nil
#
ಇದೊಂದು ಮಹತ್ವದ ಕೃತಿ. ಕಗ್ಗಗಳ ಕುರಿತಾಗಿ ವ್ಯಾಖ್ಯಾನ ಹೊಸದೇನಲ್ಲ. ಆದರೆ ಆ ಕಗ್ಗದ ಸಾರವನ್ನು ಒಂದು ಪುಟ್ಟ ಕಥೆಯ ಮೂಲಕ ಹೇಳುವ ಪ್ರಯತ್ನ ಮಾತ್ರ ಹೊಚ್ಚಹೊಸದು. ವಿ. ಗೋಪುಕುಮಾರ್ ಅವರು ನ್ಯಾನೋ ಕಥಾಪ್ರಕಾರದ ನಿಷ್ಠರು ಮತ್ತು ಶ್ರೇಷ್ಠರೂ ಕೂಡ. ನಾನವರ ಕಥೆಗಳನ್ನು ಒಂದೇ ಉಸಿರಿನಲ್ಲಿ ಓದಿದ್ದೆ. ಹಾಗೆ ಓದಿಸಿಕೊಳ್ಳುವ ಗುಣ ಅವರ ಕಥೆಗಳಿಗಿದೆ.
ಸೋ ಕಾಲ್ಡ್ ಇನ್ಕ್ಲೂಸಿವ್ನೆಸ್ಸಿನ, ಎಜುಕೇಟೆಡ್ ಸೊಸೈಟಿಯ ಡ್ರಾಮಾ ಅಲ್ಲವಾ ಇದೆಲ್ಲ..? ಗೋ ಫ್ಲ್ಯಾಟ್ ಫೋಟೋಶೂಟಂತೆ! ಕ್ಲೀವೇಜ್ ತೋರಿಸುವ ಡ್ರೆಸ್ ಹಾಕಿದಾಗಲೆಲ್ಲ ಎಷ್ಟುಬಾರಿ ಕಾಂಪ್ಲಿಮೆಂಟ್ ಕೊಟ್ಟಿಲ್ಲ ನೀನು!” ಕಳ್ಳನನ್ನು ಹಿಡಿದಂತೆ ಮಾತಾಡಿದಳು. ಥತ್! ನನ್ನನ್ನ ಡೈಲೆಮಾದಲ್ಲಿ ಹಾಕುತ್ತಿದ್ದಾಳಲ್ಲ ಇವಳು ಎನ್ನಿಸಿತು. -'ಸೀಕ್ರೆಟ್ ಸ್ಯಾಂಟಾ' ಕತೆಯಿಂದ ಮಗುವನ್ನು ಆಸ್ಪತ್ರೆಯಿಂದ ಮನೆಗೆ ಕರೆತಂದವನು ಅವನೇ... ಮಗಳನ್ನು ಪೂರ್ವಿ ಎಂದೇ ಕರೆಯಬೇಕೆಂದು ನಿರ್ಧರಿಸಿದವನು ಅವನೇ... ಹಡೆದ ಹನ್ನೊಂದನೇ ದಿನಕ್ಕೆ ಬೆತ್ತದ ಡಬ್ಬಿಯ ಮುಚ್ಚಳದಲ್ಲಿ ಗುಲಾಬಿ ದಾಸವಾಳದ ಪಕಳೆಯಂತೆ ಮಲಗಿದ ಮಗುವನ್ನು ಹೊತ್ತು ಹೊಸ್ತಿಲು ದಾಟಿಸಿದವನೂ ಅವನೇ... ದಾವಣಗೆರೆಗೆ ಹೊರಡುವ ಮುಂಚೆ ಪೂರ್ವಿಯನ್ನು ತೋಳಲ್ಲೆತ್ತಿಕೊಂಡು ಕುಮಾರವ್ಯಾಸ ಭಾರತದ 'ಗಜಮುಖನೆ ಮೆರೆವೇಕದಂತನೆ ನಿಜಗುಣಾನ್ವಿತ ಪರಶುಧಾರನೆ' ಸಾಲುಗಳನ್ನು ರಾಗಬದ್ಧವಾಗಿ ಹಾಡಿದವನೂ ಅವನೇ... ಮಗುವಿಗೆ ತಿಂಗಳು ತುಂಬಲು ಇನ್ನೇನು ಎರಡು ದಿನ ಇರುವಾಗ ದಾವಣಗೆರೆಯಿಂದ ಅಂಬ್ಯುಲೆನ್ಸಿನಲ್ಲಿ ಉದ್ದುದ್ದ ಮಲಗಿ ಹೆಣವಾಗಿ ಬಂದವನೂ ಅವನೇ. - 'ಪಟಾಕಿ ಕೈಚೀಲ' ಕತೆಯಿಂದ ಎಲ್ಲೋ ನೆಮ್ಮದಿಯಲ್ಲಿ ತಂಗಿದ್ದ, ಇನ್ನೆಲ್ಲೋ ಬವಣೆಗಳಿಂದ ಬೇಸತ್ತಿದ್ದ ಮತ್ತೆಲ್ಲೋ ವೈರಾಗ್ಯ ತಳೆದು ಕೂತಲ್ಲೇ ಹುತ್ತ ಬೆಳೆಸಿಕೊಂಡಿದ್ದ ಕತೆಗಳನ್ನು ಅವುಗಳ ಪಾಡಿಗೇ ಬಿಟ್ಟುಬಿಡದೆ ಕರೆದು ಕರೆದು ಕಟ್ಟಿಹಾಕಿದ್ದಿದೆ, ಚಿಕ್ಕಂದಿನಿಂದಲೂ, ಸಾಕಿನ್ನು ಕತೆಗಳನ್ನು ಕರೆದದ್ದು, ಅವುಗಳನ್ನು ಕಟ್ಟಿಹಾಕಿದ್ದು ಎಂದುಕೊಂಡಷ್ಟೂ ಇನ್ನಷ್ಟು ಅವುಗಳ ಬೆನ್ನು ಬೀಳುತ್ತೇನೆ. - 'ಕತೆ ಜಾರಿಯಲ್ಲಿರಲಿ' ಕತೆಯಿಂದ
ಕಥಾಸಂಕ್ರಾಂತಿ2024 ಕಥಾಸಂಕಲನದಲ್ಲಿ ಮೂರು ಬಹುಮಾನಿತ ಕಥೆಗಳು ಹಾಗೂ ಏಳು ಮೆಚ್ಚುಗೆ ಪಡೆದ ಕಥೆಗಳು ಇವೆ. ಇಲ್ಲಿನ ಪ್ರತಿ ಕಥೆಯೂ ವಿಶಿಷ್ಟ, ವಿಭಿನ್ನ, ಪ್ರಯೋಗಶೀಲತೆ, ಭಾಷಾ ಬಳಕೆ, ಕಥಾವಸ್ತುವಿನ ಆಯ್ಕೆಯಲ್ಲಿ ತೋರಿರುವ ವೈವಿಧ್ಯತೆ, ಕಥಾವಿನ್ಯಾಸ, ನಿರೂಪಣಾ ಕುಶಲತೆ ಹೀಗೆ ಎಲ್ಲದರಲ್ಲಿಯೂ ಈ ಕಥೆಗಳು ತಟ್ಟನೆ ಗಮನ ಸೆಳೆಯುತ್ತವೆ. ಸಮಕಾಲೀನ ವಿಷಯ, ಗ್ರಾಮೀಣ ಸಮಾಜದ ಬದುಕಿನಲ್ಲಿ ಇಣುಕುವ ಚಲನಶೀಲತೆ, ಮನುಷ್ಯರ ಸಂಕಟಗಳು, ಸಂದಿಗ್ಧತೆಗೆ ಸಿಲುಕಿಸುವ ಪ್ರೇಮ, ಬದುಕಿನ ಹೋರಾಟದಲ್ಲಿ ಗೆಲುವು ಸಾಧಿಸಲು ಕಂಡುಕೊಳ್ಳುವ ಹೊಸ ದಾರಿಗಳು, ಮುಗ್ಧ ಬಾಲಕಿಯರು ಎದುರಿಸಬೇಕಾದ ತಲ್ಲಣಗಳು, ಭಾಷೆಯೊಂದಿಗೆ ಬದುಕುವ ವ್ಯಕ್ತಿ ವ್ಯಕ್ತಿತ್ವವನ್ನು ಕಳೆದುಕೊಳ್ಳುವ ಬಗೆ... ಈ ಕಥೆಗಳಲ್ಲಿ ಅಡಕವಾಗಿವೆ. ಕಥಾಸ್ಪರ್ಧೆಗೆ ಬಂದ ನೂರಾರು ಕಥೆಗಳನ್ನು ಹಲವು ವಿಧದಲ್ಲಿ ಜರಡಿ ಹಿಡಿದು ಅಂತಿಮ ಸುತ್ತಿನಲ್ಲಿ ಆಯ್ದ ಐವತ್ತು ಕಥೆಗಳಲ್ಲಿ ಕೊನೆಗುಳಿದ ಹತ್ತು ಕಥೆಗಳು ಕನ್ನಡದ ಲೇಖಕರು ಕಥಾಪ್ರಕಾರದಲ್ಲಿ ತುಳಿಯುತ್ತಿರುವ ಹೊಸ ದಾರಿಗಳನ್ನು, ಹೊಸ ಲೇಖಕರ ಮನೋಧರ್ಮವನ್ನು ಸಮರ್ಥವಾಗಿ ಪ್ರತಿನಿಧಿಸುತ್ತವೆ.
ಇದು ಮಕ್ಕಳ ಪ್ರತಿಯಾಗಿದ್ದರೂ ಹಿರಿಯರು ಕೂಡ ಓದಿ ಆನಂದಿಸುವಂಥದ್ದು. ಪಾಲಕರು ಓದಿ ಮಕ್ಕಳಿಗೂ ಓದಿಸಿ ಟಿವಿ ಕಂಪ್ಯೂಟರ್ ಮೊಬೈಲ್ ಗಳಿಗಿಂತ ಪುಸ್ತಕಗಳನ್ನು ಓದುವುದು ಮಕ್ಕಳ ವಿಕಾಸ ಹಾಗೂ ಆರೋಗ್ಯದ ಹಿತೈದ ದೃಷ್ಟಿಯಿಂದ ಅತ್ಯುತ್ತಮವಾಗಿದ್ದು ಉತ್ತಮ ಪುಸ್ತಕಗಳನ್ನು ಮಕ್ಕಳಿಂದ ಓದಿಸಿ ಅವರ ವ್ಯಕ್ತಿತ್ವ ವಿಕಸನವಾದರೆ ಈ ಪುಸ್ತಕ ಬರೆದದ್ದು ಸಾರ್ಥಕವಾದಂತೆ
Showing 601 to 630 of 3616 results