• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
ಇರುಳ ಬಾಗಿಲಿಗೆ ಕಣ್ಣ ದೀಪ | Irula Bagilige Kanna Deepa

ಜೀವ ಕಾರುಣ್ಯದ ಕವಿತೆಗಳನ್ನು ಒಳಗೊಂಡ ಈ ಕೃತಿಯನ್ನು ಓದಲು ಹತ್ತು ಹಲವು ಕಾರಣಗಳಿವೆ. ಬಹುತ್ವದ ಆಶಯವನ್ನು ಕಟ್ಟಿಕೊಡುವ ಸಂಕಲನ ಸಮಕಾಲೀನ ವೈರುಧ್ಯಗಳ ಮೇಲೆ ಬೆಳಕು ಚೆಲ್ಲುತ್ತದೆ.

₹140   ₹119

ಒಂದು ಆದಿಮ ಪ್ರೇಮ | Ondu Adima Prema

ಅವರವರ ಅಂತರಂಗದ ಅರಿವು ಅವರವರಿಗೇ ಎಂಬ ಭಾವವಿಲ್ಲಿದೆ. ಚಿಗುರಿದ ಆ ಮರದಲ್ಲಿ ಕುಳಿತು ಒಗರು ಮೆಲ್ಲುವ ಎಲ್ಲ ಕೋಗಿಲೆಗಳೂ ಹಾಡುತ್ತಿರುವುದಿಲ್ಲ ಎಂಬ ಸಾಲು ಮನಮುಟ್ಟುತ್ತದೆ. ಒಂದು ಮರ ಕಡಿದು ಉರುಳಿಸಿದ ಮೇಲೆ ಎಂಬ ಕವಿತೆ ಕವಯಿತ್ರಿಯೊಳಗಿನ ಪ್ರಕೃತಿ ಪ್ರೇಮ ಮತ್ತು ಜೀವನ ಪ್ರೀತಿಗೆ ಸಾಕ್ಷಿಯಂತಿದೆ. ಒಂದು ಮರ ಕಡಿದು ಉರುಳಿಸಿದ ಮೇಲೆ ಚಿಟ್ಟೆ ಪಟಗುಡುವುದಿಲ್ಲ ಹಕ್ಕಿ ಹಾಡುವುದಿಲ್ಲ ಗೂಡು ಮಾಡುವುದಿಲ್ಲ ಅಳಿಲು ಆಡುವುದಿಲ್ಲ ಹೀಗೆ ಒಂದು ಮರದೊಂದಿಗೆ ಅಂತ್ಯವಾಗುವ ಹಲವು ಜೀವಗಳ ಬದುಕಿನ ವ್ಯಥೆ ಇಲ್ಲಿ ವ್ಯಕ್ತವಾಗಿದೆ.

₹150   ₹113

ಗಾಯಗೊಂಡ ಸಾಲುಗಳು | Gayagonda Salugalu

ಸದಾಶಿವ ಸೊರಟೂರು ಅವರ ಬರಹಕ್ಕೆ ಇರುವ ಶಕ್ತಿಗೆ ನಾನು ಬೆರಗಾಗಿದ್ದೇನೆ. ಅವರ ಬರಹಕ್ಕೆ ಮಾಂತ್ರಿಕ ಶಕ್ತಿ ಇದೆ. ಇವರು ಕಥೆ ಬರೆಯಲಿ, ಕವಿತೆ ಬರೆಯಲಿ, ಲೇಖನ ಬರೆಯಲಿ ಎಲ್ಲದರಲ್ಲೂ ಸೊರಟೂರುತನವನ್ನು ಉಳಿಸುತ್ತಾರೆ. ಇವರ ಅಪಾರ ಓದು, ತನ ಓದುಗನನು ಗನನ್ನು ಓದಲು ಇವರು ಪಟ್ಟಿರುವ ಶ್ರಮ ಇವರ ಬರಹಗಳ ಯಶಸ್ಸಿಗೆ ಕಾರಣ. ಈಗ 'ಗಾಯಗೊಂಡ ಸಾಲುಗಳು ಕವನ ಸಂಕಲನದ ಜೊತೆಗೆ ಹಾಜರಾಗಿದ್ದಾರೆ. ಇವರ ಕವಿತೆಗಳಲ್ಲಿ ಕಳೆದು ಹೋಗೋಣ ಬನ್ನಿ ಜಿ. ಎನ್. ಮೋಹನ್

₹110   ₹83

ನರಕದ ಕೆನ್ನಾಲಿಗೆಯಂಥ ನಿನ್ನ ಬೆನ್ನಹುರಿ | Narakada Kennaaligeyantha Ninna Bennahuri

ಕವಿತೆಗೆ ಓದುಗರೇ ಇಲ್ಲವೆನ್ನುವವರ ಮುಂದೆ ಇಲ್ಲಿನ ಕವಿತೆಗಳನ್ನು ನಿಲ್ಲಿಸಬೇಕು. ಯಾಕೆಂದರೆ ಅಬ್ದುಲ್ ರಶೀದ್ ಅವರ ಕವಿತೆಗಳನ್ನು ಓದುವುದೇ ಒಂದು ಪರಮಸುಖ. ಅಷ್ಟು ತೀಕ್ಷ್ಮವಾದ ವೇಗ ಇಲ್ಲಿನ ಕವಿತೆಗಳಿಗಿವೆ. ಇಲ್ಲಿನ ಕವಿತೆಗಳು ಓದುಗನೊಳಗೆ ಹುದುಗಿರುವ ಕವಿಯನ್ನು ಬಡಿದೆಬ್ಬಿಸುವುದಂತು ನಿಜ!

₹130   ₹98

ನಿಶ್ಚಲವ ಕಲಕಿದ ಹಕ್ಕಿ | Nischalava Kalakida Hakki

ಆವರಣಗಳಿಂದ ಕಳಚಿಕೊಂಡ ಆತ್ಮದ ಹೊನಲು ಈ ಕವಿತೆಗಳಲ್ಲಿವೆ.. ವಿವರಿಸಲು ಹೋದರೆ ಮಾತು ಸೋಲುತ್ತದೆ. ಈ ಕವಿತೆಗಳನ್ನು ಓದಿದಾಗ, ಒಂದು ವಿಚಿತ್ರವಾದ ನಿರುಮ್ಮಳ ಶಾಂತ ಸ್ಥಿತಿಯ ಅನುಭೂತಿ ಉಂಟಾಗುತ್ತದೆ.

₹100   ₹75

ನೀಲಿ ಶಾಯಿಯ ಕಡಲು | Neeli Shayiya Kadalu

ಗೊತ್ತಿದೆ, ಗೊತ್ತಾಗುತ್ತಿದೆ ಎಂಬ ಭಾಸವನ್ನು ಹುಟ್ಟಿಸುತ್ತಲೆ ಗೊತ್ತಿಲ್ಲದ ವಿಸ್ತಾರದ ಕಡೆಗೆ ಇಲ್ಲಿನ ಕವಿತೆಗಳು ತುಡಿಯುತ್ತವೆ.

₹120   ₹90

ಹಕ್ಕಿ ಮತ್ತು ಹುಡುಗಿ | Hakki Mattu Hudugi

ವೀರಲೋಕ ಮತ್ತು ಪ್ರಜಾವಾಣಿ ಸಹೋಯೋಗದ ಈ ʼಕಾವ್ಯಸಂಕ್ರಾಂತಿ ಸ್ಪರ್ಧೆʼಗೆ ಬಂದಿದ್ದ ಸಾವಿರಾರು ಕವಿತೆಗಳಲ್ಲಿ ಈ ಆಯ್ದ 50 ಕವಿತೆಗಳು ನಮ್ಮ ಮುಂದೆ ಇದ್ದವು. ಈ ಸಂಕಲನದ ಪ್ರತಿ ಕವಿತೆಯೂ ಓದಿದಾಗ ವಿಶೇಷ ಅನಿಸಿದೆ. ಅಂತಿಮವಾಗಿ ಆರು ಕವಿತೆಗಳನ್ನು ಆಯ್ಕೆ ಮಾಡುವುದು ನಿಜವಾಗಿಯೂ ಸವಾಲಿನದ್ದಾಗಿತ್ತು. ಯಾವುದೇ ಕವಿಯನ್ನು ತೂಕ ಮಾಡಲು ಸಾಧ್ಯವಿಲ್ಲ. -ಎಚ್‌.ಎಸ್‌.ವೆಂಕಟೇಶಮೂರ್ತಿ, ತೀರ್ಪುಗಾರರು

₹150   ₹113

ಹರಿವ ಕನ್ನಡಿ | Hariva Kannadi

ಖ್ಯಾತ ಕವಿಗಳಾದ ಜಯಂತ ಕಾಯ್ಕಿಣಿಯವರು ಹೇಳಿರುವಂತೆ ಬಿಟ್ಟುಬಿಡದೆ ಓದಿಸಿಕೊಳ್ಳುವ ಕಾಡುವ ಗುಣ ಇಲ್ಲಿನ ಕವಿತೆಗಳಿಗೆ ಇವೆ.

₹120   ₹90