nil
"ಬಾಸ್, ಆ ಮುಗ್ಧ ಹುಡುಗಿ ಇಂಪನಾ ಇದ್ದಾಳಲ್ಲಾ ನೋಡೋದಿಕ್ಕೂ ಚೆಲುವೆ. ನಮ್ಮ ಈ ಯೋಜನೆಗೆ ಅವಳೇ ಸರಿಯಾದ ಆಯ್ಕೆ" “ಸರಿ, ಹಾಗಾದ್ರೆ ಇವತ್ತು ಸಂಜೆ ಅವಳನ್ನು ಭೇಟಿಯಾಗು" ಅವನು ಒಪ್ಪಿಯಿಗೆಯಿತ್ತ ಇಂಪನಾ ಕೆಲಸಕ್ಕೆ ಹೊರಡುವ ಆತುರದಲ್ಲಿ ಬೆಳಿಗ್ಗೆ ಒಬ್ಬಳೇ ನಿರ್ಜನ ರಸ್ತೆಯಲ್ಲಿ ಬರುತ್ತಿರುವಾಗ ಗಕ್ಕನೆ ಕಾರೊಂದು ಬಂದು ಅವಳ ಹತ್ತಿರವೇ ನಿಂತಿತು. "ಮೇಡಂ, ಬನ್ನಿ ನಿಮಗೆ ಇನ್ನು ಬಸ್ಸು ಸಿಗೊಲ್ಲ. ನಾನೇ ನಿಮ್ಮನ್ನು ಡ್ರಾಪ್ ಮಾಡ್ತೀನಿ" ಪರಿಚಿತ ಧ್ವನಿ ಕೇಳಿದಂತಾಯಿತು. ಅವಳು ಹಿಂದೆ ಮುಂದೆ ಆಲೋಚಿಸದೆ ತೆರೆದ ಕಾರಿನ ಬಾಗಿಲೊಳಗೆ ತೂರಿಕೊಂಡಳು. ಬಾಗಿಲು ಕಾರು ರೊಯ್ಯನೆ ಮುಂದಕ್ಕೋಡಿತು... ಅವನು ಪಕ್ಕದಲ್ಲಿ ಕುಳಿತವಳತ್ತ ವಿಚಿತ್ರ ನೋಟ ಹರಿಸಿದ ಮುಂದೆ...? ನೀವೇ ಓದಿ ನೋಡಿ... 'ತೂಗುದೀಪ' ವಿಭಿನ್ನ ಕಥಾಹಂದರದ ಕುತೂಹಲಭರಿತ ಪತ್ತೇದಾರಿ ಕಿರು ಕಾದಂಬರಿ.
#
ತೆರೆದ ಮನಸ್ಸಿನ ಪುಟಗಳು 25 ಕಥೆಗಳುಳ್ಳ ಕಥಾ ಸಂಕಲನ ಇದರಲ್ಲಿನ ಕಥೆಗಳಲ್ಲಿ ಕೆಲವು ಕಾಲ್ಪನಿಕವಾದರೆ, ಮತ್ತೆ ಕೆಲವು ನೈಜ ಘಟನೆಗಳನ್ನು ಆಧರಿಸಿ ಬರೆದಂತವು. ಹೆಚ್ಚಿನ ಕಥೆಗಳು ಮಹಿಳಾ ಪ್ರಧಾನ ಕಥೆಗಳು. ವರದಕ್ಷಿಣೆ, ಗಂಡು ಮಗುವಿನ ಮೋಹ, ನಶಿಸಿ ಹೋಗುತ್ತಿರುವ ಸಂಬಂಧಗಳ ಮೌಲ್ಯ, ಹಣದ ವ್ಯಾಮೋಹ ಮೊದಲಾದ ಸಾಮಾಜಿಕ ಸಮಸ್ಯೆಗಳ ಕುರಿತಾಗಿರುವ ಕಥೆಗಳಲ್ಲಿ ನೀತಿ ಪಾಠವಿದೆ. ಅಮ್ಮ. ಬಲಿದಾನ, ಮನೆಯ ಅದೃಶ್ಯ ಕಂಬಗಳು ನಮ್ಮಲ್ಲೇ ಎಲ್ಲೋ ನಡೆದಿರಬಹುದಾದ ಕಥೆಗಳು. ಸುಂದರಗೊಂದಲ, ಮ್ಯಾಜಿಕ್ ಲ್ಯಾಂಪ್, ಅದಲು ಬದಲು ಕಥೆಗಳು ಗಂಭೀರ ಕಥೆಗಳ ನಡುವೆ ತಿಳಿ ಹಾಸ್ಯ ಹೊಂದಿದೆ. ಜೊತೆಗೆ ಹೆಚ್ಚಿನ ಕಥೆಗಳು ಯುವ ಜನತೆಗೆ ಪಾಠವಾಗಬಲ್ಲ ಕಥೆಗಳು.
1951 ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಡಿ.ವಿ. ಗುರುಪ್ರಸಾದ್, ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವಿಜ್ಞಾನ ಪದವಿ ಪಡೆದರು ಮತ್ತು ನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅವರು 1976 ರಲ್ಲಿ ಭಾರತೀಯ ಪೊಲೀಸ್ ಸೇವೆಗೆ (ಐಪಿಎಸ್) ಸೇರಿದರು ಮತ್ತು ಕರ್ನಾಟಕ ಕೇಡರ್ ಅನ್ನು ನೀಡಲಾಯಿತು. ಬೀದರ್, ಗುಲ್ಬರ್ಗ ಮತ್ತು ಕೊಡಗು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಗುಲ್ಬರ್ಗ ರೇಂಜ್ನ ಡಿಐಜಿ Read More...
Showing 1951 to 1980 of 5052 results