#
nil
ಸಿ ವಿ ಜಯಣ್ಣ
ಸತೀಶ್ಕುಮಾ Y ಭಾವಿಮನಿ
Nil
ಫಲ್ಗುಣಿ ಎಂಬ ಮಿಸ್ಟೀರಿಯಸ್ ಹುಡುಗಿ ಏನಾಗಬೇಕು ನನ್ನ ಬದುಕಿಗೆ? ಅಂದು ಅವಳ ಕಾರಣದಿಂದಲೇ ಸಮ್ಯಕ್ ನಿಂದ ಸಂಬಂಧ ಕಡಿದುಕೊಂಡೆ. ಇಂದು ಅವಳು ಕರೆದಿದ್ದಕ್ಕೆ ಮತ್ತದೇ ಹಳೆಯ ಜಾಗಕ್ಕೆ ಹೋಗುತ್ತಿದ್ದೇನೆ. ನಾವು ಭೇಟಿಯಾಗೋ ಪ್ರತಿ ವ್ಯಕ್ತಿಯೂ ಯಾವುದೋ ಉದ್ದೇಶಕ್ಕೆ ನಮಗೆ ಸಿಕ್ಕಿರುತ್ತಾರೆ ಅಂತಾರಲ್ಲ? ನಿಜವೇ? ಇರಲಾರದು. ನಮಗಾಗಿ ಯಾರು ಹೀಗೆಲ್ಲಾ ಪ್ಲಾನ್ ಮಾಡುತ್ತಾರೆ! ಎಲ್ಲವೂ ಕೋ-ಇನಸಿಡೆನ್ಸ್ ಅಷ್ಟೇ. ಲೈಫ್ ಇಸ್ ಅ ಕಲೆಕ್ಷನ್ ಆಫ್ ರಾಂಡಮ್ ಇನ್ಸಿಡೆನ್ಸ್ ಹೆಚ್ಚಿನ ಅರ್ಥಗಳನ್ನು ನಾವೇ ಕಂಡುಕೊಂಡು ಅದರೊಳಗೊಂದು ಸಣ್ಣ ಥ್ರಿಲ್ ಅನುಭವಿಸುತ್ತಿರುತ್ತೇವೆ ಮೇ ಬಿ?...
ಬದುಕಿಗೆ? ಅಂದು ಅವಳ ಕಾರಣದಿಂದಲೇ ಸಮ್ಯಕ್ ನಿಂದ ಸಂಬಂಧ ಕಡಿದುಕೊಂಡೆ. ಇಂದು ಅವಳು ಕರೆದಿದ್ದಕ್ಕೆ ಮತ್ತದೇ ಹಳೆಯ ಜಾಗಕ್ಕೆ ಹೋಗುತ್ತಿದ್ದೇನೆ. ನಾವು ಭೇಟಿಯಾಗೋ ಪ್ರತಿ ವ್ಯಕ್ತಿಯೂ ಯಾವುದೋ ಉದ್ದೇಶಕ್ಕೆ ನಮಗೆ ಸಿಕ್ಕಿರುತ್ತಾರೆ ಅಂತಾರಲ್ಲ? ನಿಜವೇ? ಇರಲಾರದು. ನಮಗಾಗಿ ಯಾರು ಹೀಗೆಲ್ಲಾ ಪ್ಲಾನ್ ಮಾಡುತ್ತಾರೆ! ಎಲ್ಲವೂ ಕೋ-ಇನಸಿಡೆನ್ಸ್ ಅಷ್ಟೇ. ಲೈಫ್ ಇಸ್ ಅ ಕಲೆಕ್ಷನ್ ಆಫ್ ರಾಂಡಮ್ ಇನ್ಸಿಡೆನ್ಸ್ ಹೆಚ್ಚಿನ ಅರ್ಥಗಳನ್ನು ನಾವೇ ಕಂಡುಕೊಂಡು ಅದರೊಳಗೊಂದು ಸಣ್ಣ ಥ್ರಿಲ್ ಅನುಭವಿಸುತ್ತಿರುತ್ತೇವೆ ಮೇ ಬಿ?...
ಪಿಂಚ್ ಆಫ್ ಪ್ರಪಂಚ
ಕಾಡುವ ಕಥೆ ಥಟ್ಟನೆ ಬರೆಯಿಸಿಕೊಳ್ಳುವುದಿಲ್ಲ. ಅದು ಒಳಗೊಳಗೆ ವಿಸ್ತಾರಗೊಳ್ಳುತ್ತದೆ. ಅಲ್ಲಿ ವಿಷಾದ ಮಡುಗಟ್ಟಿದಂತೆ ಮಾತು ಮೌನವಾಗುತ್ತದೆ, ಪ್ರೇಮ್ ಚಂದ್, ಅಲೆಕಾಂಡರ್ ಪುಕ್ರೀನ್, ಕಾಮುಗಳ ಕಾದಂಬರಿಗಳು ಘಟಿಸಿದ್ದೇ ಹೀಗೆ ಘನ ಗಂಭೀರ ಕಾರ್ಮೋಡಗಳು ಆಕಾಶ ತುಂಬಿದಂತೆ ತಟ್ಟನೆ ಮಳೆ ಸುರಿಯುವುದಿಲ್ಲ. ಓಡಾಡುತ್ತವೆ, ಕಾಡುತ್ತವೆ ಕೊನೆಗೊಮ್ಮೆ ಸುರಿದುಬಿಟ್ಟರೆ ನಿಂತ ನೆಲದ ಗತಿ ಏನಾದೀತು ಎನ್ನುವ ಭಯ ಹುಟ್ಟಿಸುತ್ತವೆ. ಎಲ್ಲ ತಿಳಿದೂ ಈ ತಿಳುವಳಿಕೆಯನ್ನು ತೆಗೆದುಕೊಂಡು ಏನು ಮಾಡುವುದು ಎನ್ನುವ ಹತಾಶದ ಮುಂದೆ ನಮ್ಮನ್ನು ನಿಲ್ಲಿಸುತ್ತವೆ. ಬಹುತೇಕ ಈ ಕಾದಂಬರಿಯ ಕಥಾವಸ್ತು ಹಾಗೆಯೇ. ಇಲ್ಲಿ ಪಾತ್ರಗಳು ನೆಪ ಮಾತ್ರ ಸಂಬಂಧಗಳ ತಾತ್ವಿಕತೆಯೇ ಕಾದಂಬರಿ ನಮಗೆ ಒಡ್ಡುವ ಪ್ರಶ್ನೆ. ಕಾದಂಬರಿಕಾರ್ತಿ ಸುಶೀಲಾ ಡೋಣೂರ ಕಣ್ಣಿಗೆ ಕಂಡರೂ ಎಂಬ ಮಾತ್ರಕ್ಕೆ ಮನುಷ್ಯರನ್ನು ನೋಡಲಿಲ್ಲ. ಬದಲಾಗಿ ಓದುವ ಗಂಭೀರ ಯತ್ನವನ್ನು ಮಾಡಿದ್ದಾರೆ. ನಮ್ಮ ಸಂದರ್ಭದ ಅತಿ ದೊಡ್ಡ ದುರಂತದ ಮುನ್ನುಡಿಯ ಸಾಲುಗಳನ್ನ ಪ್ಲೇ ಅವರು ಇಲ್ಲಿ ಇಟ್ಟಿರುವುದು. ಕಾದಂಬರಿ ಇನ್ನೂ ಬರಬೇಕಾಗಿದೆ. ಆಗ ಅದು ಮತ್ತೊಂದು ರಿಸರಕ್ಷನ್ ಆಗಲು ಸಾಧ್ಯವಿದೆ. 'ಬದುಕೆನ್ನುವ ವಿಕಾರದ ಅರ್ಥವನ್ನು ಹುಡುಕುತ್ತಾ ಹೋದಷ್ಟು ಅದು ಬದಲಾಗುತ್ತಾ ಹೋಗುತ್ತದೆ. ಅದು ಒಂದು ರೀತಿ ಕೈಯೊಳಗೆ ಸಿಕ್ಕೂ ಹಾರಿ ಹೋಗುವ ಚಿಟ್ಟೆಯಂತೆ' ಇವು ಬೇರುಗಡಿತವಾಗಿ ಬದುಕುವ ನಗರದ ಮನಸ್ಸಿನಲ್ಲಿ ನಿತ್ಯ ಸಾವಿರ ಬಾರಿ ಹುಟ್ಟಿ ಸಾಯುವ ಸಹಾಯವಿಲ್ಲದ ವಾಸ್ತವದ ಸಾಲುಗಳು, ಕಾದಂಬರಿಯ ವಸ್ತು ಹೊಸದು, ಅಷ್ಟೇ ಸಂಕಟದ ಭಾಷೆ, ಲೇಖಕಿಯನ್ನು ಕುತೂಹಲ ಕೆರಳಿಸುವ ಅಭಿವ್ಯಕ್ತಿ, ಈ ಕಾರಣ ಅಭಿನಂದಿಸದೆ ಇರಲಾಗದು - ರಾಗಂ
ಇದು ಪುಟ್ಕತೆಯ ಲೋಕ. ಪುಟಪುಟದಲ್ಲೂ ಪುಟ್ಟಪುಟ್ಟ ಕತೆಗಳು, ಬೃಹತ್ತಾದುದನ್ನೇ ಹೇಳುವ ಕತೆಗಳು. ಅವರ ಕತೆ, ಇವರ ಕತೆ, ನಿಜದ ಕತೆ, ಕಟ್ಟುಕತೆ... ಎಷ್ಟೆಲ್ಲಾ ಕತೆಗಳು. ನಿಮಗೆ ಗೊತ್ತೇ, ಇಲ್ಲಿ ನಿಮ್ಮ ಕತೆಯೂ ಇದೆ! ಓದ್ಯೋಡಿ.
ಮಕ್ಕಳ ಸಾಹಿತ್ಯ ಎಂದಾಗ. ಯಾವ ವಯಸ್ಸಿನ ಮಕ್ಕಳು ಎಂಬ ವಿಚಾರವೂ ಗಮನಾರ್ಹ ಸಂಗತಿಯಾಗುತ್ತೆದೆ. ಹದಿನೈದು ವರ್ಷದೊಳಗಿನ ಮಕ್ಕಳನ್ನು, ಮುಗ್ಧರು ಎಂದು ಗುರುತಿಸಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಕ್ಕಳು ಬಹು ಬೇಗ ಮುಗ್ಧತೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಅನಿರ್ಬಂಧಿತ ಮನರಂಜನಾ ಯುಗದಲ್ಲಿ ನಾವು ಬದುಕುತ್ತಿದ್ದು, ಅದು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂಬುದನ್ನು ಗಮನಿಸದಿರುವಂತಿಲ್ಲ. ಆದುದರಿಂದ ಈ ಕಾಲದಲ್ಲಿ ಹುಟ್ಟಿದ ಮಕ್ಕಳ ಸಾಹಿತ್ಯ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಪ್ರಸ್ತುತ ಪ್ರೊ. ನಾಗ ಎಚ್. ಹುಬ್ಬಿ ಸಂಪಾದಕರಾಗಿ ತಂದಿರುವ ಸಂಕಲನದ ಆಯ್ಕೆಯ ಚೌಕಟ್ಟು, ಹೀಗೆ ಪ್ರಶಸ್ತಿ ವಿಜೇತ ಮಕ್ಕಳ ಸಾಹಿತಿಗಳಿಗೆ ಎಂಬ ವಿಚಾರ ಗಮನಾರ್ಹ ಸಂಗತಿಯಾಗುತ್ತದೆ. ಈ ಸಂಕಲನದ ಸಂಪಾದಕರಾಗಿರುವ ಪ್ರೊ. ನಾಗ ಹುಬ್ಬಿ ಕನ್ನಡ ನಾಡಿನಿಂದ ಸಾವಿರಾರು ಮೈಲಿ ದೂರದಲ್ಲಿರುವ ರಾಂಚಿ (ಝಾರ್ಖಂಡ್)ಯಲ್ಲಿ ಕುಳಿತು ಕನ್ನಡ ಸಾಹಿತ್ಯಕ್ಕೆ ನಿರಂತರವಾಗಿ ಕೊಡುಗೆ ನೀಡಿದ್ದಾರೆ. ಕತೆಗಾರರಾಗಿ, ಅನುವಾದಕರಾಗಿ ಹತ್ತಾರು ಕೃತಿಗಳನ್ನು ನೀಡಿದ್ದಾರೆ. ಮಕ್ಕಳ ಸಾಹಿತ್ಯ ಕೃತಿಗಳನ್ನು ಬೇರೆ ಭಾಷೆಗಳಿಂದ ಅನುವಾದಿಸಿದ್ದಾರೆ. ಬುಡಕಟ್ಟು ಜನಾಂಗದ ಅಧ್ಯಯನ ಕ್ಷೇತ್ರಕ್ಕೆ ಅವರ ಕೊಡುಗೆ ಅಮೂಲ್ಯವಾದುದು. 'ಜೇನುಹುಳುವಿನಂತೆ ಸದಾಕಾಲವೂ ಸೃಜನಶೀಲವಾಗಿರುವ ಅವರ ಈ ಮಕ್ಕಳ ಸಾಹಿತ್ಯ ಸಂಕಲನ ಅವರ ಕಾರ್ಯತತ್ಪರತೆಗೆ ಒಂದು ಹೊಸ ಸೇರ್ಪಡೆ.
Showing 2941 to 2970 of 5527 results