...ಬೇಟೆಯನ್ನು ಒಂದು ಕಾಯಕ ಪ್ರಜ್ಞೆಯಲ್ಲಿ ಬಾಳಿದ ಕಾರ್ಬೆಟ್ ನ ಅರಣ್ಯ ಪ್ರೀತಿ ಇರುವೆಂಭತ್ತು ಕೋಟಿ ಜೀವರಾಶಿಗಳನ್ನೂ ಅವುಗಳ ಬದುಕುವ ಹಕ್ಕನ್ನೂ ಮಾನ್ಯ ಮಾಡುವ ಗುಣಗೌರವದಿಂದ ಕೂಡಿದ್ದು.... ಪ್ರತಿಯೊಂದು ನರಭಕ್ಷಕ ಹುಲಿಯನ್ನು ಬೇಟೆಯಾಡಿದಾಗಲೂ ಆದ ಅನುಭವ ವಿವರಗಳನ್ನು ಕಟ್ಟಿಕೊಡುವಾಗ ಅವರು ವಿವರಿಸುವ ಕಾಡಿನ ಬಗೆ ವಿನ್ಯಾಸ ಅವರ ನೆನಪಿನ ತೀಕ್ಷ್ಣತೆಗೆ ಗ್ರಹಿಕೆಯ ಸೂಕ್ಷ್ಮತೆಗೆ ಕನ್ನಡಿ ಹಿಡಿದಂತಿದೆ. ಮೃತ್ಯು ಎದುರಿಗೇ ನಿಂತಾಗಲೂ ಧೃತಿಗೆಡದ ಅವರ ಆತ್ಮವಿಶ್ವಾಸದ ನಿಲುಮೆ ಅನನ್ಯವಾದುದು. ಇದೆಲ್ಲವನ್ನೂ ಅವರ ಬರಹ ತನ್ನ ಎದೆಯಲ್ಲಿ ತುಂಬಿಕೊಂಡಿದೆ. ಯಾವ ಜೀವ ವಿಜ್ಞಾನವೂ ತಿಳಿಸಲಾರದ ಎಷ್ಟೋ ಸೂಕ್ಷ್ಮಾತಿ ಸೂಕ್ಷ್ಮ ವಿಷಯಜ್ಞಾನವನ್ನು ಅನುಭವ ಮಾತ್ರದಿಂದ ಪಡೆದವರಾದ ಕಾರ್ಬೆಟ್ ಒಂದು ಅದ್ಭುತ, ಬೇಟೆಯನ್ನು ನಿಸರ್ಗಧರ್ಮಕ್ಕೆ ಎರವಾಗದ ನಡೆಯಲ್ಲಿ ಜೀವ ಸಂರಕ್ಷಕ ವಿಧಿಯಂತೆ ಪರಿಪಾಲಿಸಿದ ಮಹಾನುಭಾವ ಕಾರ್ಬೆಟ್. ...ಇಂಥ ಬೇಟೆಯ ಸಂತನ ಅನುಭವ ಕಥನವನ್ನು ಓದಿದ್ದೇ ನನ್ನ ಅಕ್ಷರಜ್ಞಾನದ ಅದೃಷ್ಟಭಾಗ್ಯವೆಂದು ನನ್ನ ತಿಳಿವು ಹೇಳುತ್ತಿದೆ. ಹಿಮಾಲಯದ ನರಭಕ್ಷಕಗಳು ...ಗೆಳೆಯ ವಿವೇಕಾನಂದನಿಗೆ ಆತ್ಮೀಯ ಕೃತಜ್ಞತೆಗಳು, ಕಾರಣ ಇಷ್ಟು ವಿಸ್ತಾರವಾದ ಈ ಬರಹವನ್ನು ಧ್ಯಾನಸ್ಥಿತಿಯ ಬದ್ಧತೆಯಲ್ಲಿ ಒಳಕ್ಕೆ ತಗೆದುಕೊಂಡು ಅದನ್ನು ಕನ್ನಡೀಕರಿಸಿದ್ದಕ್ಕೆ. ಇದನ್ನು ಕೇವಲ ಅನುವಾದ ಎಂದು ಹೇಳಿದರೆ ಅಪಚಾರವಾಗುತ್ತದೆ. ಕನ್ನಡ ಭಾಷೆಯ ಜಾಯಮಾನಕ್ಕೆ ಕಿಂಚಿತ್ತೂ ಊನವಾಗದ ಪ್ರಜ್ಞೆಯಲ್ಲಿ ಕಾರ್ಬೆಟ್ನ ಅನುಭವವನ್ನು ಕನ್ನಡಿಗರಿಗೆ ಕಟ್ಟಿಕೊಟ್ಟಿರುವ ಈ ಕಾರ್ಯ ಗುರುತರವಾದ ಹೊಣೆಗಾರಿಕೆಯಿಂದ ಮಾಡಿದ ಫಲವೇ ಸರಿ. ಈ ಜೀವಲೋಕದ ಬಗೆಗೆ ಕಾರ್ಬೆಟ್ ಪ್ರಜ್ಞೆಯನ್ನು ಬೆಳೆಸಿಕೊಂಡ ಮನಸ್ಸು ಮಾತ್ರ ಇಂಥ ಸಾಹಸಕ್ಕೆ ಶ್ರದ್ದೆ ಗೌರವಗಳಿಂದ ತೊಡಗುತ್ತದೆ.
nil
ಆರಂಭದಿಂದಲೂ ನಿಮ್ಮ ಚೈತನ್ಯಪೂರ್ಣ ಬರವಣಿಗೆ ಮನ ಸೆಳೆಯಿತು. ಪಟ್ಟಿ ಪಾಡು, ಪರದಾಟಗಳ ನಡುವೆಯೂ ತೂರಿ ಬರುತ್ತಿದ್ದ ನಗೆಚಟಾಕಿ, ಅನ್ಯ ಜನಗಳ ಸ್ನೇಹಮಿಲನ, ವೀಲ್ ಚೇರಿನಲ್ಲಿ ಏಕಾಂಗಿಯಾಗಿ ಪಯಣಿಸಿದ ಪಯಣಿಕರ ಸಾಹಸಗಾಥೆ, ಭಾಷೆ ಬರದ ಹೆಣ್ಣೆಂದು ತನ್ನ ಫೈಟಿಗೆ ಹೋಗುತ್ತಿದ್ದವಳು ಓಡಿ ಬಂದು ನಿಮ್ಮನ್ನು ಅಪ್ಪಿಕೊಂಡು ಹೋದದ್ದು ಒಂದು ರೀತಿಯ ಮಾನವ ವ್ಯಕ್ತಿತ್ವಗಳ ಕಿರು ನೋಟ, ನಿಮ್ಮ ಲವಲವಿಕೆಯ " ಮಾತುಗಳಲ್ಲಿ ರೂಪ ತಾಳಿ. ಇದೊಂದು ಚೆಂದದ ಜೀವಂತ ಕಥಾ ಚಿತ್ರ ಶಿಲ್ಪ. -ಲೀಲಾವತಿ ಎಚ್.ಆರ್
Showing 5461 to 5490 of 5583 results