ನಗರದಲ್ಲಿ ನಡೆಯುವ ಅನೇಕ ರೀತಿಯ ಮೋಸಗಳು, ದರೋಡೆ, ಸುಲಿಗೆ, ಕೊಲೆ, ಭಯೋತ್ಪಾದನೆ. ಇವನ್ನು ತಡೆಯಲು, ಜನಸಾಮಾನ್ಯರಿಗೆ ರಕ್ಷಣೆಕೊಡಲು, ಅವರಿಗೆ ಸತ್ಯ ತಿಳಿಸಲು ಅನೇಕ ಪ್ರಯತ್ನಗಳನ್ನು ಮಾಡುವಗುಟ್ಟಿನ ಗುಂಪು – ರಹಸ್ಯಕೂಟ. ಜನಸಾಮಾನ್ಯರು ಎದುರಿಸುವ ದೈನಂದಿನ ಅನೇಕ ಸಮಸ್ಯೆಗಳಿಗೆ ತಮ್ಮದೇಯಾದ ರೀತಿಯಲ್ಲಿ ಪರಿಹಾರ ನೀಡಲುಯತ್ನಿಸುವ ಕಾದಂಬರಿ
nil
28.9.2024 ರಂದು ಪುಸ್ತಕ ಬಿಡುಗಡೆ ಬಂಗಾಳದ ಚತುರೆಯೊಬ್ಬಳು ಮೈಸೂರಿನ ಅರಮನೆಯ ಆಶ್ರಯ ಪಡೆದ ಪರಿಣಾಮದಿಂದಾಗಿಯೇ ನಮ್ಮ ರಾಷ್ಟ್ರಗೀತೆ ಆ ರಾಗರೂಪ ಪಡೆದದ್ದು! ತಿರುವಾಂಕೂರಿನ ಆಡಳಿತ ನೆಲೆ ನೀಡದ ದಲಿತವೈದ್ಯನಿಗೆ ಮೈಸೂರು ಆಶ್ರಯ ಕೊಟ್ಟ ಪರಿಣಾಮವೇ ಸ್ವಾಮಿ ವಿವೇಕಾನಂದರು ಸಿಡುಬುರೋಗ ದಿಂದ ಬಿಡುಗಡೆ ಪಡೆದು ಚಿಕಾಗೋಗೆ ಹೋಗಲು ಸಾಧ್ಯವಾದದ್ದು! ಕೋಲಾರದ ಚಿನ್ನದಗಣಿಗೆ ವಿದ್ಯುತ್ ಸರಬರಾಜು ಮಾಡಿ ಮುಂದೆ ಬೆಂಗಳೂರು ಸೇರಿದಂತೆ ನಮ್ಮ ನೆಲವನ್ನು ಬೆಳಗಿಸಿದ್ದು ಮೈಸೂರಿನ ರಾಣಿಯ ಪ್ರೋತ್ಸಾಹದಲ್ಲಿ ಸ್ಥಾಪಿತಗೊಂಡ ಕಾವೇರಿ ವಿದ್ಯುತ್ ಸ್ಥಾವರ! ಆ ರಾಣಿಯ ಮುಂದಾಲೋಚನೆಯಿಂದಾಗಿಯೇ ಸಿಡುಬು, ಪ್ಲೇಗ್ ಮುಂತಾದುವಕ್ಕೆ ಲಸಿಕೆಗಳು ಮೈಸೂರು ಪ್ರಾಂತ್ಯದಲ್ಲಿ ತಯಾರಾದದ್ದು. ಮಾರಿಕಣಿವೆಯಲ್ಲಿ ಕೃಷಿನೀರಾವರಿ ಅಣೆಕಟ್ಟು ನಿರ್ಮಾಣಗೊಂಡದ್ದು, ಬೆಂಗಳೂರಿನಲ್ಲಿ ಮಲ್ಲೇಶ್ವರಂ, ಬಸವನಗುಡಿಗಳು ಪ್ರಾರಂಭವಾದದ್ದು: ಟಾಟಾ ಅವರ ಆಶಯದ ವಿಜ್ಞಾನ ಸಂಸ್ಥೆ ನೆಲೆಗೊಂಡದ್ದು... ಇಂತಹ ಅದೆಷ್ಟೋ ಅಪರೂಪದ ಅಮೂಲ್ಯವಾದ ಕೈಂಕರ್ಯಗಳನ್ನು ಕೊಡುಗೆಯಾಗಿಸಿದ, ಜನಮನದಲ್ಲಿ ಹೊಸಚಿಂತನೆಗಳ ಬೀಜ ಬಿತ್ತಿದ, ಮೈಸೂರು ಪ್ರಾಂತ್ಯದ ಬೆಳವಣಿಗೆಯ ರೂವಾರಿಯಾಗಿದ್ದ ಅಪರೂಪದ ರಾಣಿ ಕೆಂಪನಂಜಮ್ಮಣ್ಣಿ ಯವರ ಹೃದಯಸ್ಪರ್ತಿ ಜೀವನಗಾಥೆ ಈ ಕೃತಿ. *-ಡಾ| ಕೆ.ಎನ್. ಗಣೇಶಯ್ಯ
ರಾವಣ : ರಾಜಾ ರಾಕ್ಷಸಾಂಚಾ (ರಾಕ್ಷಸರ ರಾಜ) ॥✍ ಮರಾಠಿ ಸಾಹಿತ್ಯ ಲೋಕದಲ್ಲಿ ಮೈಲಿಗಲ್ಲಾಗಿರುವ ಬಹುಚರ್ಚಿತ ಕಾದಂಬರಿ! ರಾವಣನನ್ನು ಅವನು ವಾಸ್ತವದಲ್ಲಿ ಹೇಗಿದ್ದನೋ, ಹಾಗೆಯೇ ಸಾಕ್ಷ್ಯಾಧಾರಗಳೊಂದಿಗೆ ಮಂಡಿಸುವ ದಿಟ್ಟ ಪ್ರಯತ್ನ.
'ಲೋಕ ರಾವಣ' ಲಂಕಾಧಿಪತಿಯಾದ ದಶಕಂಠ ರಾವಣನನ್ನು ಕುರಿತ ಕಾದಂಬರಿ. ಲೋಕ ಲೋಕಗಳನ್ನು ನಡುಗಿಸಿದ. ಪರಸ್ತ್ರೀ ಅಪಹಾರಕನಾದ ದುಷ್ಟನೆಂದು ರಾಮಾಯಣದಲ್ಲಿ ಚಿತ್ರಣಗೊಂಡಿರುವ ಪಾತ್ರ ಅದು. ಹುಟ್ಟಿನಿಂದ ಮಹಾ ತಪಸ್ವಿಯಾದ ವಿಶ್ರವಸ್ಸಿನ ಮಗ, ವೇದಾದಿಗಳನ್ನು ಓದಿದವನು. ಬ್ರಹ್ಮ, ಪರಮೇಶ್ವರರ ಅನುಗ್ರಹಕ್ಕೆ ಪಾತ್ರನಾದವನು. ಶಿವಭಕ್ತ. ಇಷ್ಟಿದ್ದೂ ರಾವಣನಂತಹ ಮೇಧಾವಿ ಯಾಕೆ ದುಷ್ಟನಾದ? ಲೋಕಪೀಡಕನಾದ ಅದಕ್ಕೆ ಕಾರಣವಾದುದು ಅವನ ಹುಟ್ಟಿ? ಸಂಸ್ಕಾರವೆ? ಅವನಿಗಾದ ಕಹಿ ಅನುಭವಗಳೆ? ಅಥವಾ ಅವನ ವ್ಯಕ್ತಿತ್ವವೇ ಆ ರೀತಿಯೆ? ಅವನ ಅಂತರಂಗವನ್ನು ಪ್ರವೇಶಿಸದೆ ಉತ್ತರ ದೊರೆಯಲಾರದು. ರಾವಣನ ಅಂತರಂಗವನ್ನು ಬಗೆಯುವ ಅಂತಹ ಒಂದು ಪ್ರಯತ್ನವೇ ಈ ಕಾದಂಬರಿ.. 'ಲೋಕ ರಾವಣ'
ವಾಸ್ತವ-ಕಲ್ಪನೆ-ಅತೀಂದ್ರಿಯ-ದೈವೀಕ ಈ ಎಲ್ಲ ನೆಲೆಗಳ ಚಿತ್ರಣವನ್ನೂ ಏಕತ್ರಗೊಳಿಸಿ ಪ್ರತಿಮಾತ್ಮಕವಾಗಿ ಕಟ್ಟಿಕೊಡುವಲ್ಲಿ ಆಶಾ ರಘು ಅವರು ಯಶಸ್ವಿಯಾಗಿದ್ದಾರೆ. ಸ್ವಾರಸ್ಯಕರವಾಗಿ ಕಥಾನಕವನ್ನು ಕಟ್ಟಿಕೊಡುವುದರಲ್ಲ. ಭಾಷೆಯನ್ನು ಸಮರ್ಥವಾದ ವಾಹಕವಾಗಿಸುವಲ್ಲ ಆಶಾ ಅವರು ಸಿದ್ಧಹಸ್ತರು. ಜೀವನ, ಅದರ ಅರ್ಥ, ಪ್ರೇಮ-ವಿಯೋಗ-ಮಿಲನ-ಆತ್ಮ-ಪರಮಾತ್ಮ ಹೀಗೊಂದು ಮಾಯಾಜಗತ್ತನ್ನು ಅನನ್ಯವಾಗಿ ಸೃಷ್ಟಿಸುವ 'ವಕ್ಷಸ್ಥಲ' ಕಾದಂಬರಿ ಓದುಗರ ಹೃದಯಕ್ಕೆ ಹತ್ತಿರವಾಗಲಿ ಎಂದು ಆಶಿಸುತ್ತೇನೆ. ರಂಜನಿ ಪ್ರಭು
Showing 631 to 660 of 805 results