nil
#
ಎಂ ಎಸ್ ಶರತ್
ರಾಜಾರಾಂ ತಲ್ಲೂರ್
ಹೆಣ್ಣಿನ ಅಸಹಾಯಕತೆ ಮತ್ತು ಗಂಡಿನ ಸಂವೇದನಾಶೂನ್ಯತೆ ಅನುಪಮಾ ತಮ್ಮ ಕತೆಗಳಲ್ಲಿ ಮತ್ತೆ ಮತ್ತೆ ಶೋಧಿಸುವ ಎರಡು ಅಪರಿಹಾರ್ಯ ಸ್ಥಿತಿಗಳು. ಇಲ್ಲಿ ನಮಗೆ ಎದುರಾಗುವ ಎಲ್ಲಾ ಪಾತ್ರಗಳು ದಿನನಿತ್ಯದ ಕಷ್ಟ ಕಾರ್ಪಣ್ಯ ಮತ್ತು ಅನಿರೀಕ್ಷಿತವಾಗಿ ಎರಗಿಬರುವ ಆಘಾತಗಳ ಜೊತೆ ನಮ್ಮ ಕಾಲದ ರಾಜಕೀಯದಲ್ಲಿ ಹಾಸುಹೊಕ್ಕಾಗಿರುವ ಕ್ರೌರ್ಯದ ಜೊತೆ ಸಹ ಏಗಿಕೊಂಡು ತಾಳಿಕೊಂಡು ಬಾಳುವವರು; ಆದರೆ ಯಾರೂ ಒಂಟಿಯಲ್ಲ. ಸಂಕಲನದ ಎಲ್ಲ ಕಥೆಗಳೂ ಊರು ಮನೆಗಳ ಆವರಣವನ್ನೂ ಕಾಲದೇಶದ ಸಂದರ್ಭವನ್ನೂ ಕಟ್ಟಿಕೊಂಡೇ ನಮ್ಮೆದುರು ಅನಾವರಣಗೊಳ್ಳುವುದು. ಜಿ ರಾಜಶೇಖರ
'ದೂರ ದೇಶದ ದೇವರು' ಕಥಾಸಂಕಲನದ ಪಾತ್ರಗಳಲ್ಲಿ ನೈಜತೆಯಿದ್ದು ಅವು ಬಹು ಆಯಾಮವನ್ನು ಹೊಂದಿವೆ. ಕತೆ ಸಾಗುತ್ತಿದ್ದಂತೆ ಅಲ್ಲೊಂದು ಬೆಳವಣಿಗೆ, ಒಂದು ಬದಲಾವಣೆ ಕಂಡುಬರುತ್ತದೆ. ಅಲ್ಲಿನ ಸಂಬಂಧ-ಸಂಘರ್ಷಗಳು ನೈಜವಾಗಿ ನಡೆಯುವಂತೆ ಕತೆಯನ್ನು ಮುಂದಕ್ಕೆ ಕೊಂಡೊಯ್ಯಲಾಗಿದೆ. ಪ್ರತಿ ಕತೆಯಲ್ಲೂ ಇರುವ ಸಂಘರ್ಷದಲ್ಲಿ ಓದುಗನೂ ಪಾಲುಗೊಳ್ಳುವಂತಾಗುವುದು ಇಲ್ಲಿನ ವಿಶೇಷ. ಕುಣಿಗಲರು ಕತೆ ಹೇಳುವ ರೀತಿಯೂ ಸ್ವಾರಸ್ಯಕರವಾಗಿದ್ದು, ಕತೆಗಳು ಆಸಕ್ತಿಯಿಂದ ಓದಿಸಿಕೊಂಡು ಹೋಗುತ್ತವೆ. ಕತೆಯ ಭಾಷೆ, ನಿರೂಪಣಾ ಶೈಲಿ, ಪದಗಳ ಆಯ್ಕೆಯಲ್ಲಿರುವ ಶಿಸ್ತು ಮತ್ತು ವಿಷಯವನ್ನು ಕೆಲವೇ ಶಬ್ದಗಳಲ್ಲಿ ಹೇಳುವ ಅಚ್ಚುಕಟ್ಟುತನ ಈ ಎಲ್ಲ ಅಂಶಗಳು ಅನಾಯಾಸವಾಗಿ, ಸಹಜವಾಗಿ ಬಂದು, ಅಲ್ಲೊಂದು ಸಮತೋಲನವಿದೆ. ಓದಿ ಮುಗಿದ ನಂತರವೂ ಓದುಗರೊಂದಿಗೆ ಉಳಿಯುವ ಗುಣವಿದೆ. ಮಾನವ ಸ್ವಭಾವದ ಬಗ್ಗೆ ಸೂಕ್ಷ್ಮವಾದ ಒಳನೋಟವನ್ನು ನೀಡುವ ಈ ಸಂಕಲನದ ಕತೆಗಳು ವೈಯುಕ್ತಿಕವಾಗಿದ್ದಂತೆ ಅಲ್ಲೊಂದು ಸಾರ್ವತ್ರಿಕತೆಯೂ ಇದೆ. ಮುಖ್ಯವಾಗಿ, ಕತೆಯ ಓಘವು ಎಲ್ಲವನ್ನೂ ಕಾಗುಣಿತಗೊಳಿಸದೆ ಬದುಕಿನ ವ್ಯಾಖ್ಯಾನಕ್ಕೆ ಅವಕಾಶವನ್ನು ನೀಡುತ್ತವೆ. ಹೊಸ ಆಲೋಚನೆಗಳು ವೈಯಕ್ತಿಕ ಮಟ್ಟದಲ್ಲಿ ಆಳವಾಗಿ ಪ್ರತಿಧ್ವನಿಸುವಂತಿದ್ದು, ಕೆಲವು ಕತೆಗಳು ಓದುಗನ ದೃಷ್ಟಿಕೋನಕ್ಕೆ ಸವಾಲೊಡ್ಡುವಂತಿವೆ. ಮಿತ್ರಾ ವೆಂಕಟ್ರಾಜ | ಹಿರಿಯ ಕಥೆಗಾರ್ತಿ | ಮುಂಬಯಿ
ನಮ್ಮ ದೇಶದಲ್ಲಿ ರಾಮಾಯಣ, ಮಹಾಭಾರತ, ಭಾಗವತಗಳಿಗೆ ಸಂಬಂಧಪಡದ ನದಿಗಳಿಲ್ಲ, ಬೆಟ್ಟಗಳಿಲ್ಲ, ಯಾವ ಊರೂ ಇಲ್ಲ. ಹಾಗಾಗಿ ಇಡೀ ಭಾರತವೇ ಒಂದು ತೀರ್ಥಕ್ಷೇತ್ರ. ತೀರ್ಥಯಾತ್ರೆ ಅಭಯದ ಸಂಕೇತ. ಮನಸ್ಸಿಗೆ ಬಲ ಕೊಡುವ ಪ್ರಕ್ರಿಯೆ. ಭರವಸೆ ಕುಗ್ಗಿದಾಗ, ಚೈತನ್ಯ ತರುತ್ತದೆ. ಮನುಷ್ಯನ ತಿರುಗಾಟಕ್ಕೊಂದು ಆಧ್ಯಾತ್ಮಿಕ ಸ್ಪರ್ಶ ನೀಡುವುದೇ ತೀರ್ಥಯಾತ್ರೆ.. ಪ್ರವಾಸ ಲೌಕಿಕ ಅನುಭವವನ್ನು ಕೊಟ್ಟರೆ, ತೀರ್ಥಯಾತ್ರೆ ಅಲೌಕಿಕ ಅನುಭವವನ್ನು ತಂದುಕೊಡುತ್ತದೆ.
Showing 2191 to 2220 of 5386 results