• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Sub Categories

Authors

Languages

Book Type

Clear All
Filter
ದೇವ ಸನ್ನಿಧಿ | Deva sannidhi

ನಮ್ಮ ದೇಶದಲ್ಲಿ ರಾಮಾಯಣ, ಮಹಾಭಾರತ, ಭಾಗವತಗಳಿಗೆ ಸಂಬಂಧಪಡದ ನದಿಗಳಿಲ್ಲ, ಬೆಟ್ಟಗಳಿಲ್ಲ, ಯಾವ ಊರೂ ಇಲ್ಲ. ಹಾಗಾಗಿ ಇಡೀ ಭಾರತವೇ ಒಂದು ತೀರ್ಥಕ್ಷೇತ್ರ. ತೀರ್ಥಯಾತ್ರೆ ಅಭಯದ ಸಂಕೇತ. ಮನಸ್ಸಿಗೆ ಬಲ ಕೊಡುವ ಪ್ರಕ್ರಿಯೆ. ಭರವಸೆ ಕುಗ್ಗಿದಾಗ, ಚೈತನ್ಯ ತರುತ್ತದೆ. ಮನುಷ್ಯನ ತಿರುಗಾಟಕ್ಕೊಂದು ಆಧ್ಯಾತ್ಮಿಕ ಸ್ಪರ್ಶ ನೀಡುವುದೇ ತೀರ್ಥಯಾತ್ರೆ.. ಪ್ರವಾಸ ಲೌಕಿಕ ಅನುಭವವನ್ನು ಕೊಟ್ಟರೆ, ತೀರ್ಥಯಾತ್ರೆ ಅಲೌಕಿಕ ಅನುಭವವನ್ನು ತಂದುಕೊಡುತ್ತದೆ.

₹250   ₹199.99

Buy Now
ದೇಶ ವಿಭಜನೆಯ ಪಾಪ ಹೊತ್ತವರು | Desha Vibhajaneya Papa Hottavaru

ದೇಶ ವಿಭಜನೆಯನ್ನು ಕುರಿತು ಈಗಾಗಲೇ ಲೆಕ್ಕವಿಲ್ಲದಷ್ಟು ಪುಸ್ತಕಗಳು ಬಂದಿವೆ. ಹಾಗೆ ನೋಡಿದರೆ ಇದೊಂದು ಮುಗಿಯದ ಸರಕು.ಕಾಲದಿಂದ ಕಾಲಕ್ಕೆ ಈ ದುರಂತವು ಬೇರೆ ಬೇರೆ ಮಾಹಿತಿ, ಅಂಕಿ-ಅಂಶ,ಸಂಶೋಧನೆ, ಚರಿತ್ರೆಯ ಅಧ್ಯಯನಗಳೊಂದಿಗೆ ಹೊಸ ಹೊಸ ಕೃತಿಗಳನ್ನು ಸೃಷ್ಟಿಸುತ್ತಿದೆ. ಅಂದಂತೆ,ಭಾರತದಲ್ಲಿ ಸಮಾಜವಾದದ ಯುಗದಲ್ಲಿ ಒಬ್ಬರಾದ ರಾಮ ಮನೋಹರ ಲೋಹಿಯಾ ಅವರು, ಅಖಂಡ ಭಾರತದ ಇಬ್ಭಾಗಕ್ಕೆ ನೇರ ಸಾಕ್ಷಿಯಾಗಿದ್ದವರು. ನೇರ ನಡೆ-ನುಡಿಗಳಿಗೆ ಮತ್ತು ನಿಲುವುಗಳಿಗೆ ಹೆಸರಾಗಿದ್ದ ಅವರು, ಭಾರತದ ಚಿಂತಕರ ವರ್ತುಲ ಮತ್ತು ಸಾರ್ವಜನಿಕ ಬದುಕಿನ ಮೇಲೆ ಬೀರಿರುವ ಪ್ರಭಾವ ಅಗಾಧವಾದುದು.ಅದರಲ್ಲೂ ಲೋಹಿಯಾ ಅವರು ದೇಶ ವಿಭಜನೆಗೆ ಕಾರಣರಾದವರು ಯಾರೆಂದು ಬಗೆದು ನೋಡಿ ಬರೆದಿರುವ The Guilty Men of India's Partition ಅತ್ಯಂತ ಮಹತ್ವದ ಕೃತಿಯಾಗಿದೆ.ಇದನ್ನು ಹೆಸರಾಂತ ಲೇಖಕ ಡಾ.ಟಿ ಎನ್ ವಾಸುದೇವಮೂರ್ತಿ ಅವರು "ದೇಶ ವಿಭಜನೆಯ ಪಾಪ ಹೊತ್ತವರು" ಎನ್ನುವ ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಿ ಕೊಟ್ಟಿದ್ದಾರೆ. ಇದಕ್ಕಾಗಿ ನಾವು ಅವರಿಗೆ ಆಭಾರಿಗಳಾಗಿದ್ದೇವೆ ದೊಡ್ಡದೊಡ್ಡ ಪದಗಳ ಬಾರವಿಲ್ಲದೆ ಸಹಜವಾದ ತಿಳಿಗನ್ನಡದಲ್ಲಿ ಮೂಡಿಬಂದಿರುವ ಈ ಭಾಷಾಂತರವು ಕನ್ನಡ ವಾಙ್ಮಯಕೊಂದು ಬೆಲೆಯುಳ್ಳ ಸೇರ್ಪಡೆಯಾಗಿದೆ

₹175   ₹156

Buy Now
ನಾನು ಮತ್ತು ನನ್ನವರ ಸ್ವೀಟಿ | Naanu mattu nannavara sweety

ಅಪಾರ ಅಧ್ಯಯನ, ಅಧ್ಯಾಪನ, ಅನುಭವಗಳಿಂದ ಮೂಡಿಬಂದ ನೇರ ಹಾಗೂ ಸರಳ ನಿರೂಪಣೆ, ಅಗತ್ಯ ವಿವರಗಳು, ಅಲ್ಲಲ್ಲಿ ಶೋಭಿಸುವ ಗಾದೆ ಮಾತುಗಳು ಲೇಖನಗಳ ವಾಚ್ಯಾಸಕ್ತಿಯನ್ನು ಹೆಚ್ಚಿಸುತ್ತವೆ. ಬದುಕನ್ನು ಬಂದಹಾಗೆ ಸ್ವೀಕರಿಸುವ ಆಲೋಚನೆ, ಬರೆದಿದ್ದು ಕಮ್ಮಿ ಬರೆಯಬೇಕಾದ್ದು ಇನ್ನೂ ಇದೆ ಎಂಬ ಆಸೆ ಎಲ್ಲವೂ ಲೇಖಕಿಯ ಘನಾತ್ಮಕ ಅಂಶಗಳು. ಈಗಾಗಲೇ ಹಲವಾರು ಸಾಂದರ್ಭಿಕ ಲೇಖನಗಳು, ಕಥೆ, ಕವನ, ವಿಮರ್ಶೆ, ನಾಟಕ, ಅನುವಾದಗಳ ಮೂಲಕ ಹೆಸರಾಗಿರುವ ಡಾ.ಸತ್ಯವತಿ ಮೂರ್ತಿ ಅವರು ರಚಿಸಿರುವ 'ನಾನೂ ಮತ್ತು ನನ್ನವರ ಸ್ವೀಟಿ ಮತ್ತು ಇತರ ಪ್ರಬಂಧಗಳು ಸಂಕಲನವನ್ನು ಓದಿ ನನ್ನ ಅರಿವು,ಆಲೋಚನೆಗಳ ಮಿತಿಯಲ್ಲಿ ಒಂದಿಷ್ಟು ಅಭಿಪ್ರಾಯಗಳನ್ನು ಇಲ್ಲಿ ನೀಡಿದ್ದೇನೆ.ಈ ಮೂಲಕ ಅವರಿಗೆ ಶುಭ ಹಾರೈಸುತ್ತ,ಅವರಿಂದ ಇನ್ನಷ್ಟು ಮತ್ತಷ್ಟು ಸಾಹಿತ್ಯ ಕೈಂಕರ್ಯ ನಡೆಯಲೆಂದು ಆಶಿಸುತ್ತೇನೆ ಕೆ.ಎನ್.ಭಗವಾನ್

₹175   ₹156

Buy Now
ನುಡಿತೇರನೆಳೆದವರು : ಬಾನುಲಿ ಕಲಿಗಳು | Nuditeraneledavaru : Banuli Kaligalu

1) ಕರ್ನಾಟಕದ ಆಕಾಶವಾಣಿ ಕೇಂದ್ರಗಳು ಯಾವಾಗ ಆರಂಭ ಗೊಂಡವು , ಗೊತ್ತೇ ? 2) ದೇಶದ ಮೊದಲ ಖಾಸಗಿ ವಾಹಿನಿ ನಮ್ಮ ಮೈಸೂರಿನ ಕಥೆ ಗೊತ್ತೇ ? 3) ಮೈಸೂರು ಬೆಂಗಳೂರಾಗಿದ್ದು, 19 ವರ್ಷ ಸ್ಥಗಿತಗೊಂಡಿದ್ದು, ಪುನರಾರಂಭ ಗೊಂಡದ್ದು ತಿಳಿದಿದೆಯೇ ? 4) ದೊರೆಸ್ವಾಮಿ ಆಯ್ಯಂಗಾರ್, ಆರ್.ಕೆ ಶ್ರೀಕಂಠನ್ , ಮೈಸೂರು ವಾಸುದೇವಾಚಾರ್ಯರ ಮೊಮ್ಮಗ ಎಸ್ ಕೃಷ್ಣಮೂರ್ತಿ, ಎಚ್ ಕೆ ನಾರಾಯಣ, ಪದ್ಮಚರಣ ಮೊದಲಾದ ಸಂಗೀತ ಮಾಂತ್ರಿಕರು ಆಕಾಶ ವಾಣಿಯಲ್ಲಿ 30 ವರ್ಷಗಳಿಗೂ ಮೀರಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಬಲ್ಲಿರಾ ? 5) ಆಕಾಶವಾಣಿ 1954 ರಲ್ಲೇ ಆಹ್ವಾನಿತ ಶ್ರೋತೃಗಳ ಸಮ್ಮುಖದಲ್ಲಿ ಸಂಗೀತ ಕಛೇರಿ ಏರ್ಪಡಿಸುತ್ತಿತ್ತು ಅಂದರೆ ಆಶ್ಚರ್ಯ ಆಗುತ್ತದೆಯೇ? 6) ಧ್ವನಿಪರೀಕ್ಷೆ ಹೇಗೆ ನಡೆಯುತ್ತಿತ್ತು, ಅದಕ್ಕೆ ನಿಯಮಾವಳಿಗಳು ರೂಪುಗೊಂಡ ಬಗೆ ಎಂಥ ಚೆಂದ ಗೊತ್ತೇ ? 7) ಆಕಾಶವಾಣಿ ರೂಪಕ , ಆಕಾಶವಾಣಿ ನಾಟಕ ಲೋಕದಲ್ಲಿ ಸಂಚರಿಸಿದ್ದೀರಾ.. 8) ವಿಜ್ಞಾನ ಸರಣಿಗಳನ್ನು , ಸರಳ ವಾಗಿ ರೂಪಿಸಿ, ದೇಶದಲ್ಲೇ ಖ್ಯಾತಿ ಪಡೆದ ಬೆಂಗಳೂರು ಆಕಾಶವಾಣಿ ಪ್ರಯೋಗಗಳು.. ಅಬ್ಬಾ....! 9) ಕೃಷಿ ಪಾಠ ಶಾಲೆಯಲ್ಲಿ ಹಸು ಕರು ಎತ್ತು ಎಮ್ಮೆ ಕೋಳಿ ಬಹುಮಾನ ಕೊಟ್ಟರು. ರೈತರಿಗೆ ಬೋರೆವೆಲ್ ತೋಡಿಸಿಕೊಟ್ಟರು. ಕೇಳಿದ್ದೀರಾ? 10) ಆಕಾಶವಾಣಿ ಚಿತ್ರಗೀತೆ ಆಧಾರಿತ ಕಾರ್ಯಕ್ರಮ ಗಳನ್ನು ಉದ್ಘೋಷಕರು ಪಾಳಿಗಳಲ್ಲಿ ಪ್ರಸ್ತುತಪಡಿಸುತ್ತಾರೆ. ಅವರ ಅನಿಸಿಕೆಗಳು ಮನದ ಮಾತು ಕೇಳಿದ್ದೀರಾ.... ............ ಇಂಥಹ ಹತ್ತು ಹಲವು ವಿಚಾರಗಳನ್ನು ಹೊತ್ತು ತರುತ್ತಿದೆ, "ನುಡಿ ತೇರನೆಳೆದವರು, ಬಾನುಲಿ ಕಲಿಗಳು" ಪುಸ್ತಕ. 1940 ರಿಂದ 1990 ರ ಅವಧಿಯಲ್ಲಿ ಆಕಾಶವಾಣಿಯಲ್ಲಿ ಸೇವೆ ಸಲ್ಲಿಸಿದ ದಿಗ್ಗಜ ಪ್ರಸಾರಕರ ವ್ಯಕ್ತಿಚಿತ್ರಗಳನ್ನು ಪರಿಚಯಿಸುತ್ತಿದೆ "ನುಡಿ ತೇರ ನೆಳೆದವರು" ಪುಸ್ತಕ. ಕರ್ನಾಟಕದ ಆಕಾಶವಾಣಿ ಕೇಂದ್ರಗಳಲ್ಲಿ ನಡೆದ ಕೆಲಸಗಳ ಸ್ಥೂಲ ದಾಖಲೀಕರಣ! ಕರುನಾಡ ಕೊರಳಿನ ಕಥೆಗಳು ! ! ಪ್ರಯೋಗಗಳು, ಪರಿಕಲ್ಪನೆಗಳು !! ಇಂಥ ಒಂದು ಪ್ರಯತ್ನ , ದೇಶದಲ್ಲಿ ಮೊದಲು ಎಂದಿದ್ದಾರೆ ಹಲವಾರು ಪರಿಣತರು. ಬನ್ನಿ, ನುಡಿ ತೇರ ಎಳೆದ ದಿಗ್ಗಜರಿಗೆ ನಮಸ್ಕಾರ ಮಾಡೋಣ. ಕನ್ನಡ ಭಾಷೆಗೆ , ಸಂಗೀತ , ಸಾಂಸ್ಕೃತಿಕ ಲೋಕಕ್ಕೆ ಆಕಾಶವಾಣಿ ನೀಡಿದ ಕೊಡುಗೆಗಳನ್ನು ಸ್ಮರಿಸೋಣ

₹390   ₹347

Buy Now