nil
#
ರತಿಯು ಬೇಲಿ ದಾಟಿ ನಾಲ್ಲು ದಾಪು ನಡೆದು ಬಾವಿ ತಲುಪಿ ಕಟ್ಟೆಯ ಹಸಿರು ಮೆತ್ತೆ ಮೇಲೆ ಕುಳಿತಳು. ಪಾಚಿಯನ್ನು ನೇವರಿಸಿದಳು. ಸಮಾಧಾನವೆನ್ನಿಸಿತು. ನೀರಿನ ಮೇಲೈಯು ಗಾಳಿಗೆ ಕಂಪಿಸುತ್ತ ತರಂಗಗಳು ಹುಟ್ಟಿ, ಬೆಳೆದು, ಮತ್ತೆ ಹುಟ್ಟಿ ಬೆಳೆದು ಅಂತರ್ಧಾನ ಆಗುವುದನ್ನು ನೋಡತೊಡಗಿದಳು. ಅದೊಂದು ಮುಗಿಯದ ವರ್ತುಲವಾಗಿ ಯಾವುದು ಶುರು, ಎಲ್ಲಿಗೆ ಕೊನೆ ಎಂದು ಅವಳಿಗೆ ಬಗೆಹರಿಯಲಿಲ್ಲ. ಬಿಸಿಲು ಇಳಿಯುತ್ತಿತ್ತು. ಕುಳಿತಿದ್ದ ರತಿ ಎದ್ದಳು. ಅವಳು ಇನ್ನೂ ನೀರಿನ ಮೈಯನ್ನೇ ನೋಡುತ್ತಿದ್ದಳು. ತಿಳಿಬಣ್ಣದ ನೀರು ಮರದ ನೆರಳು, ಸಂಜೆಯ ಛಾಯೆಯ ಜೊತೆ ಸೇರಿಕೊಂಡು ಕಪ್ಪಾಗಿ ಕಾಣುತ್ತಿತ್ತು. ರತಿಯ ಕಣ್ಣಿಗೆ ಗಳಿಗೆ ಗಳಿಗೆಗೂ ಆ ಕಪ್ಪು ಗಾಡವಾಗುತ್ತ ಹೋದಂತೆನಿಸಿ, ಒಂದು ಹಂತದಲ್ಲಿ ಎಲ್ಲ ಕಡೆ ಕಪ್ಪು ಆವರಿಸಿಕೊಂಡುಬಿಟ್ಟಿತು. ಆ ಕ್ಷಣ ಸುತ್ತಲ ಶಬ್ದಗಳೂ ಸದ್ದಡಗಿ, ಕತ್ತಲ ಸುರಂಗದೊಳಗೆ ಹೋಗುತ್ತಿರುವ ಅನುಭವವಾಯಿತಷ್ಟೆ,
ಅಂಬೇಡ್ಕರ್ ಹೆಸರಿನ ಬದಲು ದೈವದ ಸ್ಮರಣೆ ಮಾಡಿದರೆ ಸೌಭಾಗ್ಯ ಕೂಡಿಬರಲಾರದು. ಕಾಣದ ದೈವಕ್ಕಿಂತ ಕೈಹಿಡಿದು ನಡೆಸುವ ಧೀಮಂತ ನಾಯಕ ಮತ್ತು ಆದರ್ಶ ಮೌಲ್ಯಗಳ ಸಾಕಾರಮೂರ್ತಿ ಬಾಬಾ ಸಾಹೇಬರು. ಅವರನ್ನು ಪರಿಚಯಿಸುವ ಗ್ರಂಥಗಳ ಮಹಾಪೂರಕ್ಕೆ ಈಗಾಗಲೇ ಸಾರವತ್ತಾಗಿ ನೆಲ್ಸನ್ ಮಂಡೇಲಾ ಜೀವನ ಚರಿತ್ರೆಯನ್ನು ನೀಡಿರುವ ಡಾ. ಎಂ. ವೆಂಕಟಸ್ವಾಮಿಯವರ ನೂತನ ಮೌಲಿಕ ಕೃತಿಯ ಸೇರ್ಪಡೆಯಾಗುತ್ತಿದೆ. ನಮ್ಮ ಸಾಂಸ್ಕೃತಿಕ - ಆರ್ಥಿಕ - ಸಾಮಾಜಿಕ ಸವಾಲುಗಳನ್ನೆದುರಿಸಲು ಡಾ. ಅಂಬೇಡ್ಕರ್ ಅವರ ಚಿಂತನೆ ಮತ್ತು ಹೋರಾಟಗಳನ್ನು ವಿಹಂಗಮ ಶೈಲಿಯಲ್ಲಿ ಪ್ರಸ್ತುತ ಕೃತಿಯು ಕಟ್ಟಿಕೊಡುತ್ತದೆ. ಬಾಬಾ ಸಾಹೇಬರ ಜೀವನ, ಹೋರಾಟ, ವಿದ್ವತ್ತು, ಕಳಕಳಿ ಮುಂತಾದವು ನಮಗಿಂದು ದಾರಿದೀಪ. ಸನಾತನವೆಂಬ ಹೊರೆಗೆ ಪರ್ಯಾಯಗಳಲ್ಲಿ ಅಂಬೇಡ್ಕರ್ ಅವರ ಚಿಂತನೆ ಮತ್ತು ಹೋರಾಟ ಅನನ್ಯವಾದುವು. ಡಾ. ಜಿ. ರಾಮಕೃಷ್ಣ
ಅಹಿಂಸೆ, ಅಪರಿಗ್ರಹ ಮತ್ತು ಅನೇಕಾಂತವಾದದಂಥ ಅನನ್ಯ ಬೋಧನೆಗಳ ಮೂಲಕ ಇಡೀ ಜಗತ್ತಿಗೆ ಶಾಂತಿಯ ದಾರಿ ತೋರಿಸಿದ ಜೈನ ಧರ್ಮವು ಭಾರತದ ಪುರಾತನ ಧರ್ಮಗಳಲ್ಲಿ ಒಂದು. ಭಾರತದ ಇತರ ಮತ್ತು ಪಾಶ್ಚಾತ್ಯ ಧರ್ಮಗಳ ತುಲನೆಯಲ್ಲಿ ಜೈನ ಧರ್ಮದ ಉನ್ನತ ಸ್ಥಾನಮಾನ ಗುರುತಿಸುವ ಈ ಪುಸ್ತಕ ಕನ್ನಡದ ಓದುಗರಿಗೆ ಒಂದು ಅಪೂರ್ವ ಕೊಡುಗೆ. ಜೈನ ಧರ್ಮದಲ್ಲಿ ೬೩ ಜನ ಶಲಾಕಾ ಪುರುಷರಿದ್ದಾರೆ. ಅದಕ್ಕಾಗಿಯೇ ಈ ಕೃತಿ ೬೩ ಅಧ್ಯಾಯಗಳಲ್ಲಿ ವಿಸ್ತರಿಸಿದೆ. ಜೈನ ಧರ್ಮದಲ್ಲಿ ಮತ್ತು ಧರ್ಮಗಳಲ್ಲಿ ಆಸಕ್ತಿ ಇರುವ ಯಾರೇ ಆದರೂ ಈ ಕೃತಿಯನ್ನು ಓದಬೇಕು. ದೇವದತ್ತ ಪಟ್ಟನಾಯಕರ ಈ ಅದ್ಭುತ ಕೃತಿಯನ್ನು ಪದ್ಮರಾಜ ದಂಡಾವತಿಯವರು ಅಷ್ಟೇ ಅನುಪಮವಾಗಿ ಕನ್ನಡಕ್ಕೆ ತರ್ಜುಮೆ ಮಾಡಿದ್ದಾರೆ
ಸಿ ವಿ ಜಯಣ್ಣ , ವಿ ಸಿ ರುದ್ರಾಣಿ , ಏನ್ ಎಂ ನಾಗರಾಜಯ್ಯ
NA
ಸಾಕ್ಷಿ ಷಡಕ್ಷರಿ
ಕಾಡುತ್ತದೆ. ಸೃಜನಶೀಲ ಲೇಖಕ ಜೀವನದ ವಿಶ್ವವಿದ್ಯಾನಿಲಯದಲ್ಲಿ ಗಾಢವಾದ ಆಲೋಚನೆ ಮಾಡಿ ತನ್ನ ದಾರಿಯನ್ನು ತಾನೇ ಹುಡುಕಿಕೊಳ್ಳುವಲ್ಲಿ ಯಶಸ್ವಿಯಾಗುತ್ತಾನೆ ('ನನ್ನ ವಿಶ್ವವಿದ್ಯಾನಿಲಯ'); ಕೊನೆ ಎಲೆ', ಕಲಾವಿದನೊಬ್ಬ ಮಹಾನ್ ಕಲಾಕೃತಿಯನ್ನು ಸೃಷ್ಟಿಸಿ ಅದರ ಮೂಲಕ ಸಾಯುವಂತಹ ಜೀವ ಒಂದಕ್ಕೆ ಬದುಕಬೇಕು ಆತ್ಮವಿಶ್ವಾಸವನ್ನು ತುಂಬಿದ ಸಾರ್ಥಕ ಕಥೆಯಾಗಿದೆ; 'ಖುಷಿ ರಾಜಕುಮಾರ' ಕಥೆಯಲ್ಲಿ ಚಿಕ್ಕ ಪಕ್ಷಿ ಮತ್ತು ರಾಜಕುಮಾರ ತಮ್ಮ ಚಟುವಟಿಕೆಗಳ ಮೂಲಕ ದೇವರಿಗೆ ಪ್ರಿಯರಾಗುತ್ತಾರೆ. ಒಳ್ಳೆಯತನ ಮತ್ತು ಕೆಡಕುತನ ಇವುಗಳ ನಿರಂತರ ಸಂಘರ್ಷದಲ್ಲಿ ಕೊನೆಗೆ ಒಳ್ಳೆಯದ್ದು ಗೆಲ್ಲುತ್ತದೆ ಎಂಬ ಆಶಾಭಾವ 'ಕನಸು' ಕಥೆಯಲ್ಲಿ ಧ್ವನಿಸುತ್ತದೆ. ಮನುಷ್ಯ ಸ್ವಭಾವದಲ್ಲಿರುವ ಒಳ್ಳೆಯತನಕ್ಕೆ ದಸ್ತಾಯೇವ್ಸ್ಕಿ ಒತ್ತುಕೊಟ್ಟು ಸಕಾರಾತ್ಮಕವಾಗಿ ಸ್ಪಂದಿಸಿದ್ದಾನೆ. ಪ್ರೀತಿ, ಪ್ರೇಮ, ಆದರ್ಶ, ತ್ಯಾಗ, ಇಂತಹ ಸೂಕ್ಷ್ಮಭಾವನೆಗಳೂ ಕಥೆಗಳಲ್ಲಿ ಕಲಾತ್ಮಕವಾಗಿ ಅನಾವರಣಗೊಂಡಿವೆ.
Showing 1261 to 1290 of 3616 results