
ಮಕ್ಕಳು ದೇಶದ ಸಂಪತ್ತು, ಯುವಕರು ದೇಶದ ಮಹಾನ್ ಶಕ್ತಿ ಹಾಗೂ ಹಿರಿಯರು ದೇಶದ ಅಮೂಲ್ಯ ಅನುಭವ, ಈ ತ್ರಿವೇಣಿ ಸಂಗಮ ದೇಶದ ಪ್ರಗತಿಗೆ, ಅಭಿವೃದ್ಧಿಗೆ, ಸರ್ವರ ಸುರಕ್ಷತೆಗೆ ಮತ್ತು ಜಾತಿ-ಧರ್ಮ, ಪ್ರದೇಶ-ಭಾಷೆ ಮತ್ತು ಎಲ್ಲ ವರ್ಗಗಳ ನಡುವೆ ಪರಸ್ಪರ ಸೌಹಾರ್ದತೆ ಹಾಗೂ ಸಹಿಷ್ಣುತೆಗೆ ಅತ್ಯಂತ ಮಹತ್ವದ ಕೊಡುಗೆ ಆಗಬಲ್ಲದು. ಯಾವುದೇ ನಾಗರಿಕ ಸಮಾಜ ಅಥವಾ ದೇಶ ಶಿಕ್ಷಣಕ್ಷೇತ್ರವನ್ನು ನಿರ್ಲಕ್ಷಿಸುವಂತಿಲ್ಲ. ಹಾಗೇನಾದರೂ ಮಾಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಮಕ್ಕಳು ದೇಶದ ಬುನಾದಿ-ಭವಿಷ್ಯ ಎಂದ ಮೇಲೆ ಅವರನ್ನು ನಿರ್ಲಕ್ಷಿಸಿದರೆ ಅಥವಾ ಯೋಗ್ಯ ಶಿಕ್ಷಣ ಕೊಡದಿದ್ದರೆ ದೇಶದ ಭವಿಷ್ಯವನ್ನೇ ಕಡೆಗಣಿಸಿದಂತಾಗುತ್ತದೆ ಎಂಬುದು ಸಂಬಂಧಪಟ್ಟ ಎಲ್ಲರಿಗೂ, ಅದರಲ್ಲೂ ಮಕ್ಕಳ ಪಾಲಕರಿಗೆ/ಪೋಷಕರಿಗೆ ಮನದಟ್ಟಾಗಬೇಕು. ಕಾರಣ "ಮಕ್ಕಳಿಗಾಗಿ ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೇ ಅಸ್ತಿಯನ್ನಾಗಿ ಮಾಡುವುದು ಮೇಲು" ಹಾಗಾದಾಗ ಅವರು ಸ್ವತಃ, ಹೆತ್ತವರಿಗೆ, ಸಮಾಜಕ್ಕೆ ಹಾಗೂ ದೇಶಕ್ಕೆ ಆಸ್ತಿಯಾಗುತ್ತಾರೆ. ಮಕ್ಕಳ ಶಿಕ್ಷಣಕ್ಕಾಗಿ ಖರ್ಚು ಮಾಡುವುದು ವ್ಯರ್ಥ ಖರ್ಚು ಅಲ್ಲ, ಅದು ಗುಣಮಟ್ಟದ ವಿದ್ಯಾಭ್ಯಾಸದಲ್ಲಿ ಮಾಡುವ ಸದ್ವಿನಿಯೋಗ. ಈ ನಿಟ್ಟಿನಲ್ಲಿ ತಂದೆ-ತಾಯಿಗಳು, ಪಾಲಕರು-ಪೋಷಕರು, ಗುಣಮಟ್ಟ ಹೊಂದಿದ ಶಾಲಾ ಕಾಲೇಜುಗಳು, ಉತ್ತಮ ಶಿಕ್ಷಣ ಸಂಸ್ಥೆಗಳು ಮತ್ತು ಸಮರ್ಥ ಶಿಕ್ಷಕರು ಮಹತ್ವದ ಪಾತ್ರಗಳನ್ನು ನಿರ್ವಹಿಸಬೇಕಾಗುತ್ತದೆ. ಪ್ರಜ್ಞಾವಂತ ಪ್ರಜೆ ಮತ್ತು ಜವಾಬ್ದಾರಿ ನಾಗರಿಕರನ್ನಾಗಿ ಮಾಡುವ ಶಾಲಾ ಕಾಲೇಜುಗಳ ಸಂಖ್ಯೆ ಕಡಿಮೆ, ಆದುದರಿಂದ ಈ ಸಂಖ್ಯೆ ಬೆಳೆಯಬೇಕು, ಆಗ ಒಳ್ಳೆಯವರ ಸಂಖ್ಯೆ ಬೆಳೆಯುತ್ತದೆ. ಹಾಗಾದಾಗ ದೇಶದ ಒಳಿತಾಗುತ್ತದೆ. - ನ್ಯಾಯಮೂರ್ತಿ ಡಾ. ಶಿವರಾಜ. ವಿ. ಪಾಟೀಲ್.
Category: | ಕನ್ನಡ |
Sub Category: | ಆರೋಗ್ಯ, ವೈದ್ಯಕೀಯ, ಮನೋವೈದ್ಯಕೀಯ |
Author: | ಡಾ ಸಿ ಆರ್ ಚಂದ್ರಶೇಖರ್ | Dr C R Chandrashekar |
Publisher: | ಕದಂಬ ಪ್ರಕಾಶನ | Kadamba Prakashana |
Language: | Kannada |
Number of pages : | |
Publication Year: | |
Weight | |
ISBN | |
Book type | Paperback |
Delivery between 2-6 Days
No returns accepted. Please refer our full policy
Your payments are 100% secure
ಡಾ ಸಿ ಆರ್ ಚಂದ್ರಶೇಖರ್ | Dr C R Chandrashekar |
ಡಾ ಸಿ ಆರ್ ಚಂದ್ರಶೇಖರ್ |
0 average based on 0 reviews.