nil
ಶ್ರೀಧರ ಹೆಗ್ಗೋಡು
ಕಸ್ತೂರಿ ಬಾಯರಿ ಅವರ ಸಮಗ್ರ ಕಥಾ ಸಂಕಲನ ʼಪಾರಿಜಾತʼ ಪಾರಿಜಾತ : ಸಮಗ್ರ ಕಥೆಗಳು / Paarijaata parijatha kasturi bayari / kasturi baayari / samagra kathegalu
#
ಸಿ ವಿ ಜಯಣ್ಣ
ಸತೀಶ್ಕುಮಾ Y ಭಾವಿಮನಿ
ಪಿಂಚ್ ಆಫ್ ಪ್ರಪಂಚ
ಕಾಡುವ ಕಥೆ ಥಟ್ಟನೆ ಬರೆಯಿಸಿಕೊಳ್ಳುವುದಿಲ್ಲ. ಅದು ಒಳಗೊಳಗೆ ವಿಸ್ತಾರಗೊಳ್ಳುತ್ತದೆ. ಅಲ್ಲಿ ವಿಷಾದ ಮಡುಗಟ್ಟಿದಂತೆ ಮಾತು ಮೌನವಾಗುತ್ತದೆ, ಪ್ರೇಮ್ ಚಂದ್, ಅಲೆಕಾಂಡರ್ ಪುಕ್ರೀನ್, ಕಾಮುಗಳ ಕಾದಂಬರಿಗಳು ಘಟಿಸಿದ್ದೇ ಹೀಗೆ ಘನ ಗಂಭೀರ ಕಾರ್ಮೋಡಗಳು ಆಕಾಶ ತುಂಬಿದಂತೆ ತಟ್ಟನೆ ಮಳೆ ಸುರಿಯುವುದಿಲ್ಲ. ಓಡಾಡುತ್ತವೆ, ಕಾಡುತ್ತವೆ ಕೊನೆಗೊಮ್ಮೆ ಸುರಿದುಬಿಟ್ಟರೆ ನಿಂತ ನೆಲದ ಗತಿ ಏನಾದೀತು ಎನ್ನುವ ಭಯ ಹುಟ್ಟಿಸುತ್ತವೆ. ಎಲ್ಲ ತಿಳಿದೂ ಈ ತಿಳುವಳಿಕೆಯನ್ನು ತೆಗೆದುಕೊಂಡು ಏನು ಮಾಡುವುದು ಎನ್ನುವ ಹತಾಶದ ಮುಂದೆ ನಮ್ಮನ್ನು ನಿಲ್ಲಿಸುತ್ತವೆ. ಬಹುತೇಕ ಈ ಕಾದಂಬರಿಯ ಕಥಾವಸ್ತು ಹಾಗೆಯೇ. ಇಲ್ಲಿ ಪಾತ್ರಗಳು ನೆಪ ಮಾತ್ರ ಸಂಬಂಧಗಳ ತಾತ್ವಿಕತೆಯೇ ಕಾದಂಬರಿ ನಮಗೆ ಒಡ್ಡುವ ಪ್ರಶ್ನೆ. ಕಾದಂಬರಿಕಾರ್ತಿ ಸುಶೀಲಾ ಡೋಣೂರ ಕಣ್ಣಿಗೆ ಕಂಡರೂ ಎಂಬ ಮಾತ್ರಕ್ಕೆ ಮನುಷ್ಯರನ್ನು ನೋಡಲಿಲ್ಲ. ಬದಲಾಗಿ ಓದುವ ಗಂಭೀರ ಯತ್ನವನ್ನು ಮಾಡಿದ್ದಾರೆ. ನಮ್ಮ ಸಂದರ್ಭದ ಅತಿ ದೊಡ್ಡ ದುರಂತದ ಮುನ್ನುಡಿಯ ಸಾಲುಗಳನ್ನ ಪ್ಲೇ ಅವರು ಇಲ್ಲಿ ಇಟ್ಟಿರುವುದು. ಕಾದಂಬರಿ ಇನ್ನೂ ಬರಬೇಕಾಗಿದೆ. ಆಗ ಅದು ಮತ್ತೊಂದು ರಿಸರಕ್ಷನ್ ಆಗಲು ಸಾಧ್ಯವಿದೆ. 'ಬದುಕೆನ್ನುವ ವಿಕಾರದ ಅರ್ಥವನ್ನು ಹುಡುಕುತ್ತಾ ಹೋದಷ್ಟು ಅದು ಬದಲಾಗುತ್ತಾ ಹೋಗುತ್ತದೆ. ಅದು ಒಂದು ರೀತಿ ಕೈಯೊಳಗೆ ಸಿಕ್ಕೂ ಹಾರಿ ಹೋಗುವ ಚಿಟ್ಟೆಯಂತೆ' ಇವು ಬೇರುಗಡಿತವಾಗಿ ಬದುಕುವ ನಗರದ ಮನಸ್ಸಿನಲ್ಲಿ ನಿತ್ಯ ಸಾವಿರ ಬಾರಿ ಹುಟ್ಟಿ ಸಾಯುವ ಸಹಾಯವಿಲ್ಲದ ವಾಸ್ತವದ ಸಾಲುಗಳು, ಕಾದಂಬರಿಯ ವಸ್ತು ಹೊಸದು, ಅಷ್ಟೇ ಸಂಕಟದ ಭಾಷೆ, ಲೇಖಕಿಯನ್ನು ಕುತೂಹಲ ಕೆರಳಿಸುವ ಅಭಿವ್ಯಕ್ತಿ, ಈ ಕಾರಣ ಅಭಿನಂದಿಸದೆ ಇರಲಾಗದು - ರಾಗಂ
Showing 2671 to 2700 of 5052 results