nil
ಬನ್ನಂಜೆ ಗೋವಿಂದಾಚಾರ್ಯ
#
NA
ಡಾ| ಗಜಾನನ ಶರ್ಮ
28.9.2024 ರಂದು ಪುಸ್ತಕ ಬಿಡುಗಡೆ ಬಂಗಾಳದ ಚತುರೆಯೊಬ್ಬಳು ಮೈಸೂರಿನ ಅರಮನೆಯ ಆಶ್ರಯ ಪಡೆದ ಪರಿಣಾಮದಿಂದಾಗಿಯೇ ನಮ್ಮ ರಾಷ್ಟ್ರಗೀತೆ ಆ ರಾಗರೂಪ ಪಡೆದದ್ದು! ತಿರುವಾಂಕೂರಿನ ಆಡಳಿತ ನೆಲೆ ನೀಡದ ದಲಿತವೈದ್ಯನಿಗೆ ಮೈಸೂರು ಆಶ್ರಯ ಕೊಟ್ಟ ಪರಿಣಾಮವೇ ಸ್ವಾಮಿ ವಿವೇಕಾನಂದರು ಸಿಡುಬುರೋಗ ದಿಂದ ಬಿಡುಗಡೆ ಪಡೆದು ಚಿಕಾಗೋಗೆ ಹೋಗಲು ಸಾಧ್ಯವಾದದ್ದು! ಕೋಲಾರದ ಚಿನ್ನದಗಣಿಗೆ ವಿದ್ಯುತ್ ಸರಬರಾಜು ಮಾಡಿ ಮುಂದೆ ಬೆಂಗಳೂರು ಸೇರಿದಂತೆ ನಮ್ಮ ನೆಲವನ್ನು ಬೆಳಗಿಸಿದ್ದು ಮೈಸೂರಿನ ರಾಣಿಯ ಪ್ರೋತ್ಸಾಹದಲ್ಲಿ ಸ್ಥಾಪಿತಗೊಂಡ ಕಾವೇರಿ ವಿದ್ಯುತ್ ಸ್ಥಾವರ! ಆ ರಾಣಿಯ ಮುಂದಾಲೋಚನೆಯಿಂದಾಗಿಯೇ ಸಿಡುಬು, ಪ್ಲೇಗ್ ಮುಂತಾದುವಕ್ಕೆ ಲಸಿಕೆಗಳು ಮೈಸೂರು ಪ್ರಾಂತ್ಯದಲ್ಲಿ ತಯಾರಾದದ್ದು. ಮಾರಿಕಣಿವೆಯಲ್ಲಿ ಕೃಷಿನೀರಾವರಿ ಅಣೆಕಟ್ಟು ನಿರ್ಮಾಣಗೊಂಡದ್ದು, ಬೆಂಗಳೂರಿನಲ್ಲಿ ಮಲ್ಲೇಶ್ವರಂ, ಬಸವನಗುಡಿಗಳು ಪ್ರಾರಂಭವಾದದ್ದು: ಟಾಟಾ ಅವರ ಆಶಯದ ವಿಜ್ಞಾನ ಸಂಸ್ಥೆ ನೆಲೆಗೊಂಡದ್ದು... ಇಂತಹ ಅದೆಷ್ಟೋ ಅಪರೂಪದ ಅಮೂಲ್ಯವಾದ ಕೈಂಕರ್ಯಗಳನ್ನು ಕೊಡುಗೆಯಾಗಿಸಿದ, ಜನಮನದಲ್ಲಿ ಹೊಸಚಿಂತನೆಗಳ ಬೀಜ ಬಿತ್ತಿದ, ಮೈಸೂರು ಪ್ರಾಂತ್ಯದ ಬೆಳವಣಿಗೆಯ ರೂವಾರಿಯಾಗಿದ್ದ ಅಪರೂಪದ ರಾಣಿ ಕೆಂಪನಂಜಮ್ಮಣ್ಣಿ ಯವರ ಹೃದಯಸ್ಪರ್ತಿ ಜೀವನಗಾಥೆ ಈ ಕೃತಿ. *-ಡಾ| ಕೆ.ಎನ್. ಗಣೇಶಯ್ಯ
ಇದು, ಹಿಂದಿಯ ಧೀಮಂತ ಲೇಖಕ ಶ್ರೀ ಉದಯ ಪ್ರಕಾಶ್ರ 'ವಾರೆನ್ ಹೇಸ್ಟಿಂಗ್ಸ್ ಕಾ ಸಾಂಡ್" ಎಂಬ ಕಿರು ಕಾದಂಬರಿಯ ಭಾವಾನುವಾದ. ಈ ಸಮಾಜೋ- ಆರ್ಥಿಕ ರಾಜಕೀಯ ಕಟಕಿಯಲ್ಲಿ ವಾರೆನ್ ಹೇಸ್ಟಿಂಗ್ಸ್ ಮತ್ತು ಅವನ ಹೋರಿ ರೂಪಕಗಳಾಗಿ ಬಳಸಲ್ಪಟ್ಟಿವೆ. ಉದಯ ಪ್ರಕಾಶರು ಒಂದು ವಿಲಕ್ಷಣ ಭ್ರಮೆ (Fantasy) ಯನ್ನು ಈ ಕಿರು ಕಾದಂಬರಿಯಲ್ಲಿ ಸೃಷ್ಟಿಸಿದ್ದಾರೆ. ಅದ್ಭುತಗಳ ನಾಡಾದ ಭಾರತವೆಂಬ ಕೂಟ ಪ್ರಶ್ನೆಯೊಂದಿಗೆ ವಾರೆನ್ ಹೇಸ್ಟಿಂಗ್ಸ್ನ ಒಡನಾಟ ಹಾಸ್ಯಾಸ್ಪದವೂ ಅಸಮಂಜಸವೂ ಆಗಿದೆ. ತನ್ನ ಸುತ್ತಲಿನ ಎಲ್ಲದರೊಂದಿಗೆ ಅವನ ನಡವಳಿಕೆ ಸಂವೇದನಾರಹಿತವಾಗಿದೆ; ಇದರಲ್ಲಿ ಆಳ ತಿಳುವಳಿಕೆ ಯಾಗಲೀ, ಒಳನಾಡಿ ಅರಿವಾಗಲೀ ಇಲ್ಲ, ಹಾಗಾಗಿ ಸತ್ವವೂ ಇಲ್ಲ. 'ವಾರೆನ್ ಹೇಸ್ಟಿಂಗ್ಸ್ನ ಹೋರಿ' ಇಂದು ನಮ್ಮ ಸುತ್ತ ನಡೆಯುತ್ತಿರುವ ಜಾಗತಿಕ ವಿದ್ಯಮಾನಗಳತ್ತ ನಮ್ಮನ್ನ ಕೊಂಡೊಯ್ಯುತ್ತದೆ. ಇಂದು ಭೋಗಲೋಲುಪತೆ ಮತ್ತು ಅಧಿಕಾರದಾಹ ವಿಕೃತಿಯ ರೂಪತಳೆದಿವೆ. ನಿಲ್ಲಪ್ತತೆ- ಸಂವೇದನಾರಾಹಿತ್ಯಗಳ ನಡುವೆಯೂ ಕೆಲವು ಜೀವಿಗಳು. ಕೆಲವು ಚಳುವಳಿಗಳು ಹೋರಿಯ ಕೋಡು ಹಿಡಿದು ಮಣಿಸುವ, ಜಗತ್ತಿನ ಗಡ್ಡಹಿಡಿದು ಜಗ್ಗುವ ಧೈರ್ಯ ಹೊಂದಿವೆ. ವಿನಾಶದ ಅಂಚಿನಲ್ಲಿರುವ ತಳಿಯೊಂದಕ್ಕೆ ಕೊಟ್ಟ ಪ್ರಶಸ್ತಿಯಂತಿದೆ ಈ ಕಾದಂಬರಿ, ಡಾ. ಪ್ರಕಾಶ್ ಗರುಡರ ಭಾವಾನುವಾದ ಮೂಲದೊಂದಿಗೆ ಅನುಸಂಧಾನ ಮಾಡುತ್ತಲೇ ತಿಳಿಗನ್ನಡದಲ್ಲಿ ಚೊಕ್ಕವಾಗಿ ಹರಿದು ಬಂದಿದೆ. ಪ್ರೊ. ಎಚ್.ಆರ್. ಅಮರನಾಥ
ವಿಮಲಾ ರಾಮಾಜೋಯಿಸ್
Showing 211 to 240 of 280 results