• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ನೂರಕ್ಕೆ ನೂರು ಕಲಿಕೆ ಮತ್ತು ಅಂಕ ಗಳಿಕೆ | Noorakke nooru Kalike mattu Anka Galike

ಇದೊಂದು ವಿನೂತನವಾದ ಶೈಕ್ಷಣಿಕ ಮನೋವಿಜ್ಞಾನದ ಗ್ರಂಥ. ಇದರ ಪುಟಪುಟಗಳಲ್ಲೂ ವಿದ್ಯಾರ್ಥಿಗಳಿಗೆ ಅವಶ್ಯವಿರುವ ವಿಪುಲ ಮನೋವೈಜ್ಞಾನಿಕ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಈ ಗ್ರಂಥದ ಪರಿವಿಡಿಯ ಮೇಲೆ ಒಮ್ಮೆ ಕಣ್ಣಾಡಿಸಿದರೆ ಸಾಕು, ಅಲ್ಲಿಯ ಶೀರ್ಷಿಕೆಗಳು ವಿದ್ಯಾರ್ಥಿಗಳ ಮನಸ್ಸನ್ನು ಸೆರೆಹಿಡಿಯುತ್ತವೆ. ಶಿಕ್ಷಣದ ಜೀವಾಳವಾಗಿರುವ ವಾಚನ, ವ್ಯಾಸಂಗ, ಮನನ ಮುಂತಾದವುಗಳ ಸ್ವರೂಪದ ಕುರಿತು ಸಂಕ್ಷಿಪ್ತವಾದರೂ ಮನಮುಟ್ಟುವಂತೆ ವಿವರಿಸಿದ್ದಾರೆ. ಒಟ್ಟು ಶಿಕ್ಷಣದ ಪ್ರಕ್ರಿಯೆಗಳಾದ ಕಲಿಕೆಗೆ ಪ್ರೇರಣೆ, ಏಕಾಗ್ರತೆಯ ಸಂವರ್ಧನೆ, ಸಮಯದ ನಿರ್ವಹಣೆ, ಓದಿನ ವೇಗವನ್ನು ಹೆಚ್ಚಿಸಿಕೊಳ್ಳುವುದು, ಸುಂದರವಾಗಿ ಬರೆಯುವುದು, ನೂರಕ್ಕೆ ನೂರು ಅಂಕ ಗಳಿಕೆಯ ಅಭಿಲಾಷೆಯಿಂದ ಮುನ್ನಡೆಯುವುದು, ಪರೀಕ್ಷೆಯ ಬಗೆಗಿನ ಭಯಭೀತಿಗಳನ್ನು ಧೈರ್ಯದಿಂದ ಎದುರುಗೊಂಡು ನಿರ್ವಹಿಸುವುದು- ಹೀಗೆ ವಿದ್ಯಾರ್ಥಿಗಳಿಗೆ ಸೂಕ್ತ ಹಾಗೂ ವಾಸ್ತವಿಕ ಮಾರ್ಗದರ್ಶನ ಮಾಡಬಲ್ಲ ಸಂಗತಿಗಳನ್ನು ಬಹು ಸರಳವಾಗಿ ಮತ್ತು ಸ್ಪಷ್ಟವಾಗಿ ಮಂಡಿಸಿದ್ದಾರೆ.

₹85   ₹76

ನೂರು ನೆನಪು

nil

₹120   ₹107

ನೃಪತುಂಗ

nil

₹140   ₹125

Sold Out
ನೆಲೆ| Nele

nil

₹240   ₹240

ನೇತಾಜಿ| Nethaji

#

₹275   ₹2465

ನೇರಳೆ ಐಸ್ಕ್ರೀಂ | Nerale Icecream

ಪ್ರಿಯ ಪ್ರಸಾದ್ ಚತುರ್ಮುಖ ಬಸದಿಯ ಕಲ್ಲ ಮೇಲೆ ಕೂತು ಪುಟ್ಟ ಚೀಲದಿಂದ ಬಿಟು, ಚಕ್ಕುಲಿ, ಬನ್ನುಗಳನ್ನು ಮುಖದ ಬಣ್ಣ, ತುಟಿಯ ಕೆಂಪು ಹಾಳಾಗದಂತೆ ತಿನ್ನುವ ಮರಿ ಮಹಿಷಾಸುರ "ವೇಷದ ಸಂತು". ನಿಗೂಢ ಮಳೆಯ ಕಾಡಿನಲ್ಲಿ ಕಂಬಳಿಕೊಪ್ಪೆ ಹಾಕಿಕೊಂಡು, ಅದೃಷ್ಟಕ್ಕಾಗಿ ಕಾದವನಂತೆ, ಕಲ್ಲಣಬೆಗಾಗಿ ಅಲೆಯುವ ನಿಚ್ಚು, ತನ್ನ ಸಿರಿಕಂಠದ ಭಾಗವತಿಕೆಯ ಯಕ್ಷಬಿಂಬಕೆ ತಾನೇ ಮಾರು ಹೋಗಿ, ತನ್ನನ್ನೇ ಕಳೆದುಕೊಂಡು ಕಂಗಾಲಾದ ಗಿರಿಧರ, ಇಂಥವರ ಕತೆಗಳನ್ನು ಕಣ್ಣಿಗೆ ಕಟ್ಟುವಂತೆ ಹೇಳಿದ್ದೀಯ. ಮೇಲ್ನೋಟಕ್ಕೆ ಒಂದು ಬಗೆಯ ವರ್ಣನಾತ್ಮಕ ಗುಣ ಈ ನಿರೂಪಣೆಗಳಲ್ಲಿ ಎದ್ದು ಕಂಡರೂ, ಸೂಕ್ಷ್ಮವಾಗಿ ನೋಡಿದರೆ ಅದು ಆಯಾ ಜೀವಿಗಳ ಖಾಸಗೀ ಜೀವನದ ದಾರುಣತೆಯ ವಿರೋಧಾಭಾಸವನ್ನು ಧ್ವನಿಸುತ್ತದೆ. ಹಬ್ಬದ ನೆಪದಲ್ಲಿ ಪುರಾಣದ ವೇಷಗಳನ್ನು ತೊಟ್ಟುಕೊಂಡು ಮನೆಮನೆಗೆ ಕಾಣಿಕೆಗಾಗಿ ಅಲೆಯುವುದು, ಕಲ್ಲಣಬೆಯ ರುಚಿ ಏನೆಂದೇ ತಿಳಿಯದವ ಅದನ್ನು ಅಲೆದಾಡಿ ಹಕ್ಕಿ ತಂದು ತನಗಾಗಿ ಒಂದನ್ನೂ ಉಳಿಸಿಕೊಳ್ಳದೇ ಪುಡಿಗಾಸಿಗೆ ಮಾರುವುದು, ಸಾರ್ವಜನಿಕರ ಕಣ್ಣಲ್ಲಿ ಏರುತ್ತ ಹೋದ ಕಲಾವಿದ ಅತ್ಮಮೋಹದ ನರಕಕ್ಕೆ ಜಾರುವುದು, ಇಂಥ ವಿರೋಧಾಭಾಸಗಳು ಈ ಕತೆಗಳ ಮುಖ್ಯ ಲಕ್ಷಣಗಳಾಗಿ ನನ್ನನ್ನು ತಟ್ಟಿದವು. ಮೊದಲೇ ಅಸ್ಪಷ್ಟವಾಗಿಯಾದರೂ ಮನಗಂಡಿರುವ ಕತೆಯನ್ನು ಆರಾಮಾಗಿ “ಎಲೆಗೆ ಸುಣ್ಣ ಹಚ್ಚುತ್ತ ಹೇಳುವ ಶೈಲಿ" ನಿನ್ನದು. ಹೀಗಾಗಿ ಚೂರೂ ಹದ ತಪ್ಪಿದರೂ ವಿರೋಧಾಭಾಸದ ಆ ಅಜ್ಞಾತ ನಾಡಿಬಿಂದು ಎಲ್ಲೋ ಹಗುರಾಗಿಬಿಡಬಹುದು, ಅಥವಾ ಮರೆಯಾಗಿಬಿಡಬಹುದು. ನಿನಗೂ ಗೊತ್ತಿರದ ಸಂಗತಿಗಳು ಬಂದು ಸೇರಿಕೊಳ್ಳಲು ನೀನು ಬಾಗಿಲುಗಳನ್ನು ತೆರೆದಿಟ್ಟುಕೊಂಡಾಗ ಮಾತ್ರ ಹೊಸತೊಂದು ಅನಿರೀಕ್ಷಿತ, ಅಸಂಗತ ಅಂಶ ಬಂದು ನಿನ್ನನ್ನು ಚಕಿತಗೊಳಿಸಬಹುದು. ಗಿರಿಧರನಿಗೆ ಅನಿಸುವಂತೆ, ಕಥನವೂ ಸಹ ಕಾಣದ ಕಡಲಿನೆಡೆಗೆ ಚಲಿಸುತ್ತಿರುವ ನದಿಯಂತೆ, ಅದು ತನ್ನ ದಂಡೆಯನ್ನು ತಾನೇ ರೂಪಿಸಿಕೊಳ್ಳುತ್ತದೆ. ನಿನ್ನ ಬರವಣಿಗೆ ನಿನ್ನನ್ನು ಒರೆಗೆ ಹಚ್ಚುತ್ತಲೇ ಇರಲಿ, ಹೊಸ ಹೊಸ ಅಸಂಗತ, ಅನಿರೀಕ್ಷಿತ ತಿರುವುಗಳಿಗೆ ತೆರೆದುಕೊಳ್ಳುತ್ತ ಜೀವಜಾಲದೊಂದಿಗಿನ ನಂಟನ್ನು ಒಳಗೊಳ್ಳುತ್ತ ಪ್ರವಹಿಸಲಿ, ಜಯಂತ ಕಾಯ್ಕಿಣಿ

₹225   ₹191

ನೊಣಾನುಬಂಧ | Nonanubandha

ಎಚ್ ಡುಂಡಿರಾಜ್

₹195   ₹174