡಿಗೆ ತಾಯಿಯಾಗಲು ಸಮ್ಮತಿಸಿದ್ದು ಯಾಕೆ ಎಂಬುದೇ ಈ ಕೃತಿಯ ಕಥಾವಸ್ತು.

₹100   ₹80

Buy Now
ಸದನದಲ್ಲಿ ಡಾ. ವಿಷ್ಣುವರ್ಧನ್ | Sadanadalli Dr.Vishnuvardhana

ವಿಷ್ಣುವರ್ಧನ್ ಅವರ ನಿರ್ಗಮನವನ್ನು ಸದನವು ಯಾವ ರೀತಿ ಅವಲೋಕಿಸಿತು ಎನ್ನುವ ಕುತೂಹಲಕ್ಕೆ ಸಾಕ್ಷಿಯಾಗಿ ಈ ಪುಸ್ತಕವು ನಿಮ್ಮ ಕೈಲಿದೆ. ನಾಡಿನ ಅತ್ಯಂತ ಜನಪ್ರಿಯ ನಟರಾಗಿದ್ದ ಅವರಿಗೆ ನಟನೆಯನ್ನು ಮೀರಿದ ಮಾನವೀಯ ಮೌಲ್ಯಗಳು ಎಷ್ಟು ಮುಖ್ಯವಿತ್ತು ಎಂಬುದು ಸದನದ ಚರ್ಚೆಗಳ ಒಟ್ಟಾರೆ ಫಲಿತಾಂಶವಾಗಿ ಕಾಣುತ್ತದೆ. ಇದು ಸಹಜವಾಗಿ, ಇಡೀ ನಾಡಿನ ಜನಮಿಡಿತದ ದ್ಯೋತಕವೂ ಹೌದು. ಅವರ ಜೀವನ, ಅವರ ಮೌಲ್ಯಗಳು, ಅವರ ಸಾತ್ವಿಕತೆ ಇವೆಲ್ಲವೂ ಮುಂದಿನ ಪೀಳಿಗೆಗೆ ದಾರಿ ತೋರಲಿ ಎನ್ನುವ ಈ ಕೃತಿಯ ಉದ್ದೇಶ ಸಾರ್ಥಕವಾಗಿದ್ದು, ಅತಿ ಕ್ಷಿಪ್ರ ಅವಧಿಯಲ್ಲಿ ಅತ್ಯಂತ ಸಮಗ್ರವಾಗಿ ಈ ಕೃತಿಯನ್ನು ಹೊರ ತಂದಿರುವ ಡಾ. ಸಂತೋಷ ಹಾನಗಲ್ಲ ಅವರು ಅಭಿನಂದಾರ್ಹರು. ಅವರು ವಿಷ್ಣುವರ್ಧನ್ ಅವರ ಶುದ್ಧ ಮನೋಧರ್ಮವನ್ನು ದಾಖಲೆಗಳ ಮೂಲಕ ಪ್ರತಿಬಿಂಬಿಸಿದ್ದು, ಈ ಪುಸ್ತಕ ಕೇವಲ ಒಂದು ದಾಖಲೆಯಲ್ಲ. ಅದು ಒಂದು ಯುಗದ ಸ್ಪಂದನೆ ಎ೦ದು ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿ ಎಂ ಶ್ರೀನಿವಾಸ ರಾಜ್ಯಾಧ್ಯಕ್ಷರು ವಿಷ್ಣು ಸೇನಾ ಸಮಿತಿ, ಬೆಂಗಳೂರು

₹160   ₹136

Buy Now
ಸಮರಕಂಡ | Samarakanda

1951 ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಡಿ.ವಿ. ಗುರುಪ್ರಸಾದ್, ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವಿಜ್ಞಾನ ಪದವಿ ಪಡೆದರು ಮತ್ತು ನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅವರು 1976 ರಲ್ಲಿ ಭಾರತೀಯ ಪೊಲೀಸ್ ಸೇವೆಗೆ (ಐಪಿಎಸ್) ಸೇರಿದರು ಮತ್ತು ಕರ್ನಾಟಕ ಕೇಡರ್ ಅನ್ನು ನೀಡಲಾಯಿತು. ಬೀದರ್, ಗುಲ್ಬರ್ಗ ಮತ್ತು ಕೊಡಗು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಗುಲ್ಬರ್ಗ ರೇಂಜ್‌ನ ಡಿಐಜಿ ಮತ್ತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅವರು ರಾಜ್ಯ ಗುಪ್ತಚರ ಇಲಾಖೆ ಮತ್ತು ರಾಜ್ಯ ಮಾಹಿತಿ ಇಲಾಖೆಯ ಮುಖ್ಯಸ್ಥರಾಗಿದ್ದರು. ಅವರು ರಾಜ್ಯ ಪೊಲೀಸ್‌ನಲ್ಲಿ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು ಮತ್ತು ಅತ್ಯಂತ ಪಾರದರ್ಶಕ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸುವ ಜವಾಬ್ದಾರಿಯನ್ನು ಹೊಂದಿದ್ದರು ಮತ್ತು ಅದು ಅವರಿಗೆ ಹೆಚ್ಚು ಪ್ರಶಸ್ತಿಗಳನ್ನು ತಂದಿತು. ಅವರು ಹೊಸದಿಲ್ಲಿಯ ಸಿಐಎಸ್‌ಎಫ್‌ನಲ್ಲಿಯೂ ತಮ್ಮ ಸೇವೆಯನ್ನು ಹೊಂದಿದ್ದರು. ಅವರು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದರು ಮತ್ತು ಬೃಹತ್ ಘಟಕವನ್ನು ನಾಲ್ಕು ಸ್ವತಂತ್ರ ಘಟಕಗಳಾಗಿ ವಿಭಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರು ಯು.ಕೆ.ಯಲ್ಲಿ ಪೊಲೀಸ್ ತರಬೇತಿಯ ಸಣ್ಣ ಅವಧಿಯನ್ನು ಹೊಂದಿದ್ದಾರೆ. ಅವರು ಕರ್ನಾಟಕ ಅಪರಾಧ ತನಿಖಾ ಇಲಾಖೆಯ ಮಹಾನಿರ್ದೇಶಕರಾಗಿ ಕೆಲಸ ಮಾಡಿದರು ಮತ್ತು 2011 ರಲ್ಲಿ ಡಿಜಿಪಿ ಹೋಮ್ ಗಾರ್ಡ್ಸ್, ಅಗ್ನಿಶಾಮಕ ಮತ್ತು ಸಿವಿಲ್ ಡಿಫೆನ್ಸ್ ಆಗಿ ನಿವೃತ್ತರಾದರು. ಅವರು ಭಾರತೀಯ ಪೊಲೀಸ್ ವ್ಯವಸ್ಥೆ ಮತ್ತು ಕುರಿತು ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ಸಂಬಂಧಿತ ವಿಷಯಗಳು, ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಪ್ರವಾಸ ಕಥನಗಳು. ಅವರು ಇಂಗ್ಲಿಷ್ ದಿನಪತ್ರಿಕೆ ಡೆಕ್ಕನ್ ಹೆರಾಲ್ಡ್‌ನ ಅಂಕಣಕಾರರೂ ಆಗಿದ್ದಾರೆ. ಅವರು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಹಲವಾರು ಪುಸ್ತಕಗಳ ಲೇಖಕರಾಗಿದ್ದಾರೆ.

₹200   ₹178

Buy Now
ಸಮರಕಂಡ ಇಬುಕ್ | Samarakanda Ebook

1951 ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಡಿ.ವಿ. ಗುರುಪ್ರಸಾದ್, ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವಿಜ್ಞಾನ ಪದವಿ ಪಡೆದರು ಮತ್ತು ನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅವರು 1976 ರಲ್ಲಿ ಭಾರತೀಯ ಪೊಲೀಸ್ ಸೇವೆಗೆ (ಐಪಿಎಸ್) ಸೇರಿದರು ಮತ್ತು ಕರ್ನಾಟಕ ಕೇಡರ್ ಅನ್ನು ನೀಡಲಾಯಿತು. ಬೀದರ್, ಗುಲ್ಬರ್ಗ ಮತ್ತು ಕೊಡಗು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಗುಲ್ಬರ್ಗ ರೇಂಜ್‌ನ ಡಿಐಜಿ ಮತ್ತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅವರು ರಾಜ್ಯ ಗುಪ್ತಚರ ಇಲಾಖೆ ಮತ್ತು ರಾಜ್ಯ ಮಾಹಿತಿ ಇಲಾಖೆಯ ಮುಖ್ಯಸ್ಥರಾಗಿದ್ದರು. ಅವರು ರಾಜ್ಯ ಪೊಲೀಸ್‌ನಲ್ಲಿ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು ಮತ್ತು ಅತ್ಯಂತ ಪಾರದರ್ಶಕ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸುವ ಜವಾಬ್ದಾರಿಯನ್ನು ಹೊಂದಿದ್ದರು ಮತ್ತು ಅದು ಅವರಿಗೆ ಹೆಚ್ಚು ಪ್ರಶಸ್ತಿಗಳನ್ನು ತಂದಿತು. ಅವರು ಹೊಸದಿಲ್ಲಿಯ ಸಿಐಎಸ್‌ಎಫ್‌ನಲ್ಲಿಯೂ ತಮ್ಮ ಸೇವೆಯನ್ನು ಹೊಂದಿದ್ದರು. ಅವರು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದರು ಮತ್ತು ಬೃಹತ್ ಘಟಕವನ್ನು ನಾಲ್ಕು ಸ್ವತಂತ್ರ ಘಟಕಗಳಾಗಿ ವಿಭಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರು ಯು.ಕೆ.ಯಲ್ಲಿ ಪೊಲೀಸ್ ತರಬೇತಿಯ ಸಣ್ಣ ಅವಧಿಯನ್ನು ಹೊಂದಿದ್ದಾರೆ. ಅವರು ಕರ್ನಾಟಕ ಅಪರಾಧ ತನಿಖಾ ಇಲಾಖೆಯ ಮಹಾನಿರ್ದೇಶಕರಾಗಿ ಕೆಲಸ ಮಾಡಿದರು ಮತ್ತು 2011 ರಲ್ಲಿ ಡಿಜಿಪಿ ಹೋಮ್ ಗಾರ್ಡ್ಸ್, ಅಗ್ನಿಶಾಮಕ ಮತ್ತು ಸಿವಿಲ್ ಡಿಫೆನ್ಸ್ ಆಗಿ ನಿವೃತ್ತರಾದರು. ಅವರು ಭಾರತೀಯ ಪೊಲೀಸ್ ವ್ಯವಸ್ಥೆ ಮತ್ತು ಕುರಿತು ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ಸಂಬಂಧಿತ ವಿಷಯಗಳು, ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಪ್ರವಾಸ ಕಥನಗಳು. ಅವರು ಇಂಗ್ಲಿಷ್ ದಿನಪತ್ರಿಕೆ ಡೆಕ್ಕನ್ ಹೆರಾಲ್ಡ್‌ನ ಅಂಕಣಕಾರರೂ ಆಗಿದ್ದಾರೆ. ಅವರು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಹಲವಾರು ಪುಸ್ತಕಗಳ ಲೇಖಕರಾಗಿದ್ದಾರೆ.

₹200   ₹100

Buy Now
ಸಹಜ ಜೀವನ | Sahaja Jeevanaa

ಆರೋಗ್ಯಪೂರ್ಣ ದೀರ್ಘಾಯುಷ್ಯದ ಬಯಕೆ ನಿಮಗಿದೆಯೇ? ಪ್ರಾಣಾಯಾಮ, ಯೋಗಾಸನಗಳನ್ನು ಮನೆಯಲ್ಲಿಯೇ ಮಾಡುವುದು ಹೇಗೆ ಎಂದು ತಿಳಿಯಬೇಕೆ? ಯಾವುದೇ ತರಗತಿಗಳಿಗೆ ಅಥವಾ ಶಿಬಿರಗಳಿಗೆ ಹೋಗದೆ ಧ್ಯಾನವನ್ನು ಮನೆಯಲ್ಲಿಯೇ ಅಭ್ಯಾಸ ಮಾಡಲು ಸರಳಸೂತ್ರಗಳು ಬೇಕೆ? ಯಾವ ರೀತಿಯ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿಸುತ್ತದೆ ಎಂದು ತಿಳಿದುಕೊಳ್ಳಬೇಕೆ? ಉತ್ತಮ ಆರೋಗ್ಯಕ್ಕಾಗಿ ನೆಮ್ಮದಿ ಮತ್ತು ಮನಃಶಾಂತಿ ಎಷ್ಟು ಮುಖ್ಯ ಮತ್ತು ಅದಕ್ಕಾಗಿ ಯಾವೆಲ್ಲಾ ಜೀವನ ಸಿದ್ಧಾಂತಗಳನ್ನು ಮತ್ತು ಜೀವನಶೈಲಿಯನ್ನು ರೂಡಿಸಿಕೊಳ್ಳಬೇಕು ಎನ್ನುವ ಪ್ರಶ್ನೆಗಳಿಗೆ ಉತ್ತರ ಬೇಕಿದೆಯೇ? ಹಾಗಿದ್ದಲ್ಲಿ, ನಿಮ್ಮ ಈ ಎಲ್ಲಾ ಪ್ರಶ್ನೆಗಳಿಗೆ ಮತ್ತು ಬಯಕೆಗಳಿಗೆ "ಸಹಜ ಜೀವನ"ದಲ್ಲಿ ಉತ್ತರಗಳಿವೆ, ಸುಲಭ ಮಾರ್ಗೋಪಾಯಗಳಿವೆ. ತಮ್ಮ ಹಲವಾರು ವರ್ಷಗಳ ಪ್ರಯೋಗ, ಅಭ್ಯಾಸ, ಓದು, ಅಧ್ಯಯನಗಳ ಸ್ವಾನುಭವದಿಂದ, ವೈಚಾರಿಕ ಚಿಂತನೆಗಳನ್ನಾಧರಿಸಿ ಮತ್ತು ಇತ್ತೀಚಿನ ವೈಜ್ಞಾನಿಕ ಸಂಶೋಧನೆಗಳ ಅರಿವಿನ ಬೆಳಕಿನಲ್ಲಿ ಲೇಖಕ ಮತ್ತು ರಾಜಕಾರಣಿ ರವಿ ಕೃಷ್ಣಾರೆಡ್ಡಿ ಸರಳಗನ್ನಡದಲ್ಲಿ ಬರೆದಿರುವ ಕೈಪಿಡಿ - "ಸಹಜ ಜೀವನ".

₹160   ₹136

Buy Now
ಸಹಭಾಷಿಕರ ಕನ್ನಡ ಪ್ರೇಮ | Sahabhashikara Kannada Prema

ಸಕಲ ಭಾಷಾಮಯೀ ಸರಸ್ವತಿ ಸರ್ವಭಾಷಾಮಯೀ ಸರಸ್ವತೀ ಎನ್ನುವ ಮಾತಿದೆ. ಇದೇ ಸಂದರ್ಭದಲ್ಲಿ ಕನ್ನಡ ಸಾರಸ್ವತ ಲೋಕಕ್ಕೆ ನಾಡು ನುಡಿಗಳ ಜಗತ್ತಿಗೆ ತಮ್ಮ ಮನೆಯ, ಕುಟುಂಬದ ಭಾಷೆ ಬೇರೆ ಆಗಿದ್ದರೂ ಕನ್ನಡಕ್ಕೆ ಅನೇಕರು ದಣಿವರಿಯದೆ ಜೀವ ತೇಯ್ದಿದ್ದಾರೆ. ಅಂಥ ೧೦೧ ಮಹಾನುಭಾವರ ಬಗ್ಗೆ ರಚಿಸಿರುವ ಕೃತಿಯೇ ಸಹಭಾಷಿಕರ ಕನ್ನಡ ಪ್ರೇಮ. ‌ ಇಲ್ಲಿ ಯಾವುದೂ, ಯಾರೂ ಅನ್ಯರಲ್ಲ, ಎಲ್ಲವೂ ಸಹಭಾಷೆಗಳೇ, ಎಲ್ಲರೂ ಸಹಭಾಷಿಕರೇ…

₹400   ₹340

Buy Now
ಸಹಭಾಷಿಕರ ಕನ್ನಡ ಪ್ರೇಮ ಇಬುಕ್ | Sahabhashikara Kannada Prema Ebook

ಸಕಲ ಭಾಷಾಮಯೀ ಸರಸ್ವತಿ ಸರ್ವಭಾಷಾಮಯೀ ಸರಸ್ವತೀ ಎನ್ನುವ ಮಾತಿದೆ.

₹400   ₹200

Buy Now
ಸುಪಾರಿ ಸ್ವಾಮಿ ಮತ್ತು ಸಕೀನಾ | Supari swami mattu sakeena

ಕಥೆ ಕುರಿತಾಗಿ ಬರೆದ ಓ ಹೆನ್ರಿಯ ಈ ಮಾತು ನನಗೆ ತುಂಬಾ ಇಷ್ಟ "I will give you the whole secret to short story writing. Here it is. Rule 01-right stories that please yourself. There is no rule 02", ಓರ್ವ ಕಥೆಗಾರನಾಗಿ ನಾನು ಮಾಡಿದ್ದಾದರೂ ಏನು? ಇಷ್ಟೇ, ಹೆನ್ರಿ ಹೇಳಿದಷ್ಟೇ.

₹140   ₹119

Buy Now
ಸುಪ್ತ ಸಾಗರದಾಚೆ | Supta Saagaradache

ಆಸ್ಟ್ರೇಲಿಯಾದ ಎಲ್ಲಾ ವೈರುಧ್ಯಗಳನ್ನೂ ಕಟ್ಟಿಕೊಡುವ ಈ ಪ್ರವಾಸ ಕಥನ ಓದುಗರನ್ನು ನೇರವಾಗಿ ಆಸ್ಟ್ರೇಲಿಯಾದ ಹೃದಯಕ್ಕೆ ಕರೆದೊಯ್ದು ಪರಿಚಯ ಮಾಡಿಕೊಡುತ್ತದೆ.

₹200   ₹170

Buy Now
ಸೋಲೆಂಬ ಗೆಲುವು | Solemba Geluvu

ಕನ್ನಡದ ಪ್ರತಿಭಾಶಾಲಿ ಲೇಖಕಿ, ಅಧ್ಯಾಪಕರಾದ ದೀಪಾ ಹಿರೇಗುತ್ತಿ ಅವರು ಬರೆದಿರುವ ವ್ಯಕ್ತಿತ್ವ ವಿಕಸನದ ಬರಹದ ಪುಸ್ತಕ ಇದಾಗಿದೆ. ಜೀವನದಲ್ಲಿ ಸೋಲು, ಗೆಲುವು ಸಹಜ. ಗೆಲುವಿನಿಂದ ನಾವು ಪಾಠ ಕಲಿಯಲು ಸಾಧ್ಯವಿಲ್ಲ. ಆದರೆ ಸೋಲು ನಮಗೆ ಪಾಠ ಕಲಿಸುತ್ತೆ. ಅದಕ್ಕೇ ಲೇಖಕರು ಇಲ್ಲಿ ‘ಸೋಲೆಂಬ ಗೆಲುವು’ ಎಂಬ ಹೆಸರನ್ನು ಪುಸ್ತಕಕ್ಕೆ ಇಟ್ಟಿದ್ದಾರೆ. ಹಲವು ಸಾಧಕರ ಹಿಂದೆ ನೋವು, ಅಪಮಾನ, ತಾತ್ಸಾರ, ನಿಂದನೆಗಳು ಇರುತ್ತವೆ. ಆದರೆ ಇದೆಲ್ಲವನ್ನು ಮೆಟ್ಟಿ ನಿಂತು ಛಲ ಬಿಡದೆ ತನ್ನ ಗುರಿ ಸಾಧನೆಗಾಗಿ ಮುನ್ನುಗ್ಗುವವನೇ ನಿಜವಾದ ಸಾಧಕ ಆಗುತ್ತಾನೆ ಎಂಬ ಗುಣಾಂಶ ಈ ಪುಸ್ತಕದಲ್ಲಿದೆ. ಅಂತಹ ಮಹಾನ್ ಸಾಧಕರ ಜೀವನ ಚಿತ್ರಣ ಇಲ್ಲಿದೆ. ಇವರೆಲ್ಲರೂ ಪುಸ್ತಕ ಓದುವವರಿಗೆ ಸ್ಫೂರ್ತಿ, ಪ್ರೇರಣೆ ನೀಡುತ್ತಾರೆ.

₹150   ₹120

Buy Now
ಸೋಲೆಂಬ ಗೆಲುವು ಇಬುಕ್ | Solemba Geluvu ebook

ಕನ್ನಡದ ಪ್ರತಿಭಾಶಾಲಿ ಲೇಖಕಿ, ಅಧ್ಯಾಪಕರಾದ ದೀಪಾ ಹಿರೇಗುತ್ತಿ ಅವರು ಬರೆದಿರುವ ವ್ಯಕ್ತಿತ್ವ ವಿಕಸನದ ಬರಹದ ಪುಸ್ತಕ ಇದಾಗಿದೆ. ಜೀವನದಲ್ಲಿ ಸೋಲು, ಗೆಲುವು ಸಹಜ. ಗೆಲುವಿನಿಂದ ನಾವು ಪಾಠ ಕಲಿಯಲು ಸಾಧ್ಯವಿಲ್ಲ. ಆದರೆ ಸೋಲು ನಮಗೆ ಪಾಠ ಕಲಿಸುತ್ತೆ. ಅದಕ್ಕೇ ಲೇಖಕರು ಇಲ್ಲಿ ‘ಸೋಲೆಂಬ ಗೆಲುವು’ ಎಂಬ ಹೆಸರನ್ನು ಪುಸ್ತಕಕ್ಕೆ ಇಟ್ಟಿದ್ದಾರೆ. ಹಲವು ಸಾಧಕರ ಹಿಂದೆ ನೋವು, ಅಪಮಾನ, ತಾತ್ಸಾರ, ನಿಂದನೆಗಳು ಇರುತ್ತವೆ. ಆದರೆ ಇದೆಲ್ಲವನ್ನು ಮೆಟ್ಟಿ ನಿಂತು ಛಲ ಬಿಡದೆ ತನ್ನ ಗುರಿ ಸಾಧನೆಗಾಗಿ ಮುನ್ನುಗ್ಗುವವನೇ ನಿಜವಾದ ಸಾಧಕ ಆಗುತ್ತಾನೆ ಎಂಬ ಗುಣಾಂಶ ಈ ಪುಸ್ತಕದಲ್ಲಿದೆ. ಅಂತಹ ಮಹಾನ್ ಸಾಧಕರ ಜೀವನ ಚಿತ್ರಣ ಇಲ್ಲಿದೆ. ಇವರೆಲ್ಲರೂ ಪುಸ್ತಕ ಓದುವವರಿಗೆ ಸ್ಫೂರ್ತಿ, ಪ್ರೇರಣೆ ನೀಡುತ್ತಾರೆ.

₹150   ₹75

Buy Now
ಹಕ್ಕಿ ಅಟೆಂಡೆನ್ಸ್ | Hakki Attendence

ಬರ್ಡ್ ವಾಚಿಂಗ್ ಅನ್ನೋದು ತುಂಬಾ ತಾಳ್ಮೆ ಬೇಡುವ ಕೆಲಸ. ಅಂಥಹ ತಾಳ್ಮೆಯನ್ನು ಇಡೀ ಪುಸ್ತಕದುದ್ದಕ್ಕೂ ಸೆರೆಹಿಡಿದಿರುವ ಹಕ್ಕಿಗಳ ಮುದ್ದಾದ ಫೋಟೋಗಳಲ್ಲಿ ಕಾಣಬಹುದು.ಜೊತೆಗೆ ಆ ಫೋಟೊಗಳೊಂದಿಗೆ ನಡೆಸಿರುವಆತ್ಮೀಯ ಸಂಭಾಷಣೆಗಳಿವೆ. ಆ ಸಂಭಾಷಣೆಗಳಲ್ಲಿ ನಮ್ಮೆಲ್ಲರ ವಿದ್ಯಾರ್ಥಿ ಜೀವನವನ್ನು ನೆನಪಿಸುವ ಶಕ್ತಿ ಇದೆ.

₹595   ₹476

Buy Now