• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Authors

Languages

Book Type

Clear All
Filter
ಕಥಾಭರಣ | Kathabharana

ಬಹುತೇಕ ಹಳ್ಳಿಗಳಲ್ಲಿ ಸುಗ್ಗಿಹಬ್ಬ ಮಾಡುತ್ತಾರೆ. ಹೊಸ ಬೆಳೆ ಮನೆಗೆ ಬಂದ ತಕ್ಷಣ, ಅದರಲ್ಲಿ ಮೊದಲ ಭಾಗವಾಗಿ ತಮ್ಮ ಯೋಗ್ಯತೆಗೆ ತಕ್ಕಂತೆ ಒಂದಿಷ್ಟು ಧಾನ್ಯವನ್ನು ಊರ ದೇವರಿಗೆ ಎಲ್ಲರೂ ಅರ್ಪಿಸುತ್ತಾರೆ. ಬಡವ, ಬಲ್ಲಿದ, ಮೇಲು, ಕೀಳು ಇತ್ಯಾದಿಗಳ ಸೋಂಕಿಲ್ಲದೆ ಎಲ್ಲರೂ ಈ ದಾನ ಮಾಡುತ್ತಾರೆ. ಅವನ್ನೆಲ್ಲಾ ಸ್ವೀಕರಿಸಿದ ದೇವಸ್ಥಾನವು ಸುಗ್ಗಿಹಬ್ಬ ಹಮ್ಮಿಕೊಳ್ಳುತ್ತದೆ. ಊರವರೇ ನೀಡಿದ ಧಾನ್ಯಗಳನ್ನು ಬಳಸಿ ಊರವರೇ ಅಡಿಗೆ ತಯಾರಿಸಿ, ಎಲ್ಲರೂ ಊಟ ಮಾಡುತ್ತಾರೆ. ಈ ಊಟವು ಊರವರಿಗೆಲ್ಲಾ ಅತ್ಯಂತ ರುಚಿಯೆನ್ನಿಸುತ್ತದೆ.ಇಂತಹ ಸುಗ್ಗಿಹಬ್ಬದ ರುಚಿ ಈ ಕಥಾಸಂಕಲನಕ್ಕೆ ದಕ್ಕಿದೆ. ಕನ್ನಡ ಸಾಹಿತ್ಯಲೋಕದ ಸಾಕಷ್ಟು ಹೊಸ ಕತೆಗಾರರು ಮತ್ತು ಒಂದಿಷ್ಟು ಹಳಬರು ಈ ಸಂಕಲನಕ್ಕೆ ತಮ್ಮ ಕತೆಯನ್ನು ನೀಡಿದ್ದಾರೆ. ಸದ್ಯದ ಕನ್ನಡ ಲೋಕದ ಹೊಸ ಬರವಣಿಗೆಯ ಪಕ್ಷಿನೋಟವನ್ನು ಈ ಸಂಕಲನ ನೀಡುತ್ತದೆ. ಊರವರೆಲ್ಲರೂ ಒಂದಾದಾಗ ಮೂಡುವ ಸಹೃದಯತೆ, ಆತ್ಮೀಯತೆ ಮತ್ತು ಲವಲವಿಕೆಯೂ ಇಲ್ಲಿ ಕಾಣುತ್ತದೆ. ಇಂತಹ ಒಗ್ಗಟ್ಟಿನ ಕಾರ್ಯಗಳು ಸದ್ಯದ ಸಾಹಿತ್ಯದ ಲೋಕವನ್ನು ಜೀವಂತ ಉಳಿಸುವುದಕ್ಕೆ ಅವಶ್ಯ ಬೇಕಾದ ಲಸಿಕೆಯಾಗಿದೆ. ಕನ್ನಡ ಸಾಹಿತ್ಯ ಚರಿತ್ರೆಯ ಹಿರಿಯ ಮಹನೀಯರೆಲ್ಲರ ಪ್ರತಿಫಲನವೂ ಈ ಕತೆಗಳಲ್ಲಿ ಕಾಣುತ್ತದೆ. ಆ ನಿಟ್ಟಿನಿಂದ ಇದು ಪರಂಪರೆಯ ನೆಲದಲ್ಲಿ ಬೆಳೆದ ಹೊಸ ಬೆಳೆಯಾಗಿದೆ. ಊರ ದೇವಸ್ಥಾನವೂ ಒಂದಿಷ್ಟು ಹೊಲವನ್ನು ಹೊಂದಿದ್ದು, ಅದೂ ಕೊಯ್ದು ಮಾಡಿದ ಧಾನ್ಯದಲ್ಲಿ ಒಂದಿಷ್ಟು ಭಾಗವನ್ನು ಸುಗ್ಗಿಹಬ್ಬಕ್ಕೆ ದಾನ ಮಾಡುತ್ತದೆ. ಅದೇ ರೀತಿ ಈ ಸಂಕಲನವನ್ನು ಶ್ರದ್ಧೆಯಿಂದ ಸಂಪಾದಿಸಿದ ಅಜಿತ್ ಹರೀಶಿ ಮತ್ತು ವಿಠಲ್ ಶೆಣೈ ತಮ್ಮ ಕತೆಯನ್ನೂ ಇಲ್ಲಿ ಓದುಗರಿಗೆ ಕೊಟ್ಟಿದ್ದಾರೆ. ರುಚಿಯ ನಿರ್ಧಾರದಲ್ಲಿ ನಾಲಿಗೆಗಿಂತಲೂ ಮನಸ್ಸು ದೊಡ್ಡ ಪಾತ್ರವಹಿಸುತ್ತದೆ. ಎಲ್ಲರೂ ಒಗ್ಗಟ್ಟಾಗಿ ಸಂಭ್ರಮದಿಂದ ತಯಾರಿಸಿದ ಸುಗ್ಗಿಯೂಟ ರುಚಿಯಾಗಿರಲು ಮನಸ್ಸೇ ಮುಖ್ಯ ಕಾರಣ. ಆದರೆ ಪಕ್ಕದೂರಿನವರೂ ನಮ್ಮೂರಿನ ಸುಗ್ಗಿ ಊಟ ರುಚಿ ಎಂದರೆ ಆಗ ಆ ಪಾಕ ಮಹತ್ವ ಪಡೆದುಕೊಳ್ಳುತ್ತದೆ. ಅಂತಹ ದಾರಿಯಲ್ಲಿ ಇಲ್ಲಿನ ಹಲವು ಕತೆಗಳಿವೆ ಎನ್ನುವುದು ನನಗೆ ಭರವಸೆಯನ್ನು ಕೊಟ್ಟಿದೆ.

₹290   ₹218

ಕನಸು ಸೊಗಸು | Kanasu Sogasu

ಕನಸುಗಳನ್ನು ಶೃಂಗರಿಸುವ ಜರೂರನ್ನು ಕಾಪಾಡಿಕೊಳ್ಳುವುದು. ಸ್ತ್ರೀ ಸ್ವಾತಂತ್ರ್ಯ, ವೈಚಾರಿಕತೆಯನ್ನು ಮುಟ್ಟಲು ಕಾದಂಬರಿ ಮೇರೆ ಮೀರಿ ಪ್ರಯತ್ನಿಸಿದೆ ಮತ್ತು ಆ ಮೂಲಕ ಸರ್ವಾಂಗೀಣ ಬೆಳವಣಿಗೆ ಸಾಧ್ಯತೆಯನ್ನು ಸಾರಲು ಪರಿಕ್ರಮಿಸಿದೆ. ಎಲ್ಲಾ ತಾರತಮ್ಯವನ್ನು ತಿರಸ್ಕರಿಸಿ ಸಾಮಾಜಿಕ ಕಳಕಳಿಯ ಅಂಶವನ್ನು ಎತ್ತಿಹಿಡಿಯುವ ಮಾರ್ಗದಲ್ಲಿ ಸಾಗಿದೆ. ಲೇಖಕರೊಬ್ಬರ ಲೇಖನಿಯಲ್ಲಿ ಎಲ್ಲವೂ ಶುಭಂ ಆಗುವ ಸಂಭವವಿರುವುದರಿಂದ, ಕಾದಂಬರಿಯೂ ಸಹ ಆತಂಕ, ತಲ್ಲಣಗಳನ್ನು ಹೊತ್ತು ಕೊಂಡೇ, ಆದಷ್ಟೂ ಬದುಕಿನ ಸಹಜತೆಯನ್ನು ಕಾಯ್ದುಕೊಳ್ಳಲು ಯತ್ನಿಸಿದೆ. ಕಥೆಯಲ್ಲಿ ಹೆಚ್ಚು ಕಡಿಮೆ ಎಲ್ಲಾ ಪಾತ್ರಗಳಿಗೂ ಅವಕಾಶವಿದೆ. ಅಧ್ಯಾಯದ ಉಪಕತೆಗಳಲ್ಲಿ ಕನೆಕ್ಟಿವಿಟಿ ಇದೆ. ಒಟ್ಟು ಮುನ್ನೂರಕ್ಕೂ ಹೆಚ್ಚು ಪುಟಗಳ ಕಾದಂಬರಿ ಮೂವತ್ತು ಅಧ್ಯಾಯಗಳನ್ನು ಒಳಗೊಂಡಿದೆ. ಸಾದಾಸೀದವಾಗಿ ಯಾವುದೇ ಭಾರವಿಲ್ಲದೇ ಸರಳವಾಗಿ ಓದಿಸಿಕೊಳ್ಳುತ್ತದೆ. ಉದ್ವಿಗ್ನತೆ, ಒತ್ತಡದ ಸನ್ನಿವೇಶಗಳನ್ನು ಬರೆಯುವಾಗ ತೀರಾ ಒದ್ದಾಡದೆ, ನಿರುದ್ವಿಗ್ನವಾಗಿ ನಿರೂಪಿಸುತ್ತಾ ನೇರ ಮಾರ್ಗಕ್ಕೆ ತಂದು ಬಿಡುತ್ತಾರೆ. ಶೃಂಗಾರದ ಸಮಯ ತೀರಾ ಕಡಿಮೆಯಿವೆ. ಧಾರಾವಾಹಿಗಳಂತೆ ಅಸಹಜತೆಗಳಿಲ್ಲದೆ, ಕೃತಕ ಅಲಂಕಾರಗಳಿಲ್ಲದೆ, ನಿರಾಡಂಬರವಾಗಿ ವಿನ್ಯಾಸಿಸಿದ್ದಾರೆ. ಒಂದು ಸಿನೆಮಾವನ್ನು ಕುಟುಂಬ ಸಮೇತವಾಗಿ ನೋಡಬಹುದು ಅನ್ನುತ್ತಾರಲ್ಲ ಹಾಗೆ ಕನಸು ಸೊಗಸು ಎಲ್ಲಾ ವರ್ಗದ, ವಯೋಮಾನದ ಮಂದಿಯೂ ಓದಬಹುದಾದ ವಸ್ತು ವಿಷಯ ಹೊಂದಿದೆ. ಶ್ರೀನಾಥರಿಗೆ ಒಳಿತಾಗಲಿ, ಅವರು ಹಲವಾರು ಪ್ರಕಾರಗಳಲ್ಲಿ ಬರೆಯುವಂತಾಗಲಿ. ಈ ಕಾದಂಬರಿಯ ಸೊಗಡು ಸಾಹಿತ್ಯಕವಾಗಿ ಸಾಕಷ್ಟು ಹರಡಲಿ ಎಂಬ ಸದಾಶಯದೊಡನೆ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

₹450   ₹338

ಕನ್ನಡ ವಿಶೇಷ ಸಾಹಿತ್ಯ ಗಿರಿ | Kannada Vishesha Saahitya giri

ಈ ಸಂಪುಟದಲ್ಲಿ ಬಿ. ಎಂ. ಶ್ರೀಕಂಠಯ್ಯ ನವರಿಂದ ಹಿಡಿದು ಹೊಸ ತಲೆಮಾರಿನ ವರೆಗೂ ಹಲವು ಮಂದಿ ಸಾಹಿತಿಗಳು ಎಲ್.ಎಸ್. ಶೇಷಗಿರಿ ರಾವ್ ಅವರ ಹಲವು ಮುಖಗಳನ್ನು ಪರಿಚಯಿಸಿದ್ದಾರೆ. ಅವರ ಸಾಹಿತ್ಯ ಸೇವೆಯ ಹಲವು ಮಗ್ಗುಲುಗಳ ವಿಮರ್ಶೆಗಳಿವೆ. ಅವರೊಂದಿಗೆ ಒಡನಾಡಿದ ಸಾಹಿತ್ಯಕ ಮತ್ತು ಸಾಹಿತ್ಯೇತರ ವ್ಯಕ್ತಿಗಳ ಆತ್ಮೀಯ ನೆನಪುಗಳಿದೆ. ಅವರು ಸಾಹಿತ್ಯಕವಾಗಿ ಕ್ರಿಯಾಶೀಲರಾಗಿದ್ದ ಅವಧಿಯಲ್ಲಿ ನಡೆಸಲಾಗಿದ್ದ ಹಲವು ಸಂದರ್ಶನಗಳ ಅಮೂಲ್ಯ ಸಂಗ್ರಹವಿದೆ. ಓದುಗರಿಗೆ ವಿವರಗಳನ್ನು, ಸಿದ್ದಿ-ಸಾಧನೆಗಳನ್ನು ಸಮಗ್ರವಾಗಿ ಪರಿಚಯ ಮಾಡಿಕೊಡಬಲ್ಲ ಈ ಸಂಪುಟವು ಸಾಹಿತ್ಯಾಸಕ್ತರಿಗಂತೂ ಸಂಗ್ರಹಯೋಗ್ಯವಾದ ಕೃತಿಯಾಗಿದೆ.

₹450   ₹360

ನಿನಗೆ ನೀನೇ ಗುರು | Ninage Nine Guru

ಸಾಧಕರ ಬದುಕುಗಳು ನಮ್ಮ ಬದುಕನ್ನು ಎತ್ತರಿಸಿಕೊಳ್ಳುವುದಕ್ಕೆ, ಉದಾತ್ತೀಕರಿಸಿಕೊಳ್ಳುವುದಕ್ಕೆ ನಿದರ್ಶನ, ಪ್ರೇರಣೆ ಮತ್ತು ಮಾರ್ಗದರ್ಶನಗಳನ್ನು ನೀಡುತ್ತವೆ. ನಮ್ಮ ನಾಡಿನಲ್ಲಿ ಅನೇಕ ಮಂದಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರಿಗೆ ಅವರೇ ಗುರುವಾಗಿದ್ದಾರೆ. ಈ ನಿಟ್ಟಿನಲ್ಲಿ ಡಿ.ವಿ.ಜಿ.ಯವರ ಮಂಕುತಿಮ್ಮನ ಕಗ್ಗದ ಸಾಲುಗಳು ನೆನಪಾಗುತ್ತವೆ. 'ನಿನಗಾರು ಗುರುವಹರು? ನೀನೊಬ್ಬ ತಬ್ಬಲಿಗ ಉಣುತ ದಾರಿಯ ಕೆಲದಿ ಸಿಕ್ಕಿದೆಂಜಲನು ದಿನವ ಕಳೆ, ಗುರು ಶಿಷ್ಯಪಟ್ಟಗಳು ನಿನಗೇಕೆ? ನಿನಗೆ ನೀನೇ ಗುರುವೊ ಮಂಕುತಿಮ್ಮ'. ಡಿ.ವಿ.ಜಿ.ಯವರು ಹೇಳುವಂತೆ ನಾವು ಪಡೆದ ಎಂಜಲು ಅಂದರೆ ಅನ್ಯರಿಂದ ದೊರೆತ ತಿಳಿವಳಿಕೆ. ಇದು ಸಾರ್ಥಕವಾಗಬೇಕಾದರೆ ನಮ್ಮ ಪ್ರಜ್ಞೆ ಜಾಗೃತವಾಗಿರಬೇಕು. ಅದಕ್ಕೆ “ನಿನಗೆ ನೀನೇ ಗುರು" ಎಂದಿದ್ದಾರೆ. ಅರಿವಿನ ಬೆಳಕಾಗಿ ದಾರಿ ತೋರುವ ಗುರು ನಮ್ಮೊಳಗೆ ಇದ್ದಾನೆ. ಅಂತರಂಗದ ಆತ್ಮಸಾಕ್ಷಿಗಿಂತ ಮಿಗಿಲಾದ ಜ್ಞಾನ ಬೇರೊಂದಿಲ್ಲ. ನಮ್ಮೊಳಗಿನ ಪ್ರಜ್ಞೆ ಜಾಗೃತವಾಗದಿದ್ದರೆ ನಾವು ಪಡೆದ ಜ್ಞಾನವೆಲ್ಲವೂ ವ್ಯರ್ಥವಾಗುತ್ತದೆ. ಗುರುಶಿಷ್ಯ ಪಟ್ಟಗಳನ್ನು ಬಿಟ್ಟು ನಮಗೆ ನಾವೇ ಬೆಳಕಾಗಬೇಕು, ಸ್ಫೂರ್ತಿಯ ಸೆಲೆಯಾಗಬೇಕು, ಪ್ರೇರಣೆಯ ಅಲೆಯಾಗಬೇಕು. ಈ ಶಕ್ತಿಯು ಇಂತಹ ಸಕಾರಾತ್ಮಕ ದೃಷ್ಟಿಯಿಂದಲೇ ಜೀವನ ಸಾರ್ಥಕವಾಗುವುದಲ್ಲವೇ? ಕನ್ನಡ ನಾಡಿನ ವಿವಿಧ ಕ್ಷೇತ್ರಗಳ ಸಾಧಕರ ಕುತೂಹಲಕಾರಿ ವಿವರಗಳ ಹಿನ್ನೆಲೆಯೊಂದಿಗೆ ಅವರ ವೈಶಿಷ್ಟ್ಯಗಳನ್ನು ಈ ಪುಸ್ತಕದಲ್ಲಿ ಪರಿಚಯಿಸಲಾಗಿದೆ. ಇಂದು ನಮ್ಮೆದುರು ಸಾಧನೆಗೆ ಅನೇಕ ಬಾಗಿಲುಗಳು ತೆರೆದಿವೆ. ಸಾಧನೆಯ ರಂಗ ಕೈಬೀಸಿ ಕರೆದಿದೆ. ಈ ಎಲ್ಲ ಅವಕಾಶಗಳನ್ನು ನಮ್ಮ ತಾರುಣ್ಯದ ಬಿಸುಪಿನಲ್ಲಿ ಇರುವವರು ಬಳಸಿಕೊಳ್ಳಲಿ ಎಂಬುದು ನನ್ನ ಪುಟ್ಟ ಆಸೆ. ಸಾಧನೆಯ ರಂಗಕ್ಕೆ ಅವರನ್ನು ಆಹ್ವಾನಿಸುವ ಸಣ್ಣ ಪ್ರಯತ್ನ ಈ ಪುಸ್ತಕ. ಇಲ್ಲಿನ ಸಾಧಕರ ಬದುಕು ಇಂದಿನ ತಲೆಮಾರಿಗೆ ಮಾದರಿಯಾಗಲಿ ಎಂದು ಆಶಿಸುತ್ತೇನೆ.

₹360   ₹288

ಸ್ಫೂರ್ತಿವಂತರು | Spoorthyvantaru

ಯಾವ ವ್ಯಕ್ತಿಯನ್ನಾದರೂ ಸುಲಭಕ್ಕೆ ಅರ್ಥ ನ ಮಾಡಿಕೊಳ್ಳುವಷ್ಟು ಅವರ ಬದುಕು, ವಿಚಾರ ಮತ್ತು ಸಾಧನೆ ಸರಳವಾಗಿರುವುದಿಲ್ಲ. ವ್ಯಕ್ತಿಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿದಷ್ಟೂ ಅವರು ಸಂಕೀರ್ಣವಾಗುತ್ತಾ, ಜಟಿಲವಾಗುತ್ತಾ ಹೋಗುವುದು ಸಹಜ ಕೆಲವೊಮ್ಮೆ ನಾವು ಯಾರನ್ನು ಸರಿಯಾಗಿ ಅರ್ಥ ಮಾಡಿಕೊಂಡಿದ್ದೇವೆ ಎಂದು ಭಾವಿಸುತ್ತೇವೋ ಅವರೇ ನಮಗೆ ಸರಿಯಾಗಿ ಅರ್ಥವಾಗಿರುವುದಿಲ್ಲ. ಅದರಲ್ಲೂ ಅವರು ಮೇಲಮೇಲಕ್ಕೆ ಹೋದಂತೆಲ್ಲ ನಮ್ಮಿಂದ ದೂರವಾಗುತ್ತಾ ಹೋಗುತ್ತಾರೆ. ಹಿರಿಯ ಪತ್ರಕರ್ತ ರಾಜು ಅಡಕಳ್ಳಿ ಅವರು ಈ ಕೃತಿಯಲ್ಲಿ ಹಲವು ವ್ಯಕ್ತಿಗಳನ್ನು ನಮಗೆ ಪರಿಚಯಿಸುವ, ಆಪ್ತವಾಗಿಸುವ ಮತ್ತು ಅರ್ಥ ಮಾಡಿಸುವ ಪ್ರಯತ್ನ ಮಾಡಿದ್ದಾರೆ. ಅವರ ವ್ಯಕ್ತಿತ್ವವನ್ನು ಕಟ್ಟಿಕೊಡುವುದರ ಜತೆಗೆ ಅವರ ಸಾಧನೆಯನ್ನು ನಮ್ಮ ಮುಂದೆ ಅಡಕಳ್ಳಿಯವರು ತೆರೆದಿಟ್ಟಿದ್ದಾರೆ. ಇಲ್ಲಿನ ಪ್ರತಿಯೊಬ್ಬರೂ ಅನ್ನ ವ್ಯಕ್ತಿತ್ವದವರು, ವಿಶೇಷ ಸಾಧನೆ ಮಾಡಿದವರು. ಅವರೆಲ್ಲರ ಸಾಧನೆ ಒಂದಲ್ಲ ಒಂದು ರೀತಿಯಲ್ಲಿ ನಮಗೆ ಸ್ಫೂರ್ತಿಯ ಸೆಲೆ, ಪ್ರೇರಣಿಯ ಧಾರೆ. ಒಬ್ಬರನ್ನು ಪರಿಚಯಿಸಿಕೊಳ್ಳುವುದು ಮತ್ತು ಅವರ ಸಾಧನೆಯಿಂದ ಪ್ರೇರಿತರಾಗುವುದು ಯಾವತ್ತೂ ಒಂದು ದಿವ್ಯ ಅನುಭವವೇ. ಅಂಥ ಒಂದು ವಿಶೇಷ ಅನುಭವ ಈ ಕೃತಿಯನ್ನು ಓದಿದಾಗ ಆಗುತ್ತದೆ. ಅಡಹಳ್ಳಿಯವರ ಭಾಷೆ, ಶೈಲಿ, ಓಘ, ನಿರೂಪಣೆ ಅಪರೂಪವಾದುದು. ಅವರ ಬರಹಕ್ಕೆ ಸಹಜ ಓದಿನ ಗತಿ, ವೇಗವನ್ನು ಸಂಪಾದಿಸುವ ಕಥನಶಕ್ತಿ ಇದೆ. ವ್ಯಕ್ತಿಯನ್ನು ಪರಿಚಯಿಸುವ ಕಾಳಜಿ, ಆಪ್ತವಾಗಿಸುವ ಕಲೆಗಾರಿಕೆ ಅವರಿಗೆ ಸೊಗಸಾಗಿ ಸಿದ್ಧಿಸಿದೆ. ಅದಕ್ಕೆ ಈ ಕೃತಿಯೇ ನಿದರ್ಶನ ಒಬ್ಬರನ್ನು ಪರಿಚಯಿಸುವ ಏಕತಾನತೆ, ಧಾವಂತದಲ್ಲಿ ಅದು ಶುಷ್ಕ ಬಯೋಡೇಟಾ ಅಥವಾ ವ್ಯಕ್ತಿ ಕಿರ್ದಿಯಾಗದಂತೆ ಎಚ್ಚರವಹಿಸಿರುವುದು ಅವರ ಬರವಣಿಗೆಯ ಇನ್ನೊಂದು ವಿಶೇಷ. ಒಬ್ಬ ವ್ಯಕ್ತಿಯನ್ನು ನೋಡುವುದು, ಅವರ ಸಾಧನೆಯ ಬದುಕಿನಲ್ಲಿ ಅಂತರನೋಟ ಬೀರುವುದು ಹಾಗೂ ನಂತರ ಅವರ ಇಡೀ ವ್ಯಕ್ತಿತ್ವವನ್ನು ಅಕ್ಷರಗಳಲ್ಲಿ ಕಟ್ಟಿಕೊಡುವುದು ಅತ್ಯಂತ ಹೊಣೆಗಾರಿಕೆಯ ನಡೆ. ಕಾರಣ ವ್ಯಕ್ತಿಗೆ, ಅವರ ವಿಚಾರ ಮತ್ತು ಸಾಧನೆಗೆ ಎಲ್ಲೂ ಅಪಚಾರವಾಗಬಾರದಲ್ಲ? ಈ ಕೃತಿಯಲ್ಲಿ ಅಂಥ ಒಂದು ವಿಶೇಷ ಪ್ರಯತ್ನವನ್ನು ಗಮನಿಸಬಹುದು. ಈ ಕೃತಿಯಲ್ಲಿನ ಒಬ್ಬೊಬ್ಬ ವ್ಯಕ್ತಿಯ ಕುರಿತು ಓದುತ್ತಾ ಹೋದಂತೆಲ್ಲ ನಮ್ಮೊಳಗೆ ಸ್ಫೂರ್ತಿಯ ಒಳಹರಿವು ಹೆಚ್ಚಾಗಿ, ಪ್ರೇರಣೆಯ ಅಣೆಕಟ್ಟು ಭರ್ತಿಯಾಗುತ್ತಾ ಹೋಗುತ್ತದೆ. ವಿಶ್ವೇಶ್ವರ ಭಟ್

₹245   ₹218

ಹೊಸ ಕಥೆಗಳು

nil

₹50   ₹45