ಡಾ. ಕೆ.ಎನ್. ಗಣೇಶಯ್ಯ

ಡಾ. ಕೆ.ಎನ್. ಗಣೇಶಯ್ಯನವರು ಒಬ್ಬ ಕ್ಕೃಷಿ ವಿಜ್ಞಾನಿ ಮತ್ತು ಕನ್ನಡದ ಪ್ರಮುಖ ಬರಹಗಾರರಲ್ಲೊಬ್ಬರು. ಮೂಲತಃ ಕೋಲಾರ ಜಿಲ್ಲೆಯವರು. ಬೆಂಗಳೂರಿನಲ್ಲಿರುವ ಕೃಷಿ ವಿಶ್ವವಿದ್ಯಾಲಯದಲ್ಲಿ ಫ್ರೊಫೆಸರ್ ಹಾಗೂ ಪ್ರಧಾನ ವಿಜ್ಞಾನಿಯಾಗಿದ್ದಾರೆ. ಇತಿಹಾಸ ಮತ್ತು ವೈಜ್ಞಾನಿಕ ವಿಷಯಗಳನ್ನೊಳಗೊಂಡ ರೋಚಕ ಕಥೆಗಳನ್ನು ಒಂದು ವಿಭಿನ್ನ ಶೈಲಿಯಲ್ಲಿ ಬರೆಯುವ ಮೂಲಕ ಕನ್ನಡದಲ್ಲಿ ಒಂದು ಹೊಸ ಬಗೆಯ ಸಾಹಿತ್ಯವನ್ನು ತಂದವರೆಂದು ಪ್ರಸಿದ್ಧಿಯಾಗಿದ್ದಾರೆ.