nil
#
ಆತ್ಮೀಯರೆ, ನಾನು ತನಾಶಿ. ಜ್ಞಾನೇಶ್ವರನು ಪರಿಷ್ಕರಿಸಿದ 125 ಕಂದಪದ್ಯಗಳ ಚೂಡಾರತ್ನ ಶತಕವನ್ನು ನಿಮ್ಮ ಮುಂದೆ ತಂದಿದ್ದೇನೆ. ನಿತ್ಯವೂ ನೆನೆಯಬೇಕಾದ ನೀತಿಶತಕವಿದು.ನಮ್ಮ ಬದುಕಿನಲ್ಲಿ ಹಾಸುಹೊಕ್ಕಾಗಿರಬೇಕಾದ ಭಾವನೆಗಳ ಗೊಂಚಲು ಇಲ್ಲಿದೆ. ಸತ್ವದ ಝೇಂಕಾರವಿದೆ. ಸತ್ಯದ ಓಂಕಾರವಿದೆ. ನೀತಿಯ ಸಾಕಾರವಿದೆ. ಬದುಕಿನ ವೈವಿಧ್ಯಗಳ ಆಕಾರವಿದೆ. ಕಣ್ಣಿಗೊತ್ತಿಕೊಂಡು ಓದುವ, ಎದೆಯಲಿಟ್ಟು ಆಸ್ವಾದಿಸುವ ಸಾರಸತ್ವಗಳ ಹೂರಣವಿದೆ. ಸಹೃದಯ ಬಂಧುಗಳೇ ನೀವು ಸವಿದು ನಿಮ್ಮ ಅಮೃತವಾಣಿಗಳಿಂದ ಜಗವನ್ನೂ ತಣಿಸಿರಿ. ನಿಮ್ಮನ್ನೇ ನೀವು ಕಾಣುವ ಕನ್ನಡಿಯ ತೆರದಿ ಇದನ್ನೂ ಕಾಣಿರಿ. ಆಸ್ವಾದಿಸಿ ಹಾರೈಸಿರಿ. ನಿಮ್ಮವ ತನಾಶಿ
ಎಸ್ ಸಾಯಿಲಕ್ಷ್ಮಿ
Showing 1171 to 1200 of 3616 results