• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಮನೆ ಇ೦ಜಿನಿಯರ್ | mane Engineer

ಮನೆ ಇಂಜಿನಿಯರ್" ಶೀರ್ಷಿಕೆ ಹೊತ್ತ ಈ ಪುಸ್ತಕದಲ್ಲಿ ನಿವೇಶನದಿಂದ ಮೊದಲಾಗಿ ಮನೆಯನ್ನು ಕಟ್ಟಲು ಅಗತ್ಯವಿರುವ ಎಲ್ಲ ತರಹದ ಉಪಯುಕ್ತ ಮಾಹಿತಿಗಳನ್ನು ಅಚ್ಚುಕಟ್ಟಾಗಿ, ಸಾಮಾನ್ಯ ಜನರಿಗೂ ಅರ್ಥವಾಗುವಂತಹ ಸರಳವಾದ ಕನ್ನಡ ಭಾಷೆಯಲ್ಲಿ ರಾಮ್‌ಕದಮ್‌ರವರು ಬರೆದಿದ್ದಾರೆ. ನನ್ನ ಬಹುಕಾಲದ ಪರಿಚಿತರಾದ ಇವರು ಕನ್ನಡ ಸಾರಸ್ವತ ಲೋಕಕ್ಕೆ ಒಂದು ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಕೆಲವು ವಿಷಯಗಳು ಸಂಕ್ಷಿಪ್ತವಾಗಿವೆಯಾದರೂ ಅಗತ್ಯವಿರುವಷ್ಟು ವಿವರಣೆಯನ್ನು ಒಳಗೊಳ್ಳುವ ಮೂಲಕ 'ಮನೆ ಇಂಜಿನಿಯರ್' ಪರಿಪೂರ್ಣತೆಯನ್ನು ಪಡೆದು ಕೊಳ್ಳುವುದರಲ್ಲಿ ಸಫಲವಾಗಿದೆ. ವಿಶ್ವದ ಕೆಲವು ದೇಶಗಳಲ್ಲಿ ಬಳಕೆಯಲ್ಲಿರುವ ಆಯ್ದ ಮನೆಗಳ ಮಾದರಿ ನಕಾಶೆಗಳೂ ಇದರಲ್ಲಿವೆ. ವಾಸ್ತುಶಾಸ್ತ್ರದ ಗೊಂದಲಗಳಿಗೆ ಆಧಾರಸಹಿತವಾದ ಸ್ಪಷ್ಟ ವಿವರಣೆಯಿದೆ. ವಿದ್ಯುತ್, ಪ್ಲಂಬಿಂಗ್, ಒಳಾಂಗಣ ವಿನ್ಯಾಸ, ತಾಂತ್ರಿಕ ಸಲಹೆ ಹೀಗೆ ಅನೇಕ ಅಂಶಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಒಟ್ಟಿನಲ್ಲಿ ಮನೆಯನ್ನು ಕಟ್ಟುವವರಿಗೆ ಅಗತ್ಯವಾಗಬಹುದಾದ ಎಲ್ಲ ಮಾಹಿತಿಗಳು ಇಲ್ಲಿ ಸಮಗ್ರವಾಗಿ ಒಂದೇ ಪುಸ್ತಕದಲ್ಲಿ ಲಭ್ಯವಿದೆ. 'ಮನೆ ಕಟ್ಟಿನೋಡು, ಮದುವೆ ಮಾಡಿನೋಡು' ಎಂಬ ಕನ್ನಡದ ಗಾದೆ ಮಾತೊಂದಿದೆ. ಮದುವೆಯೇನೋ ಹಾಗೂ ಹೀಗೂ ಕೆಲವು ಚಿಕ್ಕಪುಟ್ಟ ಕೊರತೆಗಳ ನಡುವೆಯೂ ಮಾಡಿ ಮುಗಿಸಿಬಿಡಬಹುದು. ಆದರೆ ಮನೆಯನ್ನು ಕಟ್ಟುವುದು ಹಾಗಾಗುವುದಿಲ್ಲ. ಅದು ಕಷ್ಟದ ಕೆಲಸ. ಎಲ್ಲವನ್ನೂ ತರ್ಕಬದ್ಧವಾಗಿ ಹೊಂದಿಸಬೇಕಾದ ಅನಿವಾರ್ಯತೆಯಿರುತ್ತದೆ. ಈ ನಿಟ್ಟಿನಲ್ಲ. ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ವೃತ್ತಿಪರರಾದ ವಾಸ್ತುಶಿಲ್ಪಿಗಳು, ಇಂಜಿನಿಯರ್ಗಳು, ಗುತ್ತಿಗೆದಾರರು ಹಾಗೂ ಮನೆಯನ್ನು ಕಟ್ಟುವ ಮಾಲೀಕರು ಹೀಗೆ ಪ್ರತಿಯೊಬ್ಬರಿಗೂ ಈ ಪುಸ್ತಕವು ಅತ್ಯಂತ ಉಪಯುಕ್ತವಾಗಿದೆ. ಇವರಿಗೆ ಶುಭವಾಗಲಿ. -ಎಸ್. ಶ್ಯಾಮಸುಂದರ್ ಆರ್ಕಿಟೆಕ್ಟ್, ಶಿವಮೊಗ್ಗ

₹495   ₹421

ಮನೆ ಇ೦ಜಿನಿಯರ್ ಇಬುಕ್ | mane Engineer Ebook

ಮನೆ ಇಂಜಿನಿಯರ್" ಶೀರ್ಷಿಕೆ ಹೊತ್ತ ಈ ಪುಸ್ತಕದಲ್ಲಿ ನಿವೇಶನದಿಂದ ಮೊದಲಾಗಿ ಮನೆಯನ್ನು ಕಟ್ಟಲು ಅಗತ್ಯವಿರುವ ಎಲ್ಲ ತರಹದ ಉಪಯುಕ್ತ ಮಾಹಿತಿಗಳನ್ನು ಅಚ್ಚುಕಟ್ಟಾಗಿ, ಸಾಮಾನ್ಯ ಜನರಿಗೂ ಅರ್ಥವಾಗುವಂತಹ ಸರಳವಾದ ಕನ್ನಡ ಭಾಷೆಯಲ್ಲಿ ರಾಮ್‌ಕದಮ್‌ರವರು ಬರೆದಿದ್ದಾರೆ. ನನ್ನ ಬಹುಕಾಲದ ಪರಿಚಿತರಾದ ಇವರು ಕನ್ನಡ ಸಾರಸ್ವತ ಲೋಕಕ್ಕೆ ಒಂದು ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಕೆಲವು ವಿಷಯಗಳು ಸಂಕ್ಷಿಪ್ತವಾಗಿವೆಯಾದರೂ ಅಗತ್ಯವಿರುವಷ್ಟು ವಿವರಣೆಯನ್ನು ಒಳಗೊಳ್ಳುವ ಮೂಲಕ 'ಮನೆ ಇಂಜಿನಿಯರ್' ಪರಿಪೂರ್ಣತೆಯನ್ನು ಪಡೆದು ಕೊಳ್ಳುವುದರಲ್ಲಿ ಸಫಲವಾಗಿದೆ. ವಿಶ್ವದ ಕೆಲವು ದೇಶಗಳಲ್ಲಿ ಬಳಕೆಯಲ್ಲಿರುವ ಆಯ್ದ ಮನೆಗಳ ಮಾದರಿ ನಕಾಶೆಗಳೂ ಇದರಲ್ಲಿವೆ. ವಾಸ್ತುಶಾಸ್ತ್ರದ ಗೊಂದಲಗಳಿಗೆ ಆಧಾರಸಹಿತವಾದ ಸ್ಪಷ್ಟ ವಿವರಣೆಯಿದೆ. ವಿದ್ಯುತ್, ಪ್ಲಂಬಿಂಗ್, ಒಳಾಂಗಣ ವಿನ್ಯಾಸ, ತಾಂತ್ರಿಕ ಸಲಹೆ ಹೀಗೆ ಅನೇಕ ಅಂಶಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಒಟ್ಟಿನಲ್ಲಿ ಮನೆಯನ್ನು ಕಟ್ಟುವವರಿಗೆ ಅಗತ್ಯವಾಗಬಹುದಾದ ಎಲ್ಲ ಮಾಹಿತಿಗಳು ಇಲ್ಲಿ ಸಮಗ್ರವಾಗಿ ಒಂದೇ ಪುಸ್ತಕದಲ್ಲಿ ಲಭ್ಯವಿದೆ. 'ಮನೆ ಕಟ್ಟಿನೋಡು, ಮದುವೆ ಮಾಡಿನೋಡು' ಎಂಬ ಕನ್ನಡದ ಗಾದೆ ಮಾತೊಂದಿದೆ. ಮದುವೆಯೇನೋ ಹಾಗೂ ಹೀಗೂ ಕೆಲವು ಚಿಕ್ಕಪುಟ್ಟ ಕೊರತೆಗಳ ನಡುವೆಯೂ ಮಾಡಿ ಮುಗಿಸಿಬಿಡಬಹುದು. ಆದರೆ ಮನೆಯನ್ನು ಕಟ್ಟುವುದು ಹಾಗಾಗುವುದಿಲ್ಲ. ಅದು ಕಷ್ಟದ ಕೆಲಸ. ಎಲ್ಲವನ್ನೂ ತರ್ಕಬದ್ಧವಾಗಿ ಹೊಂದಿಸಬೇಕಾದ ಅನಿವಾರ್ಯತೆಯಿರುತ್ತದೆ. ಈ ನಿಟ್ಟಿನಲ್ಲ. ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ವೃತ್ತಿಪರರಾದ ವಾಸ್ತುಶಿಲ್ಪಿಗಳು, ಇಂಜಿನಿಯರ್ಗಳು, ಗುತ್ತಿಗೆದಾರರು ಹಾಗೂ ಮನೆಯನ್ನು ಕಟ್ಟುವ ಮಾಲೀಕರು ಹೀಗೆ ಪ್ರತಿಯೊಬ್ಬರಿಗೂ ಈ ಪುಸ್ತಕವು ಅತ್ಯಂತ ಉಪಯುಕ್ತವಾಗಿದೆ. ಇವರಿಗೆ ಶುಭವಾಗಲಿ.

₹495   ₹248

ಮನೆಯೊಳಗೆ ಮನೆಯೊಡೆಯ ಇದ್ದಾನೋ ಇಲ್ಲವೋ? | Maneyolage Maneyodeya iddano illavo ?

ಇದು ಜನಾರ್ದನ ಭಟ್ ಅವರ ವಿನೂತನ ಪ್ರತಿಮಾತ್ಮಕ ಕಾದಂಬರಿ, ಮೇಧಾವಿ ವಿದ್ವಾಂಸನೊಬ್ಬನ ವಿಶಿಷ್ಟ ಜೀವನ ದರ್ಶನ ಮತ್ತು ಸಾಧನೆಯ ಅನಾವರಣದ జతే ಜತೆಗೆ ಅಂದಿನ ಐತಿಹಾಸಿಕ ಸಾಂಸ್ಕೃತಿಕ ಪರಿಪ್ರೇಕ್ಷೆ ಈ ಕಾದಂಬರಿಯಲ್ಲಿ ರೋಚಕವಾಗಿ ಮೂಡಿಬಂದಿದೆ. ಪ್ರೊ. ಜಿ. ಎನ್. ಉಪಾಧ್ಯ ಮುಖ್ಯಸ್ಥರು, ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ

₹175   ₹156

ಮನೋ-ವೈದ್ಯಕೀಯ ಸಮಾಜಕಾರ್ಯ | mano vaidhakiya samajakarya

ಡಾ. ಲೋಕೇಶ ಎಂ.ಯು. ಮತ್ತು ಪವಿತ್ರ ಎ.ವಿ.

₹150   ₹134

ಮನೋಮಂದಿರ

nil

₹125   ₹111

ಮರಣ | Marana

#

₹250   ₹223

ಮಲೆನಾಡ ಅಜ್ಜಿ | Malenada Ajji

ಏನನ್ನೂ ಅಪೇಕ್ಷಿಸಿದ, ಯಾರನ್ನೂ ಉಪೇಕ್ಷಿಸದ ಈಕೆ ಅಪ್ಸರೆ. ಅಮರರಿಗೆ ಕಾಲದ ಹಂಗಿಲ್ಲ. ಹಾಗಾಗಿ ಭೂತ ಭವಿಷ್ಯತ್ತಿನ ಎಲ್ಲೆಗಳಿಲ್ಲ, ನಿರಂತರ ವರ್ತಮಾನ. ಕಾದದ್ದು ಊರ ಚೌಡಿಯಂತೆ, ಮುಟ್ಟಿದ್ದೆಲ್ಲಾ ಅಮೃತ, ಬೇಯಿಸಿದ ಅನ್ನ, ಕಾಯಿಸಿದ ಹಾಲು ಎಲ್ಲಾ ಹದ. ಕುದಿಯುತ್ತೆ; ಉಕ್ಕಲ್ಲ, ಕತ್ತಲ ಅಟ್ಟದ ಜಾಡಿಯ ಮಿಡಿ ಉಪ್ಪಿನಕಾಯಿಯೂ ವರ್ಷಗಳಾದರೂ ಕೆಡೊಲ್ಲ. ಉರಿಗಾರದ ಬಾಣಂತಿ ಲೇಹ್ಯ ಕೇವಲ ಅವಶ್ಯಕ ಕಾವನ್ನಷ್ಟೇ ಕೊಡುತ್ತೆ. ಆಷ್ಟ್ಯಾಕೆ ಸುತ್ತಲಿನ ನಿರ್ಲಿಪ್ತ ಗಾಳಿ ಕೂಡಾ ಅ೦ಟಿಕೊ೦ಡವರಿಗೆ ಉಸಿರಾಗುತ್ತೆ. ಓದಿ ಮುಗಿಸಿದೆ, ಮೈ ಮನ ತು೦ಬಿದೆ. ಭಾವೋದ್ವೇಗದಲ್ಲಿ ಅಲ್ಲಲ್ಲಿ ಉಕ್ಕಿದರೂ ಎಲ್ಲೆ ಮೀರಿ ಎಲ್ಲೂ ಚೆಲ್ಲಿಲ್ಲ. ಹಾಲು ಕುದ್ದು ನೀರು ಆವಿಯಾಗಿ ಅನುಭವದ ಸಾರ ಹೆಪ್ಪುಗಟ್ಟಿದಾಗ ಖಾಲಿತನ ಕಾಡಿದ್ದುಂಟು ಹೌದು ಆದರೆ ಅದನ್ನು ಮೀರಿದ ಪರಿಮಳ ಆವರಿಸಿದ್ದು ಸುಳ್ಳಲ್ಲ. -ಸೇತುರಾಂ

₹175   ₹140

ಮಲೆನಾಡಿನ ಯಕ್ಷಚೇತನಗಳು | Malenadina yakshachetanagalu

‘ಮಲೆನಾಡಿನ ಯಕ್ಷಚೇತನಗಳು’ ಕೃತಿಯು ರವಿ ಮಡೋಡಿ ಅವರ ಲೇಖನ ಸಂಕಲನವಾಗಿದೆ. ಕೃತಿಗೆ ಮುನ್ನುಡಿ ಬರೆದಿರುವ ಡಿ.ಎಸ್. ಶ್ರೀಧರ ತಾಳಿಪಾಡಿ ಅವರು ‘ಈ ಲೇಖನ ಮಾಲಿಕೆಯು ವಾಟ್ಸಾಪ್, ಫೇಸ್ಬುಕ್ ನಲ್ಲಿ ಸರಣಿಯಾಗಿ ಮೂಡಿಬಂದ ಲೇಖನ ಸಂಕಲನವಾಗಿದೆ. ರವಿ ಅವರು ಯಕ್ಷಗಾನ ನೃತ್ಯವನ್ನು ಶಾಸ್ತ್ರೀಯವಾಗಿ ಕಲಿತು, ಅದಕ್ಕೆ ಸಂಬಂಧಿಸಿದ ಸಕಲವನ್ನೂ ಅಧ್ಯಯನ ಮಾಡಿ, ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಾರೆ. ಬೆಂಗಳೂರಿನಂತಹ ಯಕ್ಷಗಾನೀಯ ನೆಲದಲ್ಲಿ ನೆಲೆಯನ್ನು ಕಲ್ಪಿಸಿದ್ದಾರೆ. ಮುನ್ನೂರಕ್ಕೂ ಹೆಚ್ಚುಪ್ರಯೋಗಗಳನ್ನು ನಾಡಿನಾದ್ಯಂತ ನಡೆಸಿ ಹವ್ಯಾಸಿಯಾದರೂ ವೃತ್ತಿನಿರತರ ಪ್ರಾವೀಣ್ಯವನ್ನು ಸಾಧಿಸಿದ್ದಾರೆ. ಯಕ್ಷವಾಹಿನಿ ಮತ್ತು ಯಕ್ಷ ಸಿಂಚನ ಎಂಬೆರಡು ಸಮರ್ಥ ಸಂಸ್ಥೆಯ ಕರ್ಣಧಾರತ್ವವಹಿಸಿ ಎರಡು ಸಂಸ್ಥೆಗಳನ್ನು ಹೊತ್ತ ಆಂಜನೇಯ ಶಕ್ತಿಯ ಅನುಭಾವಿ ರವಿ. ಜೊತೆಗೆ ಫೋಟೋಗ್ರಫಿಯಂತಹ ಪ್ರವೃತ್ತಿಯಲ್ಲೂ ಪರಿಣತಿಯನ್ನು ಸಾಧಿಸಿದವರು. ರವಿ ಅವರು ಮಾಹಿತಿಗಳಿಗಾಗಿ ಅರಿವುಳ್ಳ ಹಿರಿಯರು, ಗೆಳೆಯರು, ಕಲಾವಿದರ ಮಕ್ಕಳು, ಬಂಧುಗಳು, ಕಲಾವ್ಯವಸಾಯಿಗಳು, ಕಲಾವಿದರ ಶಿಷ್ಯರು ,ಮುಂತಾದವರ ಸಂಪರ್ಕವನ್ನು ಸಾಧಿಸಿ ಅವರೊಂದಿಗೆಲ್ಲ ಚರ್ಚಿಸಿ ಬರೆದುದನ್ನು ಪರಿಣಿತರ ಗಮನಕ್ಕೆ ತಂದು ಮತ್ತೆ ಫೇಸ್ಬುಕ್, ವಾಟ್ಸಾಪ್ ನಲ್ಲಿ ಪ್ರಕಟಿಸಿ ಆಮೇಲೆ ಪುಸ್ತಕಕ್ಕಿಳಿಸಲು ಮನಸ್ಸು ಮಾಡಿದ್ದಾರೆ. ಈ ಕೆಲಸ ಸುಲಭದ್ದಲ್ಲ. ಕೇಳಿದರೂ ತಿಳಿದವರು ಸ್ಪಂದಿಸದೆ ಇರುವುದು ಅದೆಲ್ಲ ಬರೆಯುವಷ್ಟು ದೊಡ್ಡದಲ್ಲ ಎಂಬ ದೊಡ್ಡಸ್ತಿಕೆಯ ಮಾತಾಡುವುದು , ನಾಳೆ ಹೇಳುವೆ ನಾಡಿದ್ದು ಹೇಳುವೆ ಎಂದು ಸತಾಯಿಸುವುದು, ಹೇಳಿದರೆ ನಮಗೇನು ಲಾಭ ಇವನಿಗೇನೋ ಅನುಕೂಲವಿರಬೇಕೆಂದು ಊಹಿಸುವುದು ಮುಂತಾದ ಹಲವು ಆಡಚಣೆಗಳನ್ನು ದಾಟಿ ಮುಂದುವರಿಯ ಬೇಕಾಗುತ್ತದೆ. ಕಲಾವಿದರು ಜೀವಿಸಿದ್ದ ಕಾಲ ದೂರದೂರವಾದಷ್ಟೂ ಮಾಹಿತಿಗಳೂ ದೂರದೂರವಾಗುತ್ತವೆ. ಕಲಾವಿದನ ಕೊಡುಗೆ ದೊಡ್ಡದೇ ಇದ್ದರೂ ಅವರ ಉತ್ತರಾಧಿಕಾರಿಗಳಿಗೆ ಆಸಕ್ತಿಯೇ ಇಲ್ಲದಿರುವುದು ಬಹುದೊಡ್ಡ ತೊಡಕಾಗುತ್ತದೆ. ಈ ಎಲ್ಲ ಪ್ರಯತ್ನಗಳನ್ನು ಮಾಡುತ್ತಾ ಇಷ್ಟೊಂದು ಕಲಾವಿದರನ್ನು ಕುರಿತು ಇವರು ಸಂಗ್ರಹಿಸಿದ ಮಾಹಿತಿ ಯಕ್ಷಗಾನಕ್ಕೆ ಬಹುದೊಡ್ಡ ಕೊಡುಗೆಯಾಗಿದೆ’ ಎಂದಿದ್ದಾರೆ.

₹200   ₹160