ಕರಿಮಾಯಿ
Original price was: ₹ 195.₹ 174Current price is: ₹ 174.
Book Details
Weight | .2 kg |
---|---|
Author | Dr Chandrashekhara Kambara |
Page Nos | 168 |
ISBN | 5551234100257 |
Publications | Ankita Pustaka |
![](https://veeralokabooks.com/wp-content/uploads/2023/03/CHANDRASEKHAR-B_KAMBARA.jpg)
SYNOPSIS
‘ಕರಿಮಾಯಿ’ ಕೇವಲ ತನ್ನ ಕಥನ ಸ್ವರೂಪದಲ್ಲಿ ಆಧುನಿಕ ಓದುಗರನ್ನು ಮೆಚ್ಚಿಸಬಯಸುವ ಕೃತಿಯಲ್ಲಿ ಅದು ಅನೇಕ ಮುಖ್ಯ ಸಂಗತಿಗಳನ್ನು ತನ್ನ ಮೈ ಮೇಲೆ ಹಾಕಿಕೊಂಡಿರುವ ಮಹತ್ವಾ ಕಾಂಕ್ಷಿ ರಚನೆ, ಹೊಸ ಮೌಲ್ಯಗಳ ಪ್ರವೇಶದಿಂದ ಒಂದು ನಂಬಿಕೆಗಳ ಲೋಕ ಕಂಪಿಸುವ, ಸಮುದಾಯ ಪಟ್ಟಿ ಆಘಾತಕ್ಕೆ ಒಳಗಾಗುವ, ಹೊಸದೊಂದು ಆರ್ಥಿಕ ಸಾಮಾಜಿಕ ಜೀವನ ಕ್ರಮದ ಮುನ್ಸೂಚನೆ ಕಾಣಿಸುವ ಚಿತ್ರಗಳನ್ನು ಅದು ದಟ್ಟವಾಗಿ ಆದರೆ ತನಗೇ ಅನನ್ಯವೆನ್ನಿಸುವ ಕಾಮಿಕ್ ಧಾಟಿಯಲ್ಲಿ ಕಟ್ಟಿಕೊಡುತ್ತದೆ. ‘ಕರಿಮಾಯಿ’ಯ ಮಿಫ್ ಒಡೆಯುವುದಕ್ಕೂ, ಶಿವಾಪುರದ ಜನರ ಸಮುದಾಯ ಪ್ರಜ್ಞೆ ಆಳಕಗೊಳ್ಳುವುದಕ್ಕೂ ಸಂಬಂಧ ಇದ್ದೇ ಇದೆ, ಹೊಸ ಮೌಲ್ಯಗಳು ಕೇವಲ ಗ್ರಾಮಪಂಚಾಯಿತಿ ಮೂಲಕ ಬರುವುದಿಲ್ಲ. ಅವು ಬೆಳಗಾವಿ ಸೃಷ್ಟಿಸುವ ಹೊಸ ಕನಸುಗಳ ರೂಪದಲ್ಲಿಯೂ ಬರುತ್ತವೆ. ಗುಡಸೀಕರ ಶಿವಾಪುರಕ್ಕೆ ತರುವ ವಿದೇಶೀ ಬ್ರಾಂದಿ, ಸಿಗರೇಟು ಮುಂತಾದ ಅನೇಕ ಭೌತಿಕ ವಸ್ತುಗಳ ರೂಪದಲ್ಲಿ ಕಾಣಿಸಿಕೊಳ್ಳುವಂತೆ, ಪೊಲೀಸ್ ಸ್ಟೇಷನ್, ಕೋರ್ಟ್ ಮುಂತಾದ ವಸಾಹತುಶಾಹಿ ಸಂಸ್ಥೆಗಳ ರೂಪದಲ್ಲಿಯೂ ವ್ಯಕ್ತವಾಗುತ್ತದೆ. ಒಂದು ಕಡೆ ಬ್ರಿಟಿಷ್ ಸರಕಾರ: ಇನ್ನೊಂದು ಕಡೆ ಗಾಂಧಿ ನೇತೃತ್ವದ ಸ್ವಾತಂತ್ರ್ಯ ಚಳುವಳಿ. ಒಂದು ಪರಂಪರಾಗತ ಜಮೀನ್ದಾರಿ ವ್ಯವಸ್ಥೆಗೆ ಒಗ್ಗಿಹೋದ ಜನಪದಕ್ಕೆ ಈ ಎರಡೂ ಹೊಸವು; ಅನ್ಯ ಸ್ವಾರಸ್ಯದ ಸಂಗತಿ ಎಂದರೆ ಹಳೆಯ ವ್ಯವಸ್ಥೆಯ ಪ್ರತಿನಿಧಿಯಾದ ಗೌಡ, ಹೊಸ ವ್ಯವಸ್ಥೆಯ ಪ್ರತಿನಿಧಿಯಾದ ಗುಡಸೀಕರ ಇಬ್ಬರೂ ಗಾಂಧಿಯನ್ನು ನೆನಸುತ್ತಾರೆ. ಕಾದಂಬರಿಯು ವಸಾಹತುಶಾಹಿ ಕೌರವನ್ನೂ, ಸ್ವರಾಜ್ಯದ ಹಂಬಲಿಕೆಯನ್ನೂ ಸೂಕ್ಷ್ಮವಾಗಿ ಧ್ವನಿಸುತ್ತದೆ.
ಹಳೆಯ ವ್ಯವಸ್ಥೆ ಅದೆಷ್ಟೇ ಸುಂದರವಾಗಿ ತೋರುತ್ತಿರಲಿ, ಹೊಸ ವ್ಯವಸ್ಥೆ ಎಷ್ಟೇ ಭಯಾನಕವಾಗಿ ಕಾಣಿಸುತ್ತಿರಲಿ ಅಥವಾ ಅದರ ಬಗ್ಗೆ ವಿರೋಧವಿರಲಿ, ಚಲನೆ ಅನಿವಾದ್ಯವೆಂಬ ಸತ್ಯವನ್ನು ಒಂದು ನಿರ್ಣಾಯಕ ಐತಿಹಾಸಿಕ ಸಂದರ್ಭದ ಹಿನ್ನೆಲೆಯಲ್ಲಿ ಉದಂಬರಿ ಧ್ವನಿಸುತ್ತದೆ.
ABOUT AUTHOR
Opinion of Others
There are no others opinion yet.
Reviews
There are no reviews yet.