ಕನ್ನಡದಲ್ಲಿ ತನಗ ಅವತರಿಸಿದ ಗಳಿಗೆ ವಿಶಿಷ್ಟವಾದದ್ದು ಎಂದು ಹೇಳಬೇಕು. ಹಲವರು ಈ ಪ್ರಕಾರದಲ್ಲಿ ಬರೆಯುತ್ತಿದ್ದಾರೆ. ಸಂಕಲನಗಳು ಬಂದಿವೆ. ಕಳೆಯ ನಡುವೆ ಬೆಳೆ ಕಾಣದಾಗುತ್ತಿದೆ ಎಂಬ ಆತಂಕವನ್ನು ಕಳೆಯುವಂತೆ ಭರವಸೆಯ ಬೆಳೆ ತೆಗೆದಿದ್ದಾರೆ ಸುನೀಲ ಹಳೆಯೂರು ಅವರು. ಓದಿದ್ದು ವಾಣಿಜ್ಯ ವೃತ್ತಿಯಲ್ಲಿ ಸಂಸ್ಥೆಯೊಂದರ ಹಿರಿಯ ಮಾರಾಟ ವ್ಯವಸ್ಥಾಪಕ. ಒಲಿದಿದ್ದು ಕಾವ್ಯಕ್ಕೆ: ಕಾವ್ಯದ ಆಂತರ್ಯದ ಪರಿಶೋಧನೆಯಲ್ಲಿ ವಿಶೇಷ ಆಸಕ್ತಿ. ಇದು ಸುನೀಲರ ಅನನ್ಯತೆ. ಕಾವ್ಯವನ್ನು ರಮಣೀಯವಾಗಿಸುವುದು ಅವರಿಗೆ ಮುಖ್ಯವಲ್ಲ.