nil
Nil
ಎಲ್ಲರೂ ಇಂದು ಸಾವಧಾನತೆಯ ಹಾಗೂ ನಮ್ಮ ಮೇಲೆ ನಾವು ಹೂಡಿಕೆ ಮಾಡುವುದು ಹೇಗೆ? ಎಂಬುದರ ಬಗ್ಗೆ ಮಾತನಾಡುತ್ತಿದ್ದಾರೆ. `ಒತ್ತಡ ಮುಕ್ತ ಜೀವನಕ್ಕೆ 101 ಮ್ಯಾಜಿಕ್ ಮಂತ್ರಗಳು ಇಲ್ಲಿನ ಪ್ರತಿ ಮ್ಯಾಜಿಕ್ ಮಂತ್ರಗಳು ಮನಸ್ಸನ್ನು ಹೇಗೆ ಉಪಯೋಗಿಸಿಕೊಂಡು ಬದುಕನ್ನು ರೂಪಿಸಿಕೊಳ್ಳುವುದು ಎಂಬ ತುಡಿತದ ರೂಪಕಗಳೇ ಆಗಿವೆ. ಪುಸ್ತಕದ ಪ್ರತೀ ಲೇಖನಗಳು ಮಾನಸಿಕ ಸ್ವಯಂ-ಆರೈಕೆ ಜೊತೆಗೆ ದೇಹ ಹಾಗೂ ಮನಸ್ಸನ್ನು ಉತ್ತೇಜಿಸುವ ಸೃಜನಾತ್ಮಕ ಜೀವನ ಶೈಲಿಯ ರಚನೆಯ ಕುರಿತಾಗಿ ಮಾತನಾಡುತ್ತಾ ಹೋಗುತ್ತವೆ. ಸಂವೇದನೆಗಳನ್ನು, ಆಲೋಚನೆಗಳನ್ನು ಈ ಕ್ಷಣದ ತುರ್ತಿಗೆ ಅಂಗೀಕರಿಸುತ್ತ, ಶಾಂತಗೊಳಿಸುತ್ತಾ, ನಿಭಾಯಿಸುತ್ತಾ ಆ ಮೂಲಕ ಬದುಕಿನ ದೀರ್ಘಕಾಲಿಕ ಮಾನಸಿಕ ಸುಸ್ಥಿರತೆಯಾಗಿ ಬದಲಾಯಿಸುವ ಮಾಂತ್ರಿಕ ಮಿಡಿತಗಳನ್ನು ಇಲ್ಲಿನ ಪ್ರತಿ ಅಕ್ಷರಗಳಲ್ಲೂ ಕಾಣಬಹುದಾಗಿದೆ. ಇಲ್ಲಿರುವ 101 ಮ್ಯಾಜಿಕ್ ಮಂತ್ರಗಳು ಪ್ರತಿಧ್ವನಿಸುವುದು `ನಿಮ್ಮ ಮನಸ್ಸಿನ ನಾಯಕ/ನಾಯಕಿ ನೀವೇ ಎಂಬ ಘೋಷಣೆಯೊಂದನ್ನೇ.' ದೇಹ-ಮನಸ್ಸು-ಮೆದುಳಿನ ಸೂಕ್ಷ್ಮಗಳನ್ನು ಅರಿಯುವ ಅಗತ್ಯವಾದ ಹೊಳಹುಗಳು ಇಲ್ಲಿನ ಪ್ರತಿ ಲೇಖನಗಳಲ್ಲೂ ಕೂಡಿವೆ. ಪುಸ್ತಕ ನಿಮ್ಮಲ್ಲೂ ಮ್ಯಾಜಿಕ್ ಮೂಡಿಸುತ್ತದೆ ಎಂಬ ನಂಬಿಕೆಯೊಂದಿಗೆ...
#
ಅವರವರ ಅಂತರಂಗದ ಅರಿವು ಅವರವರಿಗೇ ಎಂಬ ಭಾವವಿಲ್ಲಿದೆ. ಚಿಗುರಿದ ಆ ಮರದಲ್ಲಿ ಕುಳಿತು ಒಗರು ಮೆಲ್ಲುವ ಎಲ್ಲ ಕೋಗಿಲೆಗಳೂ ಹಾಡುತ್ತಿರುವುದಿಲ್ಲ ಎಂಬ ಸಾಲು ಮನಮುಟ್ಟುತ್ತದೆ. ಒಂದು ಮರ ಕಡಿದು ಉರುಳಿಸಿದ ಮೇಲೆ ಎಂಬ ಕವಿತೆ ಕವಯಿತ್ರಿಯೊಳಗಿನ ಪ್ರಕೃತಿ ಪ್ರೇಮ ಮತ್ತು ಜೀವನ ಪ್ರೀತಿಗೆ ಸಾಕ್ಷಿಯಂತಿದೆ. ಒಂದು ಮರ ಕಡಿದು ಉರುಳಿಸಿದ ಮೇಲೆ ಚಿಟ್ಟೆ ಪಟಗುಡುವುದಿಲ್ಲ ಹಕ್ಕಿ ಹಾಡುವುದಿಲ್ಲ ಗೂಡು ಮಾಡುವುದಿಲ್ಲ ಅಳಿಲು ಆಡುವುದಿಲ್ಲ ಹೀಗೆ ಒಂದು ಮರದೊಂದಿಗೆ ಅಂತ್ಯವಾಗುವ ಹಲವು ಜೀವಗಳ ಬದುಕಿನ ವ್ಯಥೆ ಇಲ್ಲಿ ವ್ಯಕ್ತವಾಗಿದೆ.
ದಿ. ನೇರಂಬಳ್ಳಿ ಪ್ರಭಾಕರ ಆಚಾರ್ಯರು ತಮ್ಮ ಕಾವ್ಯಪ್ರೇಮ ಮತ್ತು ಸಾಹಿತ್ಯಾಸಕ್ತಿಗೆ ಹೆಸರಾಗಿದ್ದವರು. ಮುಂಬೈ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಕಾವ್ಯ ಬೋಧನೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ತಮ್ಮ ಛಾಪು ಮೂಡಿಸಿದವರು. ಅನೇಕ ಭಾರತೀಯ ಇಂಗ್ಲಿಷ್ ಕವಿಗಳಿಗೆ ವಿಮರ್ಶೆಯ ಒರೆಗಲ್ಲಾಗಿದ್ದವರು. 'ದ ಸುರಗಿ ಟೀ', 'ಮನು ಇನ್ ಕಿಮ್ಮಿಂದ', 'ಧ್ವನಿ ಆ್ಯಂಡ್ ಎಪಿಫನಿ' ಮತ್ತು 'ಕವಿತೆಯ ಓದು' ಕೃತಿಗಳ ಕರ್ತೃ. ಅವರ 'ಕವಿತೆಯ ಓದು' ಕೃತಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪುರಸ್ಕಾರ ದೊರೆತಿದೆ. 'ಒಲವಿನ ದೈವ' ಎಂಬ ಈ ಕೃತಿ ಅವರ ಮರಣಾನಂತರ ಪ್ರಕಟಗೊಳ್ಳುತ್ತಿದೆ. ಇದು ಅವರ 'ಗಾಡ್ ಆಫ್ ಲವ್' ಕೃತಿಯ ಕನ್ನಡ ಅನುವಾದ. ಕೃಷ್ಣನ ಕತೆ ನಮಗಾರಿಗೂ ಹೊಸದಲ್ಲವಾದರೂ ಲೋಕದೊಡನೆ ಕೃಷ್ಣನ ಸಂಬಂಧ, ಎಲ್ಲ ಕಾಲಕ್ಕೂ ಅಗತ್ಯವಾದ ಪ್ರೇಮಭಾವದ ಪ್ರಸಾರಕನಾಗಿರುವ ಅವತಾರಪುರುಷನ ಅಗತ್ಯ, ಸರಿದಾರಿ ತೋರುತ್ತ ದಾರಿತಪ್ಪಿದವರನ್ನು ಶಿಕ್ಷಿಸುವ ಧೈರ್ಯ ಇವನ್ನೆಲ್ಲ ಒಳಗೊಳ್ಳುವಂತೆ ಆಚಾರ್ಯರು ಬರೆದಿರುವುದನ್ನು ಓದಿ ಸ್ವಯಂಸ್ಪೂರ್ತಿಯಿಂದ ಶಿಕ್ಷಣ ತಜ್ಞ ಪ್ರೊ. ಮಹಾಬಲೇಶ್ವರ ರಾಯರು ಕನ್ನಡಕ್ಕೆ ಸರಳ ಸುಂದರವಾಗಿ ಅನುವಾದಿಸಿದ್ದಾರೆ. ಈ ರಚನೆಗೆ ಜನಮನ್ನಣೆ ಸಿಗಲಿ. ನಾಡೋಜ ಕೆ. ಪಿ. ರಾವ್
ಡಾ. ಜಿ ಪ್ರಶಾಂತ ನಾಯಕ
ಕೆ. ಉಷಾ ಪಿ ರೈ
Showing 571 to 600 of 3346 results