ನಮ್ಮ ಕಾಲದ ತಲ್ಲಣಗಳಿಗೆ ಮತ್ತು ಸ್ಥಿತ್ಯಂತರಗಳಿಗೆ ಮಾತು ಕೊಡಲಿಕ್ಕೆ ಕಥೆ ಹೇಳಿಮಾಡಿಸಿದ ಪ್ರಕಾರ. ಇದರ ಸಾಧ್ಯತೆಗಳನ್ನು ಕಾಲದಿಂದ ಕಾಲಕ್ಕೆ ಎಲ್ಲ ಕಥೆಗಾರರೂ ಹುಡುಕುತ್ತಲೇ ಬಂದಿದ್ದಾರೆ. ಕಥೆ ಬರೆಯುವ ಜರೂರತ್ತು ಏನಿದೆ ಎನ್ನುವುದನ್ನು ಪುನರ್ ಸ್ಥಾಪಿಸುತ್ತಲೂ ಇದ್ದಾರೆ - ಇದು ಬರಿಯ ಒಳಗಿನ ತಳಮಳವಲ್ಲ ಒಂದು ಸಾಮಾಜಿಕ ಜವಾಬ್ದಾರಿ ಎನ್ನುವಂತೆ. ಸಾಮಾಜಿಕ ಜಾಲತಾಣಗಳು ಬರೆಯುವ ತೀವ್ರತೆಯನ್ನು ಹೆಚ್ಚಿಸುತ್ತಿರುವ ಹಾಗೆಯೇ ಬರವಣಿಗೆಯಲ್ಲಿ ಕಾವು ಕೂರುವ ತಾಳ್ಮೆಯನ್ನು ಕಳೆಯುತ್ತಿವೆ. ತಕ್ಷಣದ ಪ್ರತಿಕ್ರಿಯೆಗಳಿಗೆ ಮನಸೋತಾಗ ಆಳಕ್ಕಿಳಿದ, ಸಾಂದ್ರವಾಗುವ ಕಥನಗಳು ಹುಟ್ಟುವುದು ಕಷ್ಟವಾಗುತ್ತದೆ. ಇಂಥದ್ದರ ನಡುವೆ ಕಥೆಗಾರರು ತಮಗೆ ಬೇಕಾದ ಅವಕಾಶವನ್ನು ಅಲ್ಲಲ್ಲಿ ಹುಡುಕುತ್ತಾ ತಮ್ಮದನ್ನಾಗಿಸಿಕೊಳ್ಳುವತ್ತ ತುಡಿಯುತ್ತಲೇ ಇದ್ದಾರೆ.
ಕನ್ನಡದಲ್ಲಿ ಸಣ್ಣಕಥೆಗ ಆಗೀಗ ದೆಸೆ ತಿರುಗಿ, ಕಥಾಸ್ಪರ್ಧೆಯ ಮೊತ್ತಬೀಗ ಅರ್ಧ ಲಕ್ಷ ಮುಟ್ಟದೆ. ಇದು ಯುವ ಕಥೆಗಾರರಿಗೆ ಇಂಬಾಗುವ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯೆ ಹೌದು, ಐದುನೂರು ರೂಪಾಯಿಯಿಂದ ಐವತ್ತು ಸಾವಿರದವರೆಗೆ ನಮ್ಮ ಹಣ್ಣಕಥೆಗಳನ್ನು ವಿಸ್ತರಿಸುತ್ತಿರುವ ಪತ್ರಿಕೆಗಳು ಮತ್ತು ಪ್ರಾಯೋಜಕರು ಪ್ರಶಂಸಾರ್ಹರು.