ಡಿಯರ್ ಡಿಟೆಕ್ಟಿವ್ ಹಿಮವಂತ್, ನಾನು ಈ ಡೆತ್ ನೋಟನ್ನು ನಿನಗೆ ಕಳಿಸುತ್ತಿರುವ ಹಿಂದೆ ಒಂದು ಪ್ರಮುಖ ಕಾರಣವಿದೆ. ಇತ್ತೀಚಿನ ದಿನಗಳಲ್ಲಿ ನನ್ನ ಬದುಕು ದುಸ್ತರವಾದಂತೆ ನನಗನಿಸುತ್ತಿದೆ. ಜೊತೆಗೆ ನನ್ನ ವೈಯಕ್ತಿಕ ಜೀವನವು ತೀರ ಹದಗೆಟ್ಟು ಹೋಗಿರುವುದರಿಂದ ನನಗೆ ಬದುಕುವ ಆಸಕ್ತಿಯು ಹೊರಟುಹೋಗಿದೆ. ಒಂದಿಷ್ಟು ತಿಂಗಳಿನಿಂದ ಸೀವಿಯರ್ ಡಿಪ್ರೆಶನ್ ನಿಂದ ಬಳಲುತ್ತಿದ್ದೇನೆ. ಹಾಗೇಯೇ ಮೂರ್ನಾಲ್ಕು ತಿಂಗಳಿಂದ ಒಂದಕ್ಷರವನ್ನು ಬರೆಯಲಾಗುತ್ತಿಲ್ಲ ಎಂಬ ಕೊರಗು ನನ್ನನ್ನು ಸದಾ ಕಾಡುತ್ತಿದೆ. “ಫಿಲ್ಲರ್ ಕಾದಂಬರಿಗಾರ್ತಿ ಯಾಗಿ ಸಿಕ್ಕ ಖ್ಯಾತಿಯೆಲ್ಲವೂ ಶೂನ್ಯವೆಂದು ನನಗೀಗ ಅರಿವಾಗುತ್ತಿದೆ. ಒಂದು ವೇಳೆ ನಾನು ಸತ್ತು ಹೋದರೆ, ಅದಕ್ಕೆ ನನ್ನ ಗಂಡ ಮತ್ತು ಅವನೊಟ್ಟಿಗೆ ಅಕ್ರಮ ಸಂಬಂಧವನ್ನು ಹೊಂದಿರುವ “ಚರ್ಚ್ ಸ್ಪೀಟ್ ನ ಹುಡುಗಿಯು ಕಾರಣವಾಗಿರುತ್ತಾರೆ. ಇದಲ್ಲದೆ ಸಾಯುವ ಮುನ್ನ ಸಾಕಷ್ಟು ರಹಸ್ಯಗಳನ್ನು ನಿನ್ನೊಂದಿಗೆ ತೆರದಿಡಬೇಕಿದೆ. ಆದ್ದರಿಂದ ಮಧ್ಯರಾತ್ರಿ ಒಂದರ ವೇಳೆಗೆ ನೀನು ನನ್ನನ್ನು ಭೇಟಿಯಾಗಬೇಕು. ಭೇಟಿಯು ರಹಸ್ಯವಾಗಿರುವುದರಿಂದ ಸ್ಥಳವನ್ನು ಕೂಡ ರಹಸ್ಯವಾಗಿರಿಸಿದ್ದೇನೆ. ನೆನಪಿರಲಿ, ಇದೊಂದು ಸೀಕ್ರೆಟ್ ಡೆತ್ ನೋಟ್ !! ನೋವಿನಿಂದ ತಾರಾಗುಪ್ತ…
nil
#
ಮಹದೇವ ಪ್ರಕಾಶ್
ಎಂ ಎಸ್ ಶರತ್
ರಾಜಾರಾಂ ತಲ್ಲೂರ್
ಹೆಣ್ಣಿನ ಅಸಹಾಯಕತೆ ಮತ್ತು ಗಂಡಿನ ಸಂವೇದನಾಶೂನ್ಯತೆ ಅನುಪಮಾ ತಮ್ಮ ಕತೆಗಳಲ್ಲಿ ಮತ್ತೆ ಮತ್ತೆ ಶೋಧಿಸುವ ಎರಡು ಅಪರಿಹಾರ್ಯ ಸ್ಥಿತಿಗಳು. ಇಲ್ಲಿ ನಮಗೆ ಎದುರಾಗುವ ಎಲ್ಲಾ ಪಾತ್ರಗಳು ದಿನನಿತ್ಯದ ಕಷ್ಟ ಕಾರ್ಪಣ್ಯ ಮತ್ತು ಅನಿರೀಕ್ಷಿತವಾಗಿ ಎರಗಿಬರುವ ಆಘಾತಗಳ ಜೊತೆ ನಮ್ಮ ಕಾಲದ ರಾಜಕೀಯದಲ್ಲಿ ಹಾಸುಹೊಕ್ಕಾಗಿರುವ ಕ್ರೌರ್ಯದ ಜೊತೆ ಸಹ ಏಗಿಕೊಂಡು ತಾಳಿಕೊಂಡು ಬಾಳುವವರು; ಆದರೆ ಯಾರೂ ಒಂಟಿಯಲ್ಲ. ಸಂಕಲನದ ಎಲ್ಲ ಕಥೆಗಳೂ ಊರು ಮನೆಗಳ ಆವರಣವನ್ನೂ ಕಾಲದೇಶದ ಸಂದರ್ಭವನ್ನೂ ಕಟ್ಟಿಕೊಂಡೇ ನಮ್ಮೆದುರು ಅನಾವರಣಗೊಳ್ಳುವುದು. ಜಿ ರಾಜಶೇಖರ
'ದೂರ ದೇಶದ ದೇವರು' ಕಥಾಸಂಕಲನದ ಪಾತ್ರಗಳಲ್ಲಿ ನೈಜತೆಯಿದ್ದು ಅವು ಬಹು ಆಯಾಮವನ್ನು ಹೊಂದಿವೆ. ಕತೆ ಸಾಗುತ್ತಿದ್ದಂತೆ ಅಲ್ಲೊಂದು ಬೆಳವಣಿಗೆ, ಒಂದು ಬದಲಾವಣೆ ಕಂಡುಬರುತ್ತದೆ. ಅಲ್ಲಿನ ಸಂಬಂಧ-ಸಂಘರ್ಷಗಳು ನೈಜವಾಗಿ ನಡೆಯುವಂತೆ ಕತೆಯನ್ನು ಮುಂದಕ್ಕೆ ಕೊಂಡೊಯ್ಯಲಾಗಿದೆ. ಪ್ರತಿ ಕತೆಯಲ್ಲೂ ಇರುವ ಸಂಘರ್ಷದಲ್ಲಿ ಓದುಗನೂ ಪಾಲುಗೊಳ್ಳುವಂತಾಗುವುದು ಇಲ್ಲಿನ ವಿಶೇಷ. ಕುಣಿಗಲರು ಕತೆ ಹೇಳುವ ರೀತಿಯೂ ಸ್ವಾರಸ್ಯಕರವಾಗಿದ್ದು, ಕತೆಗಳು ಆಸಕ್ತಿಯಿಂದ ಓದಿಸಿಕೊಂಡು ಹೋಗುತ್ತವೆ. ಕತೆಯ ಭಾಷೆ, ನಿರೂಪಣಾ ಶೈಲಿ, ಪದಗಳ ಆಯ್ಕೆಯಲ್ಲಿರುವ ಶಿಸ್ತು ಮತ್ತು ವಿಷಯವನ್ನು ಕೆಲವೇ ಶಬ್ದಗಳಲ್ಲಿ ಹೇಳುವ ಅಚ್ಚುಕಟ್ಟುತನ ಈ ಎಲ್ಲ ಅಂಶಗಳು ಅನಾಯಾಸವಾಗಿ, ಸಹಜವಾಗಿ ಬಂದು, ಅಲ್ಲೊಂದು ಸಮತೋಲನವಿದೆ. ಓದಿ ಮುಗಿದ ನಂತರವೂ ಓದುಗರೊಂದಿಗೆ ಉಳಿಯುವ ಗುಣವಿದೆ. ಮಾನವ ಸ್ವಭಾವದ ಬಗ್ಗೆ ಸೂಕ್ಷ್ಮವಾದ ಒಳನೋಟವನ್ನು ನೀಡುವ ಈ ಸಂಕಲನದ ಕತೆಗಳು ವೈಯುಕ್ತಿಕವಾಗಿದ್ದಂತೆ ಅಲ್ಲೊಂದು ಸಾರ್ವತ್ರಿಕತೆಯೂ ಇದೆ. ಮುಖ್ಯವಾಗಿ, ಕತೆಯ ಓಘವು ಎಲ್ಲವನ್ನೂ ಕಾಗುಣಿತಗೊಳಿಸದೆ ಬದುಕಿನ ವ್ಯಾಖ್ಯಾನಕ್ಕೆ ಅವಕಾಶವನ್ನು ನೀಡುತ್ತವೆ. ಹೊಸ ಆಲೋಚನೆಗಳು ವೈಯಕ್ತಿಕ ಮಟ್ಟದಲ್ಲಿ ಆಳವಾಗಿ ಪ್ರತಿಧ್ವನಿಸುವಂತಿದ್ದು, ಕೆಲವು ಕತೆಗಳು ಓದುಗನ ದೃಷ್ಟಿಕೋನಕ್ಕೆ ಸವಾಲೊಡ್ಡುವಂತಿವೆ. ಮಿತ್ರಾ ವೆಂಕಟ್ರಾಜ | ಹಿರಿಯ ಕಥೆಗಾರ್ತಿ | ಮುಂಬಯಿ
Showing 1441 to 1470 of 3616 results