nil
ಇಲ್ಲೊಂದು ಹೊಸ ಲೋಕವಿದೆ.. ಓಹ್! ಒಂದು ಭಾವಸಮುದ್ರದಲ್ಲಿ ಮುಳುಗೇಳುವುದು ಅಂದರೆ ಏನು ಎನ್ನುವುದು ಗೊತ್ತಾಗಬೇಕಾದರೆ ಪಿ ಚಂದ್ರಿಕಾ ಅವರ ಈ 'ಪ್ಯಾಲೆಟ್' ಓದಬೇಕು. 'ನಿಮ್ಮ ಚರಿತ್ರೆಯಲ್ಲಿ ನಮಗೆ ಜಾಗವಿಲ್ಲ' ಎಂದಾದಾಗ ಅವರು ಕಟ್ಟಿಕೊಡಲು ಹೊರಟಿದ್ದು ತನ್ನದೇ ಲೋಕವನ್ನು ಕಟ್ಟಿಕೊಟ್ಟ ಬರಹಗಳೆಲ್ಲವೂ ಅವರೇ ಬಣ್ಣಿಸಿಕೊಳ್ಳುವ ಹಾಗೆ ಅದು ತಾನು 'ಒಬ್ಬಳೆ ಆಡುವ ಆಟ'. ಚಂದ್ರಿಕಾ ಏನನ್ನೇ ಆದರೂ ತೀವ್ರವಾಗಿ ಅನುಭವಿಸುತ್ತಾರೆ. ಹಾಗಾಗಿಯೇ ಅವರ ಒಂದೊಂದು ಅನುಭವವೂ ಜೋಡಿ ರೆಕ್ಕೆ ಪಡೆದ ಬರಹಗಳಾಗಿಬಿಡುತ್ತದೆ. ಅವರ ಇನ್ನೊಂದು ಶಕ್ತಿ ಎಂದರೆ ಅವರು ತನ್ನ ಅನುಭವಕ್ಕೆ, ತನ್ನದೇ ಎನ್ನುವ ಅನುಭವಕ್ಕೆ ಅಕ್ಷರ ಮೂಡಿಸಲು ಇನ್ನೊಬ್ಬರ ಶಬ್ದಗಳ ಹಂಗಿಗೆ ಬೀಳುವುದೇ ಇಲ್ಲ, ತನ್ನದೇ ರೂಪಕಗಳನ್ನು ಕಟ್ಟಿಕೊಳ್ಳುತ್ತಾರೆ. ಅವರ ರೂಪಕಗಳು ಒಂದು ಸುಳಿಯಲ್ಲಿ ನಮ್ಮನ್ನು ಸಾಕಷ್ಟು ಕಾಲ ಸಿಕ್ಕಿಸಿ ತಿರುಗಿಸುತ್ತದೆ. ಈ 'ಪ್ಯಾಲೆಟ್' ನನ್ನನ್ನು ಹಲವು ಕಾಲ ತನ್ನ ತಿರುಗಣಿಯಲ್ಲಿ ಸಿಕ್ಕಿಸಿಕೊಂಡಿದೆ. ಶಾಶ್ವತ ಭಾವವೊಂದು ಎದೆಯಲ್ಲಿ ಮೊಳೆಯುವುದು ಅದೃಷ್ಟ ಎನ್ನುತ್ತಾರೆ ಚಂದ್ರಿಕಾ. 'ಪ್ಯಾಲೆಟ್' ಓದಿದಮೇಲೆ ಅಂತಹ 'ಅದೃಷ್ಟ' ನನ್ನದಾಗಿದೆ. ಇದನ್ನು ಓದಿದ ನಂತರ ನಿಮಗೂ ಆ ಅದೃಷ್ಟ ಒಲಿಯಲಿದೆ.
#
Chiguru Publications
"ನಾನು ಬಡತನದಲ್ಲಿ ಹುಟ್ಟಿ ಬಡತನದಲ್ಲಿ ಬಡವರ ಜತೆ ಬೆಳೆದೆ. ಥಂಡಿ ನೆಲದಲ್ಲಿ ಗೋಣಿ ತಾಟಿನ ಮೇಲೆ ಬಡವರು ಮಲಗುವ ಹಾಗೆ ನಾನೂ ಥಂಡಿ ನೆಲದಲ್ಲಿ ಮಲಗಿದೆ; ಅವರ ದುಃಖದಲ್ಲಿ ಭಾಗಿಯಾದೆ. ನನ್ನ ಸೋದರರ ಬಗೆಗಿನ ಮತ್ತು ಜಗದ ಬಗೆಗಿನ ನನ್ನ ಧೋರಣೆಗಳು ಎಂದಿಗೂ ಬದಲಾಗುವುದಿಲ್ಲ. ನಾನು ಹುಟ್ಟಿ ಬೆಳೆದ ವರ್ಗ ಅನುಭವಿಸಿದ ಅಮಾನವೀಯ ಕ್ರೌರ್ಯ ಮತ್ತು ಅನ್ಯಾಯವನ್ನು ತೊಡೆದುಹಾಕಲು ವಿಫಲನಾದಲ್ಲಿ ಗುಂಡಿಟ್ಟುಕೊಂಡು ಸಾಯುವೆ. ನಾನು ನನ್ನ ಸಮುದಾಯವನ್ನು ಯಾವತ್ತೂ ಬಿಟ್ಟುಕೊಟ್ಟಿಲ್ಲ. ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದೇನೆ. ಇದೇ ನೀವು ನನ್ನ ಬದುಕಿನಿಂದ ಕಲಿಯುವ ಪಾಠ. ನನ್ನ ಬದುಕು ನಿಮಗೆಲ್ಲರಿಗೂ ತೆರೆದ ಪುಸ್ತಕ." ಡಾ. ಬಿ. ಆರ್. ಅಂಬೇಡ್ಕರ್
Showing 2941 to 2970 of 5386 results