• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Authors

Languages

Book Type

Clear All
Filter
ಅಗೆಲು | Agelu

ಎನ್.ಸಿ. ಮಹೇಶ್ರವರ ಮೂರನೆಯ ಕಥಾಸಂಕಲನ ಅಗೆಲು. ಪ್ರಾರಂಭದ ಕಥೆಗಳ ಆಕ್ರೋಶವನ್ನು ಕಳೆದುಕೊಂಡು ಬದುಕನ್ನು ಸಾವಧಾನದಿಂದ ನೋಡುವ ಮನಸ್ಥಿತಿಯನ್ನು ರೂಢಿಸಿಕೊಂಡಿರುವ ಬಗೆ ಈ ಕಥೆಗಳಲ್ಲಿ ನಿಚ್ಚಳವಾಗಿ ಕಾಣಬರುತ್ತದೆ. ಇವರ ಹಲವಾರು ಕತೆಗಳು ಪ್ರಜಾವಾಣಿ, ಬುಕ್‌ ಬ್ರಹ್ಮ, ಮಯೂರ, ಅಕ್ಷರ ಸಂಗಾತ ಮುಂತಾದ ಕನ್ನಡದ ಪ್ರಮುಖ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರಕ್ಕೆ ಪಾತ್ರವಾಗಿರುವಂತದ್ದು. ಇಲ್ಲಿನ ಬಹುಪಾಲು ಕಥೆಗಳು ಪ್ರಸ್ತುತ ಸಂದರ್ಭದ ಹಲವಾರು ವಿಚಾರಗಳಿಗೆ ಮುಖಾಮುಖಿಯಾಗುತ್ತವೆ. ಅದನ್ನು ಲೇಖಕ ಕಂಡಿರಿಸಿರುವ ಕ್ರಮ ಅತ್ಯಂತ ಪ್ರಾಮಾಣಿಕವಾಗಿದೆ. ಶಿಕ್ಷಣ ರಂಗದಲ್ಲಿರುವ ದಂಧೆ, ಒಂದು ವರ್ಗವನ್ನು ಹತ್ತಿಕ್ಕಲಾಗದೆ ತತ್ತರಿಸುತ್ತಿರುವ ಮತ್ತೊಂದು ವರ್ಗದವರ ಹಪಾಹಪಿ, ಸ್ತ್ರೀವಾದ, ದೈವದ ಕುರಿತ ನಂಬಿಕೆ, ಕೋಮುವಾದದ ಸ್ವರೂಪ, ಸಂವಿಧಾನ ಇಂದು ಹಲವರ ಮನಸ್ಸಿನಲ್ಲಿ ಅರಳಿಕೊಳ್ಳುತ್ತಿರುವ ಬಗೆ ಇಲ್ಲಿನ ಕಥೆಗಳ ವಸ್ತುವಾಗಿದೆ. "ವರ್ತಮಾನದಲ್ಲಿನ ಮಾಗುವಿಕೆಯ ಪ್ರಜ್ಞೆ ಕೂಡಾ ಅಂತಿಮವಾದುದಲ್ಲ" ಎಂಬ ಅರಿವಿನ ಎಚ್ಚರದಲ್ಲಿ ಬರೆಯುವ ಮಹೇಶ್ ಕನ್ನಡದ ಭರವಸೆಯ ಕತೆಗಾರ,

₹195   ₹174

ಅಣು | Anu

nil

₹120   ₹107

ಅಂತರಂಗದ ಸ್ವಗತ | Antarangada swagata

ಒಂದು ಕಾಲಘಟ್ಟದ ಐತಿಹಾಸಿಕ ಘಟನೆಗಳು. ಸಾಂಸ್ಕೃತಿಕ ಸಂಗತಿಗಳು. ಅಂಥ ಘಟನೆಗಳಿಗೆ ಲೇಖಕರ ಪ್ರತಿಕ್ರಿಯೆಗಳು ಮತ್ತು ಬರೆಯುವ ಕಾಲದಲ್ಲಿ ಉಂಟಾದ ಪಲ್ಲಟಗಳ ತೌಲನಿಕ ಚಿಂತನೆಗಳೂ ಆತ್ಮಕಥನದಲ್ಲಿ ಮುಖ್ಯವಾಗುತ್ತವೆ. ಈ ರೀತಿಯ ದಾಖಲೆಗಳು ಮುಂದಿನ ತಲೆಮಾರಿನ ಓದುಗರಿಗೆ ಒಂದು ಕೊಡುಗೆಯಾಗುತ್ತವೆ. ಹೇಳುವ ರೀತಿಯಲ್ಲಿ ಅಥವಾ ರಚನಾ ತಂತ್ರಗಳಲ್ಲಿ ಲೇಖಕರಿಂದ ಲೇಖಕರಿಗೆ ವ್ಯತ್ಯಾಸವಾಗುತ್ತ ಹೋಗಬಹುದು. ಆದರೆ ಮೂಲತತ್ವ ಎಲ್ಲದಕ್ಕೂ ಒಂದೇ. ಯಶಸ್ಸಿನ ಹಾದಿಯಲ್ಲಿ ಎದುರಿಸಿದ ಕಷ್ಟಗಳಿರಬಹುದು. ಪಡೆದ ಯಶಸ್ಸಿನ ಫಲವಾಗಿ ಸವಿದ ಸಂತೋಷದ ಕ್ಷಣಗಳಿರಬಹುದು. ಏನಿದ್ದರೂ ಹೇಳುವ ವಿಷಯಗಳು ಓದುಗರಿಗೆ ಸ್ಫೂರ್ತಿದಾಯಕವಾಗಿರಬೇಕು, ಮುಂದಿನ ತಲೆಮಾರಿನ ಮಂದಿಗೆ ಪ್ರೇರಣೆ ನೀಡುವಂತಿರಬೇಕು ಅನ್ನುವುದರಲ್ಲಿ ಎರಡು ಮಾತಿಲ್ಲ. ಆತ್ಮಕಥನದಲ್ಲಿ ಕಲ್ಪನೆಯ ಕಟ್ಟು ಕಥೆಗಳಿಗೆ ಅವಕಾಶವಿಲ್ಲ. ವಾಸ್ತವದಲ್ಲಿ ಏನು ನಡೆಯಿತು ಅನ್ನುವುದಷ್ಟೇ ಇಲ್ಲಿ ಮುಖ್ಯ. ಉದ್ಯೋಗ, ಗೃಹಕೃತ್ಯ, ಸಂಸಾರ ನಿರ್ವಹಣೆಯ ಹೊಣೆಗಳ ನಡುವೆಯೂ ಬರಹಗಾರ್ತಿಯಾಗಿ ಓರ್ವ ಮಹಿಳೆ ಯಶಸ್ವಿಯಾಗಬಲ್ಲಳು ಎಂಬುದಕ್ಕೆ 'ಅಂತರಂಗದ ಸ್ವಗತ' ಕೃತಿಯೇ ಸಾಕ್ಷಿ.

₹195   ₹174

ಅತಿಮಾನುಷ | Atimaanusha

ತಾನೊಬ್ಬ ಆಗೋಸ್ಟಿಕ್. ಹಾಗೆಂದುಕೊಂಡ ಪರ್ವನ ಮನಸು ಗೊಂದಲದ ಗೂಡು. ಆಜೇಯತಾವಾದಿ ಎನ್ನುತ್ತಾರಂತೆ ಕನ್ನಡದಲ್ಲಿ ದೇವರಲ್ಲಿ ಅತಿಯಾಗಿ ವಿಶ್ವಾಸವಿರದ, ನಾಸ್ತಿಕತೆಯನ್ನೂ ಒಪ್ಪದ ಮನಸ್ಥಿತಿ ತನ್ನದು. ದೇವರು ಇರಲಿ, ಇರದಿರಲಿ ತನ್ನ ಬದುಕಿಗೆ ವ್ಯತ್ಯಾಸವೇನೂ ಆಗದು ಎನ್ನುವ ತರ್ಕ. ಅವನಿದ್ದರೆ ಅವನ ಪಾಡಿಗಿರಲಿ, ನಾನು ನನ್ನ ಪಾಡಿಗೆ ಎಂದುಕೊಂಡವನ ಬದುಕಲ್ಲಿ ಏನು ನಡೆಯುತ್ತಿದೆ ಎನ್ನುವುದು ಅರ್ಥವಾಗದ ಸ್ಥಿತಿ ಅವನಿಗೆ. ಪರಮ ಆಸ್ತಿಕರಾದ ಹೆತ್ತವರು ತನ್ನ ತರ್ಕವನ್ನು ಅಲ್ಲಗಳೆಯುತ್ತಿದ್ದಾರೆ. ಗೆಳೆಯನಿಗೆ ವಿಷಯದ ಗಂಭೀರತೆಯನ್ನು ವಿವರಿಸುವುದು ಕಷ್ಟ. ಚಿಕ್ಕಪ್ಪನಿಗೆ ವಿವರಿಸಿ ಅರ್ಥ ಮಾಡಿಸೋಣ ವೆಂದರೆ ಅವನಿನ್ನೂ ಆಘಾತದಿಂದ ಚೇತರಿಸಿಕೊಂಡಿಲ್ಲ. ಎಲ್ಲಕ್ಕಿಂತ ಅಚ್ಚರಿಯೆಂದರೆ ಸ್ಮಶಾನದಲ್ಲಿ ಕೊನೆಯವರೆಗೂ ತನ್ನ ಜೊತೆಗೇ ಇದ್ದ ಹೆಂಡತಿಗೆ ಏನೆಂದರೇ ಏನೂ ನೆನಪಿಲ್ಲ. ಆಕೆ ಕೂಡ ಲೋಕಿಯ ಸಾವು ಸಹಜ ಸಾವು ಎನ್ನುತ್ತಾಳೆ. ಅವನ ಸಾವಿಗೆ ಮಾನಸಿಕ ಕಾಯಿಲೆಯೇ ಕಾರಣ ಎಂದು ವಾದಿಸುತ್ತಾಳೆ. ಊಹುಂ..!! ಖಂಡಿತ ಇಲ್ಲ, ಅದು ಸಹಜ ಸಾವಲ್ಲ. ಮೇಲ್ನೋಟಕ್ಕೆ ಸಹವೆನ್ನಿಸಿದರೂ ಅಲ್ಲೊಂದಿಷ್ಟು ಅನುಮಾನಗಳಿಗೆ ಅವಕಾಶವಿದೆ. ಅಲ್ಲೊಂದು ವಿಲಕ್ಷಣತೆಯಿದೆ. ಯಾರ ಗಮನಕ್ಕೂ ಬಾರದ, ಒಂದೇನೋ ಅವ್ಯಕ್ತ ಅಸಹಜತೆಯಿದೆ. ಅದು ನಿಗೂಢ..!! ಅದು ವಿಕ್ಷಿಪ್ತ...!! ಅದು ಮನುಷ್ಯ ಸಹಜವಾದ ಸಾವಲ್ಲ, ಅದು ಅತಿಮಾನುಷ....!! ISBN

₹250   ₹223

ಆತ್ಮವಿಶ್ವಾಸದ ಅರಿವು | Athmavishvasadha arivu

ಸಂಪಟೂರು ವಿಶ್ವನಾಥ್

₹70   ₹62

ಆಪತ್ ಸ್ಥಿತಿಯ ಆಲಾಪಗಳು | Apath sthithiya alapagalu

ಅಡಗೂರು ಎಚ್. ವಿಶ್ವನಾಥ್

₹100   ₹89

ಇಂಗ್ಲಿಷ್ ಮೂಲಕ ಕನ್ನಡ ಕಲಿಯಿರಿ | English mulaka kannada kaliyiri

ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ

₹195   ₹174

ಇದು ಕತೆಯಲ್ಲ ಜೀವನ | Idu Katheyalla Jeevana

ಕನ್ನಡದ ಮಹತ್ವದ ಹಿರಿಯ ಲೇಖಕಿಯರಲ್ಲೊಬ್ಬರಾದ ವಸುಮತಿ ಉಡುಪರವರ ಕಥಾಜಗತ್ತು ವಿಶಿಷ್ಟವಾದದ್ದು. ಸಂದುಹೋಗುತ್ತಿರುವ ಒಂದು ಕಾಲಘಟ್ಟದ ತಲೆಮಾರಿನ ಚಿತ್ರಣವನ್ನು ಕಟ್ಟಿಕೊಡುವ ವಸುಮತಿ ಉಡುಪರವರು ಅಪ್ಪಟ ಕಥೆಗಾರ್ತಿ, ನೇರವಾಗಿ, ಸಹಜ ಹದದಲ್ಲಿ ಕಂಡಿರಿಸಿರುವ ಇವರ ಪಾತ್ರಗಳು ಹೆಣ್ಣುಮನದ ನಾನಾಭಾವಗಳ ರಂಗಶಾಲೆ, ಪಾತ್ರಗಳ ದಿಟ್ಟತನ, ನೇರವಂತಿಕೆ, ಬದುಕನೆದುರಿಸುವ ಛಲ, ತಾಕಲಾಟಗಳ ನಡುವೆಯೂ ಗುರಿಯನ್ನು ಕಂಡುಕೊಳ್ಳುವ ಆಶಾವಾದ ಇಲ್ಲಿ ಅಸಾಧಾರಣ ರೀತಿಯಲ್ಲಿ ಅಭಿವ್ಯಕ್ತಗೊಂಡಿದೆ. ಬದುಕಿನ ಹತ್ತು ಹಲವಾರು ಹಳವಂಡಗಳಲ್ಲಿ, ಬಾಳಿನ ಕುಲುಮೆಯಲ್ಲಿ ಬೆಂದು ನೊಂದರೂ ತಮ್ಮದೇ ರೀತಿಯಲ್ಲಿ ಪ್ರತಿರೋಧಿಸುತ್ತಾ, ಜೀವನದ ಕಟು ಸತ್ಯವನ್ನು ಅರಿಯುತ್ತಾ ಮಾನವೀಯ ಮೂರ್ತಿಗಳಾಗಿ ನಿಲ್ಲುವ ಇಲ್ಲಿನ ಹಲವಾರು ಪಾತ್ರಗಳ ಕಥೆ ಹೃದಯಸ್ಪರ್ಶಿಯಾಗಿ ಚಿತ್ರಿತಗೊಂಡಿದೆ.

₹130   ₹116