nil
ಕಸ್ತೂರಿ ಬಾಯರಿ ಅವರ ಸಮಗ್ರ ಕಥಾ ಸಂಕಲನ ʼಪಾರಿಜಾತʼ ಪಾರಿಜಾತ : ಸಮಗ್ರ ಕಥೆಗಳು / Paarijaata parijatha kasturi bayari / kasturi baayari / samagra kathegalu
ಮಕ್ಕಳ ಸಾಹಿತ್ಯ ಎಂದಾಗ. ಯಾವ ವಯಸ್ಸಿನ ಮಕ್ಕಳು ಎಂಬ ವಿಚಾರವೂ ಗಮನಾರ್ಹ ಸಂಗತಿಯಾಗುತ್ತೆದೆ. ಹದಿನೈದು ವರ್ಷದೊಳಗಿನ ಮಕ್ಕಳನ್ನು, ಮುಗ್ಧರು ಎಂದು ಗುರುತಿಸಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಕ್ಕಳು ಬಹು ಬೇಗ ಮುಗ್ಧತೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಅನಿರ್ಬಂಧಿತ ಮನರಂಜನಾ ಯುಗದಲ್ಲಿ ನಾವು ಬದುಕುತ್ತಿದ್ದು, ಅದು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂಬುದನ್ನು ಗಮನಿಸದಿರುವಂತಿಲ್ಲ. ಆದುದರಿಂದ ಈ ಕಾಲದಲ್ಲಿ ಹುಟ್ಟಿದ ಮಕ್ಕಳ ಸಾಹಿತ್ಯ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಪ್ರಸ್ತುತ ಪ್ರೊ. ನಾಗ ಎಚ್. ಹುಬ್ಬಿ ಸಂಪಾದಕರಾಗಿ ತಂದಿರುವ ಸಂಕಲನದ ಆಯ್ಕೆಯ ಚೌಕಟ್ಟು, ಹೀಗೆ ಪ್ರಶಸ್ತಿ ವಿಜೇತ ಮಕ್ಕಳ ಸಾಹಿತಿಗಳಿಗೆ ಎಂಬ ವಿಚಾರ ಗಮನಾರ್ಹ ಸಂಗತಿಯಾಗುತ್ತದೆ. ಈ ಸಂಕಲನದ ಸಂಪಾದಕರಾಗಿರುವ ಪ್ರೊ. ನಾಗ ಹುಬ್ಬಿ ಕನ್ನಡ ನಾಡಿನಿಂದ ಸಾವಿರಾರು ಮೈಲಿ ದೂರದಲ್ಲಿರುವ ರಾಂಚಿ (ಝಾರ್ಖಂಡ್)ಯಲ್ಲಿ ಕುಳಿತು ಕನ್ನಡ ಸಾಹಿತ್ಯಕ್ಕೆ ನಿರಂತರವಾಗಿ ಕೊಡುಗೆ ನೀಡಿದ್ದಾರೆ. ಕತೆಗಾರರಾಗಿ, ಅನುವಾದಕರಾಗಿ ಹತ್ತಾರು ಕೃತಿಗಳನ್ನು ನೀಡಿದ್ದಾರೆ. ಮಕ್ಕಳ ಸಾಹಿತ್ಯ ಕೃತಿಗಳನ್ನು ಬೇರೆ ಭಾಷೆಗಳಿಂದ ಅನುವಾದಿಸಿದ್ದಾರೆ. ಬುಡಕಟ್ಟು ಜನಾಂಗದ ಅಧ್ಯಯನ ಕ್ಷೇತ್ರಕ್ಕೆ ಅವರ ಕೊಡುಗೆ ಅಮೂಲ್ಯವಾದುದು. 'ಜೇನುಹುಳುವಿನಂತೆ ಸದಾಕಾಲವೂ ಸೃಜನಶೀಲವಾಗಿರುವ ಅವರ ಈ ಮಕ್ಕಳ ಸಾಹಿತ್ಯ ಸಂಕಲನ ಅವರ ಕಾರ್ಯತತ್ಪರತೆಗೆ ಒಂದು ಹೊಸ ಸೇರ್ಪಡೆ.
ಸವಿರಾಜ ಆನಂದೂರು ಕಾವ್ಯಲೋಕದಿಂದ ಕಥಾ ಲೋಕಕ್ಕೆ `ಪುರಾಣ ಗಿರಾಣ ಇತ್ಯಾದಿ' ಮೂಲಕ ಪಾದಾರ್ಪಣೆ ಮಾಡಿದ್ದಾರೆ. ಈ ಸಂಕಲನಕ್ಕೆ ಬೇಕಾದ ಅಪಾರ ಓದು, ವಿಶ್ಲೇಷಣೆ, ಅದಕ್ಕೆ ಬೇಕಾದ ಪೂರ್ವ ಸಿದ್ಧತೆ, ಕತೆಗೆ ಬೇಕಾದ ಚೌಕಟ್ಟಿನೊಳಗೆ ಕೂರಿಸುವ ಜಾಣ್ತನ, ಎಲ್ಲವೂ ಅವರಿಗೆ ಈ ಕಥಾ ಸಂಕಲನದಲ್ಲಿ ಸಿದ್ಧಿಸಿದೆ. ಚೌಕಟ್ಟಿನಾಚೆಗೂ ಕತೆ ಜಿಗಿತವನ್ನು ಕಾಣುತ್ತವೆ, ಕಾಡುತ್ತವೆ.
ತುಂಬ ಹಿಂದಿನಿಂದಲೂ ಅತಿಮಾನುಷತೆಯ ಬಗ್ಗೆ ಕತೆಗಳು ಇದ್ದವಾದರೂ ಆಗ ಸರಿಯಾದ ಸಾಕ್ಷಿಗಳಿಲ್ಲದೇ ಅವೆಲ್ಲವೂ ಕೇವಲ ಕತೆಗಳಾಗಿ ಉಳಿದು ಹೋಗಿದ್ದವು. ಆದರೆ ಈಗ ಹಾಗಲ್ಲ, ಪ್ಯಾರಾನಾರ್ಮಲ್ ಕ್ಷೇತ್ರವೆನ್ನುವುದು ಸಾಕಷ್ಟು ಬೆಳವಣಿಗೆ ಕಂಡಿದೆ. ತಾರ್ಕಿಕ ವಿಶ್ಲೇಷಣೆ, ಸಂಶೋಧನಾ ಸಾಮರ್ಥ್ಯ ಮತ್ತು ಅಧ್ಯಯನಗಳಿಂದಾಗಿ ಒಂದು ಕಾಲಕ್ಕೆ ಕೇವಲ ಭ್ರಮೆಯಷ್ಟೇ ಎನ್ನಿಸುವಂತಿದ್ದ ಕೆಲವು ವಿಷಯಗಳು ಈಗ, ಕೇವಲ ಭ್ರಮೆಯಲ್ಲ, ಭ್ರಮೆಯನ್ನು ಮೀರಿದ್ದು ಇನ್ನೇನೋ ಇದೆ ಎನ್ನುವ ಭಾವನೆಯನ್ನು ಹುಟ್ಟಿಸುವಲ್ಲಿ ಯಶಸ್ವಿಯಾಗಿವೆ. ಸರಿಯಾಗಿ ಗಮನಿಸಿದರೆ ಪ್ಯಾರಾನಾರ್ಮಲ್ ಕ್ಷೇತ್ರ ಕೂಡ, ಸೈಕಾಲಜಿ, ಭೌತಶಾಸ್ತ್ರ ಪರಿಸರ ವಿಜ್ಞಾನ ಮತ್ತು ಮನುಷ್ಯ ಗ್ರಹಿಕೆಯ ಭಾಗವೇ ಎನ್ನುವುದು ಅರ್ಥವಾಗುವುದು ಕಷ್ಟವೇನಲ್ಲ, ಎಲ್ಲಕ್ಕಿಂತ ಹೆಚ್ಚಾಗಿ ಈ ಬಗೆಯ ಓದು, ಓದುಗನ ಕಲ್ಪನಾ ಶಕ್ತಿಯನ್ನು ಒರೆಗೆ ಹಚ್ಚುತ್ತದೆ. ಓದುಗನ ಆಲೋಚನಾ ಶಕ್ತಿಯನ್ನು ವೃದ್ಧಿಸುತ್ತಲೇ ಈ ರೀತಿಯ ವಸ್ತುಗಳೆಡೆಗಿನ ಸಿನಿಕತನವನ್ನೂ ಸಹ ಕಡಿಮೆ ಮಾಡುತ್ತವೆ. ಹಾಗೆ ಮಾಡುವುದರ ಮೂಲಕ ಮುಕ್ತ ಮನಸ್ಸಿನಿಂದ ಈ ಕ್ಷೇತ್ರದ ಬಗ್ಗೆ ಯೋಚಿಸುವಂತೆ ಮಾಡುತ್ತದೆ. ಅನಾವಶ್ಯಕವಾಗಿ ಭಯ ಹುಟ್ಟಿಸುವ ವಿಷಯಗಳು ಅರಿವಿಗೆ ಸಿಕ್ಕುತ್ತವೆ. ಇಲ್ಲಿ ನಮ್ಮನ್ನೂ ಮೀರಿದ್ದು ಇನ್ನೇನೋ ಇದೆ ಎನ್ನುವುದು ಆರಿವಾಗಿ ಭಯ ಕಡಿಮೆಯಾಗಿ ಆತ್ಮ ವಿಶ್ವಾಸ ಹೆಚ್ಚುತ್ತದೆ ಎಂದರೂ ಅತಿಶಯೋಕ್ತಿಯಲ್ಲ.
ಜಯಪ್ರಕಾಶ ಮಾವಿನಕುಳಿಯವರು ಸ್ವತಂತ್ರ ಭಾರತದಲ್ಲಿ ಚಡಪಡಿಸುತ್ತಿರುವ ಸೂಕ್ಷ ಸಂವೇದನೆಯ ವ್ಯಕ್ತಿಗಳ ಅಪಾರ ಸಂಕಷ್ಟಗಳನ್ನು ಸೃಜನಶೀಲತೆಯ ಧ್ವನಿಪೂರ್ಣವಾಗಿ ತಮ್ಮ ಅತ್ಯಂತ ಕಥೆಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ಮಾನವೀಯ ಮೌಲ್ಯಗಳು ಸಮಾಜದಲ್ಲಿ ಅಧೋಗತಿಗೆ ಹೋಗುತ್ತಿರುವ ಬಗ್ಗೆ ಅಪಾರ ಸಿಟ್ಟು ಅವರ ಕಥೆಗಳಲ್ಲಿ ಹಾಸುಹೊಕ್ಕಿವೆ. ಅವರು ವರ್ತಮಾನದ ಸಂಗತಿಗಳನ್ನು ಹೇಳುತ್ತಲೇ ಭವಿಷ್ಯದ ಬೆಳಕಿನ ಬಗ್ಗೆ ಬರೆಯುತ್ತಾರೆ. ತಮ್ಮ ಪ್ರತಿಭಾ ಶೈಲಿಯ ಮೂಲಕ ಅವರು ತಮ್ಮ ಕಥೆಗಳಿಗೆ ಸ್ನಾಯುಶಕ್ತಿಯನ್ನು ತುಂಬಿದ್ದಾರೆ.
Showing 301 to 330 of 534 results