ಜಗತ್ತನ್ನು ಕಟ್ಟಿದವರು ಮತ್ತು ಕಟ್ಟುತ್ತಿರುವವರೆಂದರೆ ಹೊಟ್ಟೆಗೆ ಅನ್ನ, ಉಡಲು ಬಟ್ಟೆ, ಮಲಗಲು ವಸತಿ ಇಲ್ಲದೆ ದುಡಿದು ಜಗತ್ತನ್ನು ಕಟ್ಟಿದವರು ಬಡವರು ಮತ್ತು ಕಾರ್ಮಿಕರು ಪಿರಮಿಡ್ ಳಿಂದ ಹಿಡಿದು ಯಾವುದೇ ನಾಗರಿಕ ತೊಟ್ಟಿಲುಗಳನ್ನು ಕಟ್ಟಿ ಬೆಳೆಸಿದವರು ಬಡವರು, ಕಾರ್ಮಿಕರು, ರೈತರು ಮತ್ತು ಮಹಿಳೆಯರು, ಜೊತೆಗೆ ಕಾಡಿನಿಂದ ಹಿಡಿದು ತಂದು ಪಳಗಿಸಿದ ಮೂಕಪ್ರಾಣಿಗಳು, ಜಗತ್ತಿನಲ್ಲಿ ಮುಂದೆಯೂ ಈ ತಾರತಮ್ಯ ಹೀಗೆ ಮು೦ದುವರಿಯುತ್ತದೆ. ಅಲ್ಲೊಬ್ಬರು ಇಲ್ಲೊಬ್ಬರು ಮಹನೀಯರು ಹುಟ್ಟಿ ಬಂದು ಈ ಅಸಮಾನತೆಯ ಸಮಾಜದ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡರೆ ವಿನಹಃ ಈ ಜಗತ್ತು ಮಾತ್ರ ಬದಲಾಗಲೇ ಇಲ್ಲ.
ಜಗತ್ತನ್ನು ಕಟ್ಟಿದವರು ಮತ್ತು ಕಟ್ಟುತ್ತಿರುವವರೆಂದರೆ ಹೊಟ್ಟೆಗೆ ಅನ್ನ, ಉಡಲು ಬಟ್ಟೆ, ಮಲಗಲು ವಸತಿ ಇಲ್ಲದೆ ದುಡಿದು ಜಗತ್ತನ್ನು ಕಟ್ಟಿದವರು ಬಡವರು ಮತ್ತು ಕಾರ್ಮಿಕರು
ಅಂಬೇಡ್ಕರ್ ಹೆಸರಿನ ಬದಲು ದೈವದ ಸ್ಮರಣೆ ಮಾಡಿದರೆ ಸೌಭಾಗ್ಯ ಕೂಡಿಬರಲಾರದು. ಕಾಣದ ದೈವಕ್ಕಿಂತ ಕೈಹಿಡಿದು ನಡೆಸುವ ಧೀಮಂತ ನಾಯಕ ಮತ್ತು ಆದರ್ಶ ಮೌಲ್ಯಗಳ ಸಾಕಾರಮೂರ್ತಿ ಬಾಬಾ ಸಾಹೇಬರು. ಅವರನ್ನು ಪರಿಚಯಿಸುವ ಗ್ರಂಥಗಳ ಮಹಾಪೂರಕ್ಕೆ ಈಗಾಗಲೇ ಸಾರವತ್ತಾಗಿ ನೆಲ್ಸನ್ ಮಂಡೇಲಾ ಜೀವನ ಚರಿತ್ರೆಯನ್ನು ನೀಡಿರುವ ಡಾ. ಎಂ. ವೆಂಕಟಸ್ವಾಮಿಯವರ ನೂತನ ಮೌಲಿಕ ಕೃತಿಯ ಸೇರ್ಪಡೆಯಾಗುತ್ತಿದೆ. ನಮ್ಮ ಸಾಂಸ್ಕೃತಿಕ - ಆರ್ಥಿಕ - ಸಾಮಾಜಿಕ ಸವಾಲುಗಳನ್ನೆದುರಿಸಲು ಡಾ. ಅಂಬೇಡ್ಕರ್ ಅವರ ಚಿಂತನೆ ಮತ್ತು ಹೋರಾಟಗಳನ್ನು ವಿಹಂಗಮ ಶೈಲಿಯಲ್ಲಿ ಪ್ರಸ್ತುತ ಕೃತಿಯು ಕಟ್ಟಿಕೊಡುತ್ತದೆ. ಬಾಬಾ ಸಾಹೇಬರ ಜೀವನ, ಹೋರಾಟ, ವಿದ್ವತ್ತು, ಕಳಕಳಿ ಮುಂತಾದವು ನಮಗಿಂದು ದಾರಿದೀಪ. ಸನಾತನವೆಂಬ ಹೊರೆಗೆ ಪರ್ಯಾಯಗಳಲ್ಲಿ ಅಂಬೇಡ್ಕರ್ ಅವರ ಚಿಂತನೆ ಮತ್ತು ಹೋರಾಟ ಅನನ್ಯವಾದುವು. ಡಾ. ಜಿ. ರಾಮಕೃಷ್ಣ
ಕೆಲವರು ತಪ್ಪಿಸಿಕೊಳ್ಳುವ ಯಾವುದೇ ಪ್ರಯತ್ನವನ್ನು ಮಾಡದೇ ತಮ್ಮ ತಮ್ಮ ಕ್ಯಾಬಿನ್ಗಳಲ್ಲಿ ಮತ್ತು ಅಲ್ಲಲ್ಲಿ ನಿಂತುಕೊಂಡು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಇನ್ನೂ ಕೆಲವು ಪ್ರಯಾಣಿಕರು ಟ್ರಂಕುಗಳು ಮತ್ತು ಉಳಿದ ವಸ್ತುಗಳನ್ನು ಹಿಡಿದುಕೊಂಡು ಡೆಕ್ ಗಳಲ್ಲಿ ನಿಂತುಕೊಂಡು ಯಾರಾದರು ಬಂದು ತಮ್ಮನ್ನ ಕರೆದುಕೊಂಡು ಹೋಗುವರೆಂದು ಕಾಯುತ್ತಿದ್ದರು. ಮನಶಾಸ್ತ್ರಜ್ಞ ವೈನ್ ಕ್ರೇಗ್ ವೇಡ್ ಇದನ್ನು ಸಾಮಾಜಿಕ ಮೇಲಾಧಿಕಾರಿಗಳ ಪೀಳಿಗೆಗಳಿಂದ ಉತ್ಪತ್ತಿಯಾಗುವ Stoic Passitivity ಎಂದು ಹೇಳುತ್ತಾರೆ. ಇವರಲ್ಲಿ ಹೆಚ್ಚಿನವರು ಬದುಕುಳಿಯಲು ಯಾವುದೇ ಪ್ರಯತ್ನವನ್ನು ಮಾಡಲಿಲ್ಲ. ನೂರಾರು ಜನರು ಸಭಾಂಗಣಗಳಲ್ಲಿ ಬೋಧಕರೊಂದಿಗೆ ನಿಂತುಕೊಂಡು ಪ್ರಾರ್ಥಿಸುತ್ತಿದ್ದರು, ದೇವರು ಮತ್ತು ಮೇರಿ ಅವರಿಗೆ ಸಹಾಯ ಮಾಡುವಂತೆ ಕೇಳಿಕೊಳ್ಳುತ್ತಿದ್ದರು. ಕೆಲವರು ಅಲ್ಲಿಯೇ ಮಲಗಿಕೊಂಡು ಚೀರಾಡುತ್ತಿದ್ದರು, ಅವರು ತಮ್ಮ ಸ್ವಂತ ಇಚ್ಛಾಶಕ್ತಿಯನ್ನು ಕಳೆದುಕೊಂಡಿದ್ದರು ಮತ್ತು ದೇವರೇ ಎಲ್ಲಾ ಕೆಲಸಗಳನ್ನು ಮಾಡಬೇಕೆಂದು ನಿರೀಕ್ಷಿಸುತ್ತಿದ್ದರು. ಟೈಟಾನಿಕ್ ದುರಂತ ಸಾಗರ ಇತಿಹಾಸದಲ್ಲಿ ಮೈ ನವಿರೇಳಿಸುವ ಮತ್ತು ಕೇಳಲಾರದ ವಿದ್ರಾವಕ ಸತ್ಯಕತೆಯಾಗಿದೆ. ಸಹಸ್ರಮಾನಗಳ ಇತಿಹಾಸದಲ್ಲಿ ಇಂತಹ ನರಕಸದೃಶ ದುರಂತ ಹಿಂದೆ ಎಂದೂ ನಡೆದಿರಲಿಲ್ಲ. ಈ ದುರಂತದ ನಂತರ ಸಾಗರ ಕಾನೂನುಗಳನ್ನು ಬದಲಿಸಬೇಕಾಯಿತು ಮತ್ತು ಅನೇಕ ಕಟ್ಟೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಯಿತು. ಇದರಿಂದ ಇಡೀ ಜಗತ್ತು ಸಾಗರಲೋಕದಲ್ಲಿ ಒಂದು ಹೊಸ ಪಾಠವನ್ನೇ ಕಲಿತುಕೊಂಡಿತು. ನಂತರದ ಕಾಲದಲ್ಲಿ ಯಾವುದೇ ದೊಡ್ಡ ದುರಂತಗಳು ನಡೆಯಲಿಲ್ಲ. ಈ ದುರಂತದಲ್ಲಿ ಮಡಿದವರ ಸಂಖ್ಯೆ ಗೊಂದಲಗಳಿಂದ ಕೂಡಿದ್ದು ಸುಮಾರು 1,490 ರಿಂದ 1635ರ ಎನ್ನಲಾಗಿದೆ. ಇನ್ನು ಸಮುದ್ರದಿಂದ ಸಂಗ್ರಹಿಸಿದ ಮೃತದೇಹಗಳ ಸಂಖ್ಯೆ ಕೇವಲ 333. ಒಟ್ಟಿನಲ್ಲಿ ಈ ಟೈಟಾನಿಕ್ ಹಡಗಿನ ಕತೆಯ ವ್ಯಥೆಯನ್ನು ಓದಿಯೇ ತಿಳಿಯಬೇಕು. ಡಾ. ಎಂ. ವೆಂಕಟಸ್ವಾಮಿ
nil