nil
#
ತುಂಬ ಹಿಂದಿನಿಂದಲೂ ಅತಿಮಾನುಷತೆಯ ಬಗ್ಗೆ ಕತೆಗಳು ಇದ್ದವಾದರೂ ಆಗ ಸರಿಯಾದ ಸಾಕ್ಷಿಗಳಿಲ್ಲದೇ ಅವೆಲ್ಲವೂ ಕೇವಲ ಕತೆಗಳಾಗಿ ಉಳಿದು ಹೋಗಿದ್ದವು. ಆದರೆ ಈಗ ಹಾಗಲ್ಲ, ಪ್ಯಾರಾನಾರ್ಮಲ್ ಕ್ಷೇತ್ರವೆನ್ನುವುದು ಸಾಕಷ್ಟು ಬೆಳವಣಿಗೆ ಕಂಡಿದೆ. ತಾರ್ಕಿಕ ವಿಶ್ಲೇಷಣೆ, ಸಂಶೋಧನಾ ಸಾಮರ್ಥ್ಯ ಮತ್ತು ಅಧ್ಯಯನಗಳಿಂದಾಗಿ ಒಂದು ಕಾಲಕ್ಕೆ ಕೇವಲ ಭ್ರಮೆಯಷ್ಟೇ ಎನ್ನಿಸುವಂತಿದ್ದ ಕೆಲವು ವಿಷಯಗಳು ಈಗ, ಕೇವಲ ಭ್ರಮೆಯಲ್ಲ, ಭ್ರಮೆಯನ್ನು ಮೀರಿದ್ದು ಇನ್ನೇನೋ ಇದೆ ಎನ್ನುವ ಭಾವನೆಯನ್ನು ಹುಟ್ಟಿಸುವಲ್ಲಿ ಯಶಸ್ವಿಯಾಗಿವೆ. ಸರಿಯಾಗಿ ಗಮನಿಸಿದರೆ ಪ್ಯಾರಾನಾರ್ಮಲ್ ಕ್ಷೇತ್ರ ಕೂಡ, ಸೈಕಾಲಜಿ, ಭೌತಶಾಸ್ತ್ರ ಪರಿಸರ ವಿಜ್ಞಾನ ಮತ್ತು ಮನುಷ್ಯ ಗ್ರಹಿಕೆಯ ಭಾಗವೇ ಎನ್ನುವುದು ಅರ್ಥವಾಗುವುದು ಕಷ್ಟವೇನಲ್ಲ, ಎಲ್ಲಕ್ಕಿಂತ ಹೆಚ್ಚಾಗಿ ಈ ಬಗೆಯ ಓದು, ಓದುಗನ ಕಲ್ಪನಾ ಶಕ್ತಿಯನ್ನು ಒರೆಗೆ ಹಚ್ಚುತ್ತದೆ. ಓದುಗನ ಆಲೋಚನಾ ಶಕ್ತಿಯನ್ನು ವೃದ್ಧಿಸುತ್ತಲೇ ಈ ರೀತಿಯ ವಸ್ತುಗಳೆಡೆಗಿನ ಸಿನಿಕತನವನ್ನೂ ಸಹ ಕಡಿಮೆ ಮಾಡುತ್ತವೆ. ಹಾಗೆ ಮಾಡುವುದರ ಮೂಲಕ ಮುಕ್ತ ಮನಸ್ಸಿನಿಂದ ಈ ಕ್ಷೇತ್ರದ ಬಗ್ಗೆ ಯೋಚಿಸುವಂತೆ ಮಾಡುತ್ತದೆ. ಅನಾವಶ್ಯಕವಾಗಿ ಭಯ ಹುಟ್ಟಿಸುವ ವಿಷಯಗಳು ಅರಿವಿಗೆ ಸಿಕ್ಕುತ್ತವೆ. ಇಲ್ಲಿ ನಮ್ಮನ್ನೂ ಮೀರಿದ್ದು ಇನ್ನೇನೋ ಇದೆ ಎನ್ನುವುದು ಆರಿವಾಗಿ ಭಯ ಕಡಿಮೆಯಾಗಿ ಆತ್ಮ ವಿಶ್ವಾಸ ಹೆಚ್ಚುತ್ತದೆ ಎಂದರೂ ಅತಿಶಯೋಕ್ತಿಯಲ್ಲ.
Chiguru Publications
"ನಾನು ಬಡತನದಲ್ಲಿ ಹುಟ್ಟಿ ಬಡತನದಲ್ಲಿ ಬಡವರ ಜತೆ ಬೆಳೆದೆ. ಥಂಡಿ ನೆಲದಲ್ಲಿ ಗೋಣಿ ತಾಟಿನ ಮೇಲೆ ಬಡವರು ಮಲಗುವ ಹಾಗೆ ನಾನೂ ಥಂಡಿ ನೆಲದಲ್ಲಿ ಮಲಗಿದೆ; ಅವರ ದುಃಖದಲ್ಲಿ ಭಾಗಿಯಾದೆ. ನನ್ನ ಸೋದರರ ಬಗೆಗಿನ ಮತ್ತು ಜಗದ ಬಗೆಗಿನ ನನ್ನ ಧೋರಣೆಗಳು ಎಂದಿಗೂ ಬದಲಾಗುವುದಿಲ್ಲ. ನಾನು ಹುಟ್ಟಿ ಬೆಳೆದ ವರ್ಗ ಅನುಭವಿಸಿದ ಅಮಾನವೀಯ ಕ್ರೌರ್ಯ ಮತ್ತು ಅನ್ಯಾಯವನ್ನು ತೊಡೆದುಹಾಕಲು ವಿಫಲನಾದಲ್ಲಿ ಗುಂಡಿಟ್ಟುಕೊಂಡು ಸಾಯುವೆ. ನಾನು ನನ್ನ ಸಮುದಾಯವನ್ನು ಯಾವತ್ತೂ ಬಿಟ್ಟುಕೊಟ್ಟಿಲ್ಲ. ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದೇನೆ. ಇದೇ ನೀವು ನನ್ನ ಬದುಕಿನಿಂದ ಕಲಿಯುವ ಪಾಠ. ನನ್ನ ಬದುಕು ನಿಮಗೆಲ್ಲರಿಗೂ ತೆರೆದ ಪುಸ್ತಕ." ಡಾ. ಬಿ. ಆರ್. ಅಂಬೇಡ್ಕರ್
Showing 2821 to 2850 of 5187 results