ಬುದ್ಧನ ಕಾಲಾನಂತರದ ಕಥೆಯುಳ್ಳ, ಹೆಚ್ಚು ಬಳಸಲ್ಪಡದ ಕಥಾವಸ್ತುವನ್ನು ಹೆಣೆದುಕೊಂಡು ಅಧ್ಯಯನದ ಮುಖಾಂತರವೇ ರಚಿಸಲ್ಪಟ್ಟ ಐತಿಹಾಸಿಕ ಕಾದಂಬರಿ ‘ಮಹಾವಿನಾಶ’. ಗೌತಮಬುದ್ಧನ ಪರಿನಿರ್ವಾಣದ ನಂತರದ ಕಾಲದಿಂದ ಮುಂದಿನ ಐದಾರು ನೂರು ವರ್ಷದ ಕಥಾ ಹಂದರವನ್ನು ಹೊಂದಿದೆ
ಮಹಿಳೆಯ ಮನಸ್ಸು ಮತ್ತು ಆ ಮನಸ್ಸನ್ನು ರೂಪಿಸುವ ಸಾಮಾಜಿಕ ಬೆಲೆ ಎರಡನ್ನೂ ಒಂದರೊಡನೊಂದು ಬೆಸೆದು ಬರೆದ ಹೊತ್ತಗೆ ಇದಾಗಿದೆ. ತಮ್ಮ ವೃತ್ತಿಯಲ್ಲಿ ಇದಿರಾದ ಹಲವಾರು ಸವಾಲುಳ್ಳ ಸಮಸ್ಯೆಗಳ ಸಿಕ್ಕುಗಳನ್ನು ಸಾವಧಾನದಿಂದ ಜಡಿಸುತ್ತಲೇ, ಇದೇಕೆ ಹೀಗೆ? ಎಂದು ಚಿಂತಿಸಿದ ಸೂಕ್ಷ್ಮ ಮನಸ್ಸಿನ ಫಲವೂ ಇದಾಗಿದೆ. ಈ ಕೃತಿಯುದ್ದಕ್ಕೂ ಮಹಿಳೆಯನ್ನು ನಿರ್ಬಂಧಿಸಿದ ಸಾಮಾಜಿಕ ರಚನೆಯಿಂದಾಗಿ ಅವಳ ಮನಷ್ಟೂ ಕೂಡಾ ಹೇಗೆ ನಿರ್ಬಂಧಕ್ಕೆ ಒಳಗಾಗಿದೆ ಮತ್ತು ಆಕೆಯೇ ಹೇಗೆ ಅದರಿಂದ ಹೊರಬರುವ ದಾರಿಯಿದ್ದರೂ ಸಂಕೋಲೆಯೊಳಗೇ ಅಡಗಿ ಕುಳಿತುಕೊಳ್ಳುತ್ತಾಳೆ ಎಂಬುದನ್ನು ಅನಾವರಣ ಮಾಡಲಾಗಿದೆ. -ಡಾ. ಸಬಿತಾ ಬನ್ನಾಡಿ
ಕೇವಲ ಮಾದಕ ವಸ್ತುಗಳ ಮಾರಾಟ ಮಾಡಿ ಕೋಟಿಗಟ್ಟಲೆ ಹಣ ಮಾಡಿರುವವರು ಇದ್ದಾರೆ. ಆದರೆ ಪಾಬ್ಲೊ ಕೇವಲ ಮಾದಕ ದೊರೆ ಮಾತ್ರ ಅಲ್ಲ. ಅವನ ಜನರ ಆರಾಧ್ಯ ದೈವ. ಅಮೆರಿಕ ಸರ್ಕಾರಕ್ಕೆ ತಲೆನೋವಾಗಿ… ಕೊನೆಗೆ ತನ್ನ ದೇಶದ ಮಕುಟವಿಲ್ಲದ ಮಹಾರಾಜನಾದ. ಪಾಬ್ಲೊನ ಗೆಳತಿಯರು… ಮಕ್ಕಳು… ಅವನ ದೊಡ್ಡ ವಿಲ್ಲಾ.. ಅವನನ್ನು ಹಿಡಿಯಲು ಪ್ರಯತ್ನಿಸಿದ ಅಧಿಕಾರಿಗಳು. ರೋಚಕ ನಿರೂಪಣೆ.
ಮಕ್ಕಳ ಸಾಹಿತ್ಯ ರಚನೆಗೆ ಬೇಕಾದ ಮುಗ್ಧ ಮನಸ್ಥಿತಿ, ಆದರ್ಶಪ್ರಿಯತೆ ಮತ್ತು ಬೆರಗು ನಮ್ಗಳಲ್ಲಿ ಇನ್ನೂ ಕಲುಷಿತಗೊಳ್ಳದೇ ಹಾಗೆಯೇ ಉಳಿದುಕೊಂಡು ໙໐໖໖. ಜನಪದ ಕತೆಗಳ ಹಾಗೂ ಪ್ರಾಣಿ ಪ್ರಪಂಚದ ಕಥನಗಳ ಜಾಡಿನಲ್ಲಿ ನವ್ಯ ಇಲ್ಲಿನ ಕತೆಗಳನ್ನು ಬರೆದಂತೆ ತೋರಿದರೂ ಮನುಷ್ಯನಲ್ಲಿ ನೆಲೆಗೊಂಡಿರುವ ಕ್ರೌರ್ಯ, ದುರಾಸೆ, ಅಪ್ರಮಾಣಿಕತೆ ಮುಂತಾದೆ ಅಪಸವ್ಯಗಳ ಎದುರಿಗೆ ಬಾಲಕರು ಬದುಕನ್ನು ಹೇಗೆ ರೂಪಿಸಿಕೊಳ್ಳಬೇಕು ಎನ್ನುವ ಮಾದರಿಯನ್ನು ಇಲ್ಲಿನ ಕತೆಗಳು ನೀಡುತ್ತವೆ.
"ಹೇ ಇದ್ರೇನ್ ಇಲ್ಲಿ..!?” ಆತನನ್ನು ಅಲ್ಲಿ ನೋಡಿದ ಕೂಡಲೇ, ಆ ಸಾವಿನ ಮನೆಯಲೆಲ್ಲ ಸಂಚಲನದ ಜೊತೆಗೆ ಗುಸುಗುಸು ಹಬ್ಬಿತ್ತು. ಅರವತ್ತು ವರ್ಷಗಳ ತುಂಬು ಜೀವನವನ್ನ ನಡೆಸಿದ್ದ ಅನ್ನಪೂರ್ಣ ಅಂದು ಇಹ ಲೋಕ ತ್ಯಜಿಸಿದ್ದರು. ಅವರ ಪಾರ್ಥಿವ ದೇಹವನ್ನ ದರ್ಶನ ಮಾಡಲು ಬರುತ್ತಿದ್ದವರ ಸಾಲಿನಲ್ಲಿ, ಅನ್ನಪೂರ್ಣರವರಷ್ಟೇ ವಯಸ್ಸಾದ, ಆ ಜಿಲ್ಲೆಯ ಪ್ರಸಿದ್ಧ ವ್ಯಕ್ತಿಯೊಬ್ಬ ಕಣ್ಣಲ್ಲಿ ನೀರು ತುಂಬಿಕೊಂಡು ನಿಂತಿದ್ದ ಗುಸು, ಗುಸು ಅನ್ನಪೂರ್ಣರವರ ತಮ್ಮನ ಕಿವಿಗೂ ತಲುಪಿ, ಯಾರೆಂದು ಬಗ್ಗಿ ನೋಡಿದವನ ಕಣ್ಣಲ್ಲಿ ಅರೆಕ್ಷಣ ಅಚ್ಚರಿಯೊಂದು ಹಾದುಹೋಗಿತ್ತು. ಅನ್ನಪೂರ್ಣ ಮನಸಾರೆ ಪ್ರೀತಿಸಿದ ವ್ಯಕ್ತಿಯವನು. ಅವರಿಬ್ಬರೆದು ಅಮರ ಪ್ರೇಮಕತೆ. ಜೀವಕ್ಕೆ ಜೀವವಾಗಿ ಪ್ರೀತಿಸಿ, ಕೊನೆಗೆ ಅಮ್ಮ ಅಪ್ಪನ ಮಾತಿಗೆ, ಬೆದರಿಕೆಗೆ ಹೆದರಿ ಬೇರೆಯವನನ್ನು ಮದುವೆಯಾಗಿದ್ದರು ಅನ್ನಪೂರ್ಣಮ್ಮ, ಆಮೇಲೆ ಎಂದಿಗೂ ಅವರು ಭೇಟಿಯಾಗಿರಲಿಲ್ಲ. ಒಬ್ಬರಿಗೊಬ್ಬರ ಇರುವುಗಳ ಮಾಹಿತಿಯಿದ್ದರೂ ಮುಖತಃ ಎಂದು ಭೇಟಿಯಾಗಲೇ ಇಲ್ಲ. ಅದಾದ ಮೇಲೆ ಬಹುಷಃ ಇದೇ ಅವರ ಮೊದಲ ಭೇಟಿ. ಗುಸುಗುಸು ಮಾತುಗಳ ಪರಿವೆಯೇ ಇಲ್ಲದ ಆತ, ಕಣ್ಣಲ್ಲಿ ಹರಿಯುತ್ತಿದ್ದ ನೀರನ್ನು ಒರೆಸಿಕೊಳ್ಳುವ ಗೋಜಿಗೆ ಬೀಳದೆ "ಹೇಳಿಲ್ಲ ನಿಂಗೆ, 'ಎಲ್ಲೇ ಇರು, ಯಾರಜೊತೆನಾದ್ರು ಇರು, ಖುಷಿಯಾಗಿರು, ಆದ್ರೆ ನಂಗಿಂತ ಮುಂಚೆ ಈ ಭೂಮಿ ಬಿಟ್ಟೋಗ್ಗೇಡ, ನಿನ್ನ ಭೌತಿಕ ಇರುವಿಲ್ಲದೆ ನಾ ಇರಲ್ಲ ಅಂತ'. ಹೇಳು ಯಾಕ್ ಬಿಟ್ಟೋದೇ 17' ಅನ್ನಪೂರ್ಣರ ಜೀವವಿಲ್ಲದ ದೇಹದೊಡನೆ, ಮನಸ್ಸಲ್ಲೇ ಮಾತನಾಡುತ್ತಿದ್ದನಾತ. #ಕೆಲವೊಂದು ಪ್ರೇಮಕತೆಗಳಿಗೆ ಮೊದಲಷ್ಟೇ ಇರುತ್ತದೆ, ಕೊನೆಯಲ್ಲ. ಒಳಗೆ ಇನ್ನಷ್ಟು ನಮ್ಮ-ನಿಮ್ಮ ಕಥೆಗಳಿವೆ. ಓದಿ ನೋಡಿ. ಹ್ಯಾಪಿ ರೀಡಿಂಗ್... - ಅರ್ಜುನ್ ದೇವಾಲದಕೆರೆ.
ಒಂದು ಕಾಲಕ್ಕೆ ಸಾಹಿತ್ಯಲೋಕದಲ್ಲಿ ಶಿಕ್ಷಕರದ್ದೇ ಸಿಂಹಪಾಲು. ಆದರೆ ಈಗ ಕಾಲ ಬದಲಾಗಿದೆ. ನಮ್ಮ ಶಿಕ್ಷಕರಿಗೆ ಬರೆಯುವಷ್ಟು ಸಮಯ ಪಕ್ಕಕ್ಕಿಡಿ, ಓದಲೂ ಸಮಯವಿಲ್ಲದಂತಾಗಿದೆ ಶಿಕ್ಷಕವರ್ಗವೇ ಓದಿನಿಂದ ವಿಮುಖರಾಗಿರುವ ವ್ಯವಸ್ಥೆಯಲ್ಲಿ ನಾವಿದ್ದೇವೆ. ಈ ನಡುವೆ ಓದು ಅಂಕಗಳಿಕೆಗೆ ಮಾತ್ರ ಬಳಕೆಯಾಗುತ್ತಿರುವುದು ಹೊಸ ಸಂಗತಿ ಏನಲ್ಲ. ದೇಶದ ಪಿತಾಮಹರಂತಹ ದೊಡ್ಡ ಪ್ರಶ್ನೆಗಳನ್ನು ಬಿಡಿ, ದೇಶದ ರಾಷ್ಟ್ರಪತಿ, ರಾಜ್ಯಪಾಲರು ಯಾರೆಂಬುದು ಗೊತ್ತಾಗದಂತಹ ಶಿಕ್ಷಣವನ್ನು ನಾವು ಮಕ್ಕಳಿಗೆ ನೀಡುತ್ತಿದ್ದೇವೆ. ಇಂತಹ ಸ್ಥಿತಿಯಲ್ಲಿ ಇಲ್ಲೊಂದು ಶಾಲೆ, ಶಿಕ್ಷಕಿ ಮತ್ತವರ ದಿನಚರಿ ತುಸು ವಿಭಿನ್ನ ಮತ್ತು ಮಾದರಿಯಂತಿದೆ. ಚೂರು ಹೊಸ ಭರವಸೆಯನ್ನು ಮೂಡಿಸುತ್ತಿದೆ.
ಒಂದು ಕಾಲಕ್ಕೆ ಸಾಹಿತ್ಯಲೋಕದಲ್ಲಿ ಶಿಕ್ಷಕರದ್ದೇ ಸಿಂಹಪಾಲು. ಆದರೆ ಈಗ ಕಾಲ ಬದಲಾಗಿದೆ. ನಮ್ಮ ಶಿಕ್ಷಕರಿಗೆ ಬರೆಯುವಷ್ಟು ಸಮಯ ಪಕ್ಕಕ್ಕಿಡಿ, ಓದಲೂ ಸಮಯವಿಲ್ಲದಂತಾಗಿದೆ
ವಯಸ್ಸಾಗುವುದು ಎಂಬ ಅನುದಿನದ ಪ್ರಕ್ರಿಯೆಯೇ ಸೃಷ್ಟಿಯ ಒಂದು ಸೋಜಿಗ. ಸಾವಿನ ಹಾದಿಯಲ್ಲಿ ಬರುವ ಒಂದು ಹಂತವಾದ ಕಾರಣಕ್ಕೋ ಏನೋ ವಯಸ್ಸಾಗುವುದೆಂದರೆ ನಿಡುಸುಯ್ಯುವವರೇ ಹೆಚ್ಚು. ಹಾಗಂತ ವಯಸ್ಸಾಗುವುದೇನು ನಿಲ್ಲುತ್ತದೆಯೇ? ಖಂಡಿತ ಇಲ್ಲ! ಮುಪ್ಪು, ವೃದ್ಧಾಪ್ಯ, ವಾನಪ್ರಸ್ಥಾಶ್ರಮಗಳೆಂದು ಹಲವು ಹೆಸರುಗಳಲ್ಲಿ ಕರೆಯಲಾಗುವ ಈ ಹಂತವು ಬರುವ ಸಮಯದಲ್ಲಿ ಬಂದೇ ಬರುತ್ತದೆ. ವರ್ಷಗಳಲ್ಲಿ ಆಯಸ್ಸನ್ನು ಅಳೆಯುವ ನಮಗೆ, ನಿಮಿಷಗಳಲ್ಲಿ ಸೋರಿಹೋಗುವ ಆಯಸ್ಸೇಕೆ ಅಷ್ಟಾಗಿ ಗಮನಕ್ಕೆ ಬರುವುದಿಲ್ಲ? ವೃದ್ಧಾಪ್ಯದಲ್ಲೂ ಚಂದದ ಬದುಕು ಸಾಧ್ಯವಿಲ್ಲವೇ? ವೃತ್ತಿಬದುಕಿನಲ್ಲಿ ನಿವೃತ್ತಿಗೆ ತಯಾರಾದಂತೆ, ಬದುಕಿನಲ್ಲಿ ವೃದ್ಧಾಪ್ಯಕ್ಕೆ ತಯಾರಾದರೆ ತಪ್ಪೇನಿದೆ? ಹೀಗೆ ಹಲವು ಪ್ರಶ್ನೆ-ತಲಾಶೆಗಳ ಚುಂಗು ಹಿಡಿಯುತ್ತಾ ಹೊರಟ ನನಗೆ ದಕ್ಕುತ್ತಾ ಹೋದ ಸಂಗತಿಗಳು ಸಾಕಷ್ಟು. ಈ ವಿಷಯದ ಬಗ್ಗೆ ಪುಸ್ತಕವೊಂದನ್ನು ಬರೆಯಲು ನನಗೇನು ಮಹಾವಯಸ್ಸು ಎಂಬ ಪ್ರಶ್ನೆಯು ಕಾಡಿದ್ದೇನೋ ಹೌದು. ಆದರೆ ಬರಹಗಾರನೊಬ್ಬ ತನ್ನನ್ನು ಬಲವಾಗಿ ಕಾಡಿದ ಸಂಗತಿಗಳ, ಕತೆಗಳ ಬಗ್ಗೆ ತನ್ನ ಓದುಗರೊಂದಿಗೆ ಹೇಳಿಕೊಳ್ಳದೆ ಹೆಚ್ಚು ಕಾಲ ಇರಲಾರ. ಇವೆಲ್ಲದರ ಫಲವೇ ಈ ಪುಸ್ತಕ. "ಮುಸ್ಸಂಜೆ ಮಾತು" ಬದುಕಿನ ಮುಸ್ಸಂಜೆಯ ಕತೆಗಳನ್ನು ನಿಮಗಾಗಿ ತೆರೆದಿಟ್ಟಿರುವ ಒಂದು ಕಿರುಹೊತ್ತಗೆ. ಒಂದಲ್ಲ ಒಂದು ಹಂತದಲ್ಲಿ ಬದುಕಿನ ಮುಸ್ಸಂಜೆಯನ್ನು ನೋಡಲಿರುವ ಪ್ರತಿಯೊಬ್ಬರೂ ಒಮ್ಮೆ ಓದಬೇಕಾದ ಪುಸ್ತಕವಿದು ಎಂದು ವಿನಯದಿಂದ ಹೇಳಬಲ್ಲೆ! - ಪ್ರಸಾದ್ ನಾಯ್ಕ
ಆಸ್ಕರ್ ಟಿವಿಯಲ್ಲಿ 1992ರ ಬಾರ್ಸಿಲೋನಾ ಒಲಂಪಿಕ್ಸ್ ಹೈಲೈಟ್ಸ್ ಹಲ್ಲು ಕಿಸಿದು ಕೊಂಡು ನೋಡಿದ ನೆನಪು ಅಚ್ಚಳಿಯದೆ ಮಸ್ತಕದಲ್ಲಿ ಅಚ್ಚಾಗಿದೆ.
ಆಸ್ಕರ್ ಟಿವಿಯಲ್ಲಿ 1992ರ ಬಾರ್ಸಿಲೋನಾ ಒಲಂಪಿಕ್ಸ್ ಹೈಲೈಟ್ಸ್ ಹಲ್ಲು ಕಿಸಿದು ಕೊಂಡು ನೋಡಿದ ನೆನಪು ಅಚ್ಚಳಿಯದೆ ಮಸ್ತಕದಲ್ಲಿ ಅಚ್ಚಾಗಿದೆ. ಅವತ್ತಿಗೆ ಯಾರಾದರೂ ಇನ್ನೊಂದು ಹತ್ತು ವರ್ಷದಲ್ಲಿ ಈ ಒಲಂಪಿಕ್ ಆಟಗಾರರಿಗೆ ಎಂದು ಕಟ್ಟಿರುವ ಸುಸಜ್ಜಿತ ಮನೆಯೊಂದರ ಒಡೆಯ ನೀನಾಗುತ್ತೀಯ ಎಂದಿದ್ದರೆ ಹುಚ್ಚಾಪಟ್ಟೆ ನಕ್ಕು, ಹಂಗಿಸುವುದಕ್ಕೂ ಒಂದು ಮಿತಿ ಇರುತ್ತೆ ಗೆಳೆಯ ಎಂದು ಹೇಳಿ ಕಳಿಸುತ್ತಿದ್ದೆ. ಆದರೆ ದೈವೇಚ್ಛೆ ಬೇರೆಯಿತ್ತು, ಬಾರ್ಸಿಲೋನಾದಲ್ಲಿ ಒಂದಕ್ಕಿಂತ ಹೆಚ್ಚು ಮನೆಕೊಳ್ಳುವಂತಾಯ್ತು. 17 ವರ್ಷ ಬಾರ್ಸಿಲೋನಾ ನೆಲೆಯಾಯ್ತು, ಭಾಷೆ, ಬದುಕುವ ರೀತಿ, ಈ ಅಗಾಧ ಪ್ರಪಂಚದಲ್ಲಿ ನಾವೇನೂ ಅಲ್ಲ ಎನ್ನುವುದನ್ನ ಕಲಿಸಿತು.ಸಹಜೀವಿಗಳ ಬಗ್ಗೆ ಪ್ರೀತಿ, ಮಮಕಾರ ಕೂಡ ಕಲಿಸಿದ್ದು ಬಾರ್ಸಿಲೋನಾ. ಈ ಪುಸ್ತಕದಲ್ಲಿ, ಬಾರ್ಸಿಲೋನಾ ನನಗೆ ಉಣಬಡಿಸಿದ ಅನುಭವಗಳ ಕಥೆಯನ್ನ ಕಟ್ಟಿಕೊಟ್ಟಿದ್ದೇನೆ.
`ಒಬ್ಬ ತಾರೆಯ ಎಂಟ್ರಿ ಮತ್ತು ಎಗ್ಸಿಟ್ ಅದ್ಭುತವಾಗಿರಬೇಕು; ನೆನಪಿನಲ್ಲಿಡುವಂತಿರಬೇಕು’ ಎಂದು ಚಿತ್ರರಸಿಕರ ಮನದ ಅನಭಿಷಿಕ್ತ ದೊರೆಯಾಗಿ ಮೆರೆದ ಡಾ.
nil
ಕನ್ನಡದಲ್ಲಿ ಸಣ್ಣಕಥೆಗ ಆಗೀಗ ದೆಸೆ ತಿರುಗಿ, ಕಥಾಸ್ಪರ್ಧೆಯ ಮೊತ್ತಬೀಗ ಅರ್ಧ ಲಕ್ಷ ಮುಟ್ಟದೆ. ಇದು ಯುವ ಕಥೆಗಾರರಿಗೆ ಇಂಬಾಗುವ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯೆ ಹೌದು, ಐದುನೂರು ರೂಪಾಯಿಯಿಂದ ಐವತ್ತು ಸಾವಿರದವರೆಗೆ ನಮ್ಮ ಹಣ್ಣಕಥೆಗಳನ್ನು ವಿಸ್ತರಿಸುತ್ತಿರುವ ಪತ್ರಿಕೆಗಳು ಮತ್ತು ಪ್ರಾಯೋಜಕರು ಪ್ರಶಂಸಾರ್ಹರು.
ವಸ್ತ್ರವಿನ್ಯಾಸ, ರುಚಿಕಟ್ಟಾದ ಅಡುಗೆಯೂ ಸೇರಿದಂತೆ ದಶಾವತಾರಗಳಲ್ಲಿ ಮುಖ್ಯವಾಗಿ ಅಭಿನೇತ್ರಿಯಾಗಿರುವ ಅಕ್ಷತಾ, ಏನೇ ಮಾಡಿದರೂ ಅಲ್ಲಿ ತಮ್ಮ ಅಭಿವ್ಯಕ್ತಿಯನ್ನು ಸಂಪೂರ್ಣವಾಗಿ ದಾಖಲಿಸುತ್ತಾರೆ. ಇವರ ಬರಹಗಳು ಕೂಡ ಇದರದ್ದೇ ಒಂದು ವಿಸ್ತರಣೆ. ಹಿಂದೆ ಲೀಕ್ ಔಟ್ ಕತೆಗಳನ್ನು ಪ್ರಕಟಿಸಿ, ಅವನ್ನು ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಜನ - ನಾಟಕವನ್ನಾಗಿಸಿ ಯಶಸ್ವಿಯಾಗಿದ್ದರು ಅಕ್ಷತಾ. ಏನೇ ಮಾಡಿದರೂ ಜನರನ್ನು ಒಳಗೊಳಿಸಿಕೊಂಡೇ ಮಾಡುವ ಇವರ ಅಡುಗೆ ಮಾತು ಪ್ರಯೋಗವೂ ಅಷ್ಟೇ ವಿಭಿನ್ನ. ಇವರ 'ರುಚಿಗೆ ತಕ್ಕಷ್ಟು' ಕತೆಗಳು ಮುಂದೆ ಇಂಥದೇನೋ ಟ್ವಿಸ್ಟ್ ಕೊಡುವ ಸುಳಿವಿನೊಂದಿಗೇ ಹೆಣೆದುಕೊಂಡಂತೆ ತೋರುತ್ತವೆ.
ಕನ್ನಡದ ಪ್ರಸಿದ್ಧ ಲೇಖಕರು, ಪತ್ರಕರ್ತರು ಆದ ಗಣೇಶ್ ಕಾಸರಗೋಡು ಅವರು ಬರೆದಿರುವ ‘ಲಾಸ್ಟ್ ಡೇಸ್ ಆಫ್ ಲೆಜೆಂಡ್ಸ್’ ಪುಸ್ತಕವಿದು. ಈ ಪುಸ್ತಕ ಓದುತ್ತಾ ಹೋದರೆ ಸದಾ ಕಾಡುವ ಕಲಾವಿದರ ಕಥಾನಕ ನಿಮ್ಮದಾಗುತ್ತದೆ.
ಕನ್ನಡದ ಪ್ರಸಿದ್ಧ ಲೇಖಕರು, ಪತ್ರಕರ್ತರು ಆದ ಗಣೇಶ್ ಕಾಸರಗೋಡು ಅವರು ಬರೆದಿರುವ ‘ಲಾಸ್ಟ್ ಡೇಸ್ ಆಫ್ ಲೆಜೆಂಡ್ಸ್’ ಪುಸ್ತಕವಿದು. ಈ ಪುಸ್ತಕ ಓದುತ್ತಾ ಹೋದರೆ ಸದಾ ಕಾಡುವ ಕಲಾವಿದರ ಕಥಾನಕ ನಿಮ್ಮದಾಗುತ್ತದೆ. ಕನ್ನಡ ಚಿತ್ರರಂಗದ ಲೆಜೆಂಡ್ಗಳ ಕೊನೆಯ ದಿನಗಳ ಚಿತ್ರಣ ಇಲ್ಲಿದೆ. ನಿಮ್ಮ ಇಷ್ಟ ಕಲಾವಿದರ ಬಗ್ಗೆ ನೀವಿಲ್ಲಿ ಓದಿದ ಮೇಲೆ ನಮ್ಮ ಮನಸ್ಸು ಮೂಕವಾಗುತ್ತೆ. ಈ ಪುಸ್ತಕ ಭಾವಸ್ಪರ್ಶಿಯಾಗಿದೆ, ಹೃದಯಸ್ಪರ್ಶಿಯಾಗಿದೆ. ಕಲಾವಿದರ ಹೃದಯವಿದ್ರಾವಕ ಘಟನೆಗಳ ಚಿತ್ರಣ ನಮ್ಮ ಕರುಳು ಹಿಂಡಿ ಮನಕಲಕುತ್ತವೆ. ಒಂದು ಕಾಲದಲ್ಲಿ ತೆರೆಯ ಮೇಲೆ ಮಿಂಚಿದವರು ಇನ್ನೊಂದು ಕಾಲದಲ್ಲಿ ಹಲವು ಸಂಕಷ್ಟಗಳಿಂದ ನರಳುವ ಕಥಾನಕ ನಮ್ಮ ಮನ ಕರಗಿಸಿಬಿಡುತ್ತದೆ.
ಬೇರೆಯವರಿಗೆ ಕತೆ ಹೇಳುವ, ಬೇರೆಯವರ ಕತೆ ಕೇಳಿಸಿಕೊಳ್ಳುವ ಕಲೆ ಸಿದ್ಧಿಸಿಕೊಂಡಿರುವ ಏಕೈಕ ಪ್ರಾಣಿ ಮನುಷ್ಯ. ಕತೆಗಳಿರುವವರೆಗೂ ಮನುಷ್ಯನಿರುತ್ತಾನೆ. ಈಗ ಸ್ಮಾರ್ಟ್ ಯುಗ. ಎಲ್ಲರ ಕೈಯಲ್ಲೊಂದು ಸ್ಮಾರ್ಟ್ ಫೋನು. ಎಲ್ಲರ ಎದೆಯೊಳಗೆ ಕತೆಗಳಿರುವ ಕಾಲ. ಇಂತಹ ಕತೆಗಳನ್ನು ಸಶಕ್ತವಾಗಿ ದಾಟಿಸುವ ಮಾಧ್ಯಮ ದೃಶ್ಯಮಾಧ್ಯಮ. ಬನ್ನಿ ನಿಮ್ಮೊಳಗಿನ ಕತೆಗಳನ್ನು ದೃಶ್ಯಮಾಧ್ಯಮಕ್ಕೆ ತರೋಣ, ಲೆಟ್ಸ್ ಮೇಕ್ ಎ ಶಾರ್ಟ್ ಫಿಲಂ!
ಬೇರೆಯವರಿಗೆ ಕತೆ ಹೇಳುವ,ಬೇರೆಯವರ ಕತೆ ಕೇಳಿಸಿಕೊಳ್ಳುವ ಕಲೆ ಸಿದ್ಧಿದಿಸಿಕೊಂಡಿರುವ ಏಕೈಕ ಪ್ರಾಣಿ ಮನುಷ್ಯ.
ಸೋತವರಿಗೆ, ಗೆಲುವನ್ನು ಎದುರು ನೋಡುವವರಿಗೆ, ಸಮಾನ ಮನಸ್ಕರಿಗೆ ಉಡುಗೊರೆಯಾಗಿ ನೀಡಲು ಈ ಕೃತಿ ಬೆಸ್ಟ್ ಆಯ್ಕೆ. ನಮ್ಮ ಬದುಕು ಹುಟ್ಟಿನಿಂದಲೇ ಶುರುವಾಗಬಹುದು. ಆದರೆ ಸೋಲು-ಗೆಲುವುಗಳು ನಿರ್ಧಾರವಾಗುವುದು ನಮ್ಮ ಆಲೋಚನೆಗಳ ಮೇಲೆಯೇ.. ಆಲೋಚನೆಗಳು ಇಲ್ಲದೆ ಬದುಕಿಲ್ಲ! ಬದುಕಿನ 360 ಕೋನದಲ್ಲೂ ಯೋಚಿಸುವಂತಹ ಶಕ್ತಿಯನ್ನು ನಾವು ಗಳಿಸದಿದ್ದರೆ ಖಂಡಿತ ಸ್ಪರ್ಧೆಯ ಸಾಲಿನಿಂದ ತುಂಬಾ ಹಿಂದೆ ಉಳಿದುಬಿಡುತ್ತೇವೆ. ಇವತ್ತು ಯಾರಿಗೂ ಹಿಂದೆ ಉಳಿಯಲು ಇಷ್ಟವಿಲ್ಲವಾದ್ದರಿಂದ ಆಲೋಚನಾಕ್ರಮದ ಬಗ್ಗೆ ಈ ಕೃತಿ ನಿಮಗೆ, ನಿಮ್ಮ ಗೊಂದಲಗಳಿಗೆ ಉತ್ತರಿಸುತ್ತಲೇ ನಿಮ್ಮ ಯಶಸ್ಸಿನ ದಾರಿಗೆ ನೆರವಾಗಬಲ್ಲದು..
ರವೀಂದ್ರ ವೆಂಶಿಯವರ ಲೈಫ್ ಸಖತಾಗಿತ್ತು ಕಣ್ರೀ ಪುಸ್ತಕದಲ್ಲಿನ ಬರಹಗಳನ್ನು ಓದಿದ ಮೇಲೆ ನನ್ನ ಬಾಲ್ಯದ ಹಲವಾರು ಘಟನೆಗಳು ನೆನಪಾದದ್ದು ಸತ್ಯ. ಓದುವಾಗ ನನಗೆ ಇದು ಕಥೆಯಾ..? ಆತ್ಮಚರಿತ್ರೆಯಾ..? ಸುಲಲಿತ ಪ್ರಬಂಧವಾ..? ಎನ್ನುವ ಪ್ರಶ್ನೆ ಕಾಡುತ್ತಲೇ ಓದಿಸಿಕೊಂಡಿತು. ಓದಿಯಾದ ಮೇಲೆ ನನಗನ್ನಿಸಿದ್ದು ಇದು ಎಲ್ಲವೂ ಹೌದು ಎಂದು. ಭಾಗ-1ರಲ್ಲಿನ ಬರಹಗಳಲ್ಲಿ ತಿಳಿ ಹಾಸ್ಯದ ಮೂಲಕ ಘಟನೆಗಳನ್ನು ಕಟ್ಟಿಕೊಡುತ್ತಾ ನಿಧಾನಕ್ಕೆ ನಮ್ಮನ್ನು ಬರಹದೊಳಕ್ಕೆ ಸೆಳೆದುಕೊಂಡು ಬಿಡುತ್ತಾರೆ ಲೇಖಕರು. ಇಸ್ತ್ರೀಪೆಟ್ಟಿಗೆಯ ಪ್ರಸಂಗ, ಹೇರ್ ಕಟ್ ಸುತ್ತಲಿನ ವೃತ್ತಾಂತಗಳು, ಸಿನಿಮಾಗಳನ್ನು ಟೆಂಟ್ ನಲ್ಲಿ ನೋಡುವ ಸೊಬಗು - ಇವುಗಳನ್ನು ಲಘುಹಾಸ್ಯಮಯವಾಗಿ ಬರೆಯುತ್ತಾ, ಕಲಿಸಿದ್ದು ಕಲಿತದ್ದು ಲೇಖನದ ಮೂಲಕ ಚಿಂತನೆಗೆ ದೂಡುತ್ತಾರೆ. ಭಾಗ-2 ರಲ್ಲಿ ಕತೆಗಳ ಸ್ವರೂಪದಲ್ಲಿ ಬದುಕನ್ನು ತೆರೆದಿಡುತ್ತಾರೆ. ಒಂದೊಂದು ಕತೆಯೂ ಬೇರೆ ಬೇರೆಯದೇ ಆದ ದ್ರವ್ಯ, ನಿರೂಪಣೆ ಮತ್ತು ಭಾಷೆಯನ್ನು ಹೊಂದಿರುವುದು ರವೀಂದ್ರ ವೆಂಶಿಯವರ ವಿಶೇಷವೆನಿಸುವ ವಸ್ತುಗ್ರಹಿಕೆ ಮತ್ತು ಕತೆಯ ಕಟ್ಟುವಿಕೆಗೆ ಹಿಡಿದ ಕೈಗನ್ನಡಿ ಎನ್ನಬಹುದು. ಸರಳವಾದ, ಅರ್ಥಪೂರ್ಣವಾದ, ನಮ್ಮದೇ ಬದುಕಿನ ಸನ್ನಿವೇಶಗಳು ಎನ್ನುವ ಆತ್ಮೀಯತೆ ಬೆಳೆಸುವ ಬರವಣಿಗೆಯ ಈ ಹೊತ್ತಗೆ ಪ್ರತಿಯೊಬ್ಬರೂ ಓದಲೇಬೇಕಾದದ್ದಾಗಿದೆ.
'ಲೋಕ ರಾವಣ' ಲಂಕಾಧಿಪತಿಯಾದ ದಶಕಂಠ ರಾವಣನನ್ನು ಕುರಿತ ಕಾದಂಬರಿ. ಲೋಕ ಲೋಕಗಳನ್ನು ನಡುಗಿಸಿದ. ಪರಸ್ತ್ರೀ ಅಪಹಾರಕನಾದ ದುಷ್ಟನೆಂದು ರಾಮಾಯಣದಲ್ಲಿ ಚಿತ್ರಣಗೊಂಡಿರುವ ಪಾತ್ರ ಅದು. ಹುಟ್ಟಿನಿಂದ ಮಹಾ ತಪಸ್ವಿಯಾದ ವಿಶ್ರವಸ್ಸಿನ ಮಗ, ವೇದಾದಿಗಳನ್ನು ಓದಿದವನು. ಬ್ರಹ್ಮ, ಪರಮೇಶ್ವರರ ಅನುಗ್ರಹಕ್ಕೆ ಪಾತ್ರನಾದವನು. ಶಿವಭಕ್ತ. ಇಷ್ಟಿದ್ದೂ ರಾವಣನಂತಹ ಮೇಧಾವಿ ಯಾಕೆ ದುಷ್ಟನಾದ? ಲೋಕಪೀಡಕನಾದ ಅದಕ್ಕೆ ಕಾರಣವಾದುದು ಅವನ ಹುಟ್ಟಿ? ಸಂಸ್ಕಾರವೆ? ಅವನಿಗಾದ ಕಹಿ ಅನುಭವಗಳೆ? ಅಥವಾ ಅವನ ವ್ಯಕ್ತಿತ್ವವೇ ಆ ರೀತಿಯೆ? ಅವನ ಅಂತರಂಗವನ್ನು ಪ್ರವೇಶಿಸದೆ ಉತ್ತರ ದೊರೆಯಲಾರದು. ರಾವಣನ ಅಂತರಂಗವನ್ನು ಬಗೆಯುವ ಅಂತಹ ಒಂದು ಪ್ರಯತ್ನವೇ ಈ ಕಾದಂಬರಿ.. 'ಲೋಕ ರಾವಣ'
ವರದಾ ತೀರದ ಕಥೆಗಳನ್ನು ಓದುತ್ತಾ ಮನಸಾರೆ ನಕ್ಕಿದ್ದೇನೆ. ಅರಿವಿಲ್ಲದೇ ಕಣ್ಣಂಚಿನಲ್ಲಿ ಬಂದ ನೀರನ್ನು ಒರೆಸಿಕೊಂಡಿದ್ದೇನೆ. ಹೀಗಾಗಬಾರದಿತ್ತು ಎಂದು ನೊಂದುಕೊಂಡಿದ್ದೇನೆ. ಬರಹಗಾರನ ಕಥೆಯ ಭಾವಕ್ಕೆ ಓದುಗನ ಭಾವನೆಗಳು ಹೊಂದಿದ್ದೇ ಆದರೆ ಕಥಾಪ್ರಸವ ಅನುಭವಿಸಿದ ಕಥೆಗಾರನಿಗೂ ನೆಮ್ಮದಿಯ ನಿಟ್ಟುಸಿರು. ರವೀಂದ್ರ ಮುದ್ದಿಯವರ ಸಿನಿಮಾ, ಟಿವಿಗಳಲ್ಲಿ ಇನ್ನೂ ಬಳಕೆಯಾಗದ ಜವಾರಿ ಭಾಷೆಯ ಪದ ಪ್ರಯೋಗ ಮಾತ್ರ ಅದ್ಭುತ. ವರದಾ ತೀರದ ಕತೆಗಳನ್ನು ಓದುತ್ತಿದ್ದರೆ ನಮಗೆ ಗೊತ್ತಿಲ್ಲದಂತೆ ನಾವು ಆಡಿ ಬೆಳೆದ ನಮ್ಮೂರು ಚಿತ್ರಣ ಕಣ್ಮುಂದೆ ಮುಂದೆ ಬರುವುದು ಗ್ಯಾರಂಟಿ.
ವರದಾ ತೀರದ ಕಥೆಗಳನ್ನು ಓದುತ್ತಾ ಮನಸಾರೆ ನಕ್ಕಿದ್ದೇನೆ. ಅರಿವಿಲ್ಲದೇ ಕಣ್ಣಂಚಿನಲ್ಲಿ ಬಂದ ನೀರನ್ನು ಒರೆಸಿಕೊಂಡಿದ್ದೇನೆ. ಹೀಗಾಗಬಾರದಿತ್ತು ಎಂದು ನೊಂದುಕೊಂಡಿದ್ದೇನೆ.
ವಿಮರ್ಶಾ ವಿವೇಕ ಇಲ್ಲದ ಬರಹಗಾರ ಅತ್ಯುತ್ತಮ ಸಾಹಿತ್ಯ ಸೃಚಿಸಲಾರ. ಕನ್ನಡದ ಯಾವುದೇ ಅತ್ಯುತ್ತಮ ಕವಿ ಅಥವಾ ಕಥೆಗಾರನ ಉದಾಹರಣೆ ತೆಗೆದುಕೊಂಡರೂ, ಅದರೊಳಗೊಬ್ಬ ಸಹೃದಯಿ ವಿಮರ್ಶಕ ಇಣುಕುತ್ತಿರುತ್ತಾನೆ. ಅತ್ಯುತ್ತಮ ಲೇಖಕ ಒಳ್ಳೆಯ ವಿಮರ್ಶಕನೂ ಮೀಮಾಂಸಕನೂ ಆಗಿರುವ ವಿರಳ ಉದಾಹರಣೆಗಳ ಸಾಲಿಗೆ ಸೇರುವಂತಿದೆ 'ವಾಸ್ತವ ಪ್ರತಿವಾಸ್ತವ' ಕೃತಿ ಕಥೆ, ಕವಿತೆ, ಪ್ರಬಂಧಗಳಿಂದ ಕನ್ನಡ ಸಾಹಿತ್ಯದ ದಿಗಂತಗಳನ್ನು ವಿಸ್ತರಿಸುತ್ತಲೇ ಇರುವ ಎಸ್. ದಿವಾಕರ್ ಅವರ ಈ ಕೃತಿ, ಓದಿನ ಹೊಳಯಗಳನ್ನು ಸಹೃದಯರೊಂದಿಗೆ ಹಂಚಿಕೊಳ್ಳುವ ಸೃಜನಶೀಲ ಬರಹಗಾರನೊಬ್ಬನ ಮಹತ್ವಾಕಾಂಕ್ಷೆಯ ಅಭಿವ್ಯಕ್ತಿಯಂತಿದೆ. ಒಂದು ಒಳ್ಳೆಯ ಸಾಹಿತ್ಯ ಕೃತಿ ಅಥವಾ ಕಲಾಕೃತಿಯನ್ನು ಹೇಗೆ ನೋಡಬೇಕು ಎನ್ನುವ ಅರಿವನ್ನು ಸಹೃದಯರಲ್ಲಿ ಉದ್ದೀಪಿಸುವ ಬರಹಗಳಿವು, ದಿವಾಕರ್ ಅವರು ತಮ್ಮ ಬರಹಗಳಿಗೆ ಸಂಬಂಧಿಸಿದಂತೆ ಸಾಹಿತ್ಯ, ವಿಮರ್ಶೆ ಮತ್ತು ಸಂಸ್ಕೃತಿ ಎನ್ನುವ ವಿಶೇಷಣಗಳನ್ನು ಬಳಸಿದ್ದಾರಾದರೂ, 'ವಿಮರ್ಶೆ' ಅಥವಾ ಸಂಸ್ಕೃತಿ ಚಿಂತನೆ' ಎನ್ನುವಂಥ ಹಣೆಪಟ್ಟಿಗಳ ಚೌಕಟ್ಟಿಗೆ ನಿಲುಕದಿರುವುದು ದಿವಾಕರ್ ಬರಹಗಳ ಅನನ್ಯತೆ, ವಿಮರ್ಶೆಯ ಪಾರಿಭಾಷಿಕ ಚೌಕಟ್ಟು ಹಾಗೂ ಚಿಂತನೆಯ ಸೋಗಿನ ಗಾಂಭೀರ್ಯದಿಂದ ಮುಕ್ತವಾದ ಈ ಬರಹಗಳು ಸಾಹಿತ್ಯದ ಮೂಲಕ ಜೀವನಸೌಂದರ್ಯ ಕಾಣಬಯಸುವವರಿಗೆ ರಸದ ಒರತೆಗಳಂತಿದೆ; ಕನ್ನಡ ಹಾಗೂ ವಿಶ್ವಸಾಹಿತ್ಯದ ಅತ್ಯುತ್ತಮ ಕೃತಿ ಹಾಗೂ ಮನಸ್ಸುಗಳನ್ನು ಪರಿಚಯಿಸುತ್ತಿವೆ. ದಿವಾಕರ್ ಬರವಣಿಗೆಯ ವಿಶಿಷ್ಟ ಲಕ್ಷಣವಾದ ಹಾಗೂ ಅವರಿಗಷ್ಟೇ ಸಾಧ್ಯವಾದ ಪ್ರಯೋಗಶೀಲತೆ ಈ ಸಂಕಲನದ ಬರಹಗಳಲ್ಲೂ ಇದೆ. ಓದುಗರನ್ನು 'ಪುಸ್ತಕದ ಓಣಿ'ಗಳಲ್ಲಿ ಕೈ ಹಿಡಿದು ನಡೆಸುವಂತಿರುವ ಈ ಬರಹಗಳು. ಸಾಹಿತ್ಯಪ್ರವೇಶದ ಕಿಂಡಿಗಳನ್ನೂ ಕಂಡಿಗಳನ್ನೂ ಸಹೃದಯರಿಗೆ ಕರುಣಿಸುವಂತಿವೆ. ವಿಮರ್ಶೆ ಹಾಗೂ ಚಿಂತನೆ ವಿರಳವಾಗಿರುವ ದಿನಗಳಲ್ಲಿ ಎರಡಕ್ಕೂ ಘನತೆ ತಂದುಕೊಡುವ ಪ್ರಯತ್ನದ ರೂಪದಲ್ಲಿ ದಿವಾಕರ್ ಅವರ 'ವಾಸ್ತದ ಪ್ರತಿವಾಸ್ತವ' ಕೃತಿಗೆ ವಿಶೇಷ ಮಹತ್ವವಿದೆ. ರಘುನಾಥ ಚ.ಹ.
ಒಂದು… ಎರಡು… ಮೂರು… ಈ ಎಣಿಕೆಗೆ ಕೊನೆ ಎಲ್ಲಿದೆ? ಅಥವಾ ಕೊನೆಯೇ ಇಲ್ಲವೇ? ಈ ಪ್ರಶ್ನೆಗಳಿಗೆ ಉತ್ತರ ತಿಳಿಯಿರಿ.
Showing 181 to 210 of 260 results