ಒಂಬತ್ತು ದಶಕಗಳ ಕನ್ನಡ ಚಿತ್ರರಂಗದಲ್ಲಿ ಸುಮಾರು ಐದು ಸಾವಿರ ಚಿತ್ರಗಳು ಬಿಡುಗಡೆಯಾಗಿವೆ. ಬಹುಶಃ ಬೇರೆ ಯಾವುದೇ ಭಾಷೆಯಲ್ಲೂ ಬಿಡುಗಡೆಯಾಗದಷ್ಟು ಅತೀ ಹೆಚ್ಚು ಪೌರಾಣಿಕ ಚಿತ್ರಗಳು, ಐತಿಹಾಸಿಕ ಸಿನಿಮಾಗಳು, ಸಾಹಿತ್ಯಾಧಾರಿತ, ಕಲಾತ್ಮಕ, ಮಕ್ಕಳ, ಉಪಭಾಷೆಯ ಚಿತ್ರಗಳು ಕನ್ನಡದಲ್ಲಿ ಬಿಡುಗಡೆಯಾಗಿವೆ. ಕನ್ನಡ ಸಾಹಿತ್ಯ ಲೋಕದ ಹಲವು ದಿಗ್ಗಜರು ಚಿತ್ರರಂಗದಲ್ಲಿ ಪ್ರತ್ಯಕ್ಷವಾಗಿ ತೊಡಗಿಸಿಕೊಂಡಿದ್ದಾರೆ. ಹಲವರ ಕಥೆ, ಕಾದಂಬರಿಗಳು ಚಿತ್ರಗಳಾಗಿವೆ. ಕಾವ್ಯಗಳು ಹಾಡುಗಳಾಗಿವೆ. ಎಂಟು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪೈಕಿ ಮೂವರು ಚಿತ್ರ ನಿರ್ದೇಶನ ಮಾಡಿದ್ದಾರೆ. ಸಂಭಾಷಣೆಯೇ ಇಲ್ಲದ ಚಿತ್ರಗಳು, ಒಂದೇ ಟೇಕ್ನಲ್ಲಿ ತಯಾರಾದ ಚಿತ್ರಗಳು, ಅತ್ಯಂತ ಕಡಿಮೆ ಅವಧಿಯಲ್ಲಿ ಚಿತ್ರೀಕರಣವಾದ ಚಿತ್ರಗಳು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದ ಚಿತ್ರಗಳು, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡ ಚಿತ್ರಗಳು ಇಲ್ಲಿವೆ. ಇನ್ನು ಕನ್ನಡದಲ್ಲಾದ ಪ್ರಯೋಗಗಳಿಗೆ ಲೆಕ್ಕವಿಲ್ಲ. ಹಲವು ದಾಖಲೆಗಳು, ಸಾಹಸಗಳು, ವೈಶಿಷ್ಟ್ಯಗಳು, ಸ್ವಾರಸ್ಯಗಳು, ಹೆಗ್ಗಳಿಕೆಗಳು ಕನ್ನಡ ಚಿತ್ರರಂಗದಲ್ಲಿ ಆಗಿದೆ. ಇವೆಲ್ಲವನ್ನೂ ಮೆಲುಕು ಹಾಕುವ ಪ್ರಯತ್ನವೇ 'ಚಂದನವನದೊಳ್'. ಮುಂದಿನ ತಲೆಮಾರಿನ ಚಿತ್ರಕರ್ಮಿಗಳಿಗೆ ಮತ್ತು ಸಿನಿಮಾಸಕ್ತರಿಗೆ ಕೈಪಿಡಿಯಾಗಬಲ್ಲ ಪುಸ್ತಕ ಇದು.
ಸಿನಿಮಾ ಎನ್ನುವುದು ಕಲೆ, ಉದ್ಯಮ, ಮನರಂಜನೆ.. ಇವೆಲ್ಲಕ್ಕಿಂತ ಮೀರಿದ ಒಂದು ತುಡಿತ ಎನ್ನಬಹುದು. ಕಥೆ ಹೇಳುವ, ಕೇಳುವ ತೋರಿಸುವ ಆ ಹುರುಪು ಉತ್ಸಾಹಕ್ಕೆ ಬೆಲೆ ಕಟ್ಟಲು ಸಾಧ್ಯವೇ..? ಹಾಗೆ ನೋಡಿದರೆ ನನಗೆ ನನ್ನ ಸಂಸ್ಕೃತಿ ಕಲಿಸಿದರಲ್ಲಿ ಸಿನಿಮಾದ ಪಾಲು ಇದೆ. ಒಂದು ಬೇರೆಯದೇ ಆದ ಪ್ರಪಂಚವನ್ನು ಸೃಷ್ಟಿಸುವ ತಾಕತ್ತು ಸಶಕ್ತವಾಗಿರುವ ಕ್ಷೇತ್ರವಿದು. ನನ್ನೆಲ್ಲ ವಿದ್ಯಾಭ್ಯಾಸ ಮುಗಿದ ಮೇಲೆ ನನ್ನ ಮುಂದಿದ್ದ ಪ್ರಶ್ನೆ? ಬದುಕುವುದಕ್ಕಾಗಿ ಕೆಲಸ ಮಾಡುವುದಾ..? ಅಥವಾ ಕನಸನ್ನು ಈಡೇರಿಸಿಕೊಳ್ಳುವುದಕ್ಕಾಗಿ ಬದುಕುವುದಾ..?
ಕನ್ನಡದ ಪ್ರಸಿದ್ಧ ಲೇಖಕರು, ಪತ್ರಕರ್ತರು ಆದ ಗಣೇಶ್ ಕಾಸರಗೋಡು ಅವರು ‘ವಿಜಯವಾಣಿ’ ಪತ್ರಿಕೆಯಲ್ಲಿ ಪ್ರತಿವಾರ ಕಲಾವಿದರ ಕುರಿತು ಬರೆದ ‘ಬೆಳ್ಳಿತೆರೆಯ ಬಂಗಾರದ ಗೆರೆ’ ಅಂಕಣ ಬರಹ ಈಗ ಪುಸ್ತಕವಾಗಿದೆ.
ಕನ್ನಡದ ಪ್ರಸಿದ್ಧ ಲೇಖಕರು, ಪತ್ರಕರ್ತರು ಆದ ಗಣೇಶ್ ಕಾಸರಗೋಡು ಅವರು ಬರೆದಿರುವ ‘ಲಾಸ್ಟ್ ಡೇಸ್ ಆಫ್ ಲೆಜೆಂಡ್ಸ್’ ಪುಸ್ತಕವಿದು. ಈ ಪುಸ್ತಕ ಓದುತ್ತಾ ಹೋದರೆ ಸದಾ ಕಾಡುವ ಕಲಾವಿದರ ಕಥಾನಕ ನಿಮ್ಮದಾಗುತ್ತದೆ.
ಬೇರೆಯವರಿಗೆ ಕತೆ ಹೇಳುವ, ಬೇರೆಯವರ ಕತೆ ಕೇಳಿಸಿಕೊಳ್ಳುವ ಕಲೆ ಸಿದ್ಧಿಸಿಕೊಂಡಿರುವ ಏಕೈಕ ಪ್ರಾಣಿ ಮನುಷ್ಯ. ಕತೆಗಳಿರುವವರೆಗೂ ಮನುಷ್ಯನಿರುತ್ತಾನೆ. ಈಗ ಸ್ಮಾರ್ಟ್ ಯುಗ. ಎಲ್ಲರ ಕೈಯಲ್ಲೊಂದು ಸ್ಮಾರ್ಟ್ ಫೋನು. ಎಲ್ಲರ ಎದೆಯೊಳಗೆ ಕತೆಗಳಿರುವ ಕಾಲ. ಇಂತಹ ಕತೆಗಳನ್ನು ಸಶಕ್ತವಾಗಿ ದಾಟಿಸುವ ಮಾಧ್ಯಮ ದೃಶ್ಯಮಾಧ್ಯಮ. ಬನ್ನಿ ನಿಮ್ಮೊಳಗಿನ ಕತೆಗಳನ್ನು ದೃಶ್ಯಮಾಧ್ಯಮಕ್ಕೆ ತರೋಣ, ಲೆಟ್ಸ್ ಮೇಕ್ ಎ ಶಾರ್ಟ್ ಫಿಲಂ!