#
Satish Venkatasubbu, a seasoned tech professional with a rich career spanning two decades in global software companies, has found solace and familiarity by choosing his hometown of Mysore as his permanent residence. Satish’s quest for knowledge led him to pursue a cyberlaw course at the prestigious National Law School in Bangalore, culminating in the attainment of an Advocate license specializing in cyberlaw.
ಹದಿನೆಂಟು ದಿನದ ಯುದ್ಧ. ಹದಿನೆಂಟು ಅಕ್ಷೌಹಿಣೀ ಸೈನ್ಯ. ಅತಿರಥ-ಮಹಾರಥರ ಘನೋಪಸ್ಥಿತಿ. ಐದು ತಲೆಮಾರಿನ ಯೋಧರ ಸಮ್ಮಿಲನ. ಒಟ್ಟು ಸತ್ತವರು ಅರವತ್ತೆರಡು ಕೋಟಿ ಜನ. ಆನೆ-ಕುದುರೆಗಳ ಲೆಕ್ಕವಿಲ್ಲ. ಕೊನೆಗೆ ಉಳಿದಿದ್ದು ಬೆರಳೆಣಿಕೆಯ ಜನರಷ್ಟೇ. ಇದು ಕುರುಕ್ಷೇತ್ರದ ಯುದ್ಧದ ಕಥೆ. ಧರ್ಮಕ್ಷೇತ್ರದಲ್ಲಿ ಧರ್ಮರಕ್ಷೆಗಾಗಿ ನಡೆದ ಈ ಮಹಾಯುದ್ಧ ವಾಸ್ತವವಾಗಿ ನಡೆದಿದ್ದು ಹೇಗೆ? ಮಹಾಭಾರತ ವಿವರಿಸುವ ಮಾಹಿತಿಗಳ ಸಂಗಮವೇ ಈ ಕೃತಿ.
nil
ಒಂದು ಉದ್ಯಾನದ ಹಲವಾರು ಹೂಗಳ ನಡುವೆ ನಮ್ಮ ಕಣ್ಣಿಗೆ ಸುಂದರವಾಗಿ ಕಂಡ ಹೂವನ್ನು ಮೆಚ್ಚುವುದು, ಅದರ ಗಿಡಕ್ಕೆ ನೀರುಣಿಸುವುದು-ಪ್ರೇಮ. ಆ ಹೂವನ್ನು ಕಿತ್ತು ನಮ್ಮ ಬಳಿ ಇಟ್ಟುಕೊಳ್ಳುವುದು-ಕಾಮ. ಅದೇ ಉದ್ಯಾನದಲ್ಲಿ ಎಲ್ಲ ಹೂಗಳೂ ಸುಂದರವಾಗಿ ಕಂಡು, ಎಲ್ಲವನ್ನೂ ಮೆಚ್ಚಿ, ಎಲ್ಲ ಹೂಗಿಡಗಳಿಗೂ ನೀರುಣಿಸುವುದು-ಅಧ್ಯಾತ್ಮ.
ಗೋಪಾಲಕೃಷ್ಣ ಕುಂಟಿನಿ
ಕನ್ನಡದಲ್ಲಿ ಹಲವು ಮಹನೀಯರು ವೃತ್ತಿ ಜೀವನದ ನೆನಪುಗಳನ್ನು ಬರೆದಿದ್ದಾರೆ. ಅವುಗಳ ಪೈಕಿ ನನಗೆ ಥಟ್ಟನೆ ನೆನಪಾಗುವುದು ಎಂ.ಆರ್. ಶ್ರೀನಿವಾಸಮೂರ್ತಿಯವರ `ರಂಗಣ್ಣನ ಕನಸಿನ ದಿನಗಳು', ನವರತ್ನರಾಮ್ ಬರೆದ `ಕೆಲವು ನೆನಪುಗಳು' ಮತ್ತು ಆಕಾಶವಾಣಿಯಲ್ಲಿ ಕಳೆದ `ಕಲಕತ್ತಾ ದಿನಗಳ' ಕುರಿತು ಜ್ಯೋತ್ಸ್ನಾ ಕಾಮತ್ ಕೃತಿ. ಇವೆಲ್ಲ ಸಾಹಿತ್ಯದ ವಿಶಿಷ್ಟ ಪ್ರಕಾರಗಳು. ದಿನದ ಹತ್ತು ಹನ್ನೆರಡು ಗಂಟೆಗಳನ್ನು ಮನೆಯಿಂದ ಹೊರಗೆ ಕಳೆಯುವಂತೆ ಮಾಡುವ ವೃತ್ತಿ ನಮಗೆ ಹೊಸ ಸವಾಲುಗಳನ್ನು ಒಡ್ಡುತ್ತದೆ, ಹೊಸ ಹೊಸ ಅನುಭವ ಮತ್ತು ಒಡನಾಟಗಳನ್ನು ಒದಗುವಂತೆ ಮಾಡುತ್ತದೆ. ಸಾಹಿತ್ಯದ ಮೂಲದ್ರವ್ಯ ಇದೇ ಆಗಿರುವುದರಿಂದ, ಈ ನೆನಪುಗಳಲ್ಲಿ ಕಥನದ ಕುತೂಹಲ ಮತ್ತು ಬದುಕಿನ ಆರ್ದ್ರತೆ ಎರಡೂ ಬೆರೆತಿರುತ್ತದೆ.ಪೂರ್ಣಿಮಾ ಮಾಳಗಿಮನಿ ಅವರ ವೃತ್ತಿ ಜೀವನ ಅವರನ್ನು ವಿಶಿಷ್ಟವಾಗಿ ರೂಪಿಸಿರುವ ಚಿತ್ರಣ ಈ ಕೃತಿಯಲ್ಲಿದೆ. ಪುಟ್ಟ ಹಳ್ಳಿಯಿಂದ ಬಂದ ಪೂರ್ಣಿಮಾ ನವೋದಯ ಶಾಲೆಯಲ್ಲಿ ಓದಿ, ಆಕಸ್ಮಿಕವಾಗಿ ವಾಯುಸೇನೆ ಸೇರಿಕೊಂಡು, ತನಗೆ ಅಪರಿಚಿತವಾದ ಜಗತ್ತಿನಲ್ಲಿ ಅಡ್ಡಾಡಿದ ಪ್ರಸಂಗಗಳು ಈ ನೆನಪುಗಳ ಬುತ್ತಿಯಲ್ಲಿವೆ. ತಮಾಷೆ, ಭಾವುಕತೆ, ದಿಟ್ಟತನ ಮತ್ತು ಬೆರಗು ಹಾಸುಹೊಕ್ಕಾಗಿರುವ ಈ ಕಥನದಲ್ಲಿ ನಡೆದುಬಂದ ದಾರಿಯ ಹೆಜ್ಜೆಗುರುತುಗಳಿವೆ. ಸಹಜ ಕುತೂಹಲದಿಂದ ಓದಿಸಿಕೊಳ್ಳುವ ಕೃತಿ ಇದು. – ಜೋಗಿ
ಸುರೇಶ್ ಪದ್ಮನಾಭನ್
ಕೇಶವಮೂರ್ತಿ ಆರ್
Showing 1 to 30 of 73 results