#
"ನಾನು ಬಡತನದಲ್ಲಿ ಹುಟ್ಟಿ ಬಡತನದಲ್ಲಿ ಬಡವರ ಜತೆ ಬೆಳೆದೆ. ಥಂಡಿ ನೆಲದಲ್ಲಿ ಗೋಣಿ ತಾಟಿನ ಮೇಲೆ ಬಡವರು ಮಲಗುವ ಹಾಗೆ ನಾನೂ ಥಂಡಿ ನೆಲದಲ್ಲಿ ಮಲಗಿದೆ; ಅವರ ದುಃಖದಲ್ಲಿ ಭಾಗಿಯಾದೆ. ನನ್ನ ಸೋದರರ ಬಗೆಗಿನ ಮತ್ತು ಜಗದ ಬಗೆಗಿನ ನನ್ನ ಧೋರಣೆಗಳು ಎಂದಿಗೂ ಬದಲಾಗುವುದಿಲ್ಲ. ನಾನು ಹುಟ್ಟಿ ಬೆಳೆದ ವರ್ಗ ಅನುಭವಿಸಿದ ಅಮಾನವೀಯ ಕ್ರೌರ್ಯ ಮತ್ತು ಅನ್ಯಾಯವನ್ನು ತೊಡೆದುಹಾಕಲು ವಿಫಲನಾದಲ್ಲಿ ಗುಂಡಿಟ್ಟುಕೊಂಡು ಸಾಯುವೆ. ನಾನು ನನ್ನ ಸಮುದಾಯವನ್ನು ಯಾವತ್ತೂ ಬಿಟ್ಟುಕೊಟ್ಟಿಲ್ಲ. ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದೇನೆ. ಇದೇ ನೀವು ನನ್ನ ಬದುಕಿನಿಂದ ಕಲಿಯುವ ಪಾಠ. ನನ್ನ ಬದುಕು ನಿಮಗೆಲ್ಲರಿಗೂ ತೆರೆದ ಪುಸ್ತಕ." ಡಾ. ಬಿ. ಆರ್. ಅಂಬೇಡ್ಕರ್
nil
ಯಾವುದೇ ಇತಿಹಾಸ ರಚಿಸುವಾಗ ಸಾಮಾನ್ಯವಾಗಿ ಪುರುಷ ಪ್ರಧಾನವಾದ ಇತಿಹಾಸಕ್ಕೇ ಒತ್ತು ನೀಡುತ್ತೇವೆ ರಾಜರು ಹಾಗೂ ಅವರ ಮಾಂಡಳಿಕರು ಹಾಕಿಸಿರುವ ಶಾಸನಗಳು, ಬರೆಸಿರುವ ಬರಹಗಳಲ್ಲಿ ಶ್ರೀ ಅಡಳಿತಗಾರರ ಬಗ್ಗೆ ಮಾಹಿತಿ ದೊರೆಯದಿರುವುದು. ಆಕರ ಸಾಮಗ್ರಿಯ ಕೊರತೆಯಾಗಿದೆ. ಡಾ. ಸಂದ್ಯಾ ಅವರು ಅಂತಹ ಕಾಲದ ಸ್ತ್ರೀಯರು ಹೇಗೆ ಬಾಳಿ-ಬದುಕಿದರೆಂಬ ಬಗ್ಗೆ ಪ್ರಾಚೀನ ಕರ್ನಾಟಕದ ಮಹಿಳಾಲೋಕ ಕೃತಿಯಲ್ಲಿ ತೋರಿಸಲು ಶ್ರಮಿಸಿದ್ದಾರೆ. ಇದರಲ್ಲಿಯೂ ಚೆನ್ನಾಗಿ ಆಡಳಿತ ನಡೆಸಿದ, ರಾಜಕೀಯದಲ್ಲಿದ್ದ ಶ್ರೀಯರ ಉಲ್ಲೇಖವೇ ಹೆಚ್ಚಾಗಿದೆ. ಮಕ್ಕಳಿಲ್ಲದೆ ರಾಜ ಸತ್ತಾಗ ರಾಜ್ಯದ ಜವಾಬ್ದಾಲ ಹೊತ್ತ ಮಹಿಳೆಯರು ಅಸ್ತಿತ್ವವನ್ನು ಉಳಿಸಲು ಪಟ್ಟ ಕಷ್ಟ-ನಷ್ಟಗಳನ್ನು, ಕರ್ನಾಟಕದಲ್ಲಿ ರಾಣಿಯರ ದತ್ತಕಗಳು ಅಧ್ಯಾಯದಲ್ಲಿ ವಿವರಿಸಿದ್ದಾರೆ. ಹಾಗೆಯೇ ಪೆಣ್ಣುಯ್ಯಲ್, ಸಂಗೀತ-ನೃತ್ಯಕಲೆಗಳಿಗೆ ಪ್ರಾಚೀನ ಅರಸಿಯರ ಕೊಡುಗೆ, ಮಹಿಳೆಯರ ಸಾಹಸ, ಧಾರ್ಮಿಕ ಕಾರ್ಯಗಳಲ್ಲಿ ಮಹಿಳೆಯರ ಪಾತ್ರ ಮೊದಲಾದ ಅಧ್ಯಾಯಗಳಲ್ಲಿ ಮಹಿಳೆಯರು ತಮ್ಮನ್ನು ಹೇಗೆ ತೊಡಗಿಸಿಕೊಂಡಿದ್ದರೆಂಬ ಬಗ್ಗೆ ವಿವರಿಸಿದ್ದಾರೆ. ಹೆಚ್ಚಿಗೆ ಶಾಸನಗಳನ್ನಾಧರಿಸಿ ಬರೆದಿರುವ ಈ ಲೇಖನಗಳ ಗುಚ್ಛ ಒಂದು ಅಧಿಕೃತ ಕೃತಿಯಾಗಿದೆ. ಇಲ್ಲಿ ಊಹಾ ಪೋಹಗಳಾಗಲೀ, ಕಲ್ಪಿತ ವಿಷಯಗಳಿಗಾಗಲೀ ಸ್ಥಳವಿಲ್ಲ. ಹೀಗಾಗಿ ಪ್ರಾಚೀನ ಕರ್ನಾಟಕದ ಮಹಿಳೆಯರ ಬಗ್ಗೆ ತಿಳಿದುಕೊಳ್ಳಲು ಇದೊಂದು ಅಧಿಕೃತ ಮಾಹಿತಿಯುಳ್ಳ ಗ್ರಂಥ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ, ಇಂತಹ ಅಧಿಕೃತ ಮಾಹಿತಿಯುಳ್ಳ ಗ್ರಂಥ ರಚಿಸಿದ ಶ್ರೀಮತಿ ಸಂಧ್ಯಾ ಅವರು ಅಭಿನಂದನಾರ್ಹರು. -ದೇವರಕೊಂಡಾರೆಡ್ಡಿ
ಜಯಪ್ರಕಾಶ ಮಾವಿನಕುಳಿಯವರು ಸ್ವತಂತ್ರ ಭಾರತದಲ್ಲಿ ಚಡಪಡಿಸುತ್ತಿರುವ ಸೂಕ್ಷ ಸಂವೇದನೆಯ ವ್ಯಕ್ತಿಗಳ ಅಪಾರ ಸಂಕಷ್ಟಗಳನ್ನು ಸೃಜನಶೀಲತೆಯ ಧ್ವನಿಪೂರ್ಣವಾಗಿ ತಮ್ಮ ಅತ್ಯಂತ ಕಥೆಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ಮಾನವೀಯ ಮೌಲ್ಯಗಳು ಸಮಾಜದಲ್ಲಿ ಅಧೋಗತಿಗೆ ಹೋಗುತ್ತಿರುವ ಬಗ್ಗೆ ಅಪಾರ ಸಿಟ್ಟು ಅವರ ಕಥೆಗಳಲ್ಲಿ ಹಾಸುಹೊಕ್ಕಿವೆ. ಅವರು ವರ್ತಮಾನದ ಸಂಗತಿಗಳನ್ನು ಹೇಳುತ್ತಲೇ ಭವಿಷ್ಯದ ಬೆಳಕಿನ ಬಗ್ಗೆ ಬರೆಯುತ್ತಾರೆ. ತಮ್ಮ ಪ್ರತಿಭಾ ಶೈಲಿಯ ಮೂಲಕ ಅವರು ತಮ್ಮ ಕಥೆಗಳಿಗೆ ಸ್ನಾಯುಶಕ್ತಿಯನ್ನು ತುಂಬಿದ್ದಾರೆ.
ರವಿ ಜೆ ಭಜಂತ್ರಿ
ಗಂಗಾವತಿ ಬಿ ಪ್ರಾಣೇಶ್
ನಮಗೆ ಜನ್ಮ ಕೊಟ್ಟ ತಾಯಿ ತಂದೆಯ ಋಣ ತೀರಿಸಲು ಸಾಧ್ಯವಿಲ್ಲ; ಭಾಮಳಿಗೆ ತನ್ನ ಅಪ್ಪನ ಸಂಧ್ಯಾಕಾಲದಲ್ಲಿನ ಜೀವನ ಚೇತೋಹಾರಿಯಾಗಿಡಲು ಹಾಗೂ ನೆಮ್ಮದಿಗೆ ಎಡೆ ಮಾಡಿಕೊಡಲು ಋಣ 'ಪ್ರಾಪ್ತಿ' ಆಗಿದ್ದು ಸಂತೋಷವೆನಿಸಿತು. ಈ ಧಾರಾವಾಹಿಯಲ್ಲಿನ ಪ್ರತಿಯೊಂದು ಪಾತ್ರವೂ ವಾಸ್ತವಿಕತೆಗೆ ಹತ್ತಿರವಾಗಿದೆ. ಟಿ.ಎಸ್. ಪ್ರತಿಭಾ, ಚಿತ್ರದುರ್ಗ ಮನೋಜ್ಞವಾಗಿ ಓದಿಸಿಕೊಂಡು ಹೋದ ಧಾರಾವಾಹಿ ಇಷ್ಟು ಬೇಗ ಮುಗಿಯಿತೇ ಅಂತ ಅನ್ನಿಸಿತು. ಕಾದಂಬರಿಯಲ್ಲಿ ಬರುವ ಚಿದಾನಂದ, ಸತ್ಯಭಾಮ, ಭಾರ್ಗವ. ಶೀಲಾ ಈ ಪಾತ್ರಗಳ ವ್ಯಕ್ತಿತ್ವ ನಿರೂಪಣೆ ಸಹಜವಾಗಿದೆ. ಜೀವನದಿಂದ ಆರಿಸಿ ತೆಗೆದಂತೆ ಇದೆ. ಸತ್ಯಭಾಮ ಅಪ್ಪನನ್ನು ಅನುಮಾನಿಸುವ ವಯಸ್ಸಿನಿಂದ ಮೊದಲ್ಗೊಂಡು, ಜೀವನದ ಅನುಭವಗಳಿಂದ ಮಾಗಿ, ಕೊನೆಗೆ ಅಪ್ಪನನ್ನು ಒಪ್ಪಿಕೊಳ್ಳುವ, ತನ್ನ ಬಳಿಯೇ ಇರಿಸಿಕೊಳ್ಳುವ ಪರಿ ಅನನ್ಯವಾಗಿದೆ. - ಬಿ.ವಿ. ರಾಜಲಕ್ಷ್ಮಿ, ಬೆಂಗಳೂರು ಧಾರಾವಾಹಿ ಮನಮುಟ್ಟುವಂತಿತ್ತು. ತನ್ನ ಅಪ್ಪನನ್ನು ಧಿಕ್ಕರಿಸಿ ಅಂತರ್ಜಾತಿ ವಿವಾಹವಾಗಿ ಮಾನಸಿಕ ಯಾತನೆ ಅನುಭವಿಸಿ, ಸುಗಮ ಬದುಕು ಕಂಡುಕೊಂಡ ಭಾಮ, ತನ್ನ ಅಪ್ಪನನ್ನು ಕರೆತರಲು ವೆಂಕಟೇಶನೊಂದಿಗೆ ಚರ್ಚಿಸಿದಾಗ, ನಾಳೆ ನಮಗೂ ಇಂತಹ ಸ್ಥಿತಿ ಬರಬಹುದು. ನಾಳೆ ನಮ್ಮ ಮಗಳು ನಮ್ಮನ್ನು ನೋಡಿಕೊಳ್ಳಬೇಕು. ನಾವು ಅವರಿಗೆ ಮೇಲ್ಪಂಕ್ತಿ ಆಗಬೇಕೆ ಹೊರತು ತಪ್ಪು ಮಾದರಿ ಆಗಬಾರದು ಎಂಬ ವೆಂಕಟೇಶನ ಉದಾತ್ತ ಮಾತುಗಳಿಂದ ಭಾಮಾಳ ಹೃದಯ ತುಂಬಿ ಬಂದು ತನ್ನ ತಂದೆಯನ್ನು ಕರೆತರುವ ನಿರ್ಧಾರ ಮಾಡಿದ್ದು ಶ್ಲಾಘನೀಯ. ಎಂ. ಟಿ. ರಮಾನಂದ ರೆಡ್ಡಿ, ಚಿತ್ರದುರ್ಗ ಧಾರಾವಾಹಿ ಕೊನೆಯ ಕಂತಿನಲ್ಲಿ ಗಳಗಳನೆ ಅಳುವಂತೆ ಮಾಡಿಬಿಟ್ಟಿತು. ಮನುಷ್ಯ ಸಂಬಂಧಗಳ ಅನಾವರಣ ಎಷ್ಟು ಚೆನ್ನಾಗಿತ್ತೆಂದರೆ ವಸುಮತಿ ಉಡುಪರಿಗೆ ಮಾತ್ರ ಸಾಧ್ಯವೇನೋ ಇಂತಹ ಬರವಣಿಗೆ ಎನಿಸಿತು.
Showing 1981 to 2010 of 3616 results