ಮೂಚಿಮ್ಮ

Original price was: ₹ 170.Current price is: ₹ 151.

SKU: Moochimma Categories: ,

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .4 kg
Author
Page Nos
Publications

SYNOPSIS

ಸುಳಿದಾಡುವ ಗಾಳಿಯಲ್ಲಿ ಒಲಿದು ಬಂದಂತೆ ಬಂದ ನನ್ನ ಗೆಳೆಯ ಡಾ. ಅಜಿತ್ ಹರೀಶಿ ಕೃತಿಗಳ ಒಳಗೆ ದಟ್ಟವಾದ ಮಾನವೀಯ ಸೆಲೆಗಳನ್ನು ನಾನು ಅನೇಕ ಬಾರಿ ಕಂಡಿದ್ದೇನೆ. ಅವರು ಮಿತಭಾಷಿ ಮತ್ತು ಅನೇಕ ಬಾರಿ ಮೌನಿ. ಅಜಿತ್ ಕಥೆಗಳನ್ನು ಓದಿದಾಗಲೆಲ್ಲಾ ನನಗೆ ಅವರ ಮೌನದ ಅರ್ಥ ಏನು ಎಂಬುದು ಈ ಕೃತಿಯಲ್ಲಿ ಗೊತ್ತಾಗಿದೆ.

“ಆವಿ” ಕಥೆಯ ಶರತ್ ಅಥವಾ ದಿಶಾಗಿಂತ ಸುನೀಲನ ಮೌನ ಹೆಚ್ಚು ಆಪ್ಯಾಯಮಾನವಾಗುತ್ತದೆ. “ಮೂಚಿಮ್ಮ” ಕಥೆಯಲ್ಲಿ ಬಾಂದು ಕಲ್ಲಿನ ಆ ಕಡೆ ಮತ್ತು ಈ ಕಡೆ ಎರಡು ಪುಟ್ಟ ಪುಟ್ಟ ಔಷಧೀಯ ಗಿಡಗಳನ್ನು ಕೈಯಾರೆ ನೆಟ್ಟ ಮೂಚಿಮ್ಮನ ಮೌನ ಹರಿದಾಡುತ್ತದೆ. “ವಿಲಿಪ್ತ”ದ ಗುರೂಜಿ ವರಲೆ ತಿಂದ ಕಾಷ್ಠವಾಗಿ ಆತನ ಮೌನವೇ ಆತನನ್ನು ಒಳಗೊಳಗೆ ತಿಂದು ಮುಗಿಸುತ್ತದೆ. “ದಹನ”ದ ಕನಸಿನ ಸ್ವಾಮಿ ಗಂಗಾಧರನ ಕನಸುಗಳು ಮತ್ತೊಂದು ಮೌನವನ್ನು ಓದುಗನಿಗೆ ಅರ್ಥಪೂರ್ಣವಾಗಿ ದಾಟಿಸುತ್ತದೆ.”ಪತನ”ದ ವಿನಯನ ಬರಹಗಳಲ್ಲಿ ಮೌನವೇ ಕಥೆಯ ಹೆಚ್ಚುಗಾರಿಕೆಯನ್ನು ತೋರಿಸುತ್ತದೆ.”ಜನಾರ್ದನ” ಕಥೆಯಲ್ಲಿ ಜನಾರ್ದನ ಭಟ್ಟರ ಮೌನ ಪುಂಡ ಮಗನನ್ನು ಪರಿವರ್ತಿಸುತ್ತದೆ. “ಬೆಸುಗೆ”ಯ ಸುಮಾ, ಸಿರಿ ಮತ್ತು ಪ್ರಶಾಂತರ ನಡುವಿನ ಪ್ರೀತಿಯ ಸ್ಪರ್ಶದಲ್ಲಿ ತಾನೇ ಮೌನಕ್ಕೆ ಸರಿದ ರೀತಿ ಆಪ್ಯಾಯಮಾನವೆನಿಸುತ್ತದೆ. “ತಾನೊಂದು ಬಗೆದರೆ” ಕಥೆಯಲ್ಲಿ ಸುದೀರ್ಘ ವಿವರಗಳ ನಡುವೆಯೂ ವೆಂಕಟ ತನ್ನ ನಿರೂಪಣೆಯಲ್ಲಿ ಕೊಟ್ಟ ಅಖಂಡ ಮೌನವೊಂದು ನಮ್ಮನ್ನು ದಾಟಿ ಹೋದ ಭಾಸವಾಗುತ್ತದೆ. “ಪರಿವರ್ತನೆ” ಕಥೆಯ ಅನಂತ ಹೆಗಡೇರು ಕಾಲದ ಓಟದಲ್ಲಿ ತಾನೂ ಭಾಗಿಯಾಗಲಾರದೇ ಮೌನ ಸಾಕ್ಷಿಯಾಗಿ ಕೊನೆಗೂ “ಅಪೀ ನಿಧಾನ ಓಡೇ” ಎಂದು ಹೇಳುವಲ್ಲಿಗೆ ಮನಸ್ಸು ಮುದ್ದೆಯಾಗುತ್ತದೆ. “ನಟ’’ ಕಥೆಯಲ್ಲಿ ನಟರಾಜನ ಅಳು ಅವನ ಮನಸ್ಸಿನ ಮೌನದ ಹರಿವಿನಂತೆ ತಾಕುತ್ತದೆ.

ಈ ಕೃತಿಯಲ್ಲಿ ಬಹಳಷ್ಟು ಕಥೆಗಳು ಸಾಗರಸೀಮೆಯ ಲಹರಿಗಳನ್ನು ಢಾಳಾಗಿ ಹರಿಸಿವೆ. ಭರಣಿಯಲ್ಲಿ ಹೊದ್ದು ಮುಚ್ಚಿದ ಅಪ್ಪೆಮಿಡಿಯ ಸೋನೆಯಂತೆ ಘಮ ಇವೆ. ಒಂದೊಂದು ಕಥೆಯೂ ಕಾಯಿ ಹಾಲಿಗೆ ತೊಡೆದೇವು ಮುರುಕಿದಂತೆ ಓದಿನ ರುಚಿಗೆ ನಮ್ಮನ್ನು ಅಣಿಗೊಳಿಸುತ್ತದೆ.

– ಗೋಪಾಲಕೃಷ್ಣ ಕುಂಟಿನಿ

ABOUT AUTHOR

ವೈದ್ಯ ಮತ್ತು ಲೇಖಕರಾದ ಡಾ. ಅಜಿತ್ ಹರೀಶಿ ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹರೀಶಿ ಗ್ರಾಮದವರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹುಟ್ಟೂರಿನ ಸರ್ಕಾರಿ ಶಾಲೆಗಳಲ್ಲಿ, ಪದವಿಪೂರ್ವ ಶಿಕ್ಷಣವನ್ನು ಶಿರಸಿಯಲ್ಲಿ ಮುಗಿಸಿರುತ್ತಾರೆ. ಆಯುರ್ವೇದ ಮಹಾವಿದ್ಯಾಲಯ,ಹುಬ್ಬಳ್ಳಿಯಲ್ಲಿ ವೈದ್ಯಕೀಯ ಪದವೀಧರರಾದ ಇವರು, ಆಕ್ಯುಪಂಕ್ಚರ್ ಚಿಕಿತ್ಸೆ,ಹಿಪ್ನೋಥೆರಪಿಯಲ್ಲಿಯೂ ಪರಿಣಿತರು. ಪ್ರಸ್ತುತ ಹರೀಶಿಯಲ್ಲಿ ಖಾಸಗಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ಬರವಣಿಗೆಯನ್ನು ತಮ್ಮ ಪ್ರವೃತ್ತಿಯನ್ನಾಗಿಸಿಕೊಂಡಿದ್ದಾರೆ. ಬಿಳಿಮಲ್ಲಿಗೆಯ ಬಾವುಟ, ಸೂರು ಸೆರೆಹಿಡಿಯದ ಹನಿಗಳು,    Read More...

Opinion of Others

There are no others opinion yet.

Customer Reviews

Reviews

There are no reviews yet.

Be the first to review “ಮೂಚಿಮ್ಮ”

Your email address will not be published. Required fields are marked *

Related Products