nil
NA
ಯುದ್ಧ ಎನ್ನುವ ಪದ ಬಹಳ ಶಕ್ತಿಶಾಲಿ. ಅದೇ ಸಮಯದಲ್ಲಿ ಅದು ಭಯವನ್ನು ಸಹ ಹುಟ್ಟಿಸುತ್ತದೆ. ಪೂರ್ಣ ಪ್ರಮಾಣದ ಯುದ್ಧವನ್ನು ಇಂದು ಜಗತ್ತಿನ ಯಾವ ದೇಶವೂ ಭರಿಸುವ ಶಕ್ತಿಯನ್ನು ಹೊಂದಿಲ್ಲ. ಯುದ್ಧ ಅಭಿವೃದ್ಧಿಯ, ಸಿರಿವಂತಿಕೆಯ ಶತ್ರು. ಆದರೂ ಕೆಲವೊಮ್ಮೆ ಕೆಲವು ಸಂಘರ್ಷಗಳು ಅನಿವಾರ್ಯ. ಕೆಲವು ಬಾರಿ ಶಾಂತಿಯಿಂದ ಮತ್ತು ನೆಮ್ಮದಿಯಿಂದ ಬದುಕಲು ಇಂತಹ ಸಂಘರ್ಷಗಳ ಅವಶ್ಯಕತೆ ಇರುತ್ತದೆ. ಭಾರತ ಎಂದಿಗೂ ಕಾಲು ಕೆರೆದು ಜಗಳಕ್ಕೆ ಹೋದ ಉದಾಹರಣೆ ಇತಿಹಾಸದಲ್ಲಿ ಸಿಗುವುದಿಲ್ಲ. ಈ ಬಾರಿಯ ಇಂಡೋ ಪಾಕ್ ಯುದ್ಧಕ್ಕೂ, ಪಾಕಿಸ್ತಾನ ಕಾರಣ ಎನ್ನುವುದು ಸ್ಪಷ್ಟ. ನಾವು ಅವರ ಉದ್ಧಟತನಕ್ಕೆ ತಕ್ಕ ಉತ್ತರವನ್ನು ನೀಡಿದ್ದೇವೆ. ಇಂತಹ ಘಟನೆಯನ್ನು ಹದಿನೈದು ದಿನಗಳ ಕಾಲ ನೇರವಾಗಿ ನೋಡಿ, ಅನುಭವಿಸಿ ಅದನ್ನು ಅಕ್ಷರಕ್ಕೆ ಇಳಿಸಿದ್ದಾರೆ ಅಭಿಷೇಕ್. ಹದಿನೈದು ದಿನದ ಘಟನಾವಳಿಗಳ ಅನುಭವ ಕಥನ, ವರದಿಗಾರನ ಮೈನವಿರೇಳಿಸುವ ರೋಚಕ ಡೈರಿಯಿದು. ಇಲ್ಲಿನ ಬರಹ, ಭಾಷೆ ನೇರವಾಗಿ ಹೃದಯಕ್ಕೆ ನಾಟುತ್ತದೆ. ನಾವೇ ವಾರ್ ಫೀಲ್ಡ್ ನಲ್ಲಿದ್ದೇವೆ ಎನ್ನಿಸುತ್ತದೆ. - ರಂಗಸ್ವಾಮಿ ಮೂಕನಹಳ್ಳಿ ಲೇಖಕರು, ಆರ್ಥಿಕ ತಜ್ಞರು
#
ಸಂಧ್ಯಾರಾಣಿ ಎಸ್
ಪುಟ್ಟಸ್ವಾಮಿ ಕೆ
ಮದುವೆಗೆ ಮುನ್ನ ವಧುವಿನ ಪೋಷಕರು, ಕಡೆಯವರು ವರನ ವರಮಾನ ಎಷ್ಟಿದೆ ಎಂಬುದನ್ನು ಆದ್ಯತೆಯ ಮೇರೆಗೆ ಪರಿಗಣಿಸದೆ ಇರುವುದಿಲ್ಲ. ನಾಲ್ಕು ಪುರುಷಾರ್ಥಗಳಲ್ಲಿ ಅರ್ಥಕ್ಕೆ ಎರಡನೇ ಸ್ಥಾನವಿದೆ. ಕ್ರಿಸ್ತಪೂರ್ವ ಕಾಲದಲ್ಲೇ ಭಾರತದಲ್ಲಿ ಚಾಣಕ್ಯ, ಅರ್ಥಶಾಸ್ತ್ರವನ್ನು ಬರೆದಿದ್ದ! ಈ ಮೂಲಕ ಹಣದ ಸಂಪಾದನೆಯನ್ನು ವಿಜ್ಞಾನಕ್ಕೆ ಸಮವೆಂದು ಪ್ರಾಚೀನ ಭಾರತ ಪುರಸ್ಕರಿಸಿತ್ತು. ಅಂಥ ದೇಶದಲ್ಲಿ ಹಣಕಾಸು ಸಾಕ್ಷರತೆ ಎಷ್ಟು ಕಡಿಮೆ ಎಂದರೆ ದಿಗ್ಧಮೆಯಾಗುತ್ತದೆ. ಹಣದ ಬಗ್ಗೆ ಬಹಿರಂಗವಾಗಿ ಮಾತನಾಡುವುದೇ ಪಾಪ ಎಂಬ ನಿಷೇಧಾತ್ಮಕ ಮನಸ್ಥಿತಿಯಿಂದ ಕುಟುಂಬ, ಸಮಾಜ, ದೇಶಕ್ಕೆ ಉಂಟಾಗಿರುವ ನಷ್ಟದ ಲೆಕ್ಕ ಇಟ್ಟವರಿಲ್ಲ. ವಿಶ್ವದಲ್ಲೇ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಭಾರತದ ಆರ್ಥಿಕ ಬೆಳವಣಿಗೆ ಪ್ರತಿಯೊಬ್ಬನ ವೈಯಕ್ತಿಕ ಸಂಪತ್ತಿನ ಹೆಚ್ಚಳಕ್ಕೂ ಕಾರಣವಾಗಬೇಕಿದ್ದರೆ, ಸಿರಿವಂತಿಕೆಯ ಸೂತ್ರಗಳನ್ನು 100% ತಿಳಿಯಬೇಕು. ಈ ನಿಟ್ಟಿನಲ್ಲಿ ಈ ಪುಸ್ತಕವನ್ನು ನಯ ಓದುಗರ ಮಡಿಲಿಗೆ ಇಡುತ್ತಿದ್ದೇವೆ.
ತುಮಕೂರು ಜಿಲ್ಲೆಯ ಸಿರಾದಲ್ಲಿ ೧೮.೦೫.೧೯೭೫ ರಂದು ಜನನ. ಪ್ರಾಥಮಿಕ ಶಿಕ್ಷಣ ಸಿರಾ ತಾಲೂಕಿನ ಹೊಸೂರು ಎನ್ನುವ ಗ್ರಾಮದಲ್ಲಿ ಆಗುತ್ತದೆ. ಮಾಧ್ಯಮಿಕ ಶಿಕ್ಷಣ ಬೆಂಗಳೂರಿನ ಪೀಣ್ಯದಲ್ಲಿನ ಸರಕಾರಿ ಶಾಲೆಯಲ್ಲಿ, ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿಕೆ. ನಂತರ ವಿವೇಕಾನಂದ ಕಾಲೇಜಿನಲ್ಲಿ ಕಾಮರ್ಸ್ ಭಾಗದಲ್ಲಿ ಓದಿ ಬೆಂಗಳೂರು ಯೂನಿವರ್ಸಿಟಿಯಿಂದ ಕಾಮರ್ಸ್ ಪದವಿ ಪಡೆಯುತ್ತಾರೆ. ೨೩ ನೆಯ ವಯಸ್ಸಿಗೆ ಕೆಲಸದ ಮೇಲೆ ದೇಶವನ್ನ ತೊರೆದು ದುಬೈ ಸೇರುತ್ತಾರೆ. Read More...
Showing 9031 to 9060 of 9464 results